Tuesday, January 27

ರಾಜ್ಯ

ದೆಹಲಿ ಪೊಲೀಸರ ನೋಟಿಸ್ ಬಗ್ಗೆ ಕೋರ್ಟ್ ಮೊರೆಹೋಗಲು ಡಿ.ಕೆ.ಶಿವಕುಮಾರ್ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೆಹಲಿ ಪೊಲೀಸರು ನೀಡಿರುವ ನೋಟಿಸ್ ಕುರಿತಂತೆ ಕೋರ್ಟ್ ಮೊರೆಹೋಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. "ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಎಫ್ ಐಆರ್ ಇಲ್ಲದೇ ಇ.ಡಿ ಈ ಪ್ರಕರಣವನ್ನು ಹೇಗೆ ಕೈಗೆತ್ತಿಕೊಂಡಿತು. ನಮ್ಮ ಮೇಲೂ ಇ.ಡಿ‌ ಬೇಕಾದಷ್ಟು ‌ಪ್ರಕರಣಗಳನ್ನು ದಾಖಲಿಸಿತ್ತು.‌ ಕೊನೆಗೆ ಏನಾಯಿತು? ಜೈಲಿನಲ್ಲಿ ಇಟ್ಟರು. ತುಘಲಕ್ ಪೊಲೀಸ್ ಠಾಣೆಯಲ್ಲಿ ಇಟ್ಟರು" ಎಂದರು. "ಸೋನಿಯಾಗಾಂಧಿ ಅವರು ಹಾಗೂ ರಾಹುಲ್ ಗಾಂಧಿ ಅವರಿಗೂ ಇದೇ ರೀತಿ ಮಾಡಲು ಹೊರಟರು ಆದರೆ ಧೈರ್ಯ ಸಾಲದೆ ಚಾರ್ಜ್ ಶೀಟ್ ಹಾಕಿದರು. ನ್ಯಾಯಾಲಯ ಇದನ್ನು ತಿರಸ್ಕರಿಸಿತು. ನ್ಯಾಯಾಲಯವು ಪೊಲೀಸರ ಬಳಿ ಚಾರ್ಜ್ ಶೀಟ್ ಎಲ್ಲಿ, ಎಫ್ ಐಆರ್ ಎಲ್ಲಿ ಎಂದು ಕೇಳಿತು. ನಮ್ಮ ವಕೀಲರಾದ ಅಭಿಷೇಕ್ ಮನುಸಿಂಗ್ವಿ ಅವರು ವಾದ ಮಾಡಿದರು. ಇವರು ಕಾನೂನುಗಳನ್ನು ಪರಿಶೀಲಿಸಿದಾಗ, ಯಾವುದೇ ವ್ಯಕ್ತಿ ದೂರು ನೀಡಿದರೆ ಪ್ರಕರಣದಾಖಲಿಸಲು ಬರುವುದಿಲ್ಲ. ಯಾವುದಾದರೂ ಸಂಸ್ಥೆ ಮುಖಾಂತರ ದೂರು ನೀಡಬೇಕು" ಎಂದರು. "ನನಗೂ ದೆಹಲಿ...
‘ದ್ವೇಷ ಭಾಷಣ, ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ’; ಸರ್ಕಾರದ ದಿಟ್ಟ ನಡೆಗೆ ಪದ್ಮರಾಜ್ ಅಭಿನಂದನೆ.

‘ದ್ವೇಷ ಭಾಷಣ, ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ’; ಸರ್ಕಾರದ ದಿಟ್ಟ ನಡೆಗೆ ಪದ್ಮರಾಜ್ ಅಭಿನಂದನೆ.

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025’ ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿರುವ ನಡುವೆ, ಈ ಮಸೂದೆ ಸಾಮಾಜಿಕ ಸಾಮರಸ್ಯ ಕಾಪಾಡಲು ಸಹಕಾರಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ' ಜಾರಿಗೆ ತರುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದ ಮೊದಲ ವ್ಯಕ್ತಿ ಪದ್ಮರಾಜ್ ಆರ್. ಪೂಜಾರಿ. ಇದೀಗ ಈ ವಿದೇಯಕ ಜಾರಿಯಾಗುತ್ತಿರುವ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. ವಿಧೇಯಕವು ಯಾರ ವಿರುದ್ದವೂ ಸೇಡು ತೀರಿಸಲು ಅಲ್ಲ, ಸಾಮಾಜಿಕ ಸ್ವಾಸ್ತ್ಯ ಕಾಪಾಡುವುದಕ್ಕಷ್ಟೇ' ಎಂದವರು ಹೇಳಿದ್ದಾರೆ. ವಿಧೇಯಕವನ್ನು ಪ್ರತಿಪಕ್ಷಗಳು ಜನವಿರೋಧಿ ಎಂದು ಟೀಕಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಇದೊಂದು ಜನಸ್ನೇಹಿ ಮತ್ತು ಕಾಲದ ಅಗತ್ಯಕ್ಕೆ ತಕ್ಕ ಕ್ರಮವಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ದ್ವೇಷ ಭಾಷಣ ನಿಯಂತ್ರಣಕ್ಕೆ ಕರ್ನಾಟಕಕ್ಕೆ ಸೂಕ್ತ ಕಾನೂನು ಅಗತ್ಯವಿದೆ ಎಂಬುದನ್ನು ತಾವು ಹಲವು ತಿಂಗಳ ಹಿಂದೆಯೇ ಪ್ರತಿಪಾದ...
ಅಕ್ರಮ ವಲಸಿಗರರನ್ನೇ ಮತಬ್ಯಾಂಕ್ ಆಗಿ ವ್ಯವಸ್ಥಿತವಾಗಿ ಪೋಷಿಸುತ್ತಿರುವ ಕಾಂಗ್ರೆಸ್ ಸರ್ಕಾರ; ಬಿಜೆಪಿ ಆರೋಪ

ಅಕ್ರಮ ವಲಸಿಗರರನ್ನೇ ಮತಬ್ಯಾಂಕ್ ಆಗಿ ವ್ಯವಸ್ಥಿತವಾಗಿ ಪೋಷಿಸುತ್ತಿರುವ ಕಾಂಗ್ರೆಸ್ ಸರ್ಕಾರ; ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಎಲ್ಲ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿರುವ ಬಿಜೆಪಿ, ಕೇಂದ್ರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಶನಿವಾರ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್. ಅಶೋಕ, ರಾಜ್ಯದಲ್ಲಿ ಸುಮಾರು 15–20 ಲಕ್ಷ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂಬ ಅಂದಾಜುಗಳಿದ್ದು, ಅವರನ್ನು ಗಡೀಪಾರು ಮಾಡುವ ಬದಲು ಕಾಂಗ್ರೆಸ್ ಸರ್ಕಾರವು “ಮತಬ್ಯಾಂಕ್ ಆಗಿ ವ್ಯವಸ್ಥಿತವಾಗಿ ಪೋಷಿಸುತ್ತಿದೆ” ಎಂದು ಆರೋಪಿಸಿದರು. ಅಕ್ರಮ ವಲಸಿಗರು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆ ಉಂಟುಮಾಡುತ್ತಿದ್ದಾರೆ; ಅವರ ವಿರುದ್ಧ ಕ್ರಮ ಕೈಗೊಳ್ಳುವಾಗಲೆಲ್ಲ ಕಾಂಗ್ರೆಸ್ ಮೃದು ಧೋರಣೆ ತಾಳುತ್ತಿದೆ ಎಂದರು. ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗರನ್ನು ಹೊರಗಿಡಲು ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ವ್ಯಾಯಾಮವನ್ನು ಉಲ್ಲೇಖಿಸಿದ ಅಶೋಕ, ಈ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ‘ಮತ ಕಳ್ಳತನ’ ಎಂಬ ನೆಪದಲ್ಲಿ ಬೀದಿಗಿಳಿದಿದೆ ಎಂದು ಟೀಕಿಸಿದರು. ...
ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ

ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು. ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ” ಎಂದರು. ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆ ಕೇಳಿದಾಗ, “ನಾನು ಮಂಗಳವಾರ ದೆಹಲಿಗೆ ಹೋ...
ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ಚಿಂತನೆ

ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ಚಿಂತನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ರಾಜ್ಯ ಸರ್ಕಾರ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ರಾಜೇಶ್ ನಾಯಕ್ ಹಾಗೂ ಬಾಲಕೃಷ್ಣ.ಸಿ.ಎನ್ ಅವರ ಪ್ರಶ್ನೆಗೆ ಉತ್ತರಿಸಿದ ಕೆ.ಎಚ್‌.ಮುನಿಯಪ್ಪ, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು ₹1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ₹500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ₹1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್‌ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ರಾಜ್ಯದ ಜನಸಂಖ್ಯೆಗೆ ಹೊಲಿಸಿದರೆ ಶೇ.73 ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡು ಪಡೆದಿವೆ. ರಾಜ್ಯವು ಜಿಎಸ್‌ಟಿ ಪಾವತಿ, ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂ...
ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: ಪರಪ್ಪನ ಅಗ್ರಹಾರ ಜೈಲು ಬಳಿ ಜಾಮರ್ ಅಳವಡಿಸಿರುವುದರಿಂದ ಸುತ್ತಮುತ್ತ ವಾಸವಿರುವ ಹತ್ತು ಸಾವಿರಕ್ಕೂಹೆಚ್ಚು ಮಂದಿಗೆ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲಎಂದು ಶಾಸಕ ಎಂ. ಕೃಷ್ಣಪ್ಪ ಅವರು ಸರ್ಕಾರದ ಗಾಮ್,ಅನಸೆಳೆದಿದ್ದಾರೆ. ವಿಧಾನಸಭೆಯಲ್ಲಿ ಈ ಕುರಿತಂತೆ ಪ್ರಸ್ತಾಪಿಸಿರುವ ಶಾಸಕರು, ಪರಪ್ಪನ ಅಗ್ರಹಾರದ ಸುತ್ತಮುತ್ತ ಹತ್ತು ಸಾವಿರಕ್ಕೂ ಅಧಿಕ ಜನರು ವಾಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬಹಳ ಹತ್ತಿರವಿದೆ. ಜಾಮರ್‌ನಿಂದಾಗಿ ಯಾರಿಗೂ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲ. ಅದರೆ ಜೈಲಿನೊಳಗೆ ಖೈದಿಗಳು, ಅಧಿಕಾರಿಗಳು ಮೊಬೈಲ್ ಬಳಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೈಲಿನ ಒಳಗಿರುವವರಿಗೆ ಸಿಗುವ ಸಿಗ್ನಲ್ ಹೊರಗಿನವರಿಗೆ ಸಿಗುತ್ತಿಲ್ಲ.‌ ಜೈಲಿನ ಜಾಮರ್‌ಗಳಿಂದಾಗಿ ನಾಗರಿಕರ ದೈನಂದಿನ ಬದುಕು ಅಸ್ತವ್ಯಸ್ತಗೊಂಡಿದೆ. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಪರಪ್ಪನ ಅಗ್ರಹಾರದ ಸುತ್ತಮುತ್ತ ಹತ್ತು ಸಾವಿರಕ್ಕೂ ಅಧಿಕ ಜನರು ವಾಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬಹಳ ಹತ್ತಿರವಿದೆ. ಜಾಮರ್‌ನಿಂದಾಗಿ ಯ...
ಮುಡಾ ತನಿಖೆ; ಲೋಕಾಯುಕ್ತ ಬಗ್ಗೆ ಕೋರ್ಟ್ ಅಸಮಾಧಾನ

ಮುಡಾ ತನಿಖೆ; ಲೋಕಾಯುಕ್ತ ಬಗ್ಗೆ ಕೋರ್ಟ್ ಅಸಮಾಧಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ ಎಂದು ಕರ್ನಾಟಕ ಲೋಕಾಯುಕ್ತರು ಗುರುವಾರ ಶಾಸಕರು–ಸಂಸದರ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ತನಿಖೆ ಪೂರ್ಣಗೊಳಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. ಲೋಕಾಯುಕ್ತರ ಪರ ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಲಯಕ್ಕೆ ಸ್ಥಿತಿಗತಿ ವರದಿ ಸಲ್ಲಿಸಿ, ಕೆಲ ಮಂಜೂರಾತಿ ಆದೇಶಗಳನ್ನು ಇನ್ನೂ ಪಡೆಯಬೇಕಿದ್ದು, ತನಿಖೆ ಮುಕ್ತಾಯದ ಹಂತದಲ್ಲಿದೆ ಎಂದು ತಿಳಿಸಿದರು. ಡಿಸೆಂಬರ್ 18ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿದ್ದನ್ನು ಸ್ಮರಿಸಿತು. ವಿಳಂಬವನ್ನು ಗಮನಿಸಿದ ನ್ಯಾಯಾಲಯ, ಮುಡಾ ಪ್ರಕರಣದ ವಿವಿಧ ಅಂಶಗಳನ್ನು ಪರಿಗಣಿಸಿ ತನಿಖೆ ಪೂರ್ಣಗೊಳಿಸುವಂತೆ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು ಎಂದು ದಾಖಲಿಸಿದೆ. ತನಿಖೆ ಪೂರ್ಣಗೊಳ್ಳದೆ, ಹೆಚ್ಚಿನ ತನಿಖೆಗೆ ಅನುಮತಿ ಕೋರಿ ತನಿಖಾಧಿಕಾರಿ ಮನವಿ ಸಲ್ಲಿಸಿದ್ದರಿಂದ, ಆರೋ...
ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನ್ಯಾಕ್‌ (NAAC) ವತಿಯಿಂದ A+ ಮಾನ್ಯತೆ ಪಡೆದಿರುವ ಅಲೈಯನ್ಸ್ ವಿಶ್ವವಿದ್ಯಾಲಯದ 14ನೇ ಪದವಿ ಪ್ರದಾನ ಸಮಾರಂಭ ಡಿಸೆಂಬರ್ 20, 2025ರ ಶನಿವಾರ ಬೆಂಗಳೂರಿನ ಕೇಂದ್ರ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುತ್ತದೆ. ವ್ಯವಹಾರ ನಿರ್ವಹಣೆ, ಕಾನೂನು, ಎಂಜಿನಿಯರಿಂಗ್ ಹಾಗೂ ಲಿಬರಲ್ ಆರ್ಟ್ಸ್ ಸೇರಿದಂತೆ ವಿವಿಧ ಶಾಖೆಗಳ ಒಟ್ಟು 1,962 ಪದವಿ ಮತ್ತು ಡಿಪ್ಲೊಮಾಗಳನ್ನು ಪ್ರದಾನ ಮಾಡಲಾಗುತ್ತದೆ. ಇದರಲ್ಲಿ 960 ಪದವಿ ವಿದ್ಯಾರ್ಥಿಗಳು, 887 ಸ್ನಾತಕೋತ್ತರ ವಿದ್ಯಾರ್ಥಿಗಳು, 10 ಪಿಎಚ್.ಡಿ ಸಂಶೋಧನಾ ವಿದ್ಯಾರ್ಥಿಗಳು, ಪ್ರದರ್ಶನ ಕಲೆಗಳ 20 ಡಿಪ್ಲೊಮಾ ವಿದ್ಯಾರ್ಥಿಗಳು ಹಾಗೂ ನಿರ್ವಹಣಾ ವಿಭಾಗದ 85 ಎಕ್ಸಿಕ್ಯೂಟಿವ್ ಸ್ನಾತಕೋತ್ತರ ಡಿಪ್ಲೊಮಾ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ವಿಶ್ವವಿದ್ಯಾಲಯದ ಬಹುಶಾಖೀಯ ಶೈಕ್ಷಣಿಕ ಪರಿಸರವನ್ನು ಪ್ರತಿಬಿಂಬಿಸುತ್ತದೆ. ಪದವಿ ಪ್ರದಾನ ಮೆರವಣಿಗೆಯೊಂದಿಗೆ ಸಮಾರಂಭ ಆರಂಭವಾಗಲಿದ್ದು, ಚಾನ್ಸಲರ್ ಅವರ ಅಧಿಕೃತ ಘೋಷಣೆಯ ನಂತರ ವಾರ್ಷಿಕ ವರದಿ ಮಂಡನೆ, ಪದವಿ ಮತ್ತ...

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತ...
ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ಪ್ರಾದೇಶಿಕ ವಿಮಾನ ಸಂಪರ್ಕವನ್ನು ಬಲಪಡಿಸಲು ಉಡಾನ್ ಸೇವೆ 10ವರ್ಷಗಳಿಗೆ ಮುಂದುವರೆಸುವ ಅಗತ್ಯವಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದ ಭೂ ಸ್ವಾಧೀನ ಹಾಗೂ ಇಲ್ಲಿನ ಕಟ್ಟಡಗಳ ವೆಚ್ಚವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವೇ ಭರಿಸಿದೆ.ಉಡಾನ್ ಯೋಜನೆ ಈ ಮಾರ್ಗದಲ್ಲಿ ಕೇವಲ 3 ವರ್ಷಗಳ ಕಾಲ ಮಾತ್ರ ಜಾರಿಯಲ್ಲಿದ್ದು, ನಂತರ ಸ್ಥಗಿತಗೊಂಡಿವೆ. ಈ ಮಾರ್ಗದಲ್ಲಿ ಪ್ರಸ್ತುತ ಕಾರ್ಯಾಚರಣೆ ನಡೆಸುತ್ತಿರುವ ಸಂಸ್ಥೆಯ ವಿಮಾನ ಸೇವೆಯನ್ನು ಮುಂದುವರಿಸುವ ಉದ್ದೇಶದಿಂದ, ಉಡಾನ್ ಯೋಜನೆಯಡಿ ಅರ್ಹ ನಿರ್ವಾಹಕರಿಂದ ಹೊಸದಾಗಿ ಬಿಡ್ಗಳನ್ನು ಆಹ್ವಾನಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ನಾಗರಿಕ ವಿಮಾನ ಮಾರ್ಗಗಳಿಗೆ ನೀಡಲಾಗುತ್ತಿರುವ ಹಣಕಾಸು ನೆರವು ಪ್ರಸ್ತುತ ಕೇವಲ 3 ವರ್ಷಗಳಿಗೆ ಮಾತ್ರ ಸೀಮಿತವಾಗಿದೆ. ಈ ಅವಧಿ ಮುಗಿದ ಬಳಿಕ ಹಲವು ಪ್ರದೇಶಗಳಲ್ಲಿ ವಿಮಾನ ಸೇವೆಗಳು ಸ್ಥಗಿತಗೊಳ್ಳುತ್ತಿದೆ. ಪ್ರಯಾಣಿಕರ ಸಂಖ್ಯೆ ಹಾಗೂ ಮಾರ್ಗದ ಸ್ಥಿರತೆ ಸಾಧಿಸಲು ಮೂರು ವರ್ಷಗಳ ಅವಧಿ ...