
‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿತೇ ಸರ್ಕಾರ?
ಬೆಂಗಳೂರು: ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ" ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಮುಡಾ ಹಗರಣದಲ್ಲಿ ಹಿಂದಿನ ಅಧ್ಯಕ್ಷರ ಅಮಾನತು ಕುರಿತ ಸರ್ಕಾರದ ಆದೇಶ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ, 'ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತ...









