Friday, August 7

ರಾಜ್ಯ

ರಾಜ್ಯದಲ್ಲಿ ಬರದ ಛಾಯೆ: ಕೇಂದ್ರದ ಅಧ್ಯಯನ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ರಾಜ್ಯದಲ್ಲಿ ಬರದ ಛಾಯೆ: ಕೇಂದ್ರದ ಅಧ್ಯಯನ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರದ ಅಧ್ಯಯನ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿ ಪರಿಸ್ಥಿತಿ ಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಬರ ನಿರ್ವಹಣೆಗೆ ಅಗತ್ಯ ನೆರವು ನೀಡುವಂತೆಯೂ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಾಡಿಕೆಗಿಂತ ಶೇ.30ರಷ್ಟು ಕಡಿಮೆ ಮಳೆಯಾಗಿದ್ದು, 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 141 ತಾಲೂಕುಗಳಲ್ಲಿ ಮಳೆಯ ಅಭಾವ ಕಂಡುಬಂದಿದ್ದು, ಮುಂಗಾರು ಬಿತ್ತನೆ ಕೇವಲ ಶೇ.34ರಷ್ಟೇ ಪೂರ್ಣಗೊಂಡಿದೆ. 14 ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇ.34ರಷ್ಟು ನೀರಿನ ಸಂಗ್ರಹವಿರುವುದರಿಂದ ಕೃಷಿ, ಕುಡಿಯುವ ನೀರು ಹಾಗೂ ಗ್ರಾಮೀಣ ಜೀವನೋಪಾಯದ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.ಕೇಂದ್ರದ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಮೌಲ್ಯಮಾಪನ ಮಾಡಿದರೆ, ರೈತರಿಗೆ ಕೇಂದ್ರ ಸರ್ಕಾರ ತಮ್ಮೊಂದಿಗಿದೆ ಎಂಬ ವಿಶ್ವಾಸ ಮೂಡಲಿದೆ ಎಂದು ಸಿಎಂ ಹೇ...
ಒಂದು ತಿಂಗಳಲ್ಲಿ ರಾಜ್ಯಾದ್ಯಂತ ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆ; ಪ್ರತಿ ಸಂಘಕ್ಕೆ ₹10 ಲಕ್ಷ ನೆರವು

ಒಂದು ತಿಂಗಳಲ್ಲಿ ರಾಜ್ಯಾದ್ಯಂತ ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆ; ಪ್ರತಿ ಸಂಘಕ್ಕೆ ₹10 ಲಕ್ಷ ನೆರವು

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರದ 'ಭಾರತ್ ಜೋಡೋ ಯುವ ಸಂಘ' ಯೋಜನೆಯಡಿ ಒಂದು ತಿಂಗಳೊಳಗೆ ರಾಜ್ಯಾದ್ಯಂತ ಸಂಘಗಳನ್ನು ಸ್ಥಾಪಿಸಲು ಸಿದ್ಧತೆ ನಡೆಯುತ್ತಿದೆ. ಪ್ರತಿ ಸಂಘದಲ್ಲಿ 100ರಿಂದ 250 ಸದಸ್ಯರು ಇರಲಿದ್ದು, ಸರ್ಕಾರದಿಂದ ₹10 ಲಕ್ಷ ಆರ್ಥಿಕ ನೆರವು ನೀಡಲಾಗುತ್ತದೆ. ಸಚಿವ ಡಾ. ಜಿ. ಪರಮೇಶ್ವರ್ ಈ ಕುರಿತು ಮಾಹಿತಿ ನೀಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಸ್ಮರಣಾರ್ಥ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಯೋಜನೆಗೆ ಅನುಮೋದನೆ ನೀಡಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಯೋಜನೆ ಜಾರಿಯಾಗಲಿದೆ ಎಂದು ತಿಳಿಸಿದರು....
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ್ ನಿರ್ದೋಷಿ ಎಂದು ಕೊನೆಗೂ ಒಪ್ಪಿಕೊಂಡ ಸರ್ಕಾರ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ್ ನಿರ್ದೋಷಿ ಎಂದು ಕೊನೆಗೂ ಒಪ್ಪಿಕೊಂಡ ಸರ್ಕಾರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ ವಿಜಯೋತ್ಸವದ ವೇಳೆ 2025ರ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರ ವಿರುದ್ಧದ ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿದೆ. 2025ರ ಸೆಪ್ಟೆಂಬರ್ 8ರಂದು ಬಿ. ದಯಾನಂದ ಅವರು ಲಿಖಿತ ಸಮರ್ಥನೆ ಸಲ್ಲಿಸಿ, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿ ತನಗೆ ಕ್ಲೀನ್‌ಚಿಟ್ ನೀಡುವಂತೆ ಮನವಿ ಮಾಡಿದ್ದರು. ಅವರ ಸಮರ್ಥನೆ ಹಾಗೂ ಆಡಳಿತ ಇಲಾಖೆಯ ಅಭಿಪ್ರಾಯವನ್ನು ಪರಿಶೀಲಿಸಿದ ಸರ್ಕಾರ, 2026ರ ಜುಲೈ 14ರಂದು ಹೊರಡಿಸಿದ ಆದೇಶದಲ್ಲಿ ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ನಿಯಮ 8(4)ರಡಿ ಆರಂಭಿಸಿದ್ದ ಇಲಾಖಾ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.ಕಾಲ್ತುಳಿತ ಪ್ರಕರಣದ ಬಳಿಕ ಆಗಿನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಬಿ. ದಯಾನಂದ ಅವರನ್ನು ಆರಂಭದಲ್ಲಿ ಅಮಾನತುಗೊಳಿಸಿ, ಇಲಾಖಾ ವಿಚಾರಣೆಗ...
ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಬಂಧನ; ಹಲ್ಲೆಗೆ ಯತ್ನಿಸಿದ ವೇಳೆ ಪೊಲೀಸ್ ಫೈರಿಂಗ್

ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಬಂಧನ; ಹಲ್ಲೆಗೆ ಯತ್ನಿಸಿದ ವೇಳೆ ಪೊಲೀಸ್ ಫೈರಿಂಗ್

ಪ್ರಮುಖ ಸುದ್ದಿ, ರಾಜ್ಯ
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಶಿಕ್ಷಿತ ಕೈದಿಗಳ ಪೈಕಿ ಸಂತೋಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ತೆರಳಿದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಮಂಗಳವಾರ ತಡರಾತ್ರಿ ಸುಮಾರು 15ರಿಂದ 20 ಅಡಿ ಎತ್ತರದ ಜೈಲು ಗೋಡೆ ಹಾರಿ, ಟವೆಲ್ ಮತ್ತು ಹಾಸಿಗೆಗಳ ನೆರವಿನಿಂದ ಮೂವರು ಕೈದಿಗಳು ಪರಾರಿಯಾಗಿದ್ದರು. ಈ ಘಟನೆ ಕಾರಾಗೃಹದ ಭದ್ರತಾ ವ್ಯವಸ್ಥೆ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿತ್ತು.ಮಂಗಳವಾರ ರಾತ್ರಿ ಜೈಲಿನಿಂದ ಪರಾರಿಯಾಗಿದ್ದ ಸಂತೋಷ್, ಮಸ್ತಾನ್ ಹಾಗೂ ಸಾಗರ್ ಬಂಧನಕ್ಕಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಶೋಧ ಕಾರ್ಯಾಚರಣೆ ವೇಳೆ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಸಂತೋಷ್ ಅಡಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಆರೋಪಿಯನ್ನು ಬಂಧಿಸಲು ತೆರಳಿದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದು...
ಕರ್ನಾಟಕದ ಹಣ ಕಾಂಗ್ರೆಸ್ ಪಕ್ಷದ ನಿಧಿಯಲ್ಲ; ಭಾರತ್ ಜೋಡೋ ಯುವ ಸಂಘ ಯೋಜನೆಗೆ ಆರ್.ಅಶೋಕ್ ಆಕ್ರೋಶ

ಕರ್ನಾಟಕದ ಹಣ ಕಾಂಗ್ರೆಸ್ ಪಕ್ಷದ ನಿಧಿಯಲ್ಲ; ಭಾರತ್ ಜೋಡೋ ಯುವ ಸಂಘ ಯೋಜನೆಗೆ ಆರ್.ಅಶೋಕ್ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರ 6,000 'ಭಾರತ್ ಜೋಡೋ ಯುವ ಸಂಘ' ರಚಿಸಲು ಮುಂದಾಗಿರುವ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಸಾರ್ವಜನಿಕ ಹಣವನ್ನು ಕಾಂಗ್ರೆಸ್ ಪಕ್ಷದ ರಾಜಕೀಯ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, "ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಹಣವನ್ನು ಕಾಂಗ್ರೆಸ್ ಪ್ರಚಾರಕ್ಕೆ ಬಳಸುತ್ತಿದೆ. 'ಭಾರತ್ ಜೋಡೋ ಯುವ ಸಂಘ' ಯೋಜನೆ ತೆರಿಗೆದಾರರ ಹಣದಿಂದ ನಡೆಯುವ ಕಾಂಗ್ರೆಸ್ ಪ್ರಚಾರ ಯಂತ್ರವಾಗಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಖಾತರಿ ಅನುಷ್ಠಾನ ಸಮಿತಿಗಳ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ಆಶ್ರಯ ನೀಡಲಾಗಿತ್ತು. ಇದೀಗ "ಸಾಂವಿಧಾನಿಕ ಮೌಲ್ಯಗಳು" ಮತ್ತು "ಸಾಮಾಜಿಕ ಸಾಮರಸ್ಯ" ಹೆಸರಿನಲ್ಲಿ ಮತ್ತೊಮ್ಮೆ ತೆರಿಗೆದಾರರ ಹಣವನ್ನು ಪಕ್ಷದ ಹಿತಾಸಕ್ತಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ."ರಾಜ್ಯದ ಖಜಾನೆ ಕಾಂಗ್ರೆಸ್ ಪಕ್ಷದ ಖಾಸಗಿ ಚುನಾವಣಾ ನಿಧಿಯಲ್ಲ. ಅದು ರಾಹುಲ್ ಗಾಂಧಿ ಅವರ ರಾಜಕೀಯ ಅಭಿಯಾನ ಅಥವಾ ಡಿ.ಕೆ. ಶಿವಕುಮಾರ್ ...
ರಿಯಲ್ ಎಸ್ಟೇಟ್ ಬಿಟ್ಟು ಜನರ ಸಮಸ್ಯೆ ಕಡೆ ಗಮನ ಹರಿಸಿ; ಸಿಎಂಗೆ ವಿಜಯೇಂದ್ರ ತರಾಟೆ

ರಿಯಲ್ ಎಸ್ಟೇಟ್ ಬಿಟ್ಟು ಜನರ ಸಮಸ್ಯೆ ಕಡೆ ಗಮನ ಹರಿಸಿ; ಸಿಎಂಗೆ ವಿಜಯೇಂದ್ರ ತರಾಟೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಸಮಸ್ಯೆಗಳ ಕಡೆ ಗಮನಹರಿಸಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬರ ಪರಿಹಾರಕ್ಕಾಗಿ ಪ್ರಧಾನಿಗೆ ಪತ್ರ ಬರೆಯುವ ಬದಲು ರಾಜ್ಯ ಸರ್ಕಾರ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದ್ದಾರೆ. ಕಲಬುರಗಿಯಲ್ಲಿ ಬರ ಅಧ್ಯಯನಕ್ಕೆ ಸಚಿವರನ್ನು ನೇಮಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದನ್ನು ನೆನಪಿಸಿದ ವಿಜಯೇಂದ್ರ, "ರಾಜ್ಯಕ್ಕೆ ಇನ್ನೂ ಕೃಷಿ ಸಚಿವರೇ ಇಲ್ಲ. ಕಂದಾಯ ಸಚಿವರು ಕ್ಷೇತ್ರ ಬಿಟ್ಟು ಹೊರಬರುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಸಚಿವರು ಬೇರೆ ವಿಷಯಗಳಲ್ಲಿ ನಿರತರಾಗಿದ್ದಾರೆ. ಕೈಗಾರಿಕಾ ಸಚಿವರು ರೋಡ್‌ ಶೋಗಳಲ್ಲಿ ಬ್ಯುಸಿಯಾಗಿದ್ದಾರೆ. ಗೃಹ ಸಚಿವರು ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುತ್ತಿದ್ದಾರೆ. ಸಾರಿಗೆ ಸಚಿವರು ಬಸ್‌ ಪ್ರಯಾಣದಲ್ಲಿದ್ದಾರೆ. ನೀರಾವರಿ ಸಚಿವರಿಗೆ ಇಲಾಖೆಯಲ್ಲೇ ಆಸಕ್ತಿ ಇಲ್ಲ. ಜಿಲ್ಲೆಗಳಲ್ಲಿ ಕೆಡಿಪಿ ...
ಡಿಸಿಪಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ; ಹಣ ವಂಚನೆ ಪ್ರಕರಣ ದಾಖಲು

ಡಿಸಿಪಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ; ಹಣ ವಂಚನೆ ಪ್ರಕರಣ ದಾಖಲು

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಸಾರ್ವಜನಿಕರಿಂದ ಹಣ ವಂಚಿಸಿದ ಆರೋಪದಡಿ ಹೆಬ್ಬಗೋಡಿ ಪೊಲೀಸರು ಅಪರಿಚಿತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಡಿಸಿಪಿ ನಾರಾಯಣ ಅವರ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿ ಹಿರಿಯ ಐಪಿಎಸ್ ಅಧಿಕಾರಿಯ ಹೆಸರಿನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ, ಅವರ ಸ್ನೇಹಿತರು ಹಾಗೂ ಸಾರ್ವಜನಿಕರನ್ನು ಸಂಪರ್ಕಿಸಿ ವಿವಿಧ ನೆಪಗಳಲ್ಲಿ ಹಣ ಕಳುಹಿಸುವಂತೆ ಕೇಳಿದ್ದಾನೆ.ಪ್ರಕರಣ ದಾಖಲಿಸಿರುವ ಪೊಲೀಸರು, ಸಾಮಾಜಿಕ ಜಾಲತಾಣ ಚಟುವಟಿಕೆ ಮತ್ತು ಹಣದ ವಹಿವಾಟಿನ ಡಿಜಿಟಲ್ ಮಾಹಿತಿಯನ್ನು ಪರಿಶೀಲಿಸಿ, ವಂಚನೆಯ ಜಾಲ ಹಾಗೂ ಆರೋಪಿಯನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ಡಿಸಿಪಿ ಎಂ. ನಾರಾಯಣ ವಿಡಿಯೊ ಬಿಡುಗಡೆ ಮಾಡಿ, ತಮ್ಮ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ರಿಯಾಯಿತಿ ದರದಲ್ಲಿ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುವ ನೆಪದಲ್ಲಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ....
ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡಲು ದೇವೇಗೌಡ ಆಗ್ರಹ, ವಿಧಾನಸೌಧ ಎದುರು ಸತ್ಯಾಗ್ರಹದ ಎಚ್ಚರಿಕೆ

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡಲು ದೇವೇಗೌಡ ಆಗ್ರಹ, ವಿಧಾನಸೌಧ ಎದುರು ಸತ್ಯಾಗ್ರಹದ ಎಚ್ಚರಿಕೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ತೀವ್ರಗೊಂಡಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಯೋಜನೆಯನ್ನು ತಕ್ಷಣ ಕೈಬಿಡುವಂತೆ ಆಗ್ರಹಿಸಿದ್ದಾರೆ. ಸರ್ಕಾರ ಮನವಿಯನ್ನು ಕಡೆಗಣಿಸಿದರೆ ರೈತರ ಪರವಾಗಿ ಜೆಡಿಎಸ್ ಹೋರಾಟ ನಡೆಸುವುದರ ಜೊತೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ರಾಮನಗರ ಮತ್ತು ಹಾರೋಹಳ್ಳಿ ಭಾಗದ 7,481 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ₹18,133 ಕೋಟಿ ವೆಚ್ಚದಲ್ಲಿ ಸಮಗ್ರ ಉಪನಗರ ಯೋಜನೆ ಜಾರಿಗೆ ಮುಂದಾಗಿದೆ. ಆದರೆ ಈ ಪ್ರದೇಶದಲ್ಲಿ ಈಗಾಗಲೇ ಸಾವಿರಾರು ಎಕರೆ ಭೂಮಿಯನ್ನು ಕೈಗಾರಿಕೆಗಳಿಗೆ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.ಯೋಜನೆಯಿಂದ 10,580 ರೈತರು ಬಾಧಿತರಾಗಲಿದ್ದು, ಅವರಲ್ಲಿ ಶೇ.82ರಷ್ಟು ಮಂದಿ ಒಂದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರು ಎಂದು ಅವರು ಉಲ್ಲೇಖಿಸಿದ್ದಾರೆ. ಭೈರಮಂಗಲ ಕೆರೆ ಈಗಾಗಲೇ ಕೈಗಾರಿಕಾ ತ್ಯಾಜ್ಯ ಮತ್ತು ಮಾಲಿನ್...
ಬಿಡದಿ ಟೌನ್‌ಶಿಪ್ ವಿವಾದ; ಅನ್ನದಾತರ ಮೇಲೆ ಸುಳ್ಳು FIR ದಾಖಲಿಸಿ ಬೆದರಿಕೆ?

ಬಿಡದಿ ಟೌನ್‌ಶಿಪ್ ವಿವಾದ; ಅನ್ನದಾತರ ಮೇಲೆ ಸುಳ್ಳು FIR ದಾಖಲಿಸಿ ಬೆದರಿಕೆ?

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ರೈತರ ಜಮೀನಿನ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪ್ರಶ್ನಿಸಿದ ಅನ್ನದಾತರ ಮೇಲೆಯೇ ಸುಳ್ಳು FIR ದಾಖಲಿಸಿ ಬೆದರಿಕೆ ಹಾಕಲಾಗಿದೆ ಆರೋಪಿಸಿದ್ದಾರೆ. ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ರೈತರ ಜಮೀನಿನ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ನಿಜ ಮುಖ ಮತ್ತೊಮ್ಮೆ ಬಯಲಾಗಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ. ರೈತರಿಗೆ ಯಾವುದೇ ಪೂರ್ವ ಮಾಹಿತಿ ನೀಡದೆ ಜಮೀನಿಗೆ ನುಗ್ಗಿ ಜಂಟಿ ಮಾಪನ (JMC) ನಡೆಸಲು ಮುಂದಾಗಿರುವುದು ಮಾತ್ರವಲ್ಲ, ಅದನ್ನು ಪ್ರಶ್ನಿಸಿದ ಅನ್ನದಾತರ ಮೇಲೆಯೇ ಸುಳ್ಳು FIR ದಾಖಲಿಸಿ ಬೆದರಿಕೆ ಹಾಕಲಾಗಿದೆ. ರೈತರ ಪರವಾಗಿ ನಿಲ್ಲಬೇಕಾದ ಸರ್ಕಾರವೇ ಪೊಲೀಸರನ್ನು ಬಳಸಿಕೊಂಡು ಹೋರಾಟವನ್ನು ಹತ್ತಿಕ್ಕಲು ಹೊರಟಿರುವುದು ಅತ್ಯಂತ ಖಂಡನೀಯ ಎಂದವರು ಹೇಳಿದ್ದಾರೆ.ಅನ್ನದಾತರ ವಿರುದ್ಧ ಸೇಡಿನ ರಾಜಕಾರಣ ಮಾಡುವುದನ್ನು ತಕ್ಷಣ ನಿಲ್ಲಿಸಿ. 48 ಗಂಟೆಗಳ ಒಳಗೆ ರೈತರ ಮೇಲಿನ ಎಲ್ಲಾ ಸುಳ್ಳು FIRಗಳನ್ನು ಹಿಂಪಡೆಯಬೇಕು ಎಂದು ಅಶೋಕ್ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ಬಿ...
ಕರ್ನಾಟಕದಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಡಿ.ಕೆ. ಶಿವಕುಮಾರ್ ಘೋಷಣೆ

ಕರ್ನಾಟಕದಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಡಿ.ಕೆ. ಶಿವಕುಮಾರ್ ಘೋಷಣೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ನೇತೃತ್ವದ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ನಡೆದ Google I/O Connect India 2026 ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ರಾಜ್ಯದಲ್ಲಿ AI ಹಬ್ ಸ್ಥಾಪಿಸಿ, ಸ್ಟಾರ್ಟ್‌ಅಪ್‌ಗಳು, ಉದ್ಯಮಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಂಶೋಧಕರನ್ನು ಒಂದೇ ವೇದಿಕೆಗೆ ತಂದು AI ಆಧಾರಿತ ಸಂಶೋಧನೆ ಮತ್ತು ನವೀನ ಪರಿಹಾರಗಳಿಗೆ ಉತ್ತೇಜನ ನೀಡಲಾಗುವುದು ಎಂದು ಅವರು ಹೇಳಿದರು. "ಬೆಂಗಳೂರು ಈಗಾಗಲೇ ವಿಶ್ವದ ಪ್ರಮುಖ ತಂತ್ರಜ್ಞಾನ ನಗರಗಳಲ್ಲಿ ಒಂದಾಗಿದೆ. ಭಾರತದ ಸಾಫ್ಟ್‌ವೇರ್ ರಫ್ತಿನ ಶೇ.40ರಷ್ಟು ಕೊಡುಗೆ ಕರ್ನಾಟಕದ್ದಾಗಿದ್ದು, 17 ಸಾವಿರಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಈಗ ಕರ್ನಾಟಕವನ್ನು ಭಾರತದ AI ರಾಜಧಾನಿಯನ್ನಾಗಿ ರೂಪಿಸುವುದು ನಮ್ಮ ಗುರಿ," ಎಂದು ಮುಖ್ಯಮಂತ್ರಿ ಹೇಳಿದರು.AI ಶಿಕ್ಷಣವನ್ನು ಶಾಲಾ ಹಂತದಿಂದಲೇ ಪರಿಚಯಿಸುವುದರ ಜೊತೆ...