Saturday, August 8

ರಾಜ್ಯ

‘ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ’; ಬಿ.ಕೆ.ಹರಿಪ್ರಸಾದ್

‘ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ’; ಬಿ.ಕೆ.ಹರಿಪ್ರಸಾದ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: "ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಆದರೆ ನಾನು ಪಾಲಿಸುವ ಹಿಂದು ಧರ್ಮ ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ, ನಾರಾಯಣಗುರು, ಕನಕದಾಸ ಹಾಗೂ ಬಸವಣ್ಣ ಅವರು ಬೋಧಿಸಿದ ಧರ್ಮವೇ ಹೊರತು, ಗೋಲ್ವಾಲ್ಕರ್, ಗೋಡ್ಸೆ ಮತ್ತು ಹೆಡಗೆವಾರ್ ಪ್ರತಿಪಾದಿಸಿದ ಹಿಂದೂ ಧರ್ಮವಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಬಿಜೆಪಿಯವರು ದೇಶವನ್ನು ಹಿಮ್ಮುಖ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ. ಜನರು ಅನಕ್ಷರಸ್ಥರಾಗಿದ್ದಷ್ಟು ಅಂಧಭಕ್ತರನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ. ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ. ಜಾತಿ-ಧರ್ಮದ ಗಲಭೆಗಳಲ್ಲಿ ಜೈಲು ಸೇರುವವರು ದಲಿತರು ಮತ್ತು ಶೂದ್ರರೇ ಹೊರತು, ಲೂಟಿ ನಡೆಸುವವರು ಅಲ್ಲ" ಎಂದು ಆರೋಪಿಸಿದರು.ದೇವಾಲಯಗಳ ಲೂಟಿ ಕುರಿತು ಮಾತನಾಡಿದ ಅವರು, "ದೇವರ ಬಗ್ಗೆ ನಮಗೆ ಪಾಠ ಮಾಡುವವರು ಮೊದಲು ತಮ್ಮ ಇತಿಹಾಸವನ್ನ...
‘ನಮ್ಮ ಮೆಟ್ರೋ’ ತಾಂತ್ರಿಕ ಲೋಪಗಳಿಗೆ ಬ್ರೇಕ್ ಹಾಕಿ; ತನಿಖೆ ನಡೆಸಿ ವರದಿ ಸಲ್ಲಿಸಲು BMRCLಗೆ ಕೇಂದ್ರದ ನಿರ್ದೇಶನ

‘ನಮ್ಮ ಮೆಟ್ರೋ’ ತಾಂತ್ರಿಕ ಲೋಪಗಳಿಗೆ ಬ್ರೇಕ್ ಹಾಕಿ; ತನಿಖೆ ನಡೆಸಿ ವರದಿ ಸಲ್ಲಿಸಲು BMRCLಗೆ ಕೇಂದ್ರದ ನಿರ್ದೇಶನ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ಪದೇಪದೇ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL)ಕ್ಕೆ ನಿರ್ದೇಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋ ಸೇವೆಯಲ್ಲಿ ಆಗಾಗ್ಗೆ ತಾಂತ್ರಿಕ ದೋಷಗಳು ಕಾಣಿಸಿಕೊಂಡು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಈ ಸಂಬಂಧ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೇಂದ್ರದ ಗಮನ ಸೆಳೆದಿದ್ದರು.ಇದರ ಬೆನ್ನಲ್ಲೇ ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿರುವ ಮೆಟ್ರೋ ಸೇವೆಯ ವ್ಯತ್ಯಯಗಳ ಕುರಿತು ತನಿಖೆ ನಡೆಸಿ, ಕೈಗೊಂಡಿರುವ ಸರಿಪಡಿಸುವ ಕ್ರಮಗಳ ಸಮಗ್ರ ವರದಿ ಸಲ್ಲಿಸುವಂತೆ BMRCLಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ 'X'ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ, ತಮ್ಮ ಮನವಿಯ ಮೇರೆಗೆ ಮುಖ್ಯ ರೈಲ್ವೆ ಸುರಕ್ಷತಾ ಆಯುಕ್ತರು ಕ್...
ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ: ಅಶೋಕ್

ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ: ಅಶೋಕ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಮೂರು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಮಾಜಿ ಸಿಎಂ ಸದಾನಂದ ಗೌಡ ಹೇಳಿದ್ದಾರೆಂಬ ಆಡಿಯೋ ಬಿಜೆಪಿ ಪಾಳ್ಯದಲ್ಲಿ ತಳಮಳ ಸೃಷ್ಟಿಸಿದೆ. ಈ ಕುರಿತ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ್, ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ತಾವು ಏನೂ ಹೇಳಿಲ್ಲ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡರು ಹೇಳಿದ್ದಾರೆ. ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯವಿಲ್ಲ. ಅದನ್ನು ವರಿಷ್ಠರು ಮಾತ್ರ ತೀರ್ಮಾನಿಸುತ್ತಾರೆ' ಎಂದರು. ಎಲ್ಲರ ಮನೆಯಲ್ಲಿ ದೋಸೆ ತೂತಾದರೆ ಕಾಂಗ್ರೆಸ್‌ನವರದ್ದು ಹೆಚ್ಚು ತೂತಾಗಿರುವುದರಿಂದ ಅವರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ಅಶೋಕ್ ಟೀಕಿಸಿದರು. ಶಾಸಕ ಎಸ್‌.ಆರ್‌.ವಿಶ್ವನಾಥ್‌ ಕೆಂಪೇಗೌಡ ಜಯಂತಿ ವಿಚಾರದಲ್ಲಿ ಹೇಳಿಕೆ ನೀಡಿದ್ದಾರೆ. ಅದನ್ನು ಅಲ್ಲಿಗೆ ಮುಕ್ತಾಯ ಮಾಡಿದ್ದು, ಆ ರೀತಿ ಯಾರೂ ಮಾತಾಡಬಾರದು ಎಂದು ಸಂದೇಶ ನೀಡಲಾಗಿದೆ ಎಂದವರು...
ಕರಾವಳಿಯಲ್ಲಿ ಭಾರೀ ಮಳೆ: ಮಂಗಳೂರಿನಲ್ಲಿ ಮನೆ ಮೇಲ್ಚಾವಣಿ ಕುಸಿದು ಮೂವರು ಸಾವು

ಕರಾವಳಿಯಲ್ಲಿ ಭಾರೀ ಮಳೆ: ಮಂಗಳೂರಿನಲ್ಲಿ ಮನೆ ಮೇಲ್ಚಾವಣಿ ಕುಸಿದು ಮೂವರು ಸಾವು

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಮಂಗಳೂರಿನ ಕಂಕನಾಡಿಯಲ್ಲಿ ಹೃದಯವಿದ್ರಾವಕ ದುರಂತ ಸಂಭವಿಸಿದೆ. ನಿರಂತರ ಮಳೆಯಿಂದ ಹಳೆಯ ಹಂಚಿನ ಮನೆಯ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ಆರಂಭವಾದ ಭಾರೀ ಮಳೆ ಬುಧವಾರವೂ ಮುಂದುವರಿದಿದ್ದು, ಇದೇ ವೇಳೆ ಕಂಕನಾಡಿಯಲ್ಲಿದ್ದ ಹಳೆಯ ಮನೆ ಏಕಾಏಕಿ ಕುಸಿದಿದೆ. ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದರು.ರಕ್ಷಣಾ ಕಾರ್ಯಾಚರಣೆಯಲ್ಲಿ ಅವಶೇಷಗಳಡಿ ಸಿಲುಕಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಹಾಗೂ ಗಾಯಾಳುಗಳು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥ...
ಸಿದ್ದರಾಮಯ್ಯರನ್ನು ಸೈಡ್ ಲೈನ್ ಮಾಡಿದ್ರೆ ಜೋಕೆ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಸೃಷ್ಟಿಸಿದ ನಾಯಕನ ಎಚ್ಚರಿಕೆ

ಸಿದ್ದರಾಮಯ್ಯರನ್ನು ಸೈಡ್ ಲೈನ್ ಮಾಡಿದ್ರೆ ಜೋಕೆ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಸೃಷ್ಟಿಸಿದ ನಾಯಕನ ಎಚ್ಚರಿಕೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ ಕಡೆಗಣಿಸುವ ಯಾವುದೇ ಪ್ರಯತ್ನ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಲಿದೆ ಎಂದು ಸಚಿವ ಎನ್. ರಾಜಣ್ಣ ಎಚ್ಚರಿಕೆ ನೀಡಿದ್ದು, ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರನ್ನು ಸೈಡ್‌ಲೈನ್ ಮಾಡಿ ಪಕ್ಷ ಸಂಘಟನೆ ನಡೆಸಲು ಯತ್ನಿಸಿದರೆ ಅದು ಕಾಂಗ್ರೆಸ್‌ಗೆ ದೊಡ್ಡ ತಪ್ಪಾಗಲಿದೆ ಎಂದು ರಾಜಣ್ಣ ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಗಿದರೆ ಮಾತ್ರ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಸರ್ಕಾರದ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಅವರಿಗೆ ಸಮರ್ಪಕ ಸ್ಥಾನಮಾನ ನೀಡಿಲ್ಲ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರದ ಕಾರ್ಯಕ್ರಮಗಳಿಗೆ ನಿಗದಿತ ಪ್ರೋಟೋಕಾಲ್ ಇರುತ್ತದೆ. ಅದರಂತೆ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲಿಯಾದರೂ ಲೋಪವಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ ಅವರು ಜನಬೆಂಬಲ ಹೊಂದಿರ...
‘ಗೃಹಜ್ಯೋತಿ’ ಅಕ್ರಮ ಫಲಾನುಭವಿಗಳ ಪತ್ತೆಗೆ SIR ಮಾದರಿಯಲ್ಲಿ ಮನೆ-ಮನೆ ಪರಿಶೀಲನೆಗೆ ಚಾಲನೆ

‘ಗೃಹಜ್ಯೋತಿ’ ಅಕ್ರಮ ಫಲಾನುಭವಿಗಳ ಪತ್ತೆಗೆ SIR ಮಾದರಿಯಲ್ಲಿ ಮನೆ-ಮನೆ ಪರಿಶೀಲನೆಗೆ ಚಾಲನೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಚುನಾವಣಾ ಆಯೋಗ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುತ್ತಿರುವ ನಡುವೆಯೇ, ರಾಜ್ಯ ಸರ್ಕಾರವೂ ತನ್ನ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗೆ ಮುಂದಾಗಿದೆ. ಯೋಜನೆಯ ಅಕ್ರಮ ಫಲಾನುಭವಿಗಳನ್ನು ಗುರುತಿಸಿ ಕೈಬಿಡುವ ಉದ್ದೇಶದಿಂದ ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪರಿಶೀಲನೆ ವೇಳೆ ಮೊಬೈಲ್ ಆ್ಯಪ್ ಹಾಗೂ ಘೋಷಣಾ ಪತ್ರದ ಮೂಲಕ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸಲಾಗುತ್ತದೆ. ಈ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುವವರಾದರೆ ಬಾಡಿಗೆ ಒಪ್ಪಂದ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲನೆಗೆ ಸಿದ್ಧವಾಗಿಡುವಂತೆ ಬೆಸ್ಕಾಂ ಮನವಿ ಮಾಡಿದೆ.ಮೀಟರ್ ರೀಡರ್‌ಗಳ ಮೂಲಕ ಸ್ಥಳದಲ್ಲೇ ಪರಿಶೀಲನೆ ನಡೆಸುವುದು ಈ ಪ್ರಕ್ರಿಯೆಯ ಪ್ರಮುಖ ಭಾಗವಾಗಿದ್ದು, ಗ್ರಾಹಕರು ಹಾಗೂ ಫಲಾನುಭವಿಗಳು ಸಂಪೂರ್ಣ ಸಹಕಾರ ನೀಡುವಂತೆ ಇಂಧನ ಇಲಾಖೆ ಕೋರಿದೆ. ರಾಜ್ಯ ಸರ್...
ಮಂಗಳೂರು ಕರಾವಳಿಯಲ್ಲಿ ಆರು ಮೀನುಗಾರರ ರಕ್ಷಣೆ

ಮಂಗಳೂರು ಕರಾವಳಿಯಲ್ಲಿ ಆರು ಮೀನುಗಾರರ ರಕ್ಷಣೆ

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಸಮುದ್ರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ತೊಂದರೆಗೀಡಾದ ಮೀನುಗಾರಿಕಾ ದೋಣಿಯಿಂದ ಆರು ಮೀನುಗಾರರನ್ನು ಭಾರತೀಯ ಕರಾವಳಿ ಕಾವಲು ಪಡೆ (ICG) ಮಂಗಳವಾರ ಯಶಸ್ವಿಯಾಗಿ ರಕ್ಷಿಸಿದೆ. ತುರ್ತು ಮಾಹಿತಿ ದೊರಕಿದ ತಕ್ಷಣ ಕಾರ್ಯಾಚರಣೆಗೆ ಇಳಿದ ಕರಾವಳಿ ಕಾವಲು ಪಡೆ, ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಮೀನುಗಾರರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿತು. ಎಲ್ಲ ಆರು ಮಂದಿಯನ್ನು ಯಾವುದೇ ಅಪಾಯವಿಲ್ಲದೆ ರಕ್ಷಿಸಲಾಗಿದ್ದು, ಅಗತ್ಯ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ರಕ್ಷಣಾ ಕಾರ್ಯಾಚರಣೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಹಂಚಿಕೊಂಡಿದೆ.ಕರಾವಳಿ ಕಾವಲು ಪಡೆಯ ತ್ವರಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ.#WATCH | The Indian Coast Guard (ICG) on Tuesday rescued six fishermen from a distressed fishing boat off the Mangaluru coast amid rough sea conditions, ensuring their safe evacuation through swift search...
SIR ಸಂದರ್ಭದಲ್ಲಿ ಎಪಿಕ್ ಕಾರ್ಡ್ ಸಂಖ್ಯೆ ಸಹಿತ 11 ಮಾದರಿಯ ಗುರುತಿನ ಚೀಟಿಗಳನ್ನು ಬಳಸಬಹುದು; ಡಿಕೆಶಿ

SIR ಸಂದರ್ಭದಲ್ಲಿ ಎಪಿಕ್ ಕಾರ್ಡ್ ಸಂಖ್ಯೆ ಸಹಿತ 11 ಮಾದರಿಯ ಗುರುತಿನ ಚೀಟಿಗಳನ್ನು ಬಳಸಬಹುದು; ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತಂತೆ ಜನತೆಗೆ ಸಂದೇಶ ನೀಡಿರುವ ಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಎಲ್ಲಾ ಮತದಾರರು ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಜುಲೈ 29ರವರೆಗೆ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಬಿಎಲ್ಓಗಳು ಒಟ್ಟು ಮೂರು ಬಾರಿ ನಿಮ್ಮ ಮನೆಗಳಿಗೆ ಬಂದು ಎನ್ಯುಮರೇಷನ್ ಅರ್ಜಿ ನೀಡಲಿದ್ದಾರೆ. ಮತದಾರರು ಈ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳು ಹಾಗೂ ಹೊಸ ಫೋಟೋಗಳೊಂದಿಗೆ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸದಿದ್ದರೆ ಮತದಾನದ ಹಕ್ಕನ್ನು ಕಳೆದುಕೊಳ್ಳಬೇಕಾಗುತ್ತದೆ. ಆಗಸ್ಟ್ 5ರಂದು ಕರಡು ಮತಪಟ್ಟಿ ಪ್ರಕಟಿಸಲಾಗುವುದು ಹಾಗೂ ರಾಜಕೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿಎಲ್ಎಗಳು ಕೂಡ ಈ ಪ್ರಕ್ರಿಯೆಯಲ್ಲಿ ನೆರವು ನೀಡಲಿದ್ದಾರೆ ಎಂದವರು ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಗೆ ಜನರು ತಮ್ಮ ಎಪಿಕ್ ಕಾರ್ಡ್ ಸಂಖ್ಯೆ ಸೇರಿದಂತೆ ಜನನ ಪ್ರಮಾಣಪತ್ರ, ಪಾಸ್‌ಪೋರ್ಟ್, ಜಾತಿ ಪ್ರಮಾಣಪತ್ರ, ಅರಣ್ಯ ಹಕ್ಕು ಪತ್ರ, ಸರ್ಕಾರಿ ವಸತಿ ದಾಖಲೆ ಮತ್ತು ಪ...
ಬೆಂಗಳೂರು ಸುರಂಗ ರಸ್ತೆ ಯೋಜನೆ ವಿರುದ್ಧ ತೇಜಸ್ವಿ ಸೂರ್ಯ ಪಿಐಎಲ್

ಬೆಂಗಳೂರು ಸುರಂಗ ರಸ್ತೆ ಯೋಜನೆ ವಿರುದ್ಧ ತೇಜಸ್ವಿ ಸೂರ್ಯ ಪಿಐಎಲ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬೆಂಗಳೂರಿನ ಉತ್ತರ-ದಕ್ಷಿಣ ಸುರಂಗ ರಸ್ತೆ ಯೋಜನೆಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿರುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅರ್ಜಿಯನ್ನು ಸೋಮವಾರ ಸಲ್ಲಿಸಲಾಗಿದ್ದು, ಜುಲೈ 6ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಎಂದು ಹೇಳಿದ್ದಾರೆ. "ಈ ವಿಷಯವು ದಿನದ ಕಲಾಪದಲ್ಲಿ ಕೈಗೆತ್ತಿಕೊಳ್ಳುವ ಸಾಧ್ಯತೆ ಕಡಿಮೆ ಇದ್ದ ಕಾರಣ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಲ್ಲಿ ಸಮಯ ಕೋರಿದ್ದೆ. ಅವರು ಜುಲೈ 6, 2026ರಂದು ವಿಚಾರಣೆಗೆ ನಿಗದಿಪಡಿಸಿದ್ದಾರೆ" ಎಂದು ತೇಜಸ್ವಿ ಸೂರ್ಯ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇಖ್ರಿ ವೃತ್ತ ಮತ್ತು ಹೆಬ್ಬಾಳ ನಡುವಿನ 2.5 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ಯೋಜನೆಗೆ ಅಡಿಪಾಯ ಹಾಕಿದ ಒಂದು ದಿನದ ಬಳಿಕ ಈ ಪಿಐಎಲ್ ಸಲ್ಲಿಕೆಯಾಗಿದೆ. ಈ ಸುರಂಗ ರಸ್ತೆಗೆ ಯಾವುದೇ ಟೋಲ್ ವಿಧಿಸಲಾಗುವುದಿಲ್ಲ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನದೇ ಸಂಪನ್ಮೂಲಗ...
ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

ಪ್ರಮುಖ ಸುದ್ದಿ, ರಾಜ್ಯ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಫಾರ್ಮ್ ಸಲ್ಲಿಕೆಯನ್ನು ಈಗ ಆನ್‌ಲೈನ್‌ನಲ್ಲೇ ಸುಲಭವಾಗಿ ಪೂರ್ಣಗೊಳಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾರರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ http://voters.eci.gov.in ವೆಬ್‌ಸೈಟ್‌ಗೆ ಭೇಟಿ ನೀಡಿ, ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗಬೇಕು. ಬಳಿಕ ‘Fill Enumeration Form’ ಆಯ್ಕೆಯನ್ನು ಕ್ಲಿಕ್ ಮಾಡಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಆಧಾರ್ ಇ-ಸೈನ್ ಮೂಲಕ ಫಾರ್ಮ್ ಸಲ್ಲಿಸಬಹುದು.ಈ ಸಂಪೂರ್ಣ ಪ್ರಕ್ರಿಯೆಯನ್ನು ಕೆಲವೇ ನಿಮಿಷಗಳಲ್ಲಿ ಪೂರ್ಣಗೊಳಿಸಬಹುದಾಗಿದೆ. ಫಾರ್ಮ್ ಭರ್ತಿಗೆ ಸಂಬಂಧಿಸಿದ ಯಾವುದೇ ಗೊಂದಲಗಳಿದ್ದರೆ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮಾರ್ಗದರ್ಶಿ ವಿಡಿಯೊವನ್ನು ವೀಕ್ಷಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಮತ್ತು ಮಾಹಿತಿಯನ್ನು ನವೀಕರಿಸಿಕೊಳ್ಳಲು ನಾಗರಿಕರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕರೆ ನೀಡಲಾಗಿದೆ....