Monday, March 30

ರಾಜ್ಯ

ಬಿಜೆಪಿಗೆ ಯೋಗೇಶ್ವರ್ ಗುಡ್‌ಬೈ; ಕಾಂಗ್ರೆಸ್ ಪಕ್ಷ ಸೇರಿದ ‘ಸೈನಿಕ’

ಬಿಜೆಪಿಗೆ ಯೋಗೇಶ್ವರ್ ಗುಡ್‌ಬೈ; ಕಾಂಗ್ರೆಸ್ ಪಕ್ಷ ಸೇರಿದ ‘ಸೈನಿಕ’

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ‌. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಡಾ.ಎಂ.ಸಿ. ಸುಧಾಕರ್, ಮಾಜಿ ಸಂಸದ ಡಿ ಕೆ ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ.ಜಿ.ಸಿ. ಚಂದ್ರಶೇಖರ್, ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಮೊದಲಾದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಯೋಗೇಶ್ವರ್, ನನ್ನ ರಾಜಕೀಯ ಜೀವನವನ್ನು ನಾವು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಆರಂಭಿಸಿದ್ದೆ. ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. ಈಗ ಮತ್ತೆ ಬಂದಿದ್ದೇನೆ. ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯಲ್ಲಿ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಅದೇ ಸ...
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.ಮಂಗಳವಾರ ನಡೆದ ದುರಂತದಲ್ಲಿ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು ಅವರ ರಕ್ಷಣೆಗೆ ಸುದೀರ್ಘ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆ ವೇಳೆ ಮತ್ತೆ 8 ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ನಡುವೆ, ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಟ್ಟಡದ ಮಾಲೀಕ ಮತ್ತು ಕಂಟ್ರಾಕ್ಟರ್‌ನನ್ನು ಬಂಧಿಸಿದ್ದಾರೆ....
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ; ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಣೆ

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ; ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಣೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭಾರೀ ಮಳೆ‌ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಈ ಸಂಬಧ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಭಾರೀ ಮಳೆ‌ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ....
ರಾಮಲಿಂಗಾ ರೆಡ್ಡಿ ಅವರು ಇನ್ನು ಕನಿಷ್ಠ 10 ವರ್ಷಗಳ ಅವಧಿಗೆ ಮುಜರಾಯಿ ಸಚಿವರಾಗಿರಬೇಕು ಅರ್ಚಕರ ಸಮಾವೇಶದಲ್ಲಿ ಮೂಡಿಬಂದ ಕೂಗು‌

ರಾಮಲಿಂಗಾ ರೆಡ್ಡಿ ಅವರು ಇನ್ನು ಕನಿಷ್ಠ 10 ವರ್ಷಗಳ ಅವಧಿಗೆ ಮುಜರಾಯಿ ಸಚಿವರಾಗಿರಬೇಕು ಅರ್ಚಕರ ಸಮಾವೇಶದಲ್ಲಿ ಮೂಡಿಬಂದ ಕೂಗು‌

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಬೃಹತ್ ಸಮಾವೇಶ ಗಮನಸೆಳೆಯಿತು. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಕೊಡುಗೆಗಳ ಬಗ್ಗೆ ಅರ್ಚಕ ಸಮೂಹ ಮೆಚ್ಚುಗೆ ವ್ಯಕ್ತಪಡಿಸಿತು.ಈ ಒಕ್ಕೂಟದ ನೇತೃತ್ವದಲ್ಲಿ ಕರ್ನಾಟಕ ರಾಜ್ಯದ ಎ, ಬಿ ಮತ್ತು ಸಿ ವರ್ಗದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರುಗಳ ಕಷ್ಟ ಕಾರ್ಪಣ್ಯಗಳಿಗಾಗಿ ಅವರ ದುಃಖ ದುಮ್ಮಾನಗಳಿಗೆ ಸ್ಪಂದಿಸಿ ಸದಾ ಅವರ ಏಳಿಗೆಗಾಗಿ ಸುಮಾರು 50 ವರ್ಷಗಳಿಂದ ಸರ್ಕಾರದೊಡನೆ ಹೋರಾಡುತ್ತಿರುವ ಹಿಂದು ಧಾರ್ಮಿಕ ಸರ್ವ ಸಮಾಜದ ದೇವಾಲಯಗಳ ನೌಕರರನ್ನು ಒಳಗೊಂಡಿರುವ ಸಂಸ್ಥೆಯಾಗಿರುತ್ತದೆ. ಸೋಮವಾರ ನಡೆದ ಸಮಾವೇಶದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಅರ್ಚಕರುಗಳು ಕಿಕ್ಕಿರಿದು ನೆರೆದಿದ್ದರು.ಸಮಾವೇಶದಲ್ಲಿ ಮಾತನಾಡಿದ ಧಾರ್ಮಿಕ ಮುಖಂಡರು, ಧಾರ್ಮಿಕ, ಸಾಂಸ್ಕೃತಿಕ ಸಾಮಾಜಿಕ ನೆಲೆಯಲ್ಲಿ ನಮ್ಮ ಮುಜರಾಯಿ ಇಲಾಖೆಯಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿರುವುದು ಶುಭ ಸಂಕೇತ ಎಂದು ಗುಣಗಾನ ಮಾಡಿ...
ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಜಲಸಮಾಧಿ; ಒಂದು ಶವ ಪತ್ತೆ

ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಜಲಸಮಾಧಿ; ಒಂದು ಶವ ಪತ್ತೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿರುವ ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು ಒಂದು ಮೃತದೇಹ ಮಂಗಳವಾರ ಪತ್ತೆಯಾಗಿದೆ.ಬಿಬಿಎಂಪಿಯಲ್ಲಿ ಪೌರಕಾರ್ಮಿಕ ಮಹಿಳೆಯ ಮಕ್ಕಳು ಸಾವನ್ನಪ್ಪಿದ್ದು ಅವರನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮಿ (13)‌ ಎಂದು‌ ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಇವರು ಕೆಂಗೇರಿ ಸಮೀಪದ ಹರ್ಷ ಲೇಔಟ್ ಬಳಿ ನೆಲೆಸಿದ್ದರು. ಕೆಲಸಕ್ಕೆಂದು ತಾಯಿ‌ ಹೊರ ಹೋಗಿದ್ದ ಸಂದರ್ಭದಲ್ಲಿ ಈ ಮಕ್ಕಳು ಕೆರೆಯ ಬಳಿಗೆ ತೆರಳಿದ್ದರೆನ್ನಲಾಗಿದ್ದು ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸುದೀರ್ಘ ಕಾರ್ಯಾಚರಣೆ ನಡೆಸಿದ್ದಾರೆ....
ಚನ್ನಪಟ್ಟಣ: ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌, ಎರಡು ದಿನಗಳಲ್ಲಿ ತೀರ್ಮಾನ ಸಾಧ್ಯತೆ

ಚನ್ನಪಟ್ಟಣ: ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌, ಎರಡು ದಿನಗಳಲ್ಲಿ ತೀರ್ಮಾನ ಸಾಧ್ಯತೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರ ಮನ ಒಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು, ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಸಿಗಬಹುದು ಎಂದರು.ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ...
ಮೀಸಲು ಅರಣ್ಯ ಒತ್ತುವರಿ ದೂರು; ತೇಜೋವಧೆ ಮಾಡುವ ಹುನ್ನಾರ ಎಂದ ಸಚಿವ ಬೋಸರಾಜು

ಮೀಸಲು ಅರಣ್ಯ ಒತ್ತುವರಿ ದೂರು; ತೇಜೋವಧೆ ಮಾಡುವ ಹುನ್ನಾರ ಎಂದ ಸಚಿವ ಬೋಸರಾಜು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್‌.ಓ.ಸಿ ನಂ. 16/2022-23 ನೋಟೀಸನ್ನು ಈಗಾಗಲೇ ಉಚ್ಚನ್ಯಾಯಾಲಯದ ಕಲಬುರ್ಗಿ ಪೀಠ ರದ್ದುಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಪ್ರತಿಕ್ರಿಯಿಸಿದ್ದಾರೆ.ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಭೋಸರಾಜು, 1987 ರಲ್ಲಿ ನಾನು ಯಾವುದೇ ಹುದ್ದೆಯಲ್ಲೂ ಇರಲಿಲ್ಲ. ಕೃಷಿಗಾಗಿ ಅಂದಿನ ಕಾಲದಲ್ಲಿ ನನ್ನ ಕುಟುಂಬದಿಂದ ಭೂಮಿಯನ್ನು ಖರೀದಿಸಲಾಗಿತ್ತು. ಭೂಮಿ ಖರೀದಿಯ ಸಂಧರ್ಭದಲ್ಲಿ ಕಂದಾಯ ದಾಖಲೆಗಳು, ಕ್ರಯಪತ್ರಗಳು ಹಾಗೂ ಇನ್ನಿತರೆ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಲಾಗಿತ್ತು. ಪರಿಶೀಲನೆ ನಂತರ ಮೂಲ ಜಮೀನಿನ ಮಾಲೀಕರಿಂದ ಭೂಮಿಯನ್ನು ಖರೀದಿಸಲಾಗಿತ್ತು ಎಂದರು.ನಾನು ಇದೇ ಮೊದಲ ಬಾರಿಗೆ ಸಚಿವನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೊದಲ ಬಾರಿ ಶಾಸಕನಾಗಿದ್ದೂ ಕೂಡಾ 1999 ರಲ್ಲಿ. 1987 ರಲ್ಲಿ ಪ್ರಭಾವ ಬೀರಲ...
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕನಸು ಭಗ್ನವಾಗಿದೆ.ಸುಮಾರು ತಿಂಗಳಿಂದ ಸೆರೆವಾಸದಲ್ಲಿರುವ ಜೆಡಿಎಸ್‌ನ ಉಚ್ಛಾಟಿತ ನಾಯಕ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಚನ್ನಪಟ್ಟಣ ಕದನ ಕೌತುಕ; ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿಪಿವೈ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

ಚನ್ನಪಟ್ಟಣ ಕದನ ಕೌತುಕ; ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿಪಿವೈ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಚುನಾವಣೆಯು ಈಗಲೇ ಕುತೂಹಲದ ಅಖಾಡವಾಗಿ ಮಾರ್ಪಟ್ಟಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೀಶ್ವರ್ ವಿಧಾನವಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ಬಿಜೆಪಿ ಟಿಕೆಟ್‌‌ಗಾಗಿ ಪಟ್ಟು ಹಿಡಿದಿದ್ದ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಸೋಮವಾರ ತಮ್ಮ ಶಾಸಕ ರಾಜೀನಾಮೆ ನೀಡಿದ್ದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ....
ಬಹುತೇಕ ಕಡೆ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ; ಹವಾಮಾನ ಇಲಾಖೆ

ಬಹುತೇಕ ಕಡೆ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ; ಹವಾಮಾನ ಇಲಾಖೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ಜನ ಜೀವನವೂ ಏರುಪೇರಾಗಿದೆ.ಈ ನಡುವೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯು ಬೆಂಗಳೂರು ಸಹಿತ ರಾಜ್ಯದ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.ಕರಾವಳಿ ಮಲೆನಾಡು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಉಡುಪಿ ಮತ್ತು ಉತ್ತರ ಕನ್ನಡ, ಶಿವಮೊಗ್ಗ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಬೆಳಗಾವಿ, ಧಾರವಾಡ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಎಂದು ಇಲಾಖೆ ಮುನ್ಸೂಚನೆ ನೀಡಿದೆ....