Friday, January 30

ರಾಜ್ಯ

ಪಾಂಡವಪುರದಲ್ಲಿ ಖಾಕಿ ಕ್ರೌರ್ಯ; ಆರೆಸ್ಸೆಸ್ ಪ್ರತಿಭಟನೆಗೆ ಬೆಚ್ಚಿದ ಎಸ್ಪಿ; ತಪ್ಪಿತಸ್ತ ಪೊಲೀಸರ ವಿರುದ್ದ ಕ್ರಮದ ಭರವಸೆ

ಪಾಂಡವಪುರದಲ್ಲಿ ಖಾಕಿ ಕ್ರೌರ್ಯ; ಆರೆಸ್ಸೆಸ್ ಪ್ರತಿಭಟನೆಗೆ ಬೆಚ್ಚಿದ ಎಸ್ಪಿ; ತಪ್ಪಿತಸ್ತ ಪೊಲೀಸರ ವಿರುದ್ದ ಕ್ರಮದ ಭರವಸೆ

ಪ್ರಮುಖ ಸುದ್ದಿ, ರಾಜ್ಯ
ಮಂಡ್ಯ: ಪಾಂಡವಪುರ RSS ಕಚೇರಿಯಿಂದ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಘಟಕರನ್ನು ತಡರಾತ್ರಿಯಲ್ಲಿ ಏಕಾಏಕಿ ಬಂಧಿಸಿದ ಪೋಲೀಸರ ದುರ್ನಡತೆಯನ್ನು ಖಂಡಿಸಿ ಮತ್ತು RSS ಕಛೇರಿಯೊಳಗೆ ಶೂ ಹಾಕಿಕೊಂಡು ಕ್ರೌರ್ಯ ಮೆರೆದ ಪೋಲಿಸರ ಬೂಟಾಟಿಕೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಪಾಂಡವಪುರ ಪೋಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಮಣಿದ ಪೋಲೀಸ್ ಇಲಾಖೆ ದುಂಡಾವರ್ತನೆ ತೋರಿದ DYSP ಹಾಗೂ ಇನ್ಸ್ ಪೆಕ್ಟರ್ ರವರುಗಳನ್ನು ತಕ್ಷಣವೇ ಬೇರೆಡೆಗೆ ಕರ್ತವ್ಯಕ್ಕೆ ವರ್ಗಾಯಿಸಿ ಅವರುಗಳ ಮೇಲೆ ಸುಮೋಟೋ ಕೇಸ್ ದಾಖಲಿಸಿ ಬೇರೆ ಜಿಲ್ಲೆಯ ಅಡೀಷನಲ್ ಎಸ್.ಪಿ. ಯವರ ಮೂಲಕ ಇಲಾಖಾ ತನಿಖೆ ನಡೆಸುವುದಾಗಿಯೂ ಹಾಗೂ ತನಿಖೆ ವೇಳೆ ಆರೋಪಿತರು ಹಸ್ತಕ್ಷೇಪ ನಡೆಸದಂತೆ ಕ್ರಮ ಕೈಗೊಳ್ಳುವುದಾಗಿಯೂ ಮತ್ತು ತನಿಖಾ ವರದಿ ಬಂದ ಕೂಡಲೇ ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ಮಂಡ್ಯ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಬಹಿರಂಗವಾಗಿ ಮಾಧ್ಯಮದ ಮುಂದೆ ಸ್ಪಷ್ಟನೆ ನೀಡಿದ ಮೇರೆಗೆ ಪಾಂಡವಪುರ ಪೋಲೀಸ್ ಠಾಣೆಯೆದುರು ನಡೆಯುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು....
ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಫ್ರಾನ್ಸ್‌ನ ಲಿಯೋನ್‌ನಲ್ಲಿ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರು ಶ್ರೇಷ್ಠತಾ ಪದಕಗಳನ್ನು ಪಡೆದ್ದಿದ್ದರೆ. ಫ್ರಾನ್ಸ್‌ನ ಲಿಯೋನ್‌ನಲ್ಲಿ ಇದೇ ಸೆಪ್ಟೆಂಬರ್ 10 ರಿಂದ 15 ರವರೆಗೆ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ 9 ಸ್ಪರ್ಧಿಗಳು ಭಾಗವಹಿಸಿದ್ದು, ಈ ಪೈಕಿ ಪ್ರೇಮ್, ಹರ್ಷವರ್ಧನ್, ಭಾನುಪ್ರಸಾದ್, ದರ್ಶನ್ ಗೌಡ 3 ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ ಪಡೆದಿದ್ದಾರೆ. ಇದಕ್ಕೂ ಮುನ್ನ ಕಳೆದ ಮೇ ತಿಂಗಳಿನಲ್ಲಿ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಕರ್ನಾಟಕದಿಂದ 62 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಯುವ ಕೌಶಲ್ಯ ಸ್ಪರ್ಧೆಯಲ್ಲಿ 13 ಚಿನ್ನದ ಪದಕ, 12 ಬೆಳ್ಳಿ ಪದಕ, 4 ಕಂಚಿನ ಪದಕ ಹಾಗೂ 19 ಶ್ರೇಷ್ಠತಾ ಪದಕ ಗೆಲ್ಲುವುದರೊಂದಿಗೆ ರಾಜ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ 2ನೇ ಸ್ಥಾನ ಪಡೆದಿದೆ. ಅಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕರ್ನಾಟಕದ ಪ್ರೇಮ್ (ಆಡಿಟಿವ್ ಮ್ಯಾನುಫ್ಯಾಕ್ಚರಿಂಗ್), ಹರ್ಷವರ್ಧನ್ (ಕುಕ್ಕಿಂಗ್), ಭಾನುಪ್ರಸಾದ್, ದರ್ಶನ್ ಗೌಡ (ಮೆಕಾಟ್ರಾನಿಕ್ಸ್) ಫ್ರ...
‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಕುಮಾರಸ್ವಾಮಿ, ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ ಎಂದವರು ಟೀಕಿಸಿದ್ದಾರೆ...
ಪ್ರಚೋದನಾಕಾರಿ ಹೇಳಿಕೆಯ ಪ್ರತಿಧ್ವನಿ; ಬಂಟ್ವಾಳ ಬಳಿ ಹಿಂದೂ ಕಾರ್ಯಕರ್ತರಿಂದ ದಿಢೀರ್ ‘ಬಿ.ಸಿ.ರೋಡ್ ಚಲೋ’; ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಪರದಾಟ

ಪ್ರಚೋದನಾಕಾರಿ ಹೇಳಿಕೆಯ ಪ್ರತಿಧ್ವನಿ; ಬಂಟ್ವಾಳ ಬಳಿ ಹಿಂದೂ ಕಾರ್ಯಕರ್ತರಿಂದ ದಿಢೀರ್ ‘ಬಿ.ಸಿ.ರೋಡ್ ಚಲೋ’; ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಪರದಾಟ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ಚಾಳದಲ್ಲಿ  ಪ್ರಚೋದನಕಾರಿ ಹೇಳಿಕೆ ವಿರುದ್ದ ಹಿಂದೂ ಕಾರ್ಯಕರ್ಯರು ಬೀದಿಗಿಳಿದಿದ್ದಾರೆ. 'ತಾಕತ್ತಿದ್ದರೆ ಈದ್ ಮಿಲಾದ್ ಮೆರವಣಿಗೆಯ ಮೇಲೆ ದಾಳಿ ಮಾಡಿ' ಎಂದು ಬಂಟ್ವಾಳ ಪುಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ನೀಡಿದ್ದಾರೆ ಎನ್ನಲಾದ ಪ್ರಚೋದನಕಾರಿ ಹೇಳಿಕೆ ಖಂಡಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಬಂಟ್ವಾಳ ಸಮೀಪ ಬಿ.ಸಿ.ರೋಡ್‌ನಲ್ಲಿ ರ್ಯಾಲಿ ಕೈಗೊಂಡಿದ್ದಾರೆ. ಮುಸ್ಲಿಂ ಮುಖಂಡರು ಹಿಂದೂ ಸಂಘಟನೆಯ ನಾಯಕ ಶರಣ್ ಪಂಪ್‌ವೆಲ್ ವಿರುದ್ದ ಪ್ರಚೋದನಾಕಾರಿ ಹೇಳಿಕೆ ನೀಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಇದರಿಂದ ಕೆರಳಿರುವ ಹಿಂದೂ ಸಂಘಟನೆಗಳು 'ಬಿ.ಸಿ.ರೋಡ್ ಚಲೋ'ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಬಿ.ಸಿ.ರೋಡ್‌ ಪಟ್ಟಣದಲ್ಲಿ ಜಮಾಯಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ನೂರಾರು ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿದ್ದರೂ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ, ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನೂ ಬೇಧಿಸಿ ಹಿಂದೂ ಸಂಘಟನೆಯ ಕಾರ್ಯಕರ್ತ...
ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಚಿತ್ರಾಪುರ ಸಾರಸ್ವತ ಸಮಾಜದ ಗುರುಗಳಾಗಿರುವ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿ, ಮಠಾಧಿಪತಿ, ಶ್ರೀ ಚಿತ್ರಾಪುರ ಮಠ, ಶಿರಾಲಿ, ಉ.ಕ.ಜಿಲ್ಲೆ ಇವರ ಸೀಮೋಲ್ಲಂಘನ ಹಾಗೂ ದಿಗ್ವಿಜಯ18.09.2024ರಂದು ನಡೆಯಲಿದೆ. ಈ ಬಾರಿ ಸ್ವಾಮೀಜಿಯವರ ಚಾತುರ್ಮಾಸ ವೃತವು ಎರಡು ತಿಂಗಳ ಕಾಲ ಮಂಗಳೂರಿನ ಶರವು ದೇವಸ್ಥಾನ ರಸ್ತೆಯಲ್ಲಿರುವ ಶ್ರೀ ವಾಮನಾಶ್ರಮ ಮಠ (ಚಿತ್ರಾಪುರ ಮಠ) ದಲ್ಲಿ ಜರಗುತ್ತಿದ್ದು, ಈ ಚಾತುರ್ಮಾಸ ವೃತವು ಸೆಪ್ಟೆಂಬರ್ ತಿಂಗಳ 18ರಂದು ಮುಕ್ತಾಯಗೊಳ್ಳಲಿದೆ. ಆ ಪ್ರಯುಕ್ತ ಸೆಪ್ಟೆಂಬರ್ 18ರಂದು (ಬುಧವಾರ) ಸಂಜೆ 4.00 ಗಂಟೆಗೆ ಸೀಮೋಲ್ಲಂಘನ ಕಾರ್ಯಕ್ರಮವು ನಗರದ ಸುಲ್ತಾನ್ ಬತ್ತೇರಿ ಬಳಿಯಿರುವ ನದಿ ತಟದಲ್ಲಿ ನಡೆಯಲಿದೆ. ರಾತ್ರಿ ಗಂಟೆ 7.00ರಿಂದ ಮಂಗಳೂರು ನಗರದ ಗಣಪತಿ ಪ್ರೌಢ ಶಾಲೆಯ ಆವರಣದಿಂದ ದಿಗ್ವಿಜಯೋತ್ಸವವು (ಶೋಭಾಯಾತ್ರೆ) ಪ್ರಾರಂಭವಾಗಿ ಜಿ.ಎಚ್.ಎಸ್. ಅಡ್ಡ ರಸ್ತೆ, ಭವಂತಿಸ್ಟ್ರೀಟ್, ವೆಂಕಟರಮಣ ದೇವಸ್ಥಾನ ರಸ್ತೆ, ಮಹಮ್ಮಾಯ ದೇವಸ್ಥಾನ ರಸ್ತೆ, ಕೆನರಾ ಹೈಸ್ಕೂಲ್ ಹಿಂಬದಿಯ ರಸ್ತೆ, ನವಭಾರತ ವೃತ್ತ, ಡೊಂಗರಕೇರಿ, ನ್ಯೂಚಿತ್ರಾ ಜಂಕ್ಷನ್, ಬಿ.ಇ.ಎಂ ಹೈಸ್ಕೂಲ್ ರಸ್ತ...
ಪ್ರಚೋದನಕಾರಿ ಹೇಳಿಕೆ ಆರೋಪ: ಹಿಂದೂ ಮುಖಂಡರ ವಿರುದ್ದ ಪ್ರಕರಣ

ಪ್ರಚೋದನಕಾರಿ ಹೇಳಿಕೆ ಆರೋಪ: ಹಿಂದೂ ಮುಖಂಡರ ವಿರುದ್ದ ಪ್ರಕರಣ

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್​ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ಹರಿಬಿಟ್ಟಿದ್ದ ಆರೋಪದಲ್ಲಿ ಪುನಿತ್ ಅತ್ತಾವರ ವಿರುದ್ಧ ಮಂಗಳೂರಿನ‌ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಎಚ್ಚರಿಕೆಯನ್ನು ನೀಡಿದ್ದಾರೆ....
ಎಂಎಸ್‌ಪಿ ಖಾತ್ರಿ ಕಾನೂನು ಜಾರಿಯಾಗುವ ತನಕ ಹೋರಾಟ ನಿಲ್ಲುವುದಿಲ್ಲ : ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ

ಎಂಎಸ್‌ಪಿ ಖಾತ್ರಿ ಕಾನೂನು ಜಾರಿಯಾಗುವ ತನಕ ಹೋರಾಟ ನಿಲ್ಲುವುದಿಲ್ಲ : ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಹರಿಯಾಣ: ಹರಿಯಾಣ ಚುನಾವಣಾ ಹಿನ್ನಲೆಯಲ್ಲಿ. ಕಿಸಾನ್ ಮಹಾಪಂಚಾಯತ್ ಸಮಾವೇಶ ನಡೆಸಲು ಸಾಧ್ಯವಿಲ್ಲ ಎಂದು ಪೊಲೀಸರು ರೈತರಿಗೆ ತಿಳಿಸಿದ್ದಾರೆ.. ಹಾಗೂ ಸಮಾವೇಶದ ಸ್ಥಳದಲ್ಲಿ ಹಾಕಲಾಗಿದ್ದ ಶಾಮಿಯಾನ ಮೈಕಳನ್ನ ಕಿತ್ತುಹೊಯ್ದಿದ್ದಾರೆ. ಇದನ್ನು ರೈತ ಮುಖಂಡರು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ಸಂದೇಶ ನೀಡಿದ್ದಾರೆ.. ಸಮಾವೇಶ ನಡೆಸಲು ಹಾಕಿದ್ದ ಟೆಂಟುಗಳನ್ನ ಕಿತ್ತಾಕಿ ಮೈಕಳನ್ನ ಕಿತ್ತೆಸೆದ ಪೊಲೀಸರು ಬೆಳಿಗ್ಗೆ 9:00 ಒಳಗೆ ಸಮಾವೇಶ ನಡೆಸಲು ಆಸ್ಪದ ನೀಡದಿದ್ದರೆ. ರೈತರು ರಾಜ್ಯದ್ಯಂತ ಎಲ್ಲ ರಸ್ತೆಗಳನ್ನ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡು ಸಮಾವೇಶ ನಡೆಸಲು ಅವಕಾಶ ಕಲ್ಪಿಸಿತು ಆದರೆ ಪಕ್ಕದ ರಾಜ್ಯದ ಪಂಜಾಬ್ ರೈತರಿಗೆ ಸಮಾವೇಶಕ್ಕೆ ಬರಲು ಅವಕಾಶ ನೀಡಲಿಲ್ಲ. ಆಗ ಮತ್ತಷ್ಟು ಸಂಖ್ಯೆಯ ರೈತರು ತಂಡೋಪ ತಂಡವಾಗಿ ಸಮಾವೇಶ ಸ್ಥಳಕ್ಕೆ ಬಂದರು. ಇದರಿಂದ ರೈತಶಕ್ತಿ ಇಮ್ಮಡಿ ಗೊಳಿಸಿತು. ಇದೇ ಸಮಾವೇಶದಲ್ಲಿ ಮಾತನಾಡಿದ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರೈತರ...
ಗುತ್ತಿಗೆದಾರರಿಗೆ ಬೆದರಿಕೆ ಆರೋಪ; ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಗುತ್ತಿಗೆದಾರರಿಗೆ ಬೆದರಿಕೆ ಆರೋಪ; ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗುತ್ತಿಗೆದಾರರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋರ್ಟ್ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಕೋಲಾರದಲ್ಲಿ ಮುನಿರತ್ನ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಕಳೆದ ರಾತ್ರಿ ಬೆಂಗಳೂರಿಗೆ ಕರೆತಂದು 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ನಂಗಲಿ ಗ್ರಾಮದ ಬಳಿ ಬಂಧಿಸಿದ್ದರು. ರಾತ್ರಿ ಬೆಂಗಳೂರು ತಲುಪುತ್ತಿದ್ದಂತೆಯೇ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ಪ್ರಕರಣದ ಬಗ್ಗೆ ವಿಚಾರಣೆ ಅಗತ್ಯವಿರುವುದರಿಂದ ಒಂದು ವಾರ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಧೀಶರನ್ನು ಕೋರಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದರು....
ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸ ಬೇಕು ಹಾಗೂ ವಿಧಾನಸಭಾ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು" ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, "ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ ಸಂಘರ್ಷಗಳು ಹೆಚ್ಚಾಗುತ್ತವೆ. ಆದ ಕಾರಣಕ್ಕೆ ಇವರ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿ ಕೇಂದ್ರ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಕೀಳು ಮಟ್ಟದ ಪದ ಬಳಕೆ ಮಾಡಿರುವ ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ" ಎಂದರು. "ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರೇ ಸಮುದಾಯದ ತಾಯಂದಿರನ್ನು ಅವಮಾನಿಸಿದ್ದಾರೆ. ಇದಕ್ಕೆ ನೀವೇ ಉತ್ತರಿಸಬೇಕು. ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ ಅವರು ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಇದರ ಬಗ್ಗೆ ಉತ್ತರಿಸಬೇಕು" ಎಂದರು. "ಒಂದು ಕಡೆ ರಾಮನ, ಸ...
ಕಾಂಗ್ರೆಸ್ ಸರ್ಕಾರದಿಂದ ಧ್ವೇಷದ ರಾಜಕಾರಣ; ಶಾಸಕ ಮುನಿರತ್ನ ಬಂಧನಕ್ಕೆ ಬಿಜೆಪಿ ಆಕ್ರೋಶ 

ಕಾಂಗ್ರೆಸ್ ಸರ್ಕಾರದಿಂದ ಧ್ವೇಷದ ರಾಜಕಾರಣ; ಶಾಸಕ ಮುನಿರತ್ನ ಬಂಧನಕ್ಕೆ ಬಿಜೆಪಿ ಆಕ್ರೋಶ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವನಿ ಮುದ್ರಣ ಶಾಸಕರದ್ದೇ ಎಂದು ಸಾಬೀತಾದ ಬಳಿಕ ಬಂಧಿಸಬೇಕಿತ್ತು. ಕಾನೂನಿಗೆ ಯಾರೂ ಅತೀತರಲ್ಲ ಎಂದರು. ಟಿ.ಜೆ.ಅಬ್ರಹಾಂ ದೂರಿನ ಆಧಾರದ ಮೇಲೆ ರಾಜ್ಯಪಾಲರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದರು.‌ ಆದರೂ ಅದು ಈಗ ನ್ಯಾಯಾಲಯದಲ್ಲಿದ್ದು, ಅದಕ್ಕೆ ನಾವ್ಯಾರೂ ಆಕ್ಷೇಪ ಮಾಡಿಲ್ಲ. ಆದರೆ ಇಲ್ಲಿ ದೂರು ನೀಡಿದ ಕೂಡಲೇ ವಿಚಾರಣೆ ಮಾಡದೆ‌ ನೋಟಿಸ್‌ ನೀಡದೆ ಬಂಧಿಸಲಾಗಿದೆ. ಇಲ್ಲಿ ಆತುರದ‌ ಕ್ರಮವಾಗಿದ್ದು, ಏಕಾಏಕಿ ಬಂಧನವಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಲೀಡ್ ಬಂದಿರುವುದು ಕೂಡ ಇದಕ್ಕೆ ಕಾರಣ. ಧ್ವನಿ ಮುದ್ರಣವನ್ನು ಎಫ್ಎಸ್ಎಲ್ ಗೆ ಕಳುಹಿಸಿ,‌ ತನಿಖೆ ಮಾಡಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ಮಾತಾಡುತ್ತಿರಲಿಲ್ಲ. ಯಾವುದೇ ಪ್...