Thursday, January 29

ರಾಜ್ಯ

‘ಬೃಂದಾವನ’ ಸೀರಿಯಲ್ ನಟನ ವಿರುದ್ಧ FIR

‘ಬೃಂದಾವನ’ ಸೀರಿಯಲ್ ನಟನ ವಿರುದ್ಧ FIR

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
‘ಬೃಂದಾವನ’ ಸೀರಿಯಲ್ ನಟ ವರುಣ್ ಆರಾಧ್ಯ ವಿರುದ್ಧ ಯುವತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸವೇಶ್ವರ ಸೆನ್ ಪೊಲೀಸ್ ಠಾಣೆಯಲ್ಲಿ ವರುಣ್‌ ವಿರುದ್ಧ ಕೇಸ್‌ ದಾಖಲಾಗಿದೆ. ತಮ್ಮ ಖಾಸಗಿ ವಿಡಿಯೋ ಮತ್ತು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಈ ಬಗ್ಗೆ ದೂರು ಸ್ವೀಕರಿಸಿರುವ ಬಸವೇಶ್ವರ ಸೆನ್ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ....
ಹಿಂದೂ ದೇವರಿಗೆ ಅಪಮಾನ; ಮಂಗಳೂರಿನ ಪೊಲೀಸರಿಂದ ಎಫ್​ಐಆರ್

ಹಿಂದೂ ದೇವರಿಗೆ ಅಪಮಾನ; ಮಂಗಳೂರಿನ ಪೊಲೀಸರಿಂದ ಎಫ್​ಐಆರ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಹಿಂದೂ ದೇವರ ಚಿತ್ರಗಳನ್ನು ಅಶ್ಲೀಲವಾಗಿ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಮಾನಿಸಿರುವ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಎಐ ಆಧಾರಿತ ಹಿಂದೂ ದೇವರ ಚಿತ್ರಗಳನ್ನು ಅಶ್ಲೀಲವಾಗಿ ರಚಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಹಿಂದೂ ದೇವರನ್ನು ಸ್ತ್ರೀಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವಂತೆ ರಚಿಸಿ ಅವುಗಳನ್ನು “Fact Vid” ಎಂಬ ಹೆಸರಿನ ಫೇಸ್‌ಬುಕ್​ ಪೇಜ್​ನಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ....
ಕೈಗಾರಿಕೆ-ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ “ನಿಪುಣ ಕಾರ್ಯಕ್ರಮ” ಬಳಸಿಕೊಳ್ಳಲು ಕಾಂಗ್ಸ್‌ಬರ್ಗ್ ಡಿಜಿಟಲ್‌ ಸಂಸ್ಥೆಗೆ ಸರ್ಕಾರ ಆಹ್ವಾನ

ಕೈಗಾರಿಕೆ-ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ “ನಿಪುಣ ಕಾರ್ಯಕ್ರಮ” ಬಳಸಿಕೊಳ್ಳಲು ಕಾಂಗ್ಸ್‌ಬರ್ಗ್ ಡಿಜಿಟಲ್‌ ಸಂಸ್ಥೆಗೆ ಸರ್ಕಾರ ಆಹ್ವಾನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೈಗಾರಿಕೆ-ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿಗಾಗಿ ಯೋಜಿಸಲಾಗಿರುವ “ನಿಪುಣ ಕಾರ್ಯಕ್ರಮ” ಬಳಸಿಕೊಳ್ಳುವಂತೆ *ಕಾಂಗ್ಸ್‌ಬರ್ಗ್ ಡಿಜಿಟಲ್‌ ಸಂಸ್ಥೆಗೆ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆಹ್ವಾನ ನೀಡಿದ್ದಾರೆ. ಕಾಂಗ್ಸ್‌ಬರ್ಗ್ ಡಿಜಿಟಲ್‌ನ ಅಧ್ಯಕ್ಷ ಮತ್ತು ಸಿಇಒ ಶೇನ್ ಮೆಕ್‌ಆರ್ಡಲ್ ಮತ್ತು ಕಾಂಗ್ಸ್‌ಬರ್ಗ್ ಡಿಜಿಟಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ದೀಪಕ್ ಕುಮಾರ್ ನೇತೃತ್ವದ ನಿಯೋಗ ಇಂದು ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ಆಹ್ವಾನ ಕೊಟ್ಟರು. ನಿಪುಣ ಕಾರ್ಯಕ್ರಮ ನಿರ್ದಿಷ್ಟವಾಗಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಕ್ಲೌಡ್ ಕಂಪ್ಯೂಟಿಂಗ್‌ನಂತಹ ಕ್ಷೇತ್ರಗಳಲ್ಲಿ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ನಿಖರವಾದ ಕೌಶಲ್ಯ ವಲಯದೊಂದಿಗೆ ಯುವ ಸಮೂಹವನ್ನು ಸಜ್ಜುಗೊಳಿಸುವ ಗುರಿ ಹೊಂದಿದೆ. “ಇದು ಸಾಮಾನ್ಯ ತರಬೇತಿ ಕಾರ್ಯಕ್ರಮವಲ್ಲ. ನಿಪುಣ ಕಾರ್ಯಕ್ರಮ ನಿರ್ದಿಷ್ಟ ಉದ್ಯಮದ ಅವಶ್ಯಕತೆಗಳನ್ನು ಪರಿಹರಿಸಲು ವಿನ್ಯಾಸಗೊಳಿಸಲಾಗಿದೆ. ಉದ್ಯೋಗಿಗಳ ಬೇಡಿಕೆಗಳನ್ನು ಪೂರೈಸಲು ನಾವು ಕಾಂಗ್ಸ್‌ಬರ್ಗ್ ಡಿಜಿಟಲ್‌ನಂತಹ ಕಂಪನಿಗಳೊಂದಿಗೆ ಸಹಕರ...
ಆರ್‌ಎಸ್‌‌ಎಸ್‌ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ; ಕಾಂಗ್ರೆಸ್ ನಾಯಕರ ಆರೋಪ

ಆರ್‌ಎಸ್‌‌ಎಸ್‌ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ; ಕಾಂಗ್ರೆಸ್ ನಾಯಕರ ಆರೋಪ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರ್‌ಎಸ್‌‌ಎಸ್‌ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ ಎಂದು ಎಐಸಿಸಿ ಎಸ್.ಸಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿಯಲ್ಲಿ  ಮಾತನಾಡಿದ ಎಐಸಿಸಿ ಎಸ್.ಸಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ, ಆರ್‌ಎಸ್‌‌ಎಸ್‌ ಪ್ರಣೀತ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಹೊರಟಿದೆ. ಸಂವಿಧಾನದ ಕಾರಣಕ್ಕೆ ಶೋಷಿತ ವರ್ಗದ ಜನರು ಅಧಿಕಾರ ಸೇರಿದಂತೆ ಒಂದಷ್ಟು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದನ್ನು ನಾಶ ಮಾಡಲು ಈ ಎರಡು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ದೂರಿದರು. ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕರು ಸಂವಿಧಾನದ ರಕ್ಷಣೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಇದರ ಸಲುವಾಗಿ ನಾವು ಕಳೆದ ಎರಡು ವರ್ಷಗಳ ಹಿಂದೆ “ಸಂವಿಧಾನ ರಕ್ಷಕ್” ಎನ್ನುವ ಕಾರ್ಯಕ್ರಮ ಜಾರಿಗೆ ತಂದೆವು ಎಂದ ಅವರು, ಇದುವರೆಗು ದೇಶದಾದ್ಯಂತ ಸುಮಾರು 3 ಲಕ್ಷ ಮಂದಿ ಸಂವಿಧಾನ ರಕ್ಷಕರಾಗಿ ನೋಂದಾಯಿಸಿಕೊಂಡಿದ್ದಾರೆ. ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಈ ವರ್ಷ ನವೆಂಬರ್‌ ...
ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿ : ಎಚ್‌.ಕೆ ಪಾಟೀಲ್

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿ : ಎಚ್‌.ಕೆ ಪಾಟೀಲ್

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300/- ಕೋಟಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರವು ದಿನಾಂಕ: 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 2167ಕ್ಕೆ ಉತ್ತರ ನೀಡಿ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬAಧಪಟ್ಟ ಎಲ್ಲಾ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟಿçÃಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲಾ ಅರ್ಹತೆ ಪಡೆದಿದೆ ಎಂದು ತಿಳಿಸಿರುತ್ತಾರೆ ಎಂದು ವಿವರಿಸಿದರು. 01.02.2023 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ರವರು ಬಜೆಟ್ ಭಾಷಣದ ಪುಟ ಸಂಖ್ಯೆ (10) ಪ್ಯಾರಾ (39) ರಲ್ಲಿ ಈ ಕೆಳಕಂಡAತೆ ಘೋಷಿಸಿರುತ್ತಾರೆ. ಕೇಂದ್ರ ಸರ್ಕಾರದಿಂದ ರಾಷ್ಟಿçÃಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದ ಮತ...
ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಬಿಜೆಪಿ ಆಗ್ರಹ

ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಬಿಜೆಪಿ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್‌ ಸರ್ಕಾರ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್‌ ಕಾರ್ಡ್‌ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಬೇಕು ಎಂದು ಆಗ್ರಹಿಸಿದರು. ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ...
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಸಮಾಜಸೇವಕ ಕೆ.ಎಸ್‌.ರಾಜಣ್ಣನಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಸಮಾಜಸೇವಕ ಕೆ.ಎಸ್‌.ರಾಜಣ್ಣನಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಲೆ,ಸಂಗೀತ ಕ್ಷೇತ್ರದ ಸಾಧನೆಗೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಕ್ರೀಡೆ,ಸಮಾಜ ಸೇವೆ ಕ್ಷೇತ್ರದಲ್ಲಿನ ಸಾಧನೆಗೆ ಕೆ.ಎಸ್.ರಾಜಣ್ಣ ರಾಜ್ಯ ಮಾಜಿ ಆಯುಕ್ತರು,ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ, ಕರ್ನಾಟಕ ಸರ್ಕಾರ ಇವರಿಗೆ ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಡಾ.ಜಯಕರ ಎಸ್ ಎಂ ತಿಳಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ 59ನೇ ಘಟಿಕೋತ್ಸವದ ಕುರಿತು ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು " ಬೆಂಗಳೂರು ವಿಶ್ವವಿದ್ಯಾಲಯದ 59 ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ಮಾನ್ಯ ಉನ್ನತ ಶಿಕ್ಷಣ ಸಚಿವರು ಕರ್ನಾಟಕ ಸರ್ಕಾರ,ಮತ್ತು ಸಹ-ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಧನಸಹಾಯ ಆಯೋಗದ ಉಪಾಧ್ಯಕ್ಷರು ಮತ್ತು ಅಧ್ಯಕ್ಷರು ಇಂಡಿಯನ್ ಕೌನ್ಸಿಲ್ ಆಫ್ ಸೋಷಿಯಲ್ ಸೈನ್ಸ್ ರಿಸರ್ಚ್,ನವದೆಹಲಿ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು. ಬೆಂಗಳೂರು ವಿಶ್ವವಿದ್...
ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕರ್ನಾಟಕದ ಕರಾವಳಿ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಗಳಿದ್ದು,, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಶ್ಲೇಷಿಸಿದೆ....
ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ವಿರೋಧ, 

ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ವಿರೋಧ, 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ರಾಜ್ಯ ಸರ್ಕಾರದಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆಗೆ ಸಂಬಂಧಿಸಿದಂತೆ ಸಾಧಕ-ಬಾಧಕ ಚರ್ಚಿಸಲು ಆಯೋಜಿಸಿದ್ದ ಪ್ರಾತ್ಯಕ್ಷಿಕೆಯಲ್ಲಿ ಅವರು ಪಾಲ್ಗೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗದೆ ಹೀಗೆಯೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರಾಗಿದ್ದು, ಇದು ಕನ್ನಡಿಗರಿಗಾಗಿಯೇ ಉಳಿಯಬೇಕು. ಇಲ್ಲಿ ಕನ್ನಡದವರೇ ಮೇಯರ್‌ ಆಗಬೇಕು. ಇದಕ್ಕಾಗಿ ಬೆಂಗಳೂರು ವಿಭಜನೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ವಿರೋಧಿಸುತ್ತವೆ ಎಂದು ತಿಳಿಸಿದರು. ಬಿಬಿಎಂಪಿ ಅಡಿಯಲ್ಲಿ ಸ್ಲಂ ಬೋರ್ಡ್‌, ಜಲಮಂಡಳಿ, ಬಿಎಂಟಿಸಿ ಬರುವುದಿಲ್ಲ. ಇವೆಲ್ಲವೂ ಒಂದೇ ಕಡೆ ಬಂದು, ಬಿಬಿಎಂಪಿಯೇ ನಿರ್ವಹಣೆ ಮಾಡಿದರೆ ಪ್ರತ್ಯೇಕವಾಗಿ ಐಎಎಸ್‌ ಅಧಿಕಾರಿಗಳನ್ನು ನೇಮಕ ಮಾಡುವುದು ತಪ್ಪುತ್ತದ...
ದೊಡ್ಡಬಳ್ಳಾಪುರ: ಹೆತ್ತಮ್ಮನ ಕತ್ತು ಸೀಳಿ ಕೊಂದ ಮಗ

ದೊಡ್ಡಬಳ್ಳಾಪುರ: ಹೆತ್ತಮ್ಮನ ಕತ್ತು ಸೀಳಿ ಕೊಂದ ಮಗ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ :ಹೆತ್ತ ಮಗನೆ ತನ್ನ ತಾಯಿಯ ಕತ್ತು ಸೀಳಿ ಕೊಂದಿರುವ ಘಟನೆ ದೊಡ್ಡಬಳ್ಳಾಪುರ ದಲ್ಲಿ ನಡೆದಿದೆ. ತಾಲೂಕಿನ ರಾಗರಾಳ್ಳಗುಟ್ಟೆ ಬಳಿ ಘಟನೆ ನಡೆದಿದೆ. ರತ್ನಮ್ಮ (56) ಕೊಲೆಯಾದ ತಾಯಿಯಾಗಿದ್ದು, ಮಗ ಗಂಗರಾಜು(35) ಎಂಬುವವನಿಂದ ಕೊಲೆಯಾಗಿದ್ದಾರೆ ಎನ್ನಲಾಗಿದೆ. ಸೋಮವಾರ ಬೆಳಿಗ್ಗೆ ಕುಡಿದ ಮತ್ತಿನಲ್ಲಿದ್ದ ಗಂಗರಾಜು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ತನ್ನ ತಾಯಿಯ ಕತ್ತನ್ನು ಹರಿತವಾದ ಚಾಕುವಿನಿಂದ ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ತಾಯಿ ಮತ್ತು ಮಗನ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇಂದು ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಾತಿನ ಜಗಳ ವಿಕೋಪಕ್ಕೆ ತಿರುಗಿದ್ದು ಕುಡಿದು ಮತ್ತಿನಲ್ಲಿದ್ದ ಮಗ ಗಂಗರಾಜು ತಾಯಿಯನ್ನು ಕೊಲೆ ಮಾಡಿದ್ದು, ನಂತರ ಘಟನಾ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಕೆ.ಬಾಬಾ, ಅಡಿಷನಲ್ ನಾಗೇಶ್, ಸೇರಿದಂತೆ ಬೇಟಿ ನೀಡಿ ಪರಿಶೀಲನೆ ನ...