Thursday, January 29

ರಾಜ್ಯ

ಗಣೇಶನ ನೋಡಲು ಹೋದ ಬಾಲಕಿ ವಿದ್ಯುತ್ ಸ್ಪರ್ಶಿಸಿ ಸಾವು

ಗಣೇಶನ ನೋಡಲು ಹೋದ ಬಾಲಕಿ ವಿದ್ಯುತ್ ಸ್ಪರ್ಶಿಸಿ ಸಾವು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ:: ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದ ಶ್ರೀನಿವಾಸ ಮೂರ್ತಿ ಮತ್ತು ಲಕ್ಷ್ಮಮ್ಮ ದಂಪತಿಗಳ ಮಗಳು ಚೇತನ (12) ಮೃತಪಟ್ಟ ಬಾಲಕಿ. ಭಾನುಬಾರ ಬೆಳಿಗ್ಗೆ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರತಿಷ್ಠಾನೆ ಮಾಡಿದ್ದ ಗಣಪತಿ ಬಳಿ ಆಟವಾಡುತ್ತಿದ್ದ ವೇಳೆ ಚೇತನಳಿಗೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಬಾಲಕಿ ಚೇತನಳನ್ನು ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಯಲಹಂಕದ ಸ್ಪರ್ಶ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿಜಾವ ಐದು ಗಂಟೆಗೆ ಬಾಲಕಿ ಮೃತಪಟ್ಟಿದ್ದಾಳೆ. ಚೇತನ ಕೊನಘಟ್ಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಬಾಲಕಿಯ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ...
ವಾಲ್ಮೀಕಿ, ಮುಡಾ ಹಗರಣಗಳ ವಿಷಯಾಂತರಕ್ಕಾಗಿ ನಟ ದರ್ಶನ್ ರಾಜಾತಿಥ್ಯ ಫೋಟೋ ವೈರಲ್‌?

ವಾಲ್ಮೀಕಿ, ಮುಡಾ ಹಗರಣಗಳ ವಿಷಯಾಂತರಕ್ಕಾಗಿ ನಟ ದರ್ಶನ್ ರಾಜಾತಿಥ್ಯ ಫೋಟೋ ವೈರಲ್‌?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹುಬ್ಬಳ್ಳಿ: ವಾಲ್ಮೀಕಿಹಗರಣ ಹಾಗೂ ಮುಡಾ ಹಗರಣಗಳ ವಿಷಯಾಂತರ ಮಾಡಲು ನಟ ದರ್ಶನ್‌ ಕೇಸ್‌ ಮುನ್ನೆಲೆಗೆ ತಂದು ಸರ್ಕಾರ ಪಾರಾಗುವ ಪ್ರಯತ್ನ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂಕುಚಿತ ಷಡ್ಯಂತ್ರ ನಡೆಸಿದೆ ಎಂದು ದೂರಿದ್ದಾರೆ. ಈ ಕೇಸ್‌ಗೆ ಸಂಬಂಧಿಸಿದ ಫೋಟೋಗಳನ್ನು ವೈರಲ್‌ ಮಾಡಿದೆ ಎಂದು ಆರೋಪಿಸಿರುವ ಸಚಿವ ಜೋಶಿ, ನಟ ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಫೋಟೋಗಳನ್ನು ವೈರಲ್‌ ಮಾಡಿರುವ ಬಗ್ಗೆತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು....
ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದ ‘ಅಮ್ಮು’

ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದ ‘ಅಮ್ಮು’

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಕನ್ನಡ ಚಿತ್ರರಂಗದಲ್ಲಿ ಇದೀಗ 'ಅಮ್ಮು' ಚಿತ್ರ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ನಟ ಸ್ಮೈಲ್ ಗುರು ರಕ್ಷಿತ್ ಮತ್ತು ಅಮೃತಾ ಅಭಿನಯದ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಮಹೇಶ್ ಬಾಬು ನಿರ್ದೇಶನದ 'ಅಮ್ಮು' ಟೀಸರಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. https://www.youtube.com/watch?v=VkJpLGrKEE0&t=81s
ಬಿಗ್ ಬಾಸ್ ಸ್ಟಾರ್ ತನಿಷಾ ನಿರ್ಮಾಣದ ‘ಕೋಣ’

ಬಿಗ್ ಬಾಸ್ ಸ್ಟಾರ್ ತನಿಷಾ ನಿರ್ಮಾಣದ ‘ಕೋಣ’

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬಿಗ್ ಬಾಸ್ ಸ್ಟಾರ್ ತನಿಷಾ ಇದೀಗ 'ಕೋಣ' ಸುತ್ತ ಬ್ಯುಸಿಯಾಗಿದ್ದಾರೆ. ಅವರ ನಿರ್ಮಾಣದ 'ಕೋಣ' ಸಿನಿಮಾ ತೀವ್ರ ಕುತೂಹಲ ಕೆರಳಿಸಿದೆ. ನಟ ಕೋಮಲ್ ಕುಮಾರ್ ನಟಿಸಿರುವ 'ಕೋಣ' ಚಿತ್ರ ಇದೀಗ ಚಿತ್ರೀಕರಣ ಅಂತಿಮ ಹಂತದಲ್ಲಿದೆ. ಎಸ್.ಹರಿಕೃಷ್ಣ ನಿರ್ದೇಶನದ 'ಕೋಣ' ದ್ದು, ಅದರ ಟೀಸರ್ ಬಿಡುಗಡೆಯಾಗಿದೆ. https://www.youtube.com/watch?v=jUOg0AaxE2s&t=3s
ಬೈಕ್ ಸವಾರನ ಅವಾಂತರ; ನಾಲ್ವರ ದುರ್ಮರಣ

ಬೈಕ್ ಸವಾರನ ಅವಾಂತರ; ನಾಲ್ವರ ದುರ್ಮರಣ

ಪ್ರಮುಖ ಸುದ್ದಿ, ರಾಜ್ಯ
ವಿಜಯಪುರ: ಕುಂಟೋಜಿ ಗ್ರಾಮದಲ್ಲಿ ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವಿಗೀಡಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಳಿಕೋಟೆ ಸಮೀಪದ ಗೋಟಖಂಡಕಿ ಗ್ರಾಮದ ನಿಂಗರಾಜ ಚೌಧರಿ ಎಂಬ ಯುವಕ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿದ್ದ ನಿಂಗರಾಜ, ಹಿಂಬದಿ ಸವಾರ ಅನೀಲ ಖೈನೂರ (23), ರಸ್ತೆ ಬದಿ ನಿಂತಿದ್ದ ಉದಯಕುಮಾರ ಪ್ಯಾಟಿ (19) ಹಾಗೂ ರಾಯಪ್ಪ ಬಾಗೇವಾಡಿ (24) ಎಂಬವರು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ....
ಚಿತ್ರೀಕರಣ ವೇಳೆ ಯುವಕ ಸಾವು; ನಿರ್ದೇಶಕ ಯೋಗರಾಜ್ ಭಟ್ ವಿರುದ್ದ ಎಫ್ಐಆರ್

ಚಿತ್ರೀಕರಣ ವೇಳೆ ಯುವಕ ಸಾವು; ನಿರ್ದೇಶಕ ಯೋಗರಾಜ್ ಭಟ್ ವಿರುದ್ದ ಎಫ್ಐಆರ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಉತ್ತರ ಹೊರವಲಯದ ವಿಆರ್‌ಎಲ್ ಅರೆನಾ ಬಳಿ ಸಿನಿಮಾ ಚಿತ್ರೀಕರಣ ವೇಳೆ ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಶಿವರಾಜ್ (30) ಎಂಬಾತ ಸಾವನ್ನಪ್ಪಿದ್ದು ಈ ಘಟನೆ ಹಿನ್ನೆಲೆಯಲ್ಲಿ ನಿರ್ದೇಶಕ ಯೋಗರಾಜ್ ಭಟ್ ವಿರುದ್ದ ಎಫ್ಐಆರ್ ದಾಖಲಾಗಿದೆ. ಗುರುವಾರ 'ಮನದ ಕಡಲು' ಸಿನಿಮಾದ ಚಿತ್ರೀಕರಣದ ವೇಳೆ ಸುಮಾರು 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್ ಸಾವನ್ನಪ್ಪಿದ್ದಾನೆ. ಮಾದನಾಯಕನಹಳ್ಳಿ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದಾರೆ‌. ಎಫ್‌ಐಆರ್‌ನಲ್ಲಿ ‌ಮ್ಯಾನೇಜರ್ ಸುರೇಶ್ ಅವರನ್ನು ಮೊದಲನೇ ಆರೋಪಿಯನ್ನಾಗಿ ಗುರುತಿಸುರುವ ಪೊಲೀಸರು ಯೋಗರಾಜ್ ಭಟ್ ಅವರನ್ನು ಮೂರನೇ ಆರೋಪಿಯಾಗಿ ಉಲ್ಲೇಖಿಸಿದ್ದಾರೆ. ಶೂಟಿಂಗ್ ವೇಳೆ ಸೂಕ್ತ ಮುಂಜಾಗ್ರತೆ ವಹಿಸದ ಕಾರಣ ಇವರ ಆರೋಪಿಗಳನ್ನಾಗಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಬೆಂಗಳೂರು ಗಾರ್ಬೇಜ್ ಸಿಟಿಯಾಗುತ್ತಿದೆ? ಬಿಜೆಪಿಯವರು ಏನು ಮಾಡಿದ್ದರು?

ಬೆಂಗಳೂರು ಗಾರ್ಬೇಜ್ ಸಿಟಿಯಾಗುತ್ತಿದೆ? ಬಿಜೆಪಿಯವರು ಏನು ಮಾಡಿದ್ದರು?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರು ಗಾರ್ಬೇಜ್ ಸಿಟಿಯಾಗುತ್ತಿದೆ ಎಂಬ ಬಿಜೆಪಿ ಟೀಕೆ ಬಾಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬಿಜೆಪಿ ಇರುವುದೇ ಟೀಕೆ ಮಾಡಲು, ರಾಜಕಾರಣ ಮಾಡಲು. ಈ ಸಮಸ್ಯೆಗೆ ಪರಿಹಾರ ನೀಡಲು ನಾನು ಪ್ರಯತ್ನವಾದರೂ ಮಾಡುತ್ತಿದ್ದೇನೆ ಎಂದರು. ಈ ಬಗ್ಗೆ ಅಧ್ಯಯನ ಮಾಡಲು, ಚೆನ್ನೈ, ಹೈದರಬಾದ್, ಮುಂಬೈಗೆ ಭೇಟಿ ನೀಡಿದ್ದೆ. ನಗರದ ಹೊರಗೆ ಕಸ ವಿಲೇವಾರಿಗೆ ನಾಲ್ಕು ಕಡೆಗಳಲ್ಲಿ ಜಾಗ ಹುಡುಕಲಾಗಿದೆ. ಹೀಗೆ ನನ್ನದೇ ಆದ ಪ್ರಯತ್ನ ಮಾಡುತ್ತಿದ್ದೇನೆ. ಅವರು ಏನು ಮಾಡಿದ್ದಾರೆ?' ಎಂದು ಪ್ರಶ್ನಿಸಿದರು. ಇದನ್ನೂ ಓದಿ.. ‘ಮಹಾನಗರ ಪಾಲಿಕೆ’ ಆಯುಕ್ತರ ಕಚೇರಿ ಸಮೀಪವೇ ‘ಮಹಾ ನರಕ’ ದರ್ಶನ; ಸಿಲ್ವರ್ ಜ್ಯುಬಿಲಿ ಪಾರ್ಕ್ ಅವ್ಯವಸ್ಥೆ ಬಗ್ಗೆ ಸಿಎಂಗೆ ದೂರು ಡಿಸಿಎಂ ಕೇವಲ ಪ್ರಚಾರಕ್ಕೆ ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತಿದ್ದು, ಕೆಲಸ ಆಗುತ್ತಿಲ್ಲ ಎಂಬ ಟೀಕೆ ಬಗ್ಗೆ ಕೇಳಿದಾಗ, "ನಾನು ಟೀಕೆಗಳಿಗೆ ಉತ್ತರ ಕೊಡುವುದಿಲ್ಲ. ನಮ್ಮ ಕೆಲಸಗಳೇ ನಿಮ್ಮ ಕಣ್ಣಿಗೆ ಕಾಣಲಿದೆ" ಎಂದು ತಿಳಿಸಿದರು. ಮೇಕೆದಾಟು ಯೋಜನೆ ವಿ...
ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದು ವಿಶೇಷ

ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದು ವಿಶೇಷ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಈ ಬಾರಿಯ ಗೌರಿ ಹಬ್ಬದ ದಿನದಂದು ಗಂಗೆ ಮಾತೆಗೆ ಪೂಜೆ ಸಲ್ಲಿಸುತ್ತಿರುವುದು ಬಹಳ ವಿಶೇಷವಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್, 'ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ನಾಳೆ ಉದ್ಘಾಟನೆಯಾಗುತ್ತಿದೆ. ಇಲ್ಲಿಂದ 24 ಟಿಎಂಸಿ ನೀರನ್ನು ಎತ್ತಿ ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ಉದ್ದೇಶಕ್ಕೆ ಪೂರೈಸಲಾಗುತ್ತಿದೆ. ಡಿಪಿಆರ್ ಮಾಡಿದ ಎಂಜಿನಿಯರ್ ಗಳಿಂದ ತಂತ್ರಜ್ಞರು, ಯೋಜನೆಗಾಗಿ ಜಮೀನು ನೀಡಿದ ರೈತರು ಎಲ್ಲರ ಪಾತ್ರ ಪ್ರಮುಖವಾಗಿದೆ' ಎಂದು ತಿಳಿಸಿದರು. "ಈ ಯೋಜನೆಗೆ ಬಳಸಲಾಗಿರುವ ಯಂತ್ರ, ನೀರೆತ್ತುವ ತಂತ್ರಜ್ಞಾನ ನೋಡಿದರೆ ಒಂದು ವಿಸ್ಮಯ. ಹೆಚ್ಚಿನ ಹಣ ಖರ್ಚು ಮಾಡಿ ಯೋಜನೆ ಮಾಡಲಾಗಿದ್ದು, ಅಂತರ್ಜಲ ಹೆಚ್ಚಳಕ್ಕೆ ಈ ಯೋಜನೆ ಸಹಕಾರಿಯಾಗಿದೆ" ಎಂದರು. ಈ ಯೋಜನೆಯಿಂದ ನೀರು ತರಲು ಸಾಧ್ಯವೇ ಇಲ್ಲ. ನೀರು ಬಂದರೆ ಮೀಸೆ ಬೊಳಿಸಿಕೊಳ್ಳುತ್ತೇನೆ ಎಂದೆಲ್ಲಾ ಕೆಲವರು ಟೀಕೆ ಮಾಡಿದ್ದರು. ಹೀಗಾಗಿ ನಾನು ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿ ಮೊದಲ ಹಂತದ ಕಾಮಗ...
‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಬಹುಕೋಟಿ ಕರ್ಮಕಾಂಡ ಕುರಿತಂತೆ SIT ತನಿಖೆಗೆ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ದೂರು ಕುತೂಹಲ ಕೆರಳಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಆದೇಶ ಸಂಖ್ಯೆ - ಮಮಇ- 99 ಮಮಆ 2006ರ ಅನ್ವಯ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ ಕೊಳ್ಳಲಾಗಿರುತ್ತದೆ. ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ ಗುಜರಾತಿನ ಸೂರತ್ ನಿಂದ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ನೀಡಿ ಸೀರೆಗಳನ್ನು ಕೊಳ್ಳಲಾಗ...
UPSC ಪರೀಕ್ಷೆ ದಿನದಂದೇ PSI ಪರೀಕ್ಷೆ; ಸದನದಲ್ಲಿ ಸಿಎಂ ಹೇಳೋದು ಒಂದು, ನಡೆಯಲ್ಲಿ ಮತ್ತೊಂದು?

UPSC ಪರೀಕ್ಷೆ ದಿನದಂದೇ PSI ಪರೀಕ್ಷೆ; ಸದನದಲ್ಲಿ ಸಿಎಂ ಹೇಳೋದು ಒಂದು, ನಡೆಯಲ್ಲಿ ಮತ್ತೊಂದು?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ಪರೀಕ್ಷೆ ನಡೆಯುವ ದಿನಾಂಕದಂದೇ ರಾಜ್ಯದಲ್ಲಿ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಸರ್ಕಾರವು ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಪಿಎಸ್​​​ಐ ನೇಮಕಾತಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿದೆ. ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲದ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಯುಪಿಎಸ್ಸಿ ಪರೀಕ್ಷೆ ನಡೆಯುವ ದಿನಾಂಕದಂದೇ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ. ಯುಪಿಎಸ್ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ. ಅದರಂತೆ, ಜೂನ್ 16ರಂದು ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್ 22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ. ವಿವೇಚನೆ, ಸಂವೇದನೆ ಇಲ್ಲದ ಸಿಎಂ ಸಿದ್ದರಾಮಯ್ಯ ಸರ್ಕಾರ ಪಿಎಸ್ಐ ಪರೀಕ್ಷೆಯನ್ನು ಸೆ.22ರಂದೇ ನಡೆಸುವುದಾಗಿ ಜುಲೈ 31ರಂದು ಪ್ರಕಟಿಸಿದೆ. ಈ ಮೂಲಕ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿಯಿಡುವ ಕೆಲಸ ಮಾಡಿದೆ. ಸೆ.22ರಂದು ನಿಗದಿಯಾಗಿರ...