
ರಾಹುಲ್ ಗಾಂಧಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ; ಅಶೋಕ್
ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರಿಂದಾಗಿ ಕಾಮಗಾರಿಗಳು ವಿಳಂಬವಾಗಿ ಸರ್ಕಾರ ಯಾವುದೇ ಯೋಜನೆಯನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ಹೊಸ ಕ್ರಮದಿಂದ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು.ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗ...




