Tuesday, January 27

ರಾಜ್ಯ

ಕೊಲೆ ಪ್ರಕರಣ; ನಟ ದರ್ಶನ್ ಗ್ಯಾಂಗ್‌ಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಕೊಲೆ ಪ್ರಕರಣ; ನಟ ದರ್ಶನ್ ಗ್ಯಾಂಗ್‌ಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್, ಗೆಳತಿ ಪವಿತ್ರಾ ಗೌಡ ಸಹಿತ ಎಲ್ಲಾ ಆರೋಪಿಗಳಿಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಬುಧವಾರ ಈ ಆದೇಶ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಬುಧವಾರ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾದಿಶರು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ ಆದೇಶಿಸಿದರು....
ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಜ್ಯದ19 ಪೊಲೀಸರಿಗೆ ಕೇಂದ್ರ ಸರ್ಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ. ಗಣನೀಯ ಸೇವೆಯನ್ನು ಪರಿಗಣಿಸಿ ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ರಾಷ್ಟ್ರಪತಿ ಪದಕಗಳನ್ನು ಕೇಂದ್ರ ಗೃಹ ಇಲಾಖೆ ಪ್ರಕಟಿಸುತ್ತದೆ. ಅದರಂತೆ ಈ ಬಾರಿ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ಈ ಪದಕ ಪ್ರಕಟವಾಗಿದೆ. ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ. ಎಂ.ಚಂದ್ರಶೇಖರ್, ಆಂತರಿಕಾ ಭದ್ರತಾ ವಿಭಾಗದ ಎಡಿಜಿಪಿ. ಶ್ಲಾಘನೀಯ ಸೇವಾ ಪದಕ ಪುರಸ್ಕೃತರು: ಶ್ರೀನಾಥ್ ಎಂ ಜೋಷಿ, ಎಸ್‌ಪಿ ಲೋಕಾಯುಕ್ತ ಸಿ.ಕೆ ಬಾಬಾ, ಎಸ್‌ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ರಾಮಗೊಂಡ ಬಿ ಬಸರಗಿ, ಎಎಸ್‌ಪಿ, ಬಳ್ಳಾರಿ ಜಿಲ್ಲೆ ಎಂ.ಡಿ. ಶರತ್​, ಎಸ್‌ಪಿ, ಸಿಐಡಿ, ಬೆಂಗಳೂರು ವಿ.ಸಿ. ಗೋಪಾಲರೆಡ್ಡಿ, ಡಿಸಿಪಿ, ಸಿಆರ್​, ಪಶ್ಚಿಮ, ಬೆಂಗಳೂರು ನಗರ ಗಿರಿ ಕೆ.ಸಿ, ಡಿವೈಎಸ್‌ಪಿ, ಚನ್ನಪಟ್ಟಣ ಉಪ-ವಿಭಾಗ, ರಾಮನಗರ ಜಿಲ್ಲೆ ಮುರಳೀಧರ್ ಪಿ, ಡಿವೈಎಸ್‌ಪಿ, ಚಿಂತಾಮಣಿ ಉಪ-ವಿಭಾಗ, ಚಿಕ್ಕಬಳ್ಳಾಪುರ ಜಿಲ್ಲೆ ಬಸವೇಶ್ವರ, ಅಸಿಸ್ಟೆಂಟ್ ಡೈರೆಕ್ಟರ್, ರಾಜ್ಯ ಗುಪ್ತವಾರ್ತೆ, ಕಲ...
ಕಾಂಗ್ರೆಸ್‌ನ ಕಮೀಷನ್ ಆಸೆಗಾಗಿ ಜನೌಷಧಿ ಕೇಂದ್ರಗಳು ಬಲಿ? ರಾಜ್ಯ ಸರ್ಕಾರದ ನಡೆಗೆ ಪ್ರತಿಪಕ್ಷ ಆಕ್ರೋಶ

ಕಾಂಗ್ರೆಸ್‌ನ ಕಮೀಷನ್ ಆಸೆಗಾಗಿ ಜನೌಷಧಿ ಕೇಂದ್ರಗಳು ಬಲಿ? ರಾಜ್ಯ ಸರ್ಕಾರದ ನಡೆಗೆ ಪ್ರತಿಪಕ್ಷ ಆಕ್ರೋಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು:ಕಮೀಷನ್ ಆಸೆಗಾಗಿ ರಾಜ್ಯದಲ್ಲಿ ಜನೌಷಧಿ ಕೇಂದ್ರಗಳು ಬಲಿಯಾಗುತ್ತಿವೆಯೇ? ರಾಜ್ಯ ಸರ್ಕಾರದ ನಡೆ ಬಗ್ಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ. ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್‌ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯ ಭಿನ್ನಮತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಬೆಳವಣಿಗೆಯನ್ನು ಕೇಂದ್ರದ ನಾಯಕರ ಗಮನಕ್ಕೆ ತರುತ್ತೇನೆ. ಈಗಾಗಲೇ ಕೇಂದ್ರದ ನಾಯಕರು ಇದನ್ನು ಗಮನಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಜಕೀಯ ಪಕ್ಷವಲ್ಲ. ಆದ್ದರಿಂದ ರಾಜಕೀಯದ ಸಭೆ ಮಾಡುವ ಪದ್ಧತಿ ಸಂಘದಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು. ಬಳ್ಳಾರಿ ಪಾದಯಾತ್ರೆಗೆ ಕೇಂದ್ರದ ನಾಯಕರು ಒಪ್ಪಿಗೆ ನೀಡಿದರೆ ನಾವು ಕೂಡ ಅದರಲ್ಲಿ ಭಾಗವಹಿಸುತ್ತ...
ಸಂಪನ್ಮೂಲ ಕೊರತೆಯಿಂದ ‘ಗ್ಯಾರಂಟಿ’ಗಳಿಗೆ ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ?

ಸಂಪನ್ಮೂಲ ಕೊರತೆಯಿಂದ ‘ಗ್ಯಾರಂಟಿ’ಗಳಿಗೆ ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದರು. ಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್‌ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರ...
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ; ಕೈ ವನಿತೆಯರ ಪಾಳಯದಲ್ಲಿ ರಣೋತ್ಸಾಹ.‌.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ; ಕೈ ವನಿತೆಯರ ಪಾಳಯದಲ್ಲಿ ರಣೋತ್ಸಾಹ.‌.

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇಮಕವಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಈ ಕುರಿತಂತೆ ಘೋಷಣೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ವನಿತೆಯರ ಬಳಗದಲ್ಲಿ ರಣೋತ್ಸಾಹ ಕಂಡುಬಂದಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಕ್ಕೆ ನಾಯಕಿಯರಿಂದ ಭಾರೀ ಲಾಭಿ ನಡೆದಿತ್ತಿತ್ತು. ಸ್ಥಾನದಲ್ಲಿ ಮುಂದುವರಿಯಲು ಪುಷ್ಪ ಅಮರನಾಥ್ ಅವರು ಪ್ರಯತ್ನ ನಡೆಸಿದ್ದರೆ, ಮತ್ತೊಂದೆಡೆ ಕವಿತಾ ರೆಡ್ಡಿ ಕೂಡಾ ದೆಹಲಿಯಲ್ಲಿ ಕಸರತ್ತು ನಡೆಸಿದ್ದರು. ಆದರೆ ಹೈಕಮಾಂಡ್ ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಿ ಅಚ್ಚರಿಯ ನಿರ್ಧಾರ ಪ್ರಕಟಿಸಿದೆ. ಬೆಂಗಳೂರಿನ ಆರ್‌ವಿ‌ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಸೌಮ್ಯ ರೆಡ್ಡಿ, ENVIRONMENT TECHNOLOGY ಯಲ್ಲಿ NEW YORK INSTITUTE OF TECHNOLOGYಯಿಂದ ಸ್ನಾತಕೋತ್ತರ ಪದವಿ ವ್ಯಾಸಾಂಗ ಮಾಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸೋಲಿಲ್ಲದ ಸರದಾರ ಎಂದೇ ಗುರುತಾಗಿರುವ ಸಚಿವ ರಾಮಲಿಂಗ ರೆಡ್ಡಿ ಅವರ ಪುತ್ತಿಯಾಗಿರುವ ಸೌಮ್ಯ ರೆಡ್ಡಿ, ತಾವು ಕೂಡಾ ತಂದೆಯ ಹಾದಿಯಲ್ಲೇ ಜನಸೇವೆಯಲ್ಲಿ ತೊಡಗಿದ್ದಾ...
ಕಲಬುರಗಿ: ಸೆಪ್ಟೆಂಬರ್‌ನಲ್ಲಿ ಜಯದೇವ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ: ಸೆಪ್ಟೆಂಬರ್‌ನಲ್ಲಿ ಜಯದೇವ ಆಸ್ಪತ್ರೆ ಲೋಕಾರ್ಪಣೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಲಬುರಗಿ: ಕಲಬುರಗಿಯಲ್ಲಿ ಸುಮಾರು 192 ಕೋಟಿ ರೂ. ಕೆ.ಕೆ.ಆರ್.ಡಿ.ಬಿ. ಅನುದಾನದಡಿ ನಿರ್ಮಿಸುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆಯ ಶೇ. 90ರಷ್ಟು ಕಾಮಗಾರಿ ಮುಗಿದಿದ್ದು, ಬಾಕಿ ಇರುವ ವಿದ್ಯುತ್ ಪೂರೈಕೆ ಕಾರ್ಯವು ಈ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್‌ನಲ್ಲಿ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದ ಸಚಿವರು, 371 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆ ಲೋಕಾರ್ಪಣೆಗೊಳ್ಳಿದ ಬಳಿಕ, ಜಿಮ್ಸ್‌ನಲ್ಲಿನ ಆಸ್ಪತ್ರೆಯನ್ನು ಒಂದೇ ವಾರದಲ್ಲಿ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಹೇಳಿದರು. ಕಟ್ಟಡದಲ್ಲಿ ಕಿಚನ್ ಸೇರಿದಂತೆ ಹೆಚ್ಚುವರಿ ಕಾಮಗಾರಿಗಳು ಸೇರ್ಪಡೆಯಾಗಿರುವುದರಿಂದ 72 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಜೂರಾತಿ ಪಡೆಯಲಾಗುವುದು ಎಂದರು. ಈಗಾಗಲೇ ವೈದ್ಯಕೀಯ ...
ಟಿಬಿ ಜಲಾಶಯದ ಗೇಟಿಗೆ ಹಾನಿ ಹಿನ್ನೆಲೆ; ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ಟಿಬಿ ಜಲಾಶಯದ ಗೇಟಿಗೆ ಹಾನಿ ಹಿನ್ನೆಲೆ; ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ. ತುಂಗಭದ್ರಾ ಜಲಾಶಯದ ಒಂದು ಕ್ರೆಸ್ಟ್ ಗೇಟ್ ಹಾನಿಗೊಳಗಾಗಿದ್ದು ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಹರಿ ಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನೊಂದೆಡೆ, ಕಾವೇರಿ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯತ್ತಿದೆ. ಹಾಗಾಗಿ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಭಾಗದ ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ....
ಅಕ್ಟೋಬರ್​ 3 ರಂದು ಮೈಸೂರು ದಸರಾ ಉದ್ಘಾಟನೆ; ಈಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

ಅಕ್ಟೋಬರ್​ 3 ರಂದು ಮೈಸೂರು ದಸರಾ ಉದ್ಘಾಟನೆ; ಈಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
ಮೈಸೂರು: ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್​ 3 ರಂದು ಉದ್ಘಾಟನೆಯಾಗಲಿದೆ. ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದ್ದು ನಾಡಹಬ್ಬದ ತಯಾರಿಗೆ ಮುನ್ನುಡಿ ಬರೆಯಲಾಗಿದೆ. ದಸರಾ ಜಂಬೂಸವಾರಿಯಲ್ಲಿ 13 ಗಂಡು ಮತ್ತು 05 ಹೆಣ್ಣು ಆನೆಗಳು ಭಾಗಿಯಾಗಲಿದ್ದು, ಗಜಪಡೆಯ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿಯೂ ಅಭಿಮನ್ಯುವೇ ಅಂಬಾರಿ ಹೊರಲಿದ್ದು, ಸೇರಿ 14 ಆನೆಗಳು ಭಾಗಿಯಾಗಲಿವೆ. ಈ ಗಜಪಡೆಗಳು ಎರಡು ಹಂತಗಳಲ್ಲಿ ಸಾಂಸ್ಕೃತಿಕ ನಾಗರಿಗೆ ಆಗಮಿಸಲಿದ್ದು, ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಗೋಪಿ, ಭೀಮ, ಲಕ್ಷ್ಮೀ, ಕಂಜನ್, ರೋಹಿತ್, ಏಕಲವ್ಯ ಬರಲಿವೆ. ಎರಡನೇಯ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ, ಹಿರಣ್ಯ, ಮೀಸಲು, ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲದೇವಿ ಆನೆಗಳ ಆಗಮನವಾಗಲಿದೆ. ಆಗಸ್ಟ್ 21ಕ್ಕೆ ಗಜಪಯಣ ನಿಗದಿ ಆಗಿದ್ದು, ದಸರಾ ಮಹೋತ್ಸವದ ಸುಮಾರು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿವೆ....
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ. ತುಂಗಭದ್ರಾ ಜಲಾಶಯದ ಒಂದು ಕ್ರೆಸ್ಟ್ ಗೇಟ್ ಹಾನಿಗೊಳಗಾಗಿದ್ದು ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಹರಿ ಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನೊಂದೆಡೆ, ಕಾವೇರಿ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯತ್ತಿದೆ. ಹಾಗಾಗಿ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಭಾಗದ ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ....
ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..! ಇದೇನಾ ಬ್ರ್ಯಾಂಡ್ ಬೆಂಗಳೂರು?

ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..! ಇದೇನಾ ಬ್ರ್ಯಾಂಡ್ ಬೆಂಗಳೂರು?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಜನರು ಪರದಾಡುವಂತಾಗಿದೆ. ಸೋಮವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಬಡಾವಣೆಗಳಲ್ಲಿ ಜನಜೀವನ ಏರುಪೇರಾಯಿತು. ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದಾಗಿ ಬೆಳಿಗ್ಗೆ ಕೆಲಸಕ್ಕೆಂದು ತೆರಳಿದ ಮಂದಿ ಸಂಕಷ್ಟ ಅನುಭವಿಸುವಂತಾಯಿತು. ರಾಜಧಾನಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹಾಗೂ ಬಿಬಿಎಂಪಿ ಅಧಿಕಾರಿಗಳ ಅಸಡ್ಡೆಯಿಂದಾಗಿ ಮಳೆ ಸಂದರ್ಭಗಳಲ್ಲಿ ಆಗಾಗ್ಗೆ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಈ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾತ್ಯತೀತ ಜನತಾ ದಳ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು..? ಎಂದು ಜೆಡಿಎಸ್ ಪ್ರಶ್ನಿಸಿದೆ. ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು..? ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..! ಡಿಸಿಎಂ @DKShivakumar ಅವರೇ ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು..? ಉತ್ತರಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೇ... ಕೇವಲ 3-4 ಗಂಟೆ ಸುರಿದ ಮಳ...