Tuesday, March 24

ರಾಜ್ಯ

ಅಕ್ಕ ಕೆಫೆ ಗ್ರಾಮೀಣ ಮಹಿಳಾ ಉದ್ಯಮಿಗಳ ಬದುಕು ಪರಿವರ್ತಿಸುವುದು ಪಕ್ಕಾ: ಸಚಿವ ಡಾ. ಪಾಟೀಲ್

ಅಕ್ಕ ಕೆಫೆ ಗ್ರಾಮೀಣ ಮಹಿಳಾ ಉದ್ಯಮಿಗಳ ಬದುಕು ಪರಿವರ್ತಿಸುವುದು ಪಕ್ಕಾ: ಸಚಿವ ಡಾ. ಪಾಟೀಲ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೇವನಹಳ್ಳಿ: ರಾಜ್ಯ ಸರ್ಕಾರದ ವತಿಯಿಂದ ಜಾರಿಗೆ ತಂದಿರುವ “ಅಕ್ಕ ಕೆಫೆ” ಯೋಜನೆ ಕರ್ನಾಟಕದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ಮಹಿಳಾ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ.ಮಂಗಳವಾರ ದೇವನಹಳ್ಳಿಯಲ್ಲಿ “ಅಕ್ಕ ಕೆಫೆ” ಉದ್ಘಾಟಿಸಿದ ಸಚಿವ ಡಾ.ಪಾಟೀಲ್, ನಗರ ಮತ್ತು ಗ್ರಾಮೀಣ ಪ್ರದೇಶಗಳ ಮಹಿಳೆಯರಿಗೆ ಸ್ವಾವಲಂಬನೆ ಮತ್ತು ಉದ್ಯಮಶೀಲತೆ ಉತ್ತೇಜಿಸುವ ಯೋಜನೆ ಇದಾಗಿದೆ. ಇದು ಪರಿವರ್ತನೆಯ ಸಾಮರ್ಥ್ಯವನ್ನು ಹೊಂದಿದೆ. "ಅಕ್ಕ ಕೆಫೆ ಮಹಿಳೆಯರನ್ನು ಸಬಲೀಕರಣಗೊಳಿಸುವ ಮೂಲಕ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಉದ್ಯಮಶೀಲತೆಗೆ ಆದ್ಯತೆ ನೀಡಲಿದೆ. ಕರ್ನಾಟಕದ ಸಾಮಾಜಿಕ-ಆರ್ಥಿಕ ಕ್ಷೇತ್ರದ ಮೇಲೆ ಶಾಶ್ವತವಾದ ಪರಿಣಾಮವನ್ನು ಬೀರುತ್ತದೆ" ಎಂದು ಸಚಿವರು ಹೇಳಿದರು.2024-25ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಚಯಿಸಿದ ಅಕ್ಕ ಕೆಫೆಯು ಮಹಿಳೆಯರಿಗೆ ಸುಸ್ಥಿರ ಜೀವನೋಪಾಯವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಇದು ನಿರ್ದಿಷ...
ಜಾತಿಗಣತಿ ವರದಿ ಜಾರಿಯಾದರೆ ಯೋಜನೆಗಳನ್ನು ರೂಪಿಸಲು ಸಹಾಯ; ಪರಮೇಶ್ವರ್

ಜಾತಿಗಣತಿ ವರದಿ ಜಾರಿಯಾದರೆ ಯೋಜನೆಗಳನ್ನು ರೂಪಿಸಲು ಸಹಾಯ; ಪರಮೇಶ್ವರ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜಾತಿಗಣತಿ ವರದಿಯನ್ನು ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ ‌ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜಾತಿಗಣತಿಯ ವರದಿಯನ್ನು ತರದೇ ಇದ್ದಾಗ ಕೋಲ್ಡ್ ಸ್ಟೋರೆಜ್‌ನಲ್ಲಿಟ್ಟುಬಿಟ್ಟರು ಎಂದು ಟೀಕಿಸುತ್ತಿದ್ದರು. ಯಾಕೆ ಅಷ್ಟೊಂದು ಹಣ ಖರ್ಚು ಮಾಡಿದರು. ಯಾಕೆ ಪೆಟ್ಟಿಗೆಯೊಳಗೆ ಇಡಬೇಕಿತ್ತು ಎಂದೆಲ್ಲ‌ ಪ್ರಶ್ನಿಸಿದರು. ಜನಸಮುದಾಯಕ್ಕೆ ಜಾರಿಗೊಳಿಸುತ್ತೇವೆ ಎಂದಾಗ ನುಂಗಲಾರದ ತುತ್ತಾಗಿದೆ. ರಾಜ್ಯದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯದ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.ಜಾತಿಗಣತಿ ವರದಿಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸಹಾಯವಾಗುತ್ತದೆ ಎಂದು ಎಲ್ಲರು ಹೇಳುತ್ತಿದ್ದಾರೆ. ಸಮುದಾಯಗಳಿಗೆ ಯೋಜನೆಗಳನ್ನು ನೀಡಬಾರದೇ? ಎಂದು ಅವರು ಪ್ರಶ್ನಿಸಿದರು.ಯಾವ ಆಧಾರದ ಮೇಲೆ ಯೋಜನೆಗಳನ್ನು ಕೊಡಬೇಕು ಎಂಬ ಪ್ರಶ್ನೆ ಬಂದಾಗ ಸ್ವಾಭಾವಿಕವಾಗಿ ನಾವು ಜನಸಂಖ್ಯೆ ಆಧಾರವಾಗಿ...
KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗಿಳಿಸಿದೆ.ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ದಸರಾ ವಿಶೇಷ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಸೋಮವಾರ ಚಾಲನೆ ನೀಡಲಾಯಿತು. ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲದೆ.ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು‌ ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ. ಇದರೊಂದಿಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ 2000 ವಿಶೇಷ ಬಸ್ಸುಗಳ ಕಾರ್ಯಾಚರಣೆ‌ ನಡೆಯಲಿದೆ ಕೆಎಸ್ಸಾರ್ಟಿಸಿ ಮಾಹಿತಿ ಒದಗಿಸಿದೆ....
KSRTC ಪ್ರಯಾಣಕ್ಕೆ ಹೈಟೆಕ್ ಸ್ಪರ್ಶ:  ಐರಾವತ ಕ್ಲಬ್ ಕ್ಲಾಸ್ 2.0 ಬಸ್ ವಿಶೇಷತೆ ಹೀಗಿದೆ..

KSRTC ಪ್ರಯಾಣಕ್ಕೆ ಹೈಟೆಕ್ ಸ್ಪರ್ಶ:  ಐರಾವತ ಕ್ಲಬ್ ಕ್ಲಾಸ್ 2.0 ಬಸ್ ವಿಶೇಷತೆ ಹೀಗಿದೆ..

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರದ ನಿಗಮ KSRTCಯಲ್ಲಿನ ಪ್ರಯಾಕ್ಕೆ ಹೈಟೆಕ್ ಸ್ಪರ್ಶ  ಐರಾವತ ಕ್ಲಬ್ ಕ್ಲಾಸ್ 2.0 ವಿಶೇಷ ಬಸ್‌ಗಳು ಸದ್ಯವೇ ಸೇರ್ಪಡೆಯಾಗಲಿವೆ.ಬೆಂಗಳೂರು ಹೊರವಲಯದ ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ನೂತನ ವೋಲ್ವೋ (9600 ಮಾದರಿ) ಬಸ್ಸನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪರಿಶೀಲಿಸಿದರು. KSRTC ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ (ವಾಸು), ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಮತ್ತು ವ್ಯವಸ್ಥಾಪಕ ನಿರ್ದೇಶಕರು ವಿ.ಅನ್ಬುಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.'ಐರಾವತ ಕ್ಲಬ್ ಕ್ಲಾಸ್ 2.0' ಮಾದರಿಯ 20 ಬಸ್ಸುಗಳನ್ನು ಕೆ ಎಸ್ ಆರ್ ಟಿ ಸಿ ಯು ಈ ತಿಂಗಳ ಕೊನೆಯ ವಾರದಲ್ಲಿ ತನ್ನ ವಾಹನಗಳ ಸಮೂಹಕ್ಕೆ ಸೇರ್ಪಡೆ ಗೊಳಿಸಲಿದೆ. ಒಂದು ಬಸ್ಸಿನ ದರ ರೂ.1.78 ಕೋಟಿಗಳು. ನಿಗಮದಲ್ಲಿ ಒಟ್ಟು 443 ಐಷಾರಾಮಿ ಬಸ್ಸುಗಳ ಜೊತೆ ಈ ಹೈಟೆಕ್ ಬಸ್‌ಗಳೂ ಸೇರ್ಪಡೆಯಾಗಲಿವೆ.'ಐರಾವತ ಕ್ಲಬ್ ಕ್ಲಾಸ್ 2.0' ಬಸ್ಸಿನ ವಿಶೇಷತೆಗಳು: ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟ...
ಜಾತಿ ಗಣತಿ ವರದಿ ಬಹಿರಂಗ: ಅ.18 ರಂದು ಮುಹೂರ್ತ ಫಿಕ್ಸ್

ಜಾತಿ ಗಣತಿ ವರದಿ ಬಹಿರಂಗ: ಅ.18 ರಂದು ಮುಹೂರ್ತ ಫಿಕ್ಸ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜಾತಿ ಗಣತಿ ವರದಿ ಬಹಿರಂಗ ಸಂಬಂಧ ಅ.18 ರಂದು ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.2013 - 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗ...
ಬೆಸ್ಕಾಂ ಅವಾಂತರ; ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ಬೆಸ್ಕಾಂ ಅವಾಂತರ; ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ರಾಜಧಾನಿ ಹೊರವಲಯದ ಚಿಕ್ಕನಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ಮಹಿಳೆಯರು ನಿಂತಿದ್ದ ಸ್ಥಳದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅವಘಡ ಸಂಭವಿಸಿದೆ.ಮೃತ ಮಹಿಳೆಯನ್ನು ಮಂಜಮ್ಮ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಯ ದೂರು ಆಧರಿಸಿ ತಾವರೆಕೆರೆ ಠಾಣೆ ಪೊಲೀಸರು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ....
ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಸೇನೆಯ ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿಯಾಗಿದ್ದಾರೆ. ಈ ಬಗ್ಗೆ ಸೋಮವಾರ ಮಾಹಿತಿ ಹಂಚಿಕೊಂಡಿರುವ ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಬಿಸಿಲಿನ ತಾಪಮಾನಕ್ಕೆ ಐವರು ಸಾವನ್ನಾಪಿದ್ದಾರೆ ಎಂದು ತಿಳಿಸಿದ್ದಾರೆ.ಏರ್ ಶೋ ವೇಳೆ ಬಿಸಿಲಿನ ಝಳದಿಂದ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು 90ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಐವರು ಸಾವನ್ನಪ್ಪಿದ್ದಾರೆ ಎಂದು ಸುಬ್ರಮಣಿಯನ್ ತಿಳಿಸಿದ್ದಾರೆ....
ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಜ್ ಅಲಿ ಮೃತದೇಹ ಪತ್ತೆ

ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಜ್ ಅಲಿ ಮೃತದೇಹ ಪತ್ತೆ

ಪ್ರಮುಖ ಸುದ್ದಿ, ರಾಜ್ಯ
ಕಾವೂರು: ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಝ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರದ ಕೂಳೂರು ಸೇತುವೆಯ ಬಳಿ ಸೋಮವಾರ ಮುಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ.ಭಾನುವಾರದಿಂದ ಶೋಧ ಕಾರ್ಯ ನಡೆಸಿದ್ದ ತಜ್ಞರು ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮತ್ತೆ ಹುಡುಕಾಟ ಆರಂಭಿಸಿದರು. ಬೆಳಿಗ್ಗೆ 10:40 ರ ಸುಮಾರಿಗೆ ಸ್ಥಳೀಯ ಮೀನುಗಾರರು ಮೃತದೇಹವನ್ನು ಪತ್ತೆ ಮಾಡಿದ್ದಾರೆ.ಈ ನಡುವೆ ಮುಮ್ತಾಜ್ ಅಲಿ ಸಾವಿನ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಪ್ರಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ....
ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಇದೀಗ ರಾಜಕೀಯ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ. ಖರ್ಗೆಯವರನ್ನು ಕಾಂಗ್ರೆಸ್ ನಾಯಕರು ಭೇಟಿಯಾಗಿ ಮಾತಿಕತೆ ನಡೆಸಿದ್ದಾರೆಂಬ ಬೆಳವಣಿಗೆಯ ಬೆನ್ನಲ್ಲೇ ಡಿ.ಕೆ. ಸುರೇಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಸೋಮವಾರ ಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲಿನ ಈ ಬೆಳವಣಿಗೆಯ ನಡುವೆಯೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡಾ ಸತೀಶ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಯನ್ನು ಗಮನಿಸಿದರೆ ಸಿದ್ದರಾಮಯ್ಯ ಸರ್ಕಾರವು ಯಾವುದೇ ಕ್ಷಣದಲ್ಲೂ ಬೀಳಬಹುದು ಎಂದು ವಿಶ್ಲೇಷಿಸಿದರು.ನಮ್ಮ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮುಖಂಡರೊಂದಿಗೆ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಶಿಕಾರಿಪುರದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ನಂ-57 ಶಿವಮೊಗ್ಗ- ಶಿಕಾರಿಪುರ -ಹಾನಗಲ್ -ತಡಸ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ಕ...
‘ಸರ್ಕಾರ ಬೀಳುತ್ತೆ ಎಂಬ ಭಯ ಬೇಡ, ಜಾತಿ ಗಣತಿ ಬಿಡುಗಡೆ ಮಾಡಿ’; ಸಿಎಂಗೆ ಬಿ.ಕೆ.ಹರಿಪ್ರಸಾದ್ ಸಲಹೆ

‘ಸರ್ಕಾರ ಬೀಳುತ್ತೆ ಎಂಬ ಭಯ ಬೇಡ, ಜಾತಿ ಗಣತಿ ಬಿಡುಗಡೆ ಮಾಡಿ’; ಸಿಎಂಗೆ ಬಿ.ಕೆ.ಹರಿಪ್ರಸಾದ್ ಸಲಹೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ಬೇಡ, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಜಾತಿ ಗಣತಿ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಸರ್ಕಾರಕ್ಕೆ ಸಕಲೆ ಮಡಿದ್ದಾರೆ.ಬೆಂಗಳೂರಿನಲ್ಲಿ "ಮೀಸಲಾತಿಯ ಒಳಮುಖ " ಪುಸ್ತಕ ಬಿಡುಗಡೆಗೊಳಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಹಾಗೂ ಸಂವಿಧಾನವನ್ನು ಉಳಿಸುವುದು ನಮ್ಮ ಪಕ್ಷಕ್ಕೆ ಮೊದಲ ಆದ್ಯತೆಯಾಗಿರುವುದು ಸ್ಪಷ್ಟ. ಜಾತಿ ಗಣತಿ ಹಾಗೂ ಜನ ಗಣತಿಯನ್ನು ಅನುಷ್ಠಾನಗೊಳಿಸುವುದರ ಪರವಾಗಿ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಹೋರಾಟ ನಡೆಸುತ್ತಿದ್ದಾರೆ. ಅಧಿಕಾರಕ್ಕಾಗಿ ಮೀಸಲಾತಿಯ ವಿಷಯದಲ್ಲಿ ರಾಜಿಯಾಗಲು ಸಾಧ್ಯವೇ ಇಲ್ಲ ಎಂದರು.ಮಹಾತ್ಮ ಗಾಂಧಿ ಹಾಗೂ ನೆಹರೂ ಅವರ ಸಾಮಾಜಿಕ ನ್ಯಾಯ ಮತ್ತು ಸರ್ವಧರ್ಮ ಸಹ ಬಾಳ್ವೆಯಲ್ಲಿ ನಂಬಿಕೆ ಇಟ್ಟಿದ್ದೇನೆ. ಎಲ್ಲಾ ವರ್ಗದವರಿಗೂ ಅನುಕೂಲ ಆಗಬೇಕು ಅನ್ನುವ ಕಾರಣಕ್ಕಾಗಿ ಹೇಳುತ್ತಿದ್ದೇನೆ. ಜಾತಿ ಗಣತಿ ವಿಷಯದಲ್ಲಿ ಸಣ್ಣಪುಟ್ಟ ತಪ್ಪುಗಳಿದ್ದರೆ ಚರ್ಚೆ ಮಾಡಿ ಸರಿ ಮಾಡಬೇಕು. ಇದನ್ನ ಮೊದಲಿನಿಂದಲೂ ಹೇಳುತ್ತಿದ್ದೇನೆ ಈಗಲೂ ಹೇಳುತ್ತಿದ್ದೇನೆ ಎಂದು...