Monday, June 23

ರಾಜ್ಯ

ವಾರಾಂತ್ಯದ ವರೆಗೂ ರಾಜ್ಯದಲ್ಲಿ ಭಾರೀ ಮಳೆ, ದಕ್ಷಿಣ ಕನ್ನಡ, ಉಡುಪಿ ಸಹಿತ ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ

ವಾರಾಂತ್ಯದ ವರೆಗೂ ರಾಜ್ಯದಲ್ಲಿ ಭಾರೀ ಮಳೆ, ದಕ್ಷಿಣ ಕನ್ನಡ, ಉಡುಪಿ ಸಹಿತ ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಕಳೆದೆರಡು ವಾರಗಳಲ್ಲಿ ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಕರ್ನಾಟಕದಲ್ಲಿ ಈ ಮಳೆ ಪರಿಸ್ಥಿತಿ ಆಗಸ್ಟ್ 6ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲೂ ಧಾರಾಕಾರ ಮಳೆಯ ಮುನ್ಸೂಚನೆ ಸಿಕ್ಕಿದೆ.‌ ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇದೇ ವೇಳೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆಗಳಿವೆ. ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ; ಇಂದಿನಿಂದ ಹೊಸ ದರ ಅನ್ವಯ

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ; ಇಂದಿನಿಂದ ಹೊಸ ದರ ಅನ್ವಯ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಆಗಸ್ಟ್ 1 ರಿಂದ ಅನ್ವಯವಾಗುವಂತೆ ಹೆಚ್ಚಿಸಿವೆ. ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 8.50 ರೂಪಾಯಿ ದುಬಾರಿಯಾಗಿದೆ. ಈ ದರ ಪರಿಷ್ಕರಣೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗಷ್ಟೇ ಅನ್ವಯವಾಗಲಿದ್ದು, ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿತರಕರು ತಿಳಿಸಿದ್ದಾರೆ....
ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸವಲ್ಲ, ಕುರಿ ಮಾಂಸ; ಸರ್ಕಾರದ ಸ್ಪಷ್ಟನೆ

ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸವಲ್ಲ, ಕುರಿ ಮಾಂಸ; ಸರ್ಕಾರದ ಸ್ಪಷ್ಟನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಾರದಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಕುರಿ ಮಾಂಸದ ಜೊತೆ ನಾಯಿ ಮಾಂಸ ಬೆರೆಸಿ ತರಲಾಗಿದೆ ಎಂಬ ಆರೋಪ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಸಂಗತಿಯನ್ನು ಬಹಿರಂಗಪಡಿಸಿದೆ. ಮಾಂಸದ ಮಾದರಿ ಬಗ್ಗೆ ಪರೀಕ್ಷಾ ವರದಿ ಬಂದಿದ್ದು, ರಾಜಸ್ಥಾನದಿಂದ ರೈಲಿನಲ್ಲಿ ಬಂದಿರುವುದು ಕುರಿ ಮಾಂಸ ಎಂಬುದು ವರದಿಯಲ್ಲಿ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 26ರಂದು ರಾಜಸ್ಥಾನದ ಜೈಪುರದಿಂದ ರೈಲಿನಲ್ಲಿ ಕುರಿ ಮಾಂಸ ಬಂದಿದ್ದು, ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಆರೋಪಿಸಿ ಹಿಂದೂ ಪರ ಹೋರಾಟಗಾರ ಪುನೀತ್‌ ಕೆರೆಹಳ್ಳಿ ತಂಡವು ರೈಲು ನಿಲ್ದಾಣದಲ್ಲಿ ಪ್ರತಿಭಟಿಸಿತ್ತು. ಈ ಪ್ರಕರಣ ಪೊಲೀಸ್‌ ಠಾಣೆ ಮೆಟ್ಟಿಲೇರಿ, ಪುನೀತ್ ಕೆರೆಹಳ್ಲಿಯನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ರೈಲಿನಲ್ಲಿ ರವಾನೆಯಾಗಿದ್ದ ಮಾಂಸದ ಮಾದರಿಯನ್ನು ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ಪರೀಕ್ಷಾ ವರದಿ ಸರ್ಕಾರದ ಕೈಸೇರಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದಾರೆ.‌ ಇತ್ತೀಚೆಗೆ ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸದ ಕುರಿತಾ...
ಮುಡಾ ಹಗರಣ ಖಂಡಿಸಿ ಬೈಂದೂರಿನಲ್ಲಿ ಬಿಜೆಪಿ ಒಬಿಸಿ ಮೋರ್ಚಾ ಪ್ರತಿಭಟನೆ

ಮುಡಾ ಹಗರಣ ಖಂಡಿಸಿ ಬೈಂದೂರಿನಲ್ಲಿ ಬಿಜೆಪಿ ಒಬಿಸಿ ಮೋರ್ಚಾ ಪ್ರತಿಭಟನೆ

ಪ್ರಮುಖ ಸುದ್ದಿ, ರಾಜ್ಯ
ಉಡುಪಿ: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ವತಿಯಿಂದ ಓಬಿಸಿ ಜಿಲ್ಲಾಧ್ಯಕ್ಷರಾದ ವಿಜಯ್ ಕೊಡವೂರು ನೇತೃತ್ವದಲ್ಲಿ ಮೂಡ ಹಗರಣ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ಬೈಂದೂರಿನಲ್ಲಿ ಪ್ರತಿಭಟನೆ ನಡೆಯಿತು. ಮೈಸೂರು ನಗರಾಭಿವೃದ್ಧಿ ಇಲಾಖೆ (ಮುಡಾ)ಮೂಲಕ ಸಿಎಂ ಕುಟುಂಬದವರು ಅಕ್ರಮವಾಗಿ ಸೈಟ್ ಪಡೆದಿದ್ದಾರೆ‌ ಈ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ನಾಯಕರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಶಿವರಾಜ್ ಪೂಜಾರಿ, ಜಿಲ್ಲಾ ಒಬಿಸಿ ಕಾರ್ಯದರ್ಶಿ ಚಂದ್ರ ಜೋಗಿ, ಜಿಲ್ಲಾ ಒಬಿಸಿ ಉಪಾಧ್ಯಕ್ಷ ರಾಜಶೇಖರ್ ದೇವಾಡಿಗ, ವಿನೋದ್ ಗುಜ್ಜಾಡಿ,ಜಿಲ್ಲಾ ಒಬಿಸಿ ಕಾರ್ಯಕಾರಣಿ ಸದಸ್ಯ ಉಮೇಶ್ ಕಂಡ್ಲೂರು, ಒಬಿಸಿ ಪ್ರಧಾನ ಕಾರ್ಯದರ್ಶಿಯಾದ ಮಂಜುನಾಥ ದೇವಾಡಿಗ, ಕಾರ್ಯದರ್ಶಿ ಅನಿಲ್ ಮೆಂಡನ್, ರಾಜೇಶ್ ಕೊಠಾರಿ, ಮಹೇಂದ್ರ ಬೋವಿ, ಸಂತೋಷ್ ಮೊಗವೀರ ಕಿರುಮಂಜೇಶ್ವರ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿ ಮಡಿವಾಳ, ಚಂದ್ರಶೇಖರ್ ದೇವಾಡಿಗ, ಸುಧಾಕರ್ ನೆಂಪು, ಮಹಾ...