Friday, August 7

ರಾಜ್ಯ

CWMA ಸಭೆ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ತೀರ್ಮಾನ: ಚಲುವರಾಯಸ್ವಾಮಿ

CWMA ಸಭೆ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ತೀರ್ಮಾನ: ಚಲುವರಾಯಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಬೆಳೆದಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯ ಬಳಿಕ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ರೈತರ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸಂಕಷ್ಟದ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು ಸರ್ಕಾರದ ಆದ್ಯತೆ. ಆದರೆ ಈ ವರ್ಷ ನಿರೀಕ್ಷಿತ ಮಳೆಯಾಗದ ಕಾರಣ ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದು, ಕುಡಿಯುವ ನೀರಿನ ಅಗತ್ಯವನ್ನೂ ಗಮನದಲ್ಲಿಟ್ಟುಕೊಳ್ಳಬೇಕಿದೆ ಎಂದು ಅವರು ಹೇಳಿದರು.ಜಿಲ್ಲೆಯ ಎಲ್ಲ ಶಾಸಕರು ಮುಖ್ಯಮಂತ್ರಿಗಳೊಂದಿಗೆ ಈ ಕುರಿತು ಚರ್ಚಿಸಿದ್ದು, ದೆಹಲಿಯಲ್ಲಿ ನಡೆಯಲಿರುವ CWMA ಹಾಗೂ CWRC ಸಭೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು. ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಕುಡಿಯುವ ನೀರಿನ ಅಗತ್ಯ, ಬೆಳೆಗಳ ಸ್ಥಿತಿ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮಂಡಿಸಲಿದ್ದಾರೆ. ಸಭೆಯ ಬಳಿಕ ತಕ್ಷಣವೇ ಮುಖ್ಯ...
ರಾಮಚಂದ್ರ ಗೌಡ ನಿಧನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಸಂತಾಪ

ರಾಮಚಂದ್ರ ಗೌಡ ನಿಧನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಸಂತಾಪ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಅವರ ನಿಧನಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ತೀವ್ರ ಸಂತಾಪ ಸೂಚಿಸಿದ್ದಾರೆ. ಶೋಕ ಸಂದೇಶದಲ್ಲಿ ಮಾತನಾಡಿರುವ ಅವರು, ರಾಮಚಂದ್ರ ಗೌಡರು ನಿಷ್ಠಾವಂತ ಆರ್‌ಎಸ್‌ಎಸ್‌ ಸ್ವಯಂಸೇವಕರಾಗಿದ್ದು, ಬೆಂಗಳೂರು ನಗರ ಪಾಲಿಕೆ ಸದಸ್ಯರಾಗಿ ನಗರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.ಬೆಂಗಳೂರು ಪದವೀಧರ ಕ್ಷೇತ್ರದಿಂದ ಹಲವು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, ಸಚಿವರಾಗಿಯೂ ಸೇವೆ ಸಲ್ಲಿಸಿದ್ದು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿಬೆಳೆಸಿದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ಹೇಳಿದ್ದಾರೆ. "ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ. ಅವರ ಅಗಲಿಕೆಯಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ಕರುಣಿಸಲಿ" ಎಂದು ವಿ. ಸೋಮಣ್ಣ ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ....
ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳ ಪರಾರಿ; ಗೃಹ ಸಚಿವರ ತಾವರಲ್ಲೇ ಅವಾಂತರ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳ ಪರಾರಿ; ಗೃಹ ಸಚಿವರ ತಾವರಲ್ಲೇ ಅವಾಂತರ

ಪ್ರಮುಖ ಸುದ್ದಿ, ರಾಜ್ಯ
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಜೈಲಿನ ಬ್ಯಾರಕ್‌ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಗಳನ್ನು ಬಳಸಿ ಕಾಂಪೌಂಡ್ ಗೋಡೆ ಏರಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ್ ಮತ್ತು ಸಾಗರ್ ಎಂದು ಗುರುತಿಸಲಾಗಿದೆ. ಬೀದರ್ ಜಿಲ್ಲೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಇವರು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ 15ರಿಂದ 20 ಅಡಿ ಎತ್ತರದ ಜೈಲು ಗೋಡೆ ಹಾರಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲಿನ ಭದ್ರತಾ ವ್ಯವಸ್ಥೆ, ಬ್ಯಾರಕ್‌ಗಳು ಹಾಗೂ ಕಾಂಪೌಂಡ್ ಗೋಡೆಯ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಪರಾರಿಯಾದ ಕೈದಿಗಳ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಆರಂಭಿಸಿದ್ದಾರ...
“ಗೃಹ ಸಚಿವ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ಬ್ಯುಸಿ’; ಕಲಬುರಗಿ ಜೈಲು ಕೈದಿಗಳ ಪರಾರಿ ಬಗ್ಗೆ ವಿಜಯೇಂದ್ರ ಟೀಕೆ

“ಗೃಹ ಸಚಿವ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ಬ್ಯುಸಿ’; ಕಲಬುರಗಿ ಜೈಲು ಕೈದಿಗಳ ಪರಾರಿ ಬಗ್ಗೆ ವಿಜಯೇಂದ್ರ ಟೀಕೆ

ಪ್ರಮುಖ ಸುದ್ದಿ, ರಾಜ್ಯ
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಪರಾರಿಯಾದ ಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಗೃಹ ಸಚಿವರ ತವರಲ್ಲೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಬಿಜೆಪಿ ಟೀಕಿಸಿದೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, "ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ವ್ಯಸ್ತರಾಗಿದ್ದಾರೆ. ಅದನ್ನು ಮುಗಿಸಿ ಇಲ್ಲಿಗೆ ಬರುತ್ತಾರೆ" ಎಂದು ವ್ಯಂಗ್ಯವಾಡಿದರು.ಇತ್ತೀಚೆಗೆ ಜುಲೈ 3ರಂದು ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೋ ಪ್ರಕರಣದ ಆರೋಪಿ ಕೈಕೋಳವನ್ನು ಬಿಚ್ಚಿಕೊಂಡು ಪರಾರಿಯಾಗಿದ್ದ ಘಟನೆ ನಡೆದಿತ್ತು. ಅದರ ಬೆನ್ನಲ್ಲೇ ಇದೀಗ ಕೇಂದ್ರ ಕಾರಾಗೃಹದಿಂದಲೇ ಮೂವರು ಶಿಕ್ಷಿತ ಕೈದಿಗಳು ತಪ್ಪಿಸಿಕೊಂಡಿರುವುದು ಕಲಬುರಗಿ ಜಿಲ್ಲೆಯ ಭದ್ರತಾ ವ್ಯವಸ್ಥೆ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ....
ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಗೌಡ ನಿಧನ; ನಾಯಕರ ಕಂಬನಿ

ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಗೌಡ ನಿಧನ; ನಾಯಕರ ಕಂಬನಿ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದ ಅವರು ಜನಸಂಘದ ಕಾಲದಿಂದಲೇ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡಿದ್ದು, ಕರ್ನಾಟಕದಲ್ಲಿ ಬಿಜೆಪಿ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದರು. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲೂ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ನಾಯಕ ಸಿ.ಟಿ. ರವಿ, ರಾಮಚಂದ್ರ ಗೌಡರನ್ನು ಪಕ್ಷದ ಸಂಸ್ಥಾಪಕ ಸದಸ್ಯರು, ಮಾರ್ಗದರ್ಶಕರು ಹಾಗೂ ಕಾರ್ಯಕರ್ತರ ಪ್ರೇರಣಾಸ್ತಂಭ ಎಂದು ಸ್ಮರಿಸಿದ್ದಾರೆ. "ರಾಮಚಂದ್ರ ಗೌಡರು ಕೇವಲ ಹಿರಿಯ ರಾಜಕಾರಣಿಯಲ್ಲ; ಸಾವಿರಾರು ಕಾರ್ಯಕರ್ತರಿಗೆ ಧೈರ್ಯ ತುಂಬಿದ, ತಪ್ಪು ತಿದ್ದಿ ದಾರಿತೋರಿಸಿದ ಹಿರಿಯರಾಗಿದ್ದರು. ಅಧಿಕಾರದಲ್ಲಿದ್ದರೂ ಸರಳತೆ, ಸಜ್ಜನಿಕೆ, ಸಿದ್ಧಾಂತನಿಷ್ಠೆ ಹಾಗೂ ಕಾರ್ಯಕರ್ತರ ಮೇಲಿನ ಪ್ರೀತಿಯನ್ನು ಎಂದಿಗೂ ಬಿಟ್ಟಿರಲಿಲ್ಲ," ಎಂದು ಹೇಳಿದ್ದಾರೆ. 1992ರ ಚಿಕ್ಕಮಗಳೂರು ಯುವ ಸಮಾವೇಶದಲ್ಲಿ ಯುವ ಕಾರ್ಯಕರ್ತರಿಗೆ...
ಮಲೆನಾಡಿನಲ್ಲಿ ಮಳೆ ಹಿನ್ನಡೆ; ಲಿಂಗನಮಕ್ಕಿ, ಭದ್ರಾ ಜಲಾಶಯಗಳ ಒಳಹರಿವು ಕುಸಿತ

ಮಲೆನಾಡಿನಲ್ಲಿ ಮಳೆ ಹಿನ್ನಡೆ; ಲಿಂಗನಮಕ್ಕಿ, ಭದ್ರಾ ಜಲಾಶಯಗಳ ಒಳಹರಿವು ಕುಸಿತ

ಪ್ರಮುಖ ಸುದ್ದಿ, ರಾಜ್ಯ
ಶಿವಮೊಗ್ಗ: ಕಳೆದ ವಾರ ಧಾರಾಕಾರ ಮಳೆಗೆ ಸಾಕ್ಷಿಯಾಗಿದ್ದ ಮಲೆನಾಡಿನಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಮುಂಗಾರು ದುರ್ಬಲಗೊಂಡಿದ್ದು, ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಬಿಸಿಲಿನ ವಾತಾವರಣ ಹೆಚ್ಚಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಮಳೆ ಕೊರತೆಯಿಂದ ಪ್ರಮುಖ ಜಲಾಶಯಗಳ ಒಳಹರಿವು ಕುಸಿದಿದ್ದು, ಭತ್ತದ ನಾಟಿ ಕಾರ್ಯವೂ ಇನ್ನೂ ಆರಂಭವಾಗಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಅಕ್ಕಿ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜುಲೈ 13ರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪಶ್ಚಿಮಘಟ್ಟ ಪ್ರದೇಶಗಳಾದ ಯಡೂರು (10 ಮಿ.ಮೀ.), ಚಕ್ರಾ (10 ಮಿ.ಮೀ.), ಮಾಸ್ತಿಕಟ್ಟೆ (8 ಮಿ.ಮೀ.), ಮಾಣಿ (7 ಮಿ.ಮೀ.), ಸಾವೇಹಕ್ಲು (6 ಮಿ.ಮೀ.) ಹಾಗೂ ಹುಲಿಕಲ್ (5 ಮಿ.ಮೀ.)ಗಳಲ್ಲಿ ಮಾತ್ರ ತುಸು ಮಳೆಯಾಗಿದೆ. ಶಿವಮೊಗ್ಗ, ಸೊರಬ ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆ ಅತಿ ಕಡಿಮೆಯಾಗಿದೆ.ಜಲಾಶಯಗಳ ಮಾಹಿತಿಯಂತೆ, ಲಿಂಗನಮಕ್ಕಿ ಜಲಾಶಯಕ್ಕೆ 4,999 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಹೊರಹರಿವು ಸ್ಥಗಿತಗೊಳಿಸಲಾಗಿದೆ. ನೀರಿನ ಮಟ್ಟ 1,762.90 ಅಡಿ ಇದ್ದು, ಗರಿಷ್ಠ ಮ...
ಹತ್ತಾರು ಬಡ ಕುಟುಂಬಗಳಿಗೆ ಮನೆ ಭಾಗ್ಯ.. ಇದೀಗ ಸರ್ಕಾರಿ ಶಾಲೆಗೆ ಡಿಜಿಟಲ್ ಸ್ಪರ್ಶ.. ಬಿಜೂರು ಶಾಲೆಗೆ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಕೊಡುಗೆ ನೀಡಿದ ಗೋವಿಂದ ಬಾಬು ಪೂಜಾರಿ

ಹತ್ತಾರು ಬಡ ಕುಟುಂಬಗಳಿಗೆ ಮನೆ ಭಾಗ್ಯ.. ಇದೀಗ ಸರ್ಕಾರಿ ಶಾಲೆಗೆ ಡಿಜಿಟಲ್ ಸ್ಪರ್ಶ.. ಬಿಜೂರು ಶಾಲೆಗೆ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಕೊಡುಗೆ ನೀಡಿದ ಗೋವಿಂದ ಬಾಬು ಪೂಜಾರಿ

ಪ್ರಮುಖ ಸುದ್ದಿ, ರಾಜ್ಯ
ಉಡುಪಿ: ಬರಡು ಭೂಮಿಗೆ ಕುಡಿಯುವ ನೀರು ಹರಿಸಿ ಆಧುನಿಕ ಭಗೀರಥ ಎಂದು ಕರೆಸಿಕೊಂಡಿರುವ ಉದ್ಯಮಿ, ಹೆಸರಾಂತ ಸಮಾಜ ಸೇವಕ ಡಾ.ಗೋವಿಂದ ಬಾಬು ಪೂಜಾರಿ, ಕರ್ನಾಟಕದ ಹಲವೆಡೆ 50ಕ್ಕೂ ಹೆಚ್ಚು ಕುಟುಂಬಗಳಿಗೆ ಮನೆಗಳನ್ನು ಉಚಿತವಾಗಿ ನಿರ್ಮಿಸಿ ಕೊಟ್ಟು ಆಧುನಿಕ ಕರ್ಣ ಎನಿಸಿಕೊಂಡಿದ್ದಾರೆ. ಇದೀಗ ಕರಾವಳಿಯ ಉಡುಪಿ ಸಮೀಪದ ಬಿಜೂರಿನ ಸರ್ಕಾರಿ ಶಾಲೆಯನ್ನು ಐಟಿ ಕಂಪನಿಗೂ ಸಾಟಿಯಿಲ್ಲದ ರೀತಿ ಡಿಜಿಟಲ್ ವ್ಯವಸ್ಥೆಯೊಂದಿಗೆ ಅಭಿವೃದ್ಧಿಪಡಿಸಿ ದೇಶದ ಗಮನಸೆಳೆದಿದ್ದಾರೆ.ಖಾಸಗಿ ಶಾಲೆಗಳ ಸೌಲಭ್ಯ ಸರ್ಕಾರಿ ಶಾಲೆಗಳಲ್ಲಿ ಸಿಗಲ್ಲ ಎಂಬ ಅಭಿಪ್ರಾಯ ಹಲವರದ್ದು. ಆದರೆ, ದುಬಾರಿ ಶುಲ್ಕ ನೀಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಸಾಮರ್ಥ್ಯ ಬಹುತೇಕ ಜನರಿಗೆ ಇಲ್ಲ. ಇಂತಹ ಸಂದರ್ಭದಲ್ಲಿ ತನ್ನೂರಿನ ಮಕ್ಕಳಿಗಾಗಿ ಬೈಂದೂರು ಸಮೀಪದ ಬಿಜೂರಿನ ಸರ್ಕಾರಿ ಶಾಲೆಯನ್ನೇ ದತ್ತು ಪಡೆದಿರುವ ChefTalk ಕಂಪನಿಯ ಮಾಲೀಕ ಡಾ.ಗೋವಿಂದ ಬಾಬು ಪೂಜಾರಿ ಎಲ್ಲರಿಗೂ, ಆ ಶಾಲೆಯನ್ನು ಯಾವ ಕಾರ್ಪೊರೇಟ್ ಶಾಲೆಗೂ ಕಮ್ಮಿಯಿಲ್ಲದಂತೆ ಅಭಿವೃದ್ಧಿಪಡಿಸಿದ್ದಾರೆ. ಇದೀಗ ಬಿಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೈಟೆಕ್ ಕಂಪ್ಯೂ...
ಕಾಂಗ್ರೆಸ್ ನಾಯಕ, ಮಾಜಿ ಸಂಸದ ಹೆಚ್. ಹನುಮಂತಪ್ಪ ವಿಧಿವಶ

ಕಾಂಗ್ರೆಸ್ ನಾಯಕ, ಮಾಜಿ ಸಂಸದ ಹೆಚ್. ಹನುಮಂತಪ್ಪ ವಿಧಿವಶ

ಪ್ರಮುಖ ಸುದ್ದಿ, ರಾಜ್ಯ
ಚಿತ್ರದುರ್ಗ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ನಿಧನರಾದರು. ಹನುಮಂತಪ್ಪ ಅವರು ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರೆ, ಎರಡು ಬಾರಿ ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂತಾಪ ಸೂಚಿಸಿ, "ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಜ್ಯಸಭಾ ಸಂಸದ ಹೆಚ್. ಹನುಮಂತಪ್ಪ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ಸಂಸದೀಯ ಮೌಲ್ಯಗಳನ್ನು ಎತ್ತಿಹಿಡಿದ ಸಮರ್ಪಿತ ನಾಯಕ, ಜನಪರ ರಾಜಕಾರಣಿ ಹಾಗೂ ಸಮಾಜದ ದಮನಿತ ವರ್ಗಗಳ ಧ್ವನಿಯಾಗಿದ್ದ ಅವರ ಸೇವೆ ಸದಾ ಸ್ಮರಣೀಯ. ಅವರ ನಿಧನ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ" ಎಂದು ಹೇಳಿದ್ದಾರೆ. "ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ...
ರಾಜ್ಯದ ಕೆಲವೆಡೆ ಬಿರುಗಾಳಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕೆಲವೆಡೆ ಬಿರುಗಾಳಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವೆಡೆ ಬಿರುಗಾಳಿಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆ ಇರುವುದರಿಂದ ಮೀನುಗಾರರು ಹಾಗೂ ಸಮುದ್ರ ತೀರ ಪ್ರದೇಶದ ನಿವಾಸಿಗಳು ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದ್ದು, ಈ ಭಾಗಗಳಲ್ಲೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲೂ ಗಾಳಿ-ಮಳೆಯ ವಾತಾವರಣ ಇರಲಿದೆ. ಧಾರವಾಡ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ನ...
ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ

ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು, ₹34 ಕೋಟಿ ಮೌಲ್ಯದ 17 ಕೆಜಿ 282 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮೇ 11, 2026ರಂದು ಎನ್‌ಡಿಪಿಎಸ್ (NDPS) ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ಈ ಹಿಂದೆ ಮೂವರು ವಿದೇಶಿಯರು ಸೇರಿದಂತೆ ಎಂಟು ಆರೋಪಿಗಳನ್ನು ಬಂಧಿಸಲಾಗಿತ್ತು. ಆ ವೇಳೆ ₹35 ಕೋಟಿ ಮೌಲ್ಯದ 17 ಕೆಜಿ 400 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮುಂದುವರಿಸಲಾಗಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸಿದ ಪೊಲೀಸರು, ಬಾತ್ಮಿದಾರರ ಮಾಹಿತಿ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಜುಲೈ 8ರಂದು ಚಿಕ್ಕಬಾಣಾವರ ಕೆರೆಯ ಸಮೀಪ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ವಶದಿಂದ 6 ಕೆಜಿ 589 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.ಬಂಧಿ...