Tuesday, March 24

ರಾಜ್ಯ

ಪೊಳಲಿ ‘ಫಲ್ಗುಣಿ ಸೇತುವೆ’ ಸಮಸ್ಯೆಗೆ ಮುಕ್ತಿ ಎಂದು? ಸರ್ಕಾರವನ್ನು ಎಚ್ಚರಿಸಲು ಹೋರಾಟದ ಅಸ್ತ್ರ.. ಮಂಗಳವಾರ ಭಾರೀ ಪ್ರತಿಭಟನೆಗೆ ಕರೆ

ಪೊಳಲಿ ‘ಫಲ್ಗುಣಿ ಸೇತುವೆ’ ಸಮಸ್ಯೆಗೆ ಮುಕ್ತಿ ಎಂದು? ಸರ್ಕಾರವನ್ನು ಎಚ್ಚರಿಸಲು ಹೋರಾಟದ ಅಸ್ತ್ರ.. ಮಂಗಳವಾರ ಭಾರೀ ಪ್ರತಿಭಟನೆಗೆ ಕರೆ

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಪುರಾಣ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಫಾಲ್ಗುಣಿ ಸೇತುವೆ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತಾಳಿದೆ. ರಾಜ್ಯ ಸರ್ಕಾರದ ತಾತ್ಸಾರ ವಿರುದ್ದ ಸಾರ್ವಜನಿಕರು ಸಿಡಿದೆದ್ದಾರೆ. ಸಮಸ್ಯೆ ಬಗೆಹರಿಸದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ.ಅಡ್ಡೂರು-ಪೊಳಲಿ ನಡುವೆ ಸಂಪರ್ಕ ಕಲ್ಪಿಸಿರುವ ಫಲ್ಗುಣಿ ಸೇತುವೆ ಶಿಥಿಲಾವಸ್ಥೆಯಲ್ಲಿದ್ದು ಘನ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಘನವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದನ್ನು ಬಿಟ್ಟರೆ, ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ಊರ ಜನರ ಆಕ್ರೋಶ. ಇದೀಗ ಸರ್ಕಾರವನ್ನು ಹಾಗೂ ಅಧಿಕಾರಿಗಳನ್ನು ಎಚ್ಚರಿಸಲು ಗ್ರಾಮಸ್ಥರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಈ ಸಂಬಂಧ ಪೊಳಲಿಯಲ್ಲಿ ನಡೆದ ವಿವಿಧ ಸಂಘಟನೆಗಳ ಪ್ರಮುಖರ ಸಭೆ ವಿದ್ಯಮಾನಗಳ ಕೇಂದ್ರಬಿಂದುವಾಯಿತು.‌ಪೊಳಲಿ–ಅಡ್ಡೂರಿನ ಪಲ್ಗುಣಿ ನದಿಯ ಸೇತುವೆ ಬಿರುಕು ಬಿಟ್ಟ ಕಾರಣಕ್ಕೆ ಘನ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು. ಸಂಬಂಧಪಟ್ಟ ಇಲಾಖೆ ಸೇತುವೆಯ ಸಾಮರ್ಥ್ಯವನ್ನು ಯಂತ್ರ ಮೂಲಕ ಪರಿಶೀಲನ...
ಸಿʼ ವರ್ಗದ ದೇವಾಲಯಗಳ ಅರ್ಚಕರ, ನೌಕರರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಮರಣ ಉಪದಾನ.. ರಾಜ್ಯಪಾಲರ ಅಂಕಿತದ ನಂತರ ಪರಿಪೂರ್ಣ ಜಾರಿ

ಸಿʼ ವರ್ಗದ ದೇವಾಲಯಗಳ ಅರ್ಚಕರ, ನೌಕರರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಮರಣ ಉಪದಾನ.. ರಾಜ್ಯಪಾಲರ ಅಂಕಿತದ ನಂತರ ಪರಿಪೂರ್ಣ ಜಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ಸಿʼ ವರ್ಗದ ದೇವಾಲಯಗಳ ಅರ್ಚಕರ, ನೌಕರರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಮರಣ ಉಪದಾನ ಹಾಗೂ ಅರ್ಚಕರುಗಳಿಗೆ ತಸ್ತೀಕ್ /ವರ್ಷಾಸನ ಹಣವನ್ನು ನೇರವಾಗಿ ಅರ್ಚಕರುಗಳ ಖಾತೆಗೆ ಜಮಾ ಮಾಡುವ ಕಾರ್ಯಕ್ರಮಕ್ಕೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.ಬೆಂಗಳೂರಿನ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಡಾ|| ಎಂ.ವಿ.ವೆಂಕಟೇಶ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಡಾ|| ಬಿ.ಎಸ್.ಧ್ವಾರಕನಾಥ್,  ಕೆ.ಎಂ.ನಾಗರಾಜು, ಮಲ್ಲಿಕಾ ಪ್ರಶಾಂತ ಪಕ್ಕಳ ಹಾಗೂ ವಿನಾಯಕ್‌ ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯರು ಹಾಗೂ ವಿವಿಧ ಅರ್ಚಕರ ಸಂಘಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಚಾಲನೆ ನೀಡಿದರು..'ಸಿʼ ವರ್ಗದ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ದೇವಾಲಯದ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ಮತ್ತು ಮರಣ ಉಪದಾನ ವಿತರಣೆ ಹಾಗೂ ಅರ್ಚಕರುಗಳಿಗೆ ತಸ್ತೀಕ್ /ವರ್ಷಾಸನ ಹಣವನ್ನು ನೇರವಾಗಿ ಅರ್ಚಕರ ಖಾತೆಗೆ ಜಮಾ ಮಾಡುವ ಯೋಜನೆ ...
ಒಳ ಮೀಸಲಾತಿ ಜಾರಿಗೆ ಮೀನಮೇಷ; ಸರ್ಕಾರದ ವಿರುದ್ದ ಬಿಜೆಪಿ ಆಕ್ರೋಶ

ಒಳ ಮೀಸಲಾತಿ ಜಾರಿಗೆ ಮೀನಮೇಷ; ಸರ್ಕಾರದ ವಿರುದ್ದ ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತಾಡುತ್ತಾರೆ. ಜಾತಿ ಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ‌. ಒಳ ಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಹಿಂದಿನ ನಮ್ಮ ಬಿಜೆಪಿ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೆ ತಂದಿತ್ತು. ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಅನುಮೋದನೆ ನೀಡಿದ್ದರು. ಆದರೂ ಕಾಂಗ್ರೆಸ್ ಮಾತ್ರ ಇನ್ನೂ ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.ರಾಜ್ಯದಲ್ಲಿ ಈಗ ಎಸ್ಐಟಿಯೇ ಕಂಡುಬರುತ್ತಿದೆ. ಒಳ ಮೀಸಲಾತಿ ಮತ್ತು ಜಾತಿ ಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚಿಸಿದರೆ ಅಚ್ಚರಿ ಇಲ್ಲ. ಇಲ್ಲಿ ಒ...
ಮಂಗಳೂರಿನಲ್ಲಿ ಪೊಲೀಸ್ ಬೇಟೆ; ಬಾಂಗ್ಲಾ ಪ್ರಜೆಗಳ ಬಂಧನ

ಮಂಗಳೂರಿನಲ್ಲಿ ಪೊಲೀಸ್ ಬೇಟೆ; ಬಾಂಗ್ಲಾ ಪ್ರಜೆಗಳ ಬಂಧನ

ಬೆಂಗಳೂರು, ರಾಜ್ಯ
ಮಂಗಳೂರು: ನಕಲಿ ಪಾಸ್‌ಪೋರ್ಟ್‌ ಹೊಂದಿದ್ದ ಬಾಂಗ್ಲಾದೇಶ ಪ್ರಜೆಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ದುಬಾೖಗೆ ಪ್ರಯಾಣಿಸಲು ಯತ್ನಿಸಿದ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಉಡುಪಿಯಲ್ಲಿ ಹಲವು ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ....
ಮತ್ತೊಂದು ‘ಭೂ ಚಕ್ರ’ದ ಸುಳಿಯಲ್ಲಿ ಕಾಂಗ್ರೆಸ್ ಸರ್ಕಾರ; KIADB ಹಗರಣ ಬಗ್ಗೆ ಲೋಕಾಯುಕ್ತಕ್ಕೆ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು

ಮತ್ತೊಂದು ‘ಭೂ ಚಕ್ರ’ದ ಸುಳಿಯಲ್ಲಿ ಕಾಂಗ್ರೆಸ್ ಸರ್ಕಾರ; KIADB ಹಗರಣ ಬಗ್ಗೆ ಲೋಕಾಯುಕ್ತಕ್ಕೆ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಾಲ್ಮಿಕಿ ನಿಗಮ ಕರ್ಮಕಾಂಡ, ಮುಡಾ ಸೈಟ್ ಅಕ್ರಮ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕೆಐಎಡಿಬಿ ಭೂ ಅವ್ಯವಹಾರದ ಉರುಳು ಕೂಡಾ ಸುತ್ತಿಕೊಂಡಿದೆ. ಸರ್ಕಾರಿ ಜಮೀನನ್ನೇ ಬೇರೆಯವರ ಹೆಸರಲ್ಲಿ ಪರಿಗಣಿಸಿ ಪರಿಹಾರ ವಿತರಿಸಿರುವ ಭಾರೀ ಅಕ್ರಮ ಆರೋಪ ಕುರಿತಂತೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. "ಸಿಟಿಜನ್ ರೈಟ್ಸ್ ಫೌಂಡೇಷನ್" ಪರವಾಗಿ ಅಧ್ಯಕ್ಷ ಕೆ.ಎ.ಪಾಲ್ ನೀಡಿರುವ ಈ ದೂರು, ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ್ ಸಹಿತ ಹಲವರಿಗೆ ಉರುಳಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಚಪ್ಪರದಹಳ್ಳಿ ಗ್ರಾಮದಲ್ಲೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಯಿಂದ ಭೂಸ್ವಾಧೀನ ಆದೇಶವಾಗಿದೆ. ಈ ಭೂಸ್ವಾಧೀನ ಪ್ರಕ್ರಿಯೆಯ ದಾಖಲೆಗಳನ್ನು ಗಮನಿಸಿದಾಗ ಅರ್ಹರಲ್ಲದವರ ಹೆಸರಿಗೆ ಹಣ ಸಂದಾಯ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ.ದೇವನಹಳ್ಳಿ ತಾಲೂಕಿನ ಸುತ್ತಮುತ್ತ ನೂರಾರು ಎಕರೆ ಜಮೀನನ್ನು ಕೆಐಎಡಿಬಿ ವತಿಯಿಂದ ಸ್ವಾಧೀನಪಡಿಸಲು ತಯಾರಿ ನಡೆದಾಗಲೇ,...
ದೇವನಹಳ್ಳಿ ಕೆಐಎಡಿಬಿ ಭೂಹಗರಣ ಆರೋಪ; ಸಮಗ್ರ ತನಿಖೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹ

ದೇವನಹಳ್ಳಿ ಕೆಐಎಡಿಬಿ ಭೂಹಗರಣ ಆರೋಪ; ಸಮಗ್ರ ತನಿಖೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಚಿತ್ರದುರ್ಗ: ದೇವನಹಳ್ಳಿ ಕೆಐಎಡಿಬಿ ಕರ್ಮಕಾಂಡ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಬಿಜೆಪಿ ಆಗ್ರಹಿಸಿದೆ.ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ಭೂ ಕರ್ಮಕಾಂಡಗಳ ಬಗ್ಗೆ ಆಕ್ರೋಶ ಹೊರಹಾಕಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ KIADB ಭೂ ಸ್ವಾದೀನ ಪ್ರಕ್ರಿಯೆಯಲ್ಲಿ ಹಗರಣ ನಡೆದಿದ್ದು, ಈ ಬಗ್ಗೆ ಸಿಟಿಜನ್ ರೈಟ್ಸ್ ಫೌಂಡೇಷನ್' ಅಧ್ಯಕ್ಷ ಕೆ.ಎ.ಪಾಲ್ ಎಂಬವರು ಲೋಕಾಯುಕ್ತರಿಗೆ ದೂರು ನೀಡಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದರು.1984 ರಲ್ಲಿ ಇದೇ ಭೂಮಿಯನ್ನು ಉಳುಮೆ ಮಾಡಲು ಸರ್ಕಾರ ಅವಕಾಶ ಕೊಟ್ಟಿಲ್ಲ. ಆದರೆ ಕೆಐಎಡಿಬಿ ಭೂಸ್ವಾದೀನ ಪ್ರಕ್ರಿಯೆ ವೇಳೆ ಜಮೀನಿಗೆ ಮಾಲೀಕರನ್ನು ಹುಟ್ಟುಹಾಕಲಾಗಿದೆ. ಬೇನಾಮಿ ರೀತಿ ಜಮೀನು ಪರಿಹಾರದ ರೂಪದಲ್ಲಿ ಹಣ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಸಿ.ಟಿ.ರವಿ ಆಗ್ರಹಿಸಿದರು.ಸಿದ್ದರಾಮಯ್ಯ ಸರ್ಕಾರವು ಈ ಭೂಮಿಯನ್ನು ಕೊಟ್ಟಿದ್ದೇ ಆಗಿದ್ದರೇ, ಅದೂ ಕೂಡಾ ಭಾರೀ ಅಕ್ರಮ ಆಗುತ್ತದೆ. ಹಾಗಾಗಿ KIADBಯಿಂದಲೂ ...
“ಪವಿತ್ರ ತೀರ್ಥೋದ್ಭವ” ಹಿನ್ನೆಲೆ; ತಲಕಾವೇರಿ ಜಾತ್ರೆಗೆ ಸರ್ಕಾರದಿಂದ 75 ಲಕ್ಷ ರೂ ಬಿಡುಗಡೆ

“ಪವಿತ್ರ ತೀರ್ಥೋದ್ಭವ” ಹಿನ್ನೆಲೆ; ತಲಕಾವೇರಿ ಜಾತ್ರೆಗೆ ಸರ್ಕಾರದಿಂದ 75 ಲಕ್ಷ ರೂ ಬಿಡುಗಡೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ", ತಲಕಾವೇರಿ ಜಾತ್ರೆಗೆ ರೂ.75 ಲಕ್ಷ ರೂಪಾಯಿ ಹಣವನ್ನು ಧಾರ್ಮಿಕ ದತ್ತಿ ಇಲಾಖೆ ಬಿಡುಗಡೆ ಮಾಡಿದೆ. ಮುಜರಾಯಿ ಸಚಿವ  ರಾಮಲಿಂಗಾ ರೆಡ್ಡಿ ಅವರ ಆದೇಶದಂತೆ ಈ ಹಣ ಬಿಡುಗಡೆ ಮಾಡಲಾಗಿದೆ.ಕೊಡಗು ಜಿಲ್ಲೆ, ‌ಮಡಿಕೇರಿ ತಾಲ್ಲೂಕು, ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಸ್ಥಾನದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ಈ ವರ್ಷ:17.10.2024 ರಂದು "ಶ್ರೀ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ" ಜಾತ್ರೆಯು ನಡೆಯಲಿದೆ. ಕಳೆದ ವರ್ಷದಿಂದ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅನುದಾನ ನೀಡಲಾಗುತ್ತಿದೆ. ಸದರಿ ಜಾತ್ರಾ ಮಹೋತ್ಸವಕ್ಕೆ ಈ ಹಿಂದೆ ಎಂದೂ ಕೂಡ ಮುಜರಾಯಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿರುವುದಿಲ್ಲ.ಕೊಡಗು ಜಿಲ್ಲೆಯ ಶಾಸಕರಾದ ಡಾ. ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರು ತಲಕಾವೇರಿ ಜಾತ್ರೆಗೆ ಹಣ ಬಿಡುಗಡೆ ಮಾಡಿ ವ್ಯವಸ್ಥಿತ ಜಾತ್ರೆ ನಡೆಸಲು ಹಾಗೂ ಆಗಮಿಸುವ ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಕಲ್ಪಿಸಲು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಲ್ಲಿ ಮನವಿ ಮಾಡಿದ್ದರು. ಅದರಂತೆ ಜಾತ್ರಾ ಮಹೋತ...
ಜನಾನುರಾಗಿ, ಉದ್ಯಮಿ ರತನ್ ಟಾಟಾ ವಿಧಿವಶ

ಜನಾನುರಾಗಿ, ಉದ್ಯಮಿ ರತನ್ ಟಾಟಾ ವಿಧಿವಶ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮುಂಬಯಿ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮುಖ್ಯಸ್ಥ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷ ಹರೆಯದ ರತನ್ ನಾವಲ್ ಟಾಟಾ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.ಅವಿವಾಹಿತರಾಗಿದ್ದ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಗಮನಸೆಳೆದವರು. ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿದ ಖ್ಯಾತಿ ಅವರದ್ದು. ಔದ್ಯೋಗಿಕ ಕ್ಷೇತ್ರದಲ್ಲಿ ಅವರು ದಂತಕತೆಯಾಗಿದ್ದರು. ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿ ದೇಶದ ಆಸ್ತಿಯಾಗಿದ್ದರು.1937ರಲ್ಲಿ ಜನಿಸಿದ್ದ ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಪದ್ಮವಿಭೂಷಣ'ವನ್ನು ನೀಡಿ ಗೌರವಿಸಿತ್ತು.ರತನ್ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ....
KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳಿಗೆ ಈ ಬಾರಿಯ ನವರಾತ್ರಿಯು ಹಿಂದೆಂದಿಗಿಂತ ವಿಶೇಷ..! ಕುತೂಹಲಕಾರಿ ನಿರ್ಧಾರದಲ್ಲಿ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಆಯುಧಪೂಜೆಗೆ ನೀಡಲಾಗಿತ್ತಿದ್ದ ಹಣವನ್ನು 100 ರೂಪಾಯಿಯಿಂದ 250 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.ಒಂದು ಘಟಕದಲ್ಲಿ ಸರಿ ಸುಮಾರು 100 ರಿಂದ 500 ಬಸ್ಸುಗಳಿರುತ್ತವೆ. ಒಂದು ಬಸ್ಸಿಗೆ ರೂ. 100 ಎಂದು ಒಂದು ಘಟಕಕ್ಕೆ / ಕಾರ್ಯಾಗಾರಕ್ಕೆ ನೀಡಲಾಗುತ್ತದೆ.ಆಯುಧಪೂಜೆಗೆ 2008 ರವರೆಗೂ ರೂ.10 ಪ್ರತಿ‌ ಬಸ್ಸಿಗೆ , 2009 ರಲ್ಲಿ ಪ್ರತಿ ಬಸ್ಸಿಗೆ ರೂ 30 ಕ್ಕೆ ಏರಿಕೆ ಮಾಡಲಾಗಿತ್ತು. .2016 ರಲ್ಲಿ ಪ್ರತಿ ಬಸ್ಸಿಗೆ ರೂ.50 ಕ್ಕೆ ಏರಿಕೆ, 2017 ರಲ್ಲಿ ಪ್ರತಿ‌ ಬಸ್ಸಿಗೆ ರೂ.100 ಕ್ಕೆ ಏರಿಕೆ ‌ಮಾಡಲಾಗಿತ್ತುರೂ.100 ಪ್ರತಿ‌ ಬಸ್ಸಿಗೆ ನೀಡುವ ಮೊತ್ತವು 2023 ರವರೆಗೂ ರೂ.100 ಆಗಿತ್ತು. 2024 ಅಂದರೆ ಪ್ರಸಕ್ತ ವರ್ಷದಲ್ಲಿ ಆಯುಧಪೂಜೆಗೆ ಪ್ರತಿ‌ ಬಸ್ಸಿಗೆ ಈಗ ನೀಡಲಾಗುತ್ತಿರುವ ರೂ.100 ಅನ್ನು ರೂ.250 ಕ್ಕೆ ಹೆಚ್ಚಿಸಲು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚ...
ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮಾದರಿ ಅಳವಡಿಸಿಕೊಳ್ಳಲು ಹಿಮಾಚಲ ಪ್ರದೇಶ ಚಿಂತನೆ

ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮಾದರಿ ಅಳವಡಿಸಿಕೊಳ್ಳಲು ಹಿಮಾಚಲ ಪ್ರದೇಶ ಚಿಂತನೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದ ಹಲವು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಇತರೆ ಉಪ್ರಕಮಗಳ ಅನುಷ್ಠಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶ ಸರ್ಕಾರ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ.ಬುಧವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೊಂದಿಗೆ ಹಿಮಾಚಲ ಪ್ರದೇಶದ ಪಟ್ಟಣ ಯೋಜನೆ, ವಸತಿ ಮತ್ತು ತಾಂತ್ರಿಕ ಶಿಕ್ಷಣ ಸಚಿವ ರಾಜೇಶ್ ಕುಮಾರ್ ಧರ್ಮಾನಿ ಸಮಾಲೋಚನೆ ನಡೆಸಿದರು.ಉದ್ಯೋಗ ಕೌಶಲ್ಯಗಳನ್ನು ಹೆಚ್ಚಿಸುವಲ್ಲಿ ಕರ್ನಾಟಕದ ಪ್ರಯತ್ನ ಶ್ಲಾಘನೀಯ ಎಂದು ಹಿಮಾಚಲ ಪ್ರದೇಶ ಸಚಿವರು ತಿಳಿಸಿದರು. ತಮ್ಮ ತವರು ರಾಜ್ಯದಲ್ಲಿ ಇದೇ ರೀತಿಯ ಕಾರ್ಯತಂತ್ರಗಳನ್ನು ಜಾರಿಗೆ ತರಲು ತೀವ್ರ ಆಸಕ್ತಿ ಇದೆ ಎಂದು ರಾಜೇಶ್‌ ಕುಮಾರ್‌ ಧರ್ಮಾನಿ ಇಂಗಿತ ವ್ಯಕ್ತಪಡಿಸಿದರು.ಕರ್ನಾಟಕದಲ್ಲಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳನ್ನು ಅಧ್ಯಯನ ಮಾಡಲು ಆಗಮಿಸಿರುವ ಧರ್ಮಾನಿ, ಅಂತಾರಾಷ್ಟ್ರೀಯ ವಲಸೆ ಕೇಂದ್ರ (IMC-K) ದಿಂದ ಭಾರಿ ಪ್ರಭಾವಿತರಾದರು. ಯುಎಇ, ವ...