Sunday, December 7

ರಾಜ್ಯ

ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ

ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಸೋಮವಾರ ತಮ್ಮ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ ರಾಜ್ಯದ ನರ್ಸಿಂಗ್‌ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ 5 ಜನ ಸದಸ್ಯರುಗಳ "ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು" ರಚಿಸಲಾಗುವುದು. ನರ್ಸಿಂಗ್‌ ಕಾಲೇಜುಗಳ ಶುಲ್ಕಗಳನ್ನ ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಶಿಯಲ್‌ ಸರ್ಟಿಫಿಕೇಟ್‌ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್‌ ನ್ನ ರದ್ದುಗೊಳಿಸುವಂತೆಯೂ ಅಧಿಕಾರಿಗಳಿಗೆ ಡಾ. ಶರಣ...
ಸಿದ್ದರಾಮಯ್ಯ ಆಯ್ತು ಇದೀಗ ಖರ್ಗೆ ಕುಟುಂಬದ ಸರದಿ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ

ಸಿದ್ದರಾಮಯ್ಯ ಆಯ್ತು ಇದೀಗ ಖರ್ಗೆ ಕುಟುಂಬದ ಸರದಿ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಸೈಟ್ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರಾಜ್ಯ ರಾಜಕಾರಣದಲ್ಲಿ ನಾಯಕರ ಜಟಾಪಟಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ಸಂಚಲನ ಸೃಷ್ಟಿಸಿದೆ. ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪ ರಾಜ್ಯಪಾಲರ ಅಂಗಳ ತಲುಪಿದೆ. ಸಚಿವ ಪ್ರಿಯಾಂಕ್​ ಖರ್ಗೆ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಕುರಿತ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು ವಿವರಣೆ ಕೇಳಿದ್ದಾರೆ ಎನ್ನಲಾದ ಸುದ್ದಿ ಕಾಂಗ್ರೆಸ್ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಆರೋಪಗಳ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್​ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ....
ನಟ ಕಿಚ್ಚ ಸುದೀಪ್‌ಗೆ ‘ಮ್ಯಾಕ್ಸ್’ ತಂಡದ ಅಚ್ಚರಿಯ ಗಿಫ್ಟ್ ನೀಡಿದೆ. 

ನಟ ಕಿಚ್ಚ ಸುದೀಪ್‌ಗೆ ‘ಮ್ಯಾಕ್ಸ್’ ತಂಡದ ಅಚ್ಚರಿಯ ಗಿಫ್ಟ್ ನೀಡಿದೆ. 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಹುಟ್ಟು ಹಬ್ಬದ ತಯಾರಿಯಲ್ಲಿರುವ ನಟ ಕಿಚ್ಚ ಸುದೀಪ್ ಅವರಿಗೆ 'ಮ್ಯಾಕ್ಸ್' ತಂಡ ಅಚ್ಚರಿಯ ಗಿಫ್ಟ್ ನೀಡಿದೆ. ʼಮ್ಯಾಕ್ಸ್‌ʼ ತಂಡವು ಕಿಚ್ಚನ ಹುಟ್ಟುಹಬ್ಬಕ್ಕೆ ʼ ಮ್ಯಾಕ್ಸಿಮಾಮ್ ಮಾಸ್‌' ಎಂಬ ಕ್ರೇಜಿ ಲಿರಿಕಲ್‌ ವಿಡಿಯೋ ಹಾಡನ್ನು ರಿಲೀಸ್‌ ಮಾಡಿದೆ. ಈ ವೀಡಿಯೋದಲ್ಲಿ ಸುದೀಪ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ಬಗ್ಗೆ ನೆಟ್ಟಿಗರಿಂದ ಸಕತ್ ಲೈಕ್ಸ್ ಸಿಕ್ಕಿದೆ. https://youtu.be/fgbZGDjzXUc?si=hFMZn2seimV9WZHc...
ಸಿನಿಲೋಕದ ಲೈಂಗಿಕ ಹಗರಣ; ಪರಿಹಾರ ಕ್ರಮಗಳಿಗೆ ಸ್ವಾಗತ ಎಂದ ರಜನಿಕಾಂತ್

ಸಿನಿಲೋಕದ ಲೈಂಗಿಕ ಹಗರಣ; ಪರಿಹಾರ ಕ್ರಮಗಳಿಗೆ ಸ್ವಾಗತ ಎಂದ ರಜನಿಕಾಂತ್

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಚೆನ್ನೈ: ಮಲಯಾಳಂ ಸಿನಿ ಲೋಕದಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ತಲ್ಲಣ ಸೃಷ್ಟಿಸಿದೆ. ಹೇಮಾ ಸಮಿತಿ ವರದಿ ಸಲ್ಲಿಕೆ ಬಳಿಕ ಮಾಲಿವುಡ್‌ನಲ್ಲಿ ಖ್ಯಾತ ಕಲಾವಿದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ನಿರ್ದೇಶಕರಾದ ರಂಜಿತ್, ನಟರಾ ಜಯಸೂರ್ಯ, ಮುಕೇಶ್‌ ಸೇರಿದಂತೆ ಹಲವರ ವಿರುದ್ಧ ಅನುಚಿತ ವರ್ತನೆ ಹಾಗೂ ಕಿರುಕುಳದ ಆರೋಪ ಪ್ರತಿಧ್ವನಿಸಿದೆ. ಈ ಆರೋಪಗಳಿಂದಾಗಿ ಉನ್ನತ ಸ್ಥಾನದಲ್ಲಿದ್ದ ಹಲವು ನಟರು ಪದತ್ಯಾಗ ಮಾಡಿದ್ದಾರೆ. ಇದೇ ವೇಳೆ, ಹೇಮಾ ಸಮಿತಿಯ ವರದಿಯಲ್ಲಿನ ಶಿಫಾರಸುಗಳ ಕುರಿತಂತೆ ಭಾರೀ ಚರ್ಚೆಯಾಗುತ್ತಿದೆ. ಆದರೆ ಈ ಬಗ್ಗೆ ತಾನು ಹೇಳಿಕೆಗಳನ್ನು ನೀಡಲ್ಲ ಎಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಪರಿಹಾರಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ....
ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ

ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಡಿಕೆಶಿ, "ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ" ಎಂದು ತಿಳಿಸಿದರು. "ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ...
13 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

13 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಮಾತ್ರವಲ್ಲ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಲ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಮತ್ತು ಪೂರ್ವ ಅರಬ್ಬಿ ಸಮುದ್ರದಲ್ಲಿನ ಹವಾಮಾನದ ವ್ಯತ್ಯಯದಿಂದಾಗಿ ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯ ಉದ್ದಕ್ಕೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 13 ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 1ರಿಂದ ಮಳೆಯಾಗುವ ಸಾಧ್ಯತೆಗಳಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸಹಿತ 13 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ....
ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಕೆಶಿ

ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಕೆಶಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ರಾಜ್ಯಪಾಲರ ಹುದ್ದೆ ಸಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿ ರಾಜ್ಯಾಪಾಲರ ವಿರುದ್ಧ ಘೋಷಣೆ ಕೂಗಿದರು. ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ "ರಾಜಭವನ ಚಲೋ" ಪ್ರತಿಭಟನೆ ಮೂಲಕ ರಾಜಭವನಕ್ಕೆ ಕಾಲ್ನಡಿಗೆ ಮೂಲಕ ತೆರಳಿದ ಕಾಂಗ್ರೆಸ್ ಪಕ್ಷದ ನಿಯೋಗವು, ಲೋಕಾಯುಕ್ತ ಎಸ್ ಐಟಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿಚಾರಣೆಗೆ ಅನುಮತಿ ನೀಡಿ ಎಂದು ಸಲ್ಲಿಸಿರುವ ಅರ್ಜಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು "ರಾಜ್ಯಪಾ...
ವಾಯುಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಕೇರಳ ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ವಾಯುಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಕೇರಳ ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಲ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಮತ್ತು ಪೂರ್ವ ಅರಬ್ಬಿ ಸಮುದ್ರದಲ್ಲಿನ ಹವಾಮಾನದ ವ್ಯತ್ಯಯದಿಂದಾಗಿ ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯ ಉದ್ದಕ್ಕೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇತ್ತ ಕರ್ನಾಟಕದ 13 ಜಿಲ್ಲೆಗಳಲ್ಲೂ ಸೆಪ್ಟೆಂಬರ್‌ 1ರಿಂದ ಮಳೆಯಾಗುವ ಸಾಧ್ಯತೆಗಳಿದ್ದು, ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಸಹಿತ 13 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ....
ಈ ಬಾರಿ ಜನೋತ್ಸವವಾಗಿ ‘ಕಲ್ಯಾಣ ಕರ್ನಾಟಕ ಉತ್ಸವ’: ಅಧಿಕಾರಿಗಳಿಗೆ ಸೂಚನೆ

ಈ ಬಾರಿ ಜನೋತ್ಸವವಾಗಿ ‘ಕಲ್ಯಾಣ ಕರ್ನಾಟಕ ಉತ್ಸವ’: ಅಧಿಕಾರಿಗಳಿಗೆ ಸೂಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಜನಪ್ರತಿನಿಧಿಗಳೊಂದಿಗೆ ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಭೆಯಲ್ಲಿ ಮಾತನಾಡಿದ ಸಚಿವರು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾದ 371 ಜೆ ಅಸ್ಥಿತ್ವಕ್ಕೆ ಬಂದು ಹತ್ತು ವರ್ಷಗಳು ಸಂದ ಸಂದರ್ಭದಲ್ಲಿ ದಶಮಾನೋತ್ಸವವನ್ನು ಆಚರಿಸುತ್ತಿರುವದರಿಂದ ಈ ಬಾರಿಯ ಉತ್ಸವವನ್ನು ಅರ್ಥಗರ್ಭಿತವಾಗಿ ಆಚರಿಸಲು ಕಾರ್ಯಕ್ರಮಗಳನ್ನು ರೂಪಿಸುವಂತೆಯೂ ಪಾಟೀಲ್ ಹೇಳಿದರು. ಸೆಪ್ಟೆಂಬರ್‌ 17ರಂದು ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲ್ಯಾಣ ಕರ್ನಾಟಕ ಭಾಗದ ಪ್ರಮು...
ಹೆಚ್ಡಿಕೆ ಹಾಗೂ ಬಿಜೆಪಿ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಅನುಮತಿಗೆ ಆಗ್ರಹ; ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ

ಹೆಚ್ಡಿಕೆ ಹಾಗೂ ಬಿಜೆಪಿ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಅನುಮತಿಗೆ ಆಗ್ರಹ; ರಾಜ್ಯಪಾಲರ ಬಳಿ ಕಾಂಗ್ರೆಸ್ ನಿಯೋಗ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ನಿವೇಶನ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಬಗ್ಗೆ ಕಾಂಗ್ರೆಸ್ ಆಕ್ರೋಶ ತಣ್ಣಗಾಗಿಲ್ಲ. ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದದ ಮನವಿಗಳಿಗೂ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಶನಿವಾರ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಲಿದ್ದಾರೆ. ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣದಲ್ಲಿ ನಾನು ತಪ್ಪೇ ಮಾಡಿಲ್ಲ. ಆದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ ಎಂದರು. ನಾಳೆ (ಶನಿವಾರ) ಕಾಂಗ್ರೆಸ್ ಶಾಸಕರು, ಸಂಸದರು, ಎಂಎಲ್‌ಸಿಗಳು ರಾಜ್ಯಪಾಲರನ್ನು ಭೇಟಿಯಾಗುತ್ತಾರೆ. ಕುಮಾರಸ್ವಾಮಿ, ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಒತ್ತಾಯಿಸುತ್ತಾರೆ ಎಂದು ಸಿಎ. ತಿಳಿಸಿದರು. ಕುಮಾರಸ್ವಾಮಿ ವಿರುದ್ಧ ತನಿಖೆ ಆಗಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೂ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ ನಮ್ಮ ಶಾಸಕರು ರಾಜ್ಯಪಾಲರನ್ನು ಭ...