Wednesday, March 18

ರಾಜ್ಯ

ಚಿತ್ರೀಕರಣ ವೇಳೆ ಯುವಕ ಸಾವು; ನಿರ್ದೇಶಕ ಯೋಗರಾಜ್ ಭಟ್ ವಿರುದ್ದ ಎಫ್ಐಆರ್

ಚಿತ್ರೀಕರಣ ವೇಳೆ ಯುವಕ ಸಾವು; ನಿರ್ದೇಶಕ ಯೋಗರಾಜ್ ಭಟ್ ವಿರುದ್ದ ಎಫ್ಐಆರ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಉತ್ತರ ಹೊರವಲಯದ ವಿಆರ್‌ಎಲ್ ಅರೆನಾ ಬಳಿ ಸಿನಿಮಾ ಚಿತ್ರೀಕರಣ ವೇಳೆ ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಶಿವರಾಜ್ (30) ಎಂಬಾತ ಸಾವನ್ನಪ್ಪಿದ್ದು ಈ ಘಟನೆ ಹಿನ್ನೆಲೆಯಲ್ಲಿ ನಿರ್ದೇಶಕ ಯೋಗರಾಜ್ ಭಟ್ ವಿರುದ್ದ ಎಫ್ಐಆರ್ ದಾಖಲಾಗಿದೆ.ಗುರುವಾರ 'ಮನದ ಕಡಲು' ಸಿನಿಮಾದ ಚಿತ್ರೀಕರಣದ ವೇಳೆ ಸುಮಾರು 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್ ಸಾವನ್ನಪ್ಪಿದ್ದಾನೆ. ಮಾದನಾಯಕನಹಳ್ಳಿ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದಾರೆ‌.ಎಫ್‌ಐಆರ್‌ನಲ್ಲಿ ‌ಮ್ಯಾನೇಜರ್ ಸುರೇಶ್ ಅವರನ್ನು ಮೊದಲನೇ ಆರೋಪಿಯನ್ನಾಗಿ ಗುರುತಿಸುರುವ ಪೊಲೀಸರು ಯೋಗರಾಜ್ ಭಟ್ ಅವರನ್ನು ಮೂರನೇ ಆರೋಪಿಯಾಗಿ ಉಲ್ಲೇಖಿಸಿದ್ದಾರೆ. ಶೂಟಿಂಗ್ ವೇಳೆ ಸೂಕ್ತ ಮುಂಜಾಗ್ರತೆ ವಹಿಸದ ಕಾರಣ ಇವರ ಆರೋಪಿಗಳನ್ನಾಗಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಬೆಂಗಳೂರು ಗಾರ್ಬೇಜ್ ಸಿಟಿಯಾಗುತ್ತಿದೆ? ಬಿಜೆಪಿಯವರು ಏನು ಮಾಡಿದ್ದರು?

ಬೆಂಗಳೂರು ಗಾರ್ಬೇಜ್ ಸಿಟಿಯಾಗುತ್ತಿದೆ? ಬಿಜೆಪಿಯವರು ಏನು ಮಾಡಿದ್ದರು?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರು ಗಾರ್ಬೇಜ್ ಸಿಟಿಯಾಗುತ್ತಿದೆ ಎಂಬ ಬಿಜೆಪಿ ಟೀಕೆ ಬಾಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬಿಜೆಪಿ ಇರುವುದೇ ಟೀಕೆ ಮಾಡಲು, ರಾಜಕಾರಣ ಮಾಡಲು. ಈ ಸಮಸ್ಯೆಗೆ ಪರಿಹಾರ ನೀಡಲು ನಾನು ಪ್ರಯತ್ನವಾದರೂ ಮಾಡುತ್ತಿದ್ದೇನೆ ಎಂದರು.ಈ ಬಗ್ಗೆ ಅಧ್ಯಯನ ಮಾಡಲು, ಚೆನ್ನೈ, ಹೈದರಬಾದ್, ಮುಂಬೈಗೆ ಭೇಟಿ ನೀಡಿದ್ದೆ. ನಗರದ ಹೊರಗೆ ಕಸ ವಿಲೇವಾರಿಗೆ ನಾಲ್ಕು ಕಡೆಗಳಲ್ಲಿ ಜಾಗ ಹುಡುಕಲಾಗಿದೆ. ಹೀಗೆ ನನ್ನದೇ ಆದ ಪ್ರಯತ್ನ ಮಾಡುತ್ತಿದ್ದೇನೆ. ಅವರು ಏನು ಮಾಡಿದ್ದಾರೆ?' ಎಂದು ಪ್ರಶ್ನಿಸಿದರು.ಇದನ್ನೂ ಓದಿ.. ‘ಮಹಾನಗರ ಪಾಲಿಕೆ’ ಆಯುಕ್ತರ ಕಚೇರಿ ಸಮೀಪವೇ ‘ಮಹಾ ನರಕ’ ದರ್ಶನ; ಸಿಲ್ವರ್ ಜ್ಯುಬಿಲಿ ಪಾರ್ಕ್ ಅವ್ಯವಸ್ಥೆ ಬಗ್ಗೆ ಸಿಎಂಗೆ ದೂರುಡಿಸಿಎಂ ಕೇವಲ ಪ್ರಚಾರಕ್ಕೆ ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತಿದ್ದು, ಕೆಲಸ ಆಗುತ್ತಿಲ್ಲ ಎಂಬ ಟೀಕೆ ಬಗ್ಗೆ ಕೇಳಿದಾಗ, "ನಾನು ಟೀಕೆಗಳಿಗೆ ಉತ್ತರ ಕೊಡುವುದಿಲ್ಲ. ನಮ್ಮ ಕೆಲಸಗಳೇ ನಿಮ್ಮ ಕಣ್ಣಿಗೆ ಕಾಣಲಿದೆ" ಎಂದು ತಿಳಿಸಿದರು. ಮೇಕೆದಾಟು ಯೋಜನೆ ವಿ...
ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದು ವಿಶೇಷ

ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದು ವಿಶೇಷ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಈ ಬಾರಿಯ ಗೌರಿ ಹಬ್ಬದ ದಿನದಂದು ಗಂಗೆ ಮಾತೆಗೆ ಪೂಜೆ ಸಲ್ಲಿಸುತ್ತಿರುವುದು ಬಹಳ ವಿಶೇಷವಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್, 'ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ನಾಳೆ ಉದ್ಘಾಟನೆಯಾಗುತ್ತಿದೆ. ಇಲ್ಲಿಂದ 24 ಟಿಎಂಸಿ ನೀರನ್ನು ಎತ್ತಿ ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ಉದ್ದೇಶಕ್ಕೆ ಪೂರೈಸಲಾಗುತ್ತಿದೆ. ಡಿಪಿಆರ್ ಮಾಡಿದ ಎಂಜಿನಿಯರ್ ಗಳಿಂದ ತಂತ್ರಜ್ಞರು, ಯೋಜನೆಗಾಗಿ ಜಮೀನು ನೀಡಿದ ರೈತರು ಎಲ್ಲರ ಪಾತ್ರ ಪ್ರಮುಖವಾಗಿದೆ' ಎಂದು ತಿಳಿಸಿದರು."ಈ ಯೋಜನೆಗೆ ಬಳಸಲಾಗಿರುವ ಯಂತ್ರ, ನೀರೆತ್ತುವ ತಂತ್ರಜ್ಞಾನ ನೋಡಿದರೆ ಒಂದು ವಿಸ್ಮಯ. ಹೆಚ್ಚಿನ ಹಣ ಖರ್ಚು ಮಾಡಿ ಯೋಜನೆ ಮಾಡಲಾಗಿದ್ದು, ಅಂತರ್ಜಲ ಹೆಚ್ಚಳಕ್ಕೆ ಈ ಯೋಜನೆ ಸಹಕಾರಿಯಾಗಿದೆ" ಎಂದರು. ಈ ಯೋಜನೆಯಿಂದ ನೀರು ತರಲು ಸಾಧ್ಯವೇ ಇಲ್ಲ. ನೀರು ಬಂದರೆ ಮೀಸೆ ಬೊಳಿಸಿಕೊಳ್ಳುತ್ತೇನೆ ಎಂದೆಲ್ಲಾ ಕೆಲವರು ಟೀಕೆ ಮಾಡಿದ್ದರು. ಹೀಗಾಗಿ ನಾನು ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿ ಮೊದಲ ಹಂತದ ಕಾಮಗ...
‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಬಹುಕೋಟಿ ಕರ್ಮಕಾಂಡ ಕುರಿತಂತೆ SIT ತನಿಖೆಗೆ ಅವರು ಆಗ್ರಹಿಸಿದ್ದಾರೆ.ಈ ಸಂಬಂಧ ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ದೂರು ಕುತೂಹಲ ಕೆರಳಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಆದೇಶ ಸಂಖ್ಯೆ - ಮಮಇ- 99 ಮಮಆ 2006ರ ಅನ್ವಯ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ ಕೊಳ್ಳಲಾಗಿರುತ್ತದೆ. ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ ಗುಜರಾತಿನ ಸೂರತ್ ನಿಂದ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ನೀಡಿ ಸೀರೆಗಳನ್ನು ಕೊಳ್ಳಲಾಗ...
UPSC ಪರೀಕ್ಷೆ ದಿನದಂದೇ PSI ಪರೀಕ್ಷೆ; ಸದನದಲ್ಲಿ ಸಿಎಂ ಹೇಳೋದು ಒಂದು, ನಡೆಯಲ್ಲಿ ಮತ್ತೊಂದು?

UPSC ಪರೀಕ್ಷೆ ದಿನದಂದೇ PSI ಪರೀಕ್ಷೆ; ಸದನದಲ್ಲಿ ಸಿಎಂ ಹೇಳೋದು ಒಂದು, ನಡೆಯಲ್ಲಿ ಮತ್ತೊಂದು?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ಪರೀಕ್ಷೆ ನಡೆಯುವ ದಿನಾಂಕದಂದೇ ರಾಜ್ಯದಲ್ಲಿ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಸರ್ಕಾರವು ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಪಿಎಸ್​​​ಐ ನೇಮಕಾತಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿದೆ.ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲದ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಯುಪಿಎಸ್ಸಿ ಪರೀಕ್ಷೆ ನಡೆಯುವ ದಿನಾಂಕದಂದೇ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ. ಯುಪಿಎಸ್ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ. ಅದರಂತೆ, ಜೂನ್ 16ರಂದು ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್ 22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ. ವಿವೇಚನೆ, ಸಂವೇದನೆ ಇಲ್ಲದ ಸಿಎಂ ಸಿದ್ದರಾಮಯ್ಯ ಸರ್ಕಾರ ಪಿಎಸ್ಐ ಪರೀಕ್ಷೆಯನ್ನು ಸೆ.22ರಂದೇ ನಡೆಸುವುದಾಗಿ ಜುಲೈ 31ರಂದು ಪ್ರಕಟಿಸಿದೆ. ಈ ಮೂಲಕ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿಯಿಡುವ ಕೆಲಸ ಮಾಡಿದೆ. ಸೆ.22ರಂದು ನಿಗದಿಯಾಗಿರ...
ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ; ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಾಯಕರ ಸಂಕಲ್ಪ

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ; ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಾಯಕರ ಸಂಕಲ್ಪ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿಯ ರಾಜ್ಯ ಘಟಕವು ತನ್ನ ಸದಸ್ಯತ್ವ ಅಭಿಯಾನವನ್ನು ಬುಧವಾರ ಪ್ರಾರಂಭಿಸಿದೆ.ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಪ್ರತಿ ಬೂತ್‌ನಲ್ಲಿ ಕನಿಷ್ಠ 400 ಹೊಸ ಸದಸ್ಯರನ್ನು ನೇಮಕ ಮಾಡುವ ಗುರಿಯನ್ನು ಪಕ್ಷ ಹೊಂದಿದೆ ಎಂದರು.ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಣೆ ಸಹಿತ ಪಕ್ಷದ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುತ್ತೇವೆ, ಜೊತೆಗೆ ರಾಜ್ಯವನ್ನು ಮತ್ತೆ ಬಿಜೆಪಿ ತೆಕ್ಕೆಗೆ ತರುತ್ತೇವೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಸದಸ್ಯತ್ವ ಅಭಿಯಾನದ ಯಶಸ್ವಿಗಾಗಿ ಪ್ರತಿ ಬೂತ್‌ಗಳಲ್ಲಿ ಕಾರ್ಯಕರ್ತರನ್ನು ನೇಮಿಸಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು....
ರಾಯಚೂರು ಶಾಲಾ ಬಸ್‌ ಅಪಘಾತ: ಇಬ್ಬರು ಮಕ್ಕಳ ಸಾವು, 18 ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು ಶಾಲಾ ಬಸ್‌ ಅಪಘಾತ: ಇಬ್ಬರು ಮಕ್ಕಳ ಸಾವು, 18 ವಿದ್ಯಾರ್ಥಿಗಳಿಗೆ ಗಾಯ

ಪ್ರಮುಖ ಸುದ್ದಿ, ರಾಜ್ಯ
ರಾಯಚೂರು: ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್‌ ತಾಲೂಕಿನ ಬಳಿ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟು, ಒಟ್ಟು 18 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿದ್ದಾರೆ.ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.ರಾಯಚೂರಿನಲ್ಲಿ ಸಂಭವಿಸಿದ ದುರಂತದ ಕುರಿತು ಕೂಡಲೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಸಚಿವರು ಸೂಕ್ತ ಚಿಕಿತ್ಸೆ ಕೊಡಿಸಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಲು ಅಧಿಕಾರಿಗಳನ್ನು ನಿಯೋಜಿಸಲು ಸೂಚನೆ ನೀಡಿದ್ದಾರೆ.ಈ ಘಟನೆಯಲ್ಲಿ ಕುರ್ಡಿ ಗ್ರಾಮದ ಸಮರ್ಥ (7 ವರ್ಷ) ಹಾಗೂ 7 ನೇ ತರಗತಿಯ ವಿದ್ಯಾರ್ಥಿ ಶ್ರೀಕಾಂತ (12 ವರ್ಷ) ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆಯ ಸುದ್ದಿ ತಿಳಿದು ನಿಜಕ್ಕೂ ತೀವ್ರ ಬೇಸರವಾಯಿತು. ಮೃತ ವಿದ್ಯಾರ್ಥಿಗಳಿಗೆ ಸಂತಾಪವನ್ನು ಸೂಚಿಸುತ್ತೇನೆ. ಸ್ಕೂಲ್ ಬಸ್‌ನಲ್ಲಿ ಇದ್...
ಗಣೇಶ ಚತುರ್ಥಿ, ದೀಪಾವಳಿ ಹಿನ್ನೆಲೆ:  ರಾಜ್ಯಾದ್ಯಂತ 22 ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

ಗಣೇಶ ಚತುರ್ಥಿ, ದೀಪಾವಳಿ ಹಿನ್ನೆಲೆ: ರಾಜ್ಯಾದ್ಯಂತ 22 ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗೌರಿ ಗಣೇಶ ಹಬ್ಬ ಹಾಗೂ ಮುಂದಿನ ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭಗಳಲ್ಲಿ ರಜೆಗಳು, ಜನರ ಪ್ರಯಾಣ, ಓಡಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಇಲಾಖೆ ರಾಜ್ಯಾದ್ಯಂತ 22 ವಿಶೇಷ ರೈಲುಗಳನ್ನು ಪ್ರಕಟಿಸಿದೆ. ಗಣೇಶ ಚತುರ್ಥಿ ಸಂದರ್ಭದ ವಿಶೇಷ ರೈಲುಗಳು:ಸೆಪ್ಟೆಂಬರ್ 5 ರಿಂದ 7 ರವರೆಗೆ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ ನಡೆಸಲಿದೆ. ಬೆಂಗಳೂರು ಕಲಬುರಗಿ ನಡುವೆ ವಿಶೇಷ ರೈಲು ಬೆಂಗಳೂರು SMVTಯಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 7:40 ಕ್ಕೆ ಕಲಬುರಗಿತಲುಪಲಿದೆ.  ಕಲಬುರಗಿಯಿಂದ ಬೆಂಗಳೂರು: ಸೆಪ್ಟೆಂಬರ್ 6 ರಿಂದ 8 ರವರೆಗೆ ಬೆಳಿಗ್ಗೆ 9:35 ಕ್ಕೆ ಹೊರಟು ಅದೇ ದಿನ ರಾತ್ರಿ 8:00 ಗಂಟೆಗೆ ಬೆಂಗಳೂರು SMVT ತಲುಪಲಿದೆ.ದೀಪಾವಳಿ ಸಂದರ್ಭದ ವಿಶೇಷ ರೈಲುಗಳು:ಅಕ್ಟೋಬರ್ 30 ಮತ್ತು ನವೆಂಬರ್ 2 ರವರೆಗೆ ಮೈಸೂರು- ವಿಜಯಪುರ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ವಿಜಯಪುರದಿಂದ ಮೈಸೂರಿಗೆ ಹಿಂದಿರುಗುವ ರೈಲು ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಸಂಚರಿಸಲಿದೆ. ಯಶವಂತಪುರ-ಬೆಳಗಾವಿ ನಡುವೆ ಅಕ್ಟೋಬರ್ 30 ರ...
ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ; ನಿಯಮ ಮೀರಿದವರಿಗೆ ದಂಡ

ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ; ನಿಯಮ ಮೀರಿದವರಿಗೆ ದಂಡ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ ಭಾರಿಸುತ್ತಿದ್ದು ಸೂಕ್ತ ಮುನ್ನೆಚ್ಚರಿಕೆ ಕ್ರಮಕ್ಕೆ ರಾಜ್ಯಸರ್ಕಾರ ಕ್ರಮ ಕೈಗೊಂಡಿದೆ. ಜೊತೆಗೆ ನೈರ್ಮಲ್ಯ ಕಾಪಾಡದವರಿಗೆ ದಂಡವಿಧಿಸಲು ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿರುವ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಇತರ ಜಿಲ್ಲೆಗಳಲ್ಲಿ ಡಿಸಿಗಳಿಗೆ ಆದೇಶ ನೀಡಿದೆ. ಖಾಲಿ ನಿವೇಶನಗಳನ್ನು ಪರಿಶೀಲಿಸಿ ನೋಟಿಸ್‌ಗಳನ್ನು ನೀಡಬೇಕು ಹಾಗೂ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಡಿಸಿಗಳಿಗೆ ಅಧಿಕಾರ ನೀಡಿದೆ.ಯಾರಿಗೆ ಎಷ್ಟು ದಂಡ? ನಗರ ಪ್ರದೇಶದ ಮನೆಗಳಿಗೆ 400 ರೂ. ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂ. ನಗರ ಪ್ರದೇಶದ ವಾಣಿಜ್ಯ ಸ್ಥಳಗಳಿಗೆ 1,000 ರೂ. ಗ್ರಾಮೀಣ ಭಾಗಗಳ ವಾಣಿಜ್ಯ ಸ್ಥಳಗಳಿಗೆ 500 ರೂ. ನಗರ ಪ್ರದೇಶದ ನಿರ್ಮಾಣ ಸ್ಥಳ, ಖಾಲಿ ನಿವೇಶನಗಳಿಗೆ 2,000 ರೂ. ಗ್ರಾಮೀಣ ಪ್ರದೇಶದ ನಿರ್ಮಾಣ ಸ್ಥಳ, ಖಾಲಿ ನಿವೇಶನಗಳಿಗೆ 1,000 ರೂ. ಪುನರಾವರ್ತಿತ ಅಪರಾಧಗಳಿಗಾಗಿ, ಉಲ್ಲಂಘನೆಯ ಪ್ರತಿ ವಾರಕ್ಕೆ ಒಟ್ಟು ಮೊತ್ತದ 50% ಹೆಚ್ಚುವರಿ ದಂಡ. ಸೊಳ್ಳೆಗಳ ಉತ್ಪತ್ತ...
ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ; ಸಿಎಂಗೆ ಪತ್ರ ಬರೆದು ಸಿ.ಟಿ.ರವಿ ತರಾಟೆ

ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ; ಸಿಎಂಗೆ ಪತ್ರ ಬರೆದು ಸಿ.ಟಿ.ರವಿ ತರಾಟೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ಎತ್ತಿನಹೊಳೆ ಯೋಜನೆ'ಯು ಬೆಟ್ಟ ಅಗೆದು ಇಲಿ ಹಿಡಿದ ಯೋಜನೆಯಂತಾಗಿದೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಬಹಿರಂಗ ಪತ್ರ ತೀವ್ರ ಕುತೂಹಲ ಕೆರಳಿಸಿದೆ.ಎತ್ತಿನಹೊಳೆ ಯೋಜನೆ ಕುರಿತಂತೆ ತಾವು ಮತ್ತು ಉಪಮುಖ್ಯಮಂತ್ರಿಗಳು ನೀಡಿದ ಸಾರ್ವಜನಿಕ ಹೇಳಿಕೆ ಮತ್ತು ಜಾಹೀರಾತನ್ನು ನೋಡಿ, ನಮಗಿರುವ ಸಾರ್ವಜನಿಕರ ಆತಂಕವನ್ನು ದೂರ ಮಾಡಬೇಕೆಂದು ಆಗ್ರಹಿಸಿರುವ ಅವರು, ಕೆಲವು ಪ್ರಶ್ನೆಗಳನ್ನು ಸಿಎಂ ಅವರ ಮುಂದಿಟ್ಟಿದ್ದಾರೆ.ಆರಂಭದಲ್ಲಿ ಈ ಯೋಜನೆಯ ಉದ್ದೇಶವೇ ನಿರಂತರ ಬರದ ದವಡೆಗೆ ಸಿಲುಕಿರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ ಮತ್ತು ರಾಮನಗರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸುವುದು. 38 ಪಟ್ಟಣಗಳಿಗೆ, 6657 ಗ್ರಾಮಗಳಿಗೆ, 527 ಕೆರೆ ತುಂಬಿಸುವುದು, 75 ಲಕ್ಷ ಜನರಿಗೆ, ಶುದ್ಧ ಕುಡಿಯುವ ನೀರು, ಆಗಿತ್ತು. ಇದಕ್ಕಾಗಿ ಆರಂಭಿಕ ಯೋಜನೆ ಮೊತ್ತ 8,323 ಕೋಟಿ. ನಂತರ ಪರಿಷ್ಕೃತ ಮೊತ್ತ 12912 ...