Monday, March 30

ರಾಜ್ಯ

ಸಚಿವ ಭೈರತಿ ಹೆಸರಲ್ಲಿ ಯುವಕರ ಪುಂಡಾಟ;  ಕೇರಳ ಮೂಲದ ವ್ಯಕ್ತಿಯ ಆಸ್ತಿಗಾಗಿ ಕಿತ್ತಾಟ; ಪೊಲೀಸರ ಮೇಲೂ ಗೃಹ ಇಲಾಖೆಗೆ ದೂರು

ಸಚಿವ ಭೈರತಿ ಹೆಸರಲ್ಲಿ ಯುವಕರ ಪುಂಡಾಟ;  ಕೇರಳ ಮೂಲದ ವ್ಯಕ್ತಿಯ ಆಸ್ತಿಗಾಗಿ ಕಿತ್ತಾಟ; ಪೊಲೀಸರ ಮೇಲೂ ಗೃಹ ಇಲಾಖೆಗೆ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ದಂಪತಿಗಳನ್ನು ದೂರಮಾಡಿ ಅಸ್ತಿ ಕಬಳಿಸಲು ಸಚಿವ ಭೈರತಿ ಸುರೇಶ್ ಅಪ್ತರೆಂದು ಹೇಳಿಕೊಂಡು ಯುವಕರ ಗುಂಪು ದಾಂಧಲೆ ನಡೆಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ರೌಡಿಗಳ ಅಟ್ಟಹಾಸಕ್ಕೆ ಪೊಲೀಸರೂ ಸಾಥ್ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ. ಡಿಜಿಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸೋಮವಾರ ದೂರು ಸಲ್ಲಿಕೆಯಾಗಿದೆ.ದಂಪತಿಗಳ ನಡುವಿನ ವಿರಸದ ಪ್ರಕರಣದ ಲಾಭ ಪಡೆಯಲು ರೌಡಿ ಗುಂಪು ಹೆಣ್ಣೂರು ಬಳಿ ನಿವೇಶನವೊಂದಕ್ಕೆ ಏಕಾಏಕಿ ನುಗ್ಗಿ ಪುಂಡಾಟ ಪ್ರದರ್ಶಿಸಿದೆ. ಹೆಣ್ಣೂರು ಗೋಪಿ ಮತ್ತು ಇಪ್ಪತ್ತು ಅಪರಿಚಿತ ವ್ಯಕ್ತಿಗಳ ದಾಂಧಲೆಯನ್ನು ಪ್ರತಿಭಟಿಸಿದ ಜಮೀನು ಮಾಲೀಕ ಶಾಜಿ ಜೋಸೆಫ್ ಅವರ ಕೊಲೆಗೆ ಯತ್ನ ನಡೆದಿದೆ. ಅಷ್ಟೇ ಅಲ್ಲ, ಮಾರಣಾಂತಿಕ ದಾಳಿ ನಡೆಸುವ ರಾಟ್‌ವೀಲರ್ ನಾಯಿಯನ್ನೂ ಕರೆತಂದು ದಾಳಿಗೆ ಯತ್ನಿಸಿದ್ದಾರೆಂದೂ ಸಂತ್ರಸ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಹೆಣ್ಣೂರು ಸಮೀಪ ವಾಸವಿರುವ ಸಾಜಿ ಜೋಸೆಫ್ ಹಾಗೂ ಸಿನಿ ಸಾಜಿ ದಂಪತಿ ನಡುವೆ ವೈವಾಹಿಕ ಕಲಹಗಳ...
ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಮನವಿ

ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಮನವಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಬಲಿಜ ಜಾಗೃತಿ ವೇದಿಕೆ ವತಿಯಿಂದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣರವರಿಗೆ ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಕಾಲಜ್ಞಾನಿ, ಮಹಾನ್ ಸಂತ ಕೈವಾರ ತಾತಯ್ಯ ಖ್ಯಾತಿಯ ಯೋಗಿ ನಾರೇಯಣ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕು ಎಂದು ಕರ್ನಾಟಕ ಬಲಿಜ ಜಾಗೃತಿ ವೇದಿಕೆ ಮನವಿ ಮಾಡಿದೆ.ಕರ್ನಾಟಕ ಬಲಿಜ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಮುನಿರಾಜುರವರು, ಕಾರ್ಯದರ್ಶಿ ಜಿ.ಜ್ಞಾನೇಶ್, ಕನ್ನಡ ಪರ ಹೋರಾಟಗಾರ ಖಾಜಾ ಹುಸೇನ್ ಅವರ ನಿಯೋಗ ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಪತ್ರ ನೀಡಿದೆ..ಈ ಸಂದರ್ಭದಲ್ಲಿ ಮಾತನಾಡಿ ಸಚಿವ ವಿ.ಸೋಮಣ್ಣ ಸರ್ವರಿಗೂ ಅನ್ನ ಅಕ್ಷರ, ಆಶ್ರಯ ಮೂರು ಸಿದ್ದಾಂತದ ಮೇಲೆ ಸಾಧು ಸಂತರು ನಾಡಿನ ಜನರ ಒಳಿತಿಗೆ ಶ್ರಮಿಸಿದರು. ಸಾಧು ಸಂತರ ಕೊಡುಗೆಯಿಂದ ನಾಡು ಶ್ರೀಮಂತಿವಾಗಿದೆ. ಕೈವಾರ ತಾತಯ್ಯ ಶ್ರೀ ಯೋಗಿ ನಾರೇಯಣರವರು ಲೋಕಕಲ್ಯಾಣಕ್ಕಾಗಿ ಶ್ರಮಿಸಿದ ಮಹಾನ್ ಸಂತರು ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಲು ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಹೆಸರು ನಾಮಕರಣಕ್ಕೆ ಪರಿಶೀಲನೆ ಮಾಡಿ ಕ್ರಮಕೈಗೊಳ್ಳಲಾಗುವುದು ಎ...
ದೊಡ್ಡಬಳ್ಳಾಪುರ: ಅರಳು ಮಲ್ಲಿಗೆ ಕೆರೆ ಏರಿ ಮೇಲೆ ರಸ್ತೆ ಅಪಘಾತ: ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಅರಳು ಮಲ್ಲಿಗೆ ಕೆರೆ ಏರಿ ಮೇಲೆ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ: ಬೈಕ್‌ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಅರಳು ಮಲ್ಲಿಗೆ ಕೆರೆ ಏರಿ ಮೇಲೆ ನಡೆದಿದೆ.ಲೋಕೇಶ್ (28) ಮೃತಪಟ್ಟ ಬೈಕ್ ಸವಾರ ಎನ್ನಲಾಗಿದೆ. ಲಾರಿಯು ಚಾಲಕನ ನಿರ್ಲಕ್ಷದಿಂದ ಮೊದಲು ಆಲಹಳ್ಳಿ ಬಳಿ ಕಾರಿಗೆ ಡಿಕ್ಕಿ ಹೊಡೆಯಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಲು ವೇಗವಾಗಿ ಸಾಗಿ ಕೆರೆ ಏರಿ ಮೇಲೆ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.ಬೈಕ್ ಗೆ ಢಿಕ್ಕಿಯಾದ ಲಾರಿ ಅಲ್ಲಿಂದಲೂ ಪರಾರಿಯಾಗಿದೆ. ಇದನ್ನು ಕಂಡ ಮಧುರೆ ಹೋಬಳಿ ನಿವಾಸಿ ಚೇತನ್ ಎಂಬವರು ಲಾರಿಯನ್ನು ಹಿಂಬಾಲಿಸಿ ನೆಲಮಂಗಲದ ಬಿನ್ನಮಂಗಲದ ಬಳಿ ಲಾರಿ ಸಮೇತ ಚಾಲಕನನ್ನ ಹಿಡಿದು ನೆಲಮಂಗಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಪಘಾತ ಘಟನೆ ಬಗ್ಗೆ ಪರಿಶೀಲಿಸಿರು ಪೊಲೀಸರು ತನಿಖೆ ಕೈಗೊಂಡಿದ್ದಾರೆ....
ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹಾವೇರಿ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಹೆಣಗಳಿಂದಲೂ ಬಿಜೆಪಿಯವರು ಲಂಚ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಮತಯಾಚನೆ ಸಭೆಯಲ್ಲಿ ಸಿಎಂ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಕಾಟು ಟೀಕೆ ಮಾಡಿದ ಸಿದ್ದರಾಮಯ್ಯ, ಇತಿಹಾಸದಲ್ಲಿ ಸತ್ತ ಹೆಣಗಳ ವಿಚಾರದಲ್ಲೂ ಲಂಚ ಪಡೆದ ನಾಯಕರು ಯಾರಾದರೂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು.ಸತ್ತ ಹೆಣಗಳಿಂದ ಲಂಚ ಪಡೆಡಿರುವ ಬಸವರಾಜ ಬೊಮ್ಮಾಯಿ ಮಗ ಭರತ್ ಗೆಲ್ಲಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಅವರನ್ನು ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು....
HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಣೆ; ಸರ್ಕಾರದ ಆದೇಶ

HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಣೆ; ಸರ್ಕಾರದ ಆದೇಶ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಾಹನಗಳಿಗೆ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (ಹೆಚ್ಎಸ್ಆರ್​​ಪಿ) ನಂಬರ್ ಪ್ಲೇಟ್ ಅಳವಡಿಸಲು ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಿಸಿರುವ ಸರ್ಕಾರ ಇದೀಗ ಗಡುವನ್ನು ವಿಸ್ತರಿಸಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮೂಲಗಳ ಪ್ರಕಾರ 1.90 ಕೋಟಿ ಹಳೆಯ ವಾಹನಗಳ ಪೈಕಿ ಸುಮಾರು 55 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆಯು ನವೆಂಬರ್ 30ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಇದು ಅಂತಿಮ ಗಡುವು ಆಗಿದ್ದು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನಗಳಿಗೆ ಡಿಸೆಂಬರ್ 1ರಿಂದ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ....
ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಸುಪ್ರೀಂ ಡಿಕೆಶಿಗೆ ಸ್ವಲ್ಪ ನಿರಾಳ

ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಸುಪ್ರೀಂ ಡಿಕೆಶಿಗೆ ಸ್ವಲ್ಪ ನಿರಾಳ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ವಾರಗಳ ಕಾಲ ಮುಂದೂಡಿದೆ. ಈ ಬೆಳವಣಿಗೆಯಿಂದಾಗಿ ಡಿಕೆಶಿ ಅವರು ಸ್ವಲ್ಪ ನಿರಾಳರಾಗಿದ್ದಾರೆ.ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪ ಕುರಿತ ಸಿಬಿಐ ತನಿಖೆಯ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿ ಸೋಮವಾರ ವಿಚಾರಣೆಗೆ ಬಂದಿತ್ತು. ಆದರೆ ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿತು.ಇದೇ ವೇಳೆ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶದ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯಾತ್ನಾಳ್ ಸಲ್ಲಿಸಿರುವ ಅರ್ಜಿ ಕೂಡಾ ಸುಪ್ರೀಂಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಪೀಠವು ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ....

ಮುಡಾ ನಿವೇಶನ ಅಕ್ರಮ ಆರೋಪ; ಸಿಎಂಗೆ ಲೋಕಾಯುಕ್ತ ನೋಟೀಸ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ಆರೋಪ ಕುರಿತಂತೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಂಯ್ಯ ಅವರು ಮೊದಲ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ವಿಚಾರಣೆಗೆ ಗುರಿಪಡಿಸಿರುವ ಲೋಕಾಯುಕ್ತ ಪೊಲೀಸರು ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೂ ನೋಟಿಸ್ ಜಾರಿ ಮಾಡಿದ್ದಾರೆ.ನವೆಂಬರ್ 6ರಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ....
ವಕ್ಫ್‌ ಮಂಡಳಿಯ ಎಲ್ಲ ಬಗೆಯ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಿ; ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ

ವಕ್ಫ್‌ ಮಂಡಳಿಯ ಎಲ್ಲ ಬಗೆಯ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಿ; ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದ ವಕ್ಫ್‌ ಮಂಡಳಿಗೆ ಸಂಬಂಧಿಸಿದ ಎಲ್ಲ ಬಗೆಯ ಜಮೀನು ನೋಂದಣಿಯನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕೆಂದು ಕೋರಿ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೇಂದ್ರ ಸಚಿವರಿಗೆ ಹಾಗೂ ವಕ್ಫ್‌ ಜಂಟಿ ಸಮಿತಿಗೆ ಪತ್ರ ಬರೆದಿದ್ದಾರೆ.ರೈತರ ಜಮೀನು ಹಾಗೂ ಹಿಂದೂ ಸಂಸ್ಥೆಗಳಿಗೆ ಸಂಬಂಧಿಸಿದ ಜಮೀನುಗಳನ್ನು ವಕ್ಫ್‌ ಮಂಡಳಿ ಕಬಳಿಸುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಅವರು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹಾಗೂ ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್‌ ಅವರಿಗೆ ಪತ್ರ ಬರೆದಿದ್ದಾರೆ.ಕೇಂದ್ರ ಸರ್ಕಾರದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ತರಲು ಜಂಟಿ ಸಂಸದೀಯ ಸಮಿತಿ ರಚಿಸಿದ್ದು, ವಕ್ಫ್‌ ಆಸ್ತಿಗಳ ನಿರ್ವಹಣೆಯಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರಲು ಈ ಸಮಿತಿ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್‌ ಮಂಡಳಿಯು ಕಂದಾಯ ದಾಖಲೆಗಳನ್ನು ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ ಆರಂಭವಾಗಿದೆ....
ವಕ್ಫ್ ವಿವಾದ ವಿರುದ್ದ ಬಿಜೆಪಿ ಪ್ರತಿಭಟನೆ; ವಕ್ಫ್‌ ಮಂಡಳಿ ಕಾಯ್ದೆಯಲ್ಲಿ ಬದಲಾವಣೆ ತರಲು ಆಗ್ರಹ

ವಕ್ಫ್ ವಿವಾದ ವಿರುದ್ದ ಬಿಜೆಪಿ ಪ್ರತಿಭಟನೆ; ವಕ್ಫ್‌ ಮಂಡಳಿ ಕಾಯ್ದೆಯಲ್ಲಿ ಬದಲಾವಣೆ ತರಲು ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಕ್ಫ್‌ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ಬಿಜೆಪಿ ಆಗ್ರಹಿಸಿದೆ.ವಕ್ಫ್‌ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೆ.ಆರ್‌.ಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕ ಆರ್.ಅಶೋಕ್ ,ಜಮೀನು ಕಬಳಿಸುವ ಮೂಲಕ ಅನ್ನದಾತರ ಕಣ್ಣಲ್ಲಿ ನೀರು ಬರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇವೆಲ್ಲಕ್ಕೂ ಸಚಿವ ಜಮೀರ್‌ ಅಹ್ಮದ್‌ ಕಾರಣ. ಹಿಂದೆ ಕೇಂದ್ರದ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರನ್ನು ಓಲೈಸಲು ವಕ್ಫ್‌ ಬೋರ್ಡ್‌ಗೆ ಹೆಚ್ಚು ಅಧಿಕಾರ ನೀಡಿತು. ಸಿಎಂ ಸಿದ್ದರಾಮಯ್ಯ ಅವರೇ ಭೂಮಿ ಪಡೆಯಿರಿ ಎಂದು ಹೇಳಿದ್ದು, ಈಗ ಇದು ಬಿಜೆಪಿ ಮಾಡುವ ರಾಜಕೀಯ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಟೋಪಿ ತೆಗೆದಿದ್ದಾರೆ. ಬಳಿಕ ಅವರೇ ರೈತರ ತಲೆ ಮೇಲೆ ಟೋಪಿ ಹಾಕುತ್ತಾರೆ. ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ನೀಡುತ್ತೇನೆಂದು ಹೇಳಿ ದಲಿತರ ಹಣ ಲೂಟಿ ಮಾಡಿದ...
ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್.ಅಶೋಕ್ ನವರಂಗಿ ಆಟ ಆಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಟುವಾಗಿ ಟೀಕಿಸಿದ್ದಾರೆ.ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಆರ್ ಅಶೋಕ್ ರವರು ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿರುವ ರಮೇಶ್ ಬಾಬು, ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ ಎಂದು ಎದಿರೇಟು ನೀಡಿದ್ದಾರೆ.ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳುವ ಹತಾಶ ಪ್ರಯತ್ನ. ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರವರು ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಕಾಂಗ್ರೆಸ್ ಪಕ್ಷದ ದುರಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎನ್ನುವ...