Tuesday, January 27

ರಾಜ್ಯ

ವಯನಾಡು ಸಂತ್ರಸ್ತರಿಗಾಗಿ ಮಿಡಿದ ಕರುನಾಡು ಹೃದಯಗಳು.. BTM, ಜಯನಗರ ಕ್ಷೇತ್ರಗಳಿಂದ 9 ಟ್ರಕ್‌ಗಳಲ್ಲಿ ಅಹಾರ, ಅಗತ್ಯವಸ್ತು ರವಾನೆ..

ವಯನಾಡು ಸಂತ್ರಸ್ತರಿಗಾಗಿ ಮಿಡಿದ ಕರುನಾಡು ಹೃದಯಗಳು.. BTM, ಜಯನಗರ ಕ್ಷೇತ್ರಗಳಿಂದ 9 ಟ್ರಕ್‌ಗಳಲ್ಲಿ ಅಹಾರ, ಅಗತ್ಯವಸ್ತು ರವಾನೆ..

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇರಳದ ವಯನಾಡಿನಲ್ಲಿ, ಹಾಗೂ ಕರಾವಳಿಯ ಶಿರೂರಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದ‌ ಬಡಪಾಯಿಗಳ ಬಗ್ಗೆ ಬೆಂಗಳೂರಿನ ಬಿಟಿಎಂ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರಗಳ ಜನರು ಅನುಕಂಪ ತೋರಿದ್ದಾರೆ. ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಯನಾಡು ಮತ್ತು ಶಿರೂರು ಸಂಭವಿಸಿದ ಭೂಕುಸಿತದ ದುರಂತಕ್ಕೆ ಸ್ಪಂದಿಸಲು ಪರಿಹಾರ ಸಾಮಾಗ್ರಿಗಳನ್ನು ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಸಾರಿಗೆ ಮತ್ತು ಮುಜರಾಯಿ‌ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತಿಯಲ್ಲಿ, ಆಹಾರ, ಸಾಮಾಗ್ರಿಗಳನ್ನು ಹೊತ್ತ ಸುವಾರು 9 ಟ್ರಕ್ ಗಳಿಗೆ ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಚಾಲನೆ ನೀಡಿದರು. ಸದರಿ ಟ್ರಕ್ ಗಳೊಂದಿಗೆ ಜಯನಗರದ ಮಾಜಿಬಶಾಸಕಿ ಸೌಮ್ಯ ರೆಡ್ಡಿ, ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಮಾಜಿ ಕಾರ್ಪೊರೇಟರ್ ನಾಗರಾಜು, ಮಂಜುನಾಥ್‌ ಅವರನ್ನೊಳಗೊಂಡ ನಾಯಕರ ತಂಡ ಈ ಸಾಮಾಗ್ರಿಗಳ ಜೊತೆ ತೆರಳಿದೆ. ಕರ್ನಾಟಕದ ಶಿರೂರು ಮತ್ತು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ಪ್ರವಾಹದ ದುರಂತಕ್ಕೆ ನೂರಾರು ಜನರು ತಮ್ಮ ಪ್ರಾಣಗಳನ್ನು ಕಳೆದುಕೊಂಡಿದ್ದು, ಅಪಾರ ಆಸ್ತಿಪಾಸ್ತ...
ಮಂಗಳೂರಿನಲ್ಲಿ ವಾಹನ ಚಾಲಕರು ಗಮನಿಸಲೇಬೇಕು.. ಕರಾವಳಿಯ ಈ ಮಾರ್ಗಗಳಲ್ಲಿ ಗರಿಷ್ಟ ವೇಗದ ಮಿತಿ ನಿಗದಿ

ಮಂಗಳೂರಿನಲ್ಲಿ ವಾಹನ ಚಾಲಕರು ಗಮನಿಸಲೇಬೇಕು.. ಕರಾವಳಿಯ ಈ ಮಾರ್ಗಗಳಲ್ಲಿ ಗರಿಷ್ಟ ವೇಗದ ಮಿತಿ ನಿಗದಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು, ಭಾರೀ‌ ಮಳೆ ಹಾಗೂ ಸರಣಿ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳಲ್ಲಿ ವಾಹನಗಳ ವೇಗದ ಮಿತಿಯನ್ನು‌ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭುಕುಸಿತದಿಂದಾಗಿ ಹಾನಿಯ ಹಿನ್ನೆಲೆಯಲ್ಲಿ ಹಾಗೂ ಅಪಘಾತಗಳನ್ನು ನಿಯಂತ್ರಿಸುವ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ನಿಯಮವನ್ನು ತಾತ್ಕಾಲಿಕವಾಗಿ ಜಾರಿಗೊಳಿಸಿದೆ. ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು ಹೊರವಲಯದ ಸುರತ್ಕಲ್ ಮತ್ತು ತೊಕ್ಕೊಟ್ಟು ನಡುವೆ ಹಾಗೂ ರಾಷ್ಟ್ರೀಯ ಹೆದ್ದಾರಿ-73ರ ಬಿ.ಸಿ. ರೋಡ್ ಮತ್ತು ನಂತೂರು ನಡುವೆ ವಾಹನಗಳ ವೇಗದ ಮಿತಿ ಗಂಟೆಗೆ 40 ಕಿಮೀ ನಿಗದಿಪಡಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ....
ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೂಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಕೈಗೊಂಡಿರುವಂತೆಯೇ, ಮತ್ತೊಂದೆಡೆ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ ಖಂಡಿಸಿ ಬಳ್ಳಾರಿ ಚಲೋಗೆ ಬಿಜೆಪಿ ತಯಾರಿ ನಡೆಸಿದೆ. ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ತಯಾರಿ ನಡೆಸಿದ್ದು ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಅಕ್ರಮಗಳನ್ನು ಖಂಡಿಸಿ ಸದ್ಯದಲ್ಲೇ ಬಳ್ಳಾರಿಯಲ್ಲಿ ಈ ಬೃಹತ್ ಸಮಾವೇಶ ನಡೆಸಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅವರು ಈ ಸಂಬಂಧ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿ ಭಾಗದ ಪ್ರಭಾವಿ ನಾಯಕ ಶ್ರೀರಾಮುಲು ಬೆಂಬಲಿಗರು ಕೂಡಾ ಬಳ್ಳಾರಿ ಚಲೋ ನಡೆಸುವ ತಯಾರಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಶ್ರೀರಾಮುಲು, ಬಳ್ಳಾರಿ ಭಾಗದಲ್ಲಿ ಮತ್ತೊಮ್ಮೆ ಪಾದಯಾತ್ರೆ ನಡೆಸಲು ತಮ್ಮಪಕ್ಷ ಉತ್ಸುಕವಾಗಿದೆ ಎಂದ...
‘ಮೈಸೂರು ಪಾದಯಾತ್ರೆ’ ವೇಳೆ ಬಿಜೆಪಿ ಕಾರ್ಯಕರ್ತೆ ಸಾವು..

‘ಮೈಸೂರು ಪಾದಯಾತ್ರೆ’ ವೇಳೆ ಬಿಜೆಪಿ ಕಾರ್ಯಕರ್ತೆ ಸಾವು..

ಪ್ರಮುಖ ಸುದ್ದಿ, ರಾಜ್ಯ
ರಾಮನಗರ: ಮುಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸಿತ್ತಿರುವ ಪಾದಯಾತ್ರೆ ನಡುವೆ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಜೆಪಿ- ಜೆಡಿಎಸ್​ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ ನಡೆಸತ್ತಿದ್ದು, ಮೂರನೇ ದಿನವಾದ ಸೋಮವಾರ ಈ ಜಾಥಾ ರಾಮನಗರ ಜಿಲ್ಲೆ ಪ್ರವೇಶಿಸಿದೆ. ಚನ್ನಪಟ್ಟಣದಲ್ಲಿ ಪಾದಯಾತ್ರೆಯಲ್ಲಿ ನಡೆಯುತ್ತಿರುವ ವೇಳೆ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಬಸವನಗುಡಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಅವರು ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದು, ಕೂಡಲೇ ಚನ್ನಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಾಗಲೇ ಅವರು ಗೌರಮ್ಮ ಕೊನೆಯುಸಿರೆಳೆದಿದ್ದಾರೆ. ಕಾರ್ಯಕರ್ತೆಯ ನಿಧನಕ್ಕೆ ಬಿಜೆಪಿ-ಜೆಡಿಎಸ್ ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ....
ಯಾದಗಿರಿ PSI ಸಾವಿನ ಪ್ರಕರಣದ ಬೆನ್ನಲ್ಲೇ ಇತ್ತ ಬೆಂಗಳೂರು CCB ಅಧಿಕಾರಿ ಸಾವಿಗೆ ಶರಣು

ಯಾದಗಿರಿ PSI ಸಾವಿನ ಪ್ರಕರಣದ ಬೆನ್ನಲ್ಲೇ ಇತ್ತ ಬೆಂಗಳೂರು CCB ಅಧಿಕಾರಿ ಸಾವಿಗೆ ಶರಣು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವಾಗಲೇ ಇತ್ತ ರಾಜಧಾನಿ‌ ಬೆಂಗಳೂರು ಬಳಿ ಪೊಲೀಸ್ ಇನ್‌ಸ್ಪೆಕ್ಟರ್ ಸಾವಿಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮೃತ ಅಧಿಕಾರಿ ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಸಾವಿಗೆ ಕಾರಣ ಏನೆಂಬ ಬಗ್ಗೆ ಏನೂ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ....
PSI ಪರುಶುರಾಮ್ ಶಂಕಾಸ್ಪದ ಸಾವು ಸಿಬಿಐ ತನಿಖೆಗೆ ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯ

PSI ಪರುಶುರಾಮ್ ಶಂಕಾಸ್ಪದ ಸಾವು ಸಿಬಿಐ ತನಿಖೆಗೆ ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿ ಪಿ.ಎಸ್.ಐ.ಪರುಶುರಾಮ್ ಶಂಕಾಸ್ಪದ ಸಾವು ಕುರಿತು ಸಿಬಿಐ ತನಿಖೆಗೆ ವಹಿಸಬೇಕೆಂದು ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯಿಸಿದೆ. ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ಕ್ರಾಂತಿರಾಜು, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಚಿದರಹಳ್ಳಿ ಮಹಾದೇವಸ್ವಾಮಿ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿಯ ವಿ.ಗಿರಿಕುಮಾರ್, ಹಿರಿಯ ಹೋರಾಟಗಾರರಾದ ಉಮಾಶಂಕರ್, ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಬಿ.ದೇವರಾಜ್ ರವರು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ,  ಸ್ವಾತಂತ್ರ್ಯ ಬಂದ 77ವರ್ಷಗಳು ಕಳೆದರು ಇಂದು ಸಹ ದಲಿತರ ಮೇಲೆ ಜಾತಿನಿಂದನೆ, ದೌರ್ಜನ್ಯ ನಡೆಯುತ್ತಿದೆ. ಇತ್ತಿಚೇಗೆ ರಾಜ್ಯದಲ್ಲಿ ದಲಿತ ಸಮುದಾಯದ ಅಧಿಕಾರಿಗಳು ಭ್ರಷ್ಟಚಾರದ ವಿರುದ್ದ ಸೆಣಸಲು ಆಗದೇ ಸಾವಿಗೆ ಶರಣುಗಾತ್ತಿದ್ದಾರೆ ಎಂದು‌ಕಳವಳ ವ್ಯಕ್ತಪಡಿಸಿದರು. ಯಾದಗಿರಿ ಪೊಲೀಸ್ ಠಾಣೆ ಪಿ.ಎಸ್.ಐ. ಪರುಶುರಾಮ್ ಶಂಕಸ್ಪಾದ ಸಾವು ಸಂಭವಿಸಿದ ಕಾರಣ ಕುರಿತು ಪರುಶುರಾಮ್ ರವರ ಪತ್ನಿ ಶ್ವೆತ್ರಾ ರವರು ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ಮತ್ತ...
‘ಬಿಜೆಪಿ ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿರುವವರೆಲ್ಲರೂ ಭ್ರಷ್ಟರೇ’; ರಾಮಲಿಂಗಾ ರೆಡ್ಡಿ

‘ಬಿಜೆಪಿ ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿರುವವರೆಲ್ಲರೂ ಭ್ರಷ್ಟರೇ’; ರಾಮಲಿಂಗಾ ರೆಡ್ಡಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಮನಗರ: ಭಾರತೀಯ ಜನತಾ ಪಕ್ಷ. ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿ ಇರುವವರೆಲ್ಲರೂ ಭ್ರಷ್ಟರೇ ಆಗಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ – ಜೆಡಿಎಸ್ ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಎಂದರೆ ಭ್ರಷ್ಟ ಜನತಾ ಪಕ್ಷ. ಭ್ರಷ್ಟಾಚಾರದ ಗಂಗೋತ್ರಿ ಬಿಜೆಪಿ. ಅಳ್ಲಿರುವವರೆಲ್ಲ ಭ್ರಷ್ಟರೇ, ಅವರನ್ನು ಕಡು ಭ್ರಷ್ಟರು ಎಂದರೆ ತಪ್ಪಿಲ್ಲ ಎಂದರು. ಭ್ರಷ್ಟರಲ್ಲೇ ಅತಿ ಭ್ರಷ್ಟರು ಇರುವುದು ಬಿಜೆಪಿ ಪಕ್ಷದಲ್ಲಿ, ಹಾಗಾಗಿ ಅದೊಂದು ಭ್ರಷ್ಟಾಚಾರದ ಗಂಗೋತ್ರಿ. ಬಿಜೆಪಿಯೇತರ ಪಕ್ಷಗಳಲ್ಲಿದ್ದ ಭ್ರಷ್ಟರನ್ನೆಲ್ಲ ಐಟಿ, ಇಡಿ ಮೂಲಕ ಹೆದರಿಸಿ, ಬೆದರಿಸಿ ಬಿಜೆಪಿಗೆ ಸೇರಿಸಿಕೊಂಡು ಹಲವು ಹುದ್ದೆಗಳನ್ನು ನೀಡಿದ್ದಾರೆ. ಇಂತಹ ಭ್ರಷ್ಟರೆಲ್ಲ ಸೇರಿ ಅದು ಭ್ರಷ್ಟರ ಪಕ್ಷ ಆಗಿದೆ. ಅಂತಹ ಭ್ರಷ್ಟರು ಈಗ… pic.twitter.com/NW8KtwNhbR — Karnataka Congress (@INCKarnataka) August 4, 2024 ದೇಶದಲ್ಲಿ ಭ್ರಷ್ಟಾಚ...
ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ನಾಯಕರು ತಮ್ಮ ಮಕ್ಕಳನ್ನು ರಾಜಕೀಯವಾಗಿ ಉಳಿಸಲು ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆ" ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ವ್ಯಾಖ್ಯಾನಿಸಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಭಾನುವಾರ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು "ಪ್ರಜ್ವಲ್‌ ರೇವಣ್ಣ ಪ್ರಕರಣ ಹಾಗೂ ಹಲವಾರು ಪ್ರಕರಣಗಳಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪಿತೂರಿಯನ್ನು ದೇಶದ ಜನ ಗಮನಿಸಿದ್ದಾರೆ. ನಾವು ಜನರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ" ಎಂದರು. "ಈ ಹಿಂದೆ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದ ಬಿಜೆಪಿ ಈಗಲೂ ಅದೇ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಗಿದೆ" ಎಂದು ಹೇಳಿದರು. '2023ರ ವಿಧಾನಸಭೆ ಚುನಾವಣೆ ಉಳ್ಳವರ ಮತ್ತು ಇಲ್ಲದವರು ನಡುವಿನ ಹೋರಾಟವಾಗಿತ್ತು. ...
ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ; ಪರಮೇಶ್ವರ್ ವ್ಯಂಗ್ಯ

ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ; ಪರಮೇಶ್ವರ್ ವ್ಯಂಗ್ಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಮನಗರ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹುನ್ನಾರವನ್ನು ಜನಸಾಮಾನ್ಯರಿಗೆ ನಾವು ತಿಳಿಸಬೇಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಪರಮೇಶ್ವರ್, ದಾರಿ ಉದ್ದಕ್ಕೂ ಅನೇಕ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ ಹಿಂದಕ್ಕೆ ಹೋಗಿದೆ ಪ್ರಾದೇಶಿಕ ಪಕ್ಷ ಜೆಡಿಎಸ್ ಮುಂದಕ್ಕೆ ಬಂದಿದೆ. ಮೈಸೂರ್ ಚಲೋ ಪಾದಯಾತ್ರೆ ಮಾಡಬಾರದು ಎಂದು ರಾಜಾರೋಷವಾಗಿ ಹೇಳಿದವರ ಫೋಟೋ ಈಗ ಮುಂದೆ ಬಂದಿದೆ. ಪಾದಯಾತ್ರೆ ಮಾಡಲೇಬೇಕು ಎಂದು ಘಂಟಾಘೋಷವಾಗಿ ಹೇಳಿದ ಬಿಜೆಪಿಯ ರಾಜ್ಯ ಅಧ್ಯಕ್ಷರ ಫೋಟೋ ಹಿಂದಕ್ಕೆ ಹೋಗಿದೆ ಎಂದು ಟೀಕಿಸಿದರು. ಭ್ರಷ್ಟಾಚಾರಿಗಳ ಭ್ರಷ್ಟಾಚಾರದ ಯಾತ್ರೆ ಎಂದು ಬಿಜೆಪಿಯವರೇ ಹೇಳಿದ್ದಾರೆ. ಸತ್ಯವನ್ನು ಮರೆಮಾಚಲು ಎರಡು ಪಕ್ಷಗಳು ಹೊರಟಿವೆ. ನಾಲ್ಕು ವರ್ಷ ಕರ್ನಾಟಕದಲ್ಲಿ ಭ್ರಷ್ಟ ಆಡಳಿತ ನಡೆಸಿ, 40% ಕಮಿಷನ್ ತಿಂದ ನಿಮಗೆ ಕರ್ನಾಟಕದ ಜನತೆ 2023ರ ಚುನಾವಣೆ...
ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ, ಜೆಡಿಎಸ್‌ನ ದ್ವಂದ್ವ ನಿಲುವಿನ ಪಾದಯಾತ್ರೆಯಿಂದ ಬೇಸತ್ತ ಹಳೇ ಮೈಸೂರು ಭಾಗದ ಆ ಎರಡೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ‌ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ, ಜೆಡಿಎಸ್ ನ ಮೈಸೂರು ಚಲೋ ಪಾದಯಾತ್ರೆಯ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮುಂಚಿನ ದಿನ ರಾತ್ರಿ ಹೇಳಿಕೆ ನೀಡಿದ್ದ, ಪೆನ್ ಡ್ರೈವ್ ಪ್ರಕರಣದಲ್ಲಿ ತಮ್ಮ ಕುಟುಂಬದ ಸರ್ವ ನಾಶ ಮಾಡಿದವನ ಸಭೆಗೆ ನಾನು ಹೋಗಬೇಕೇ ಎಂದು ರಾತ್ರಿ ಪ್ರಶ್ನಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ಬೆಳಗಾಗುವುದರೊಳಗೆ ತಮ್ಮ ನಿಲುವು ಬದಲಿಸಿದ್ದಾರೆ. ದಿಢೀರ್ ಆಗಿ ಬಂದು ಪಾದಯಾತ್ರೆಯ ನೇತ್ರತ್ವ ವಹಿಸಿದ್ದಾರೆ. ಮಂತ್ರಿ ಪದವಿಯಿಂದ ಕಿತ್ತು ಹಾಕುವುದಾಗಿ ಅಮಿತ್ ಶಾ ಬೆದರಿಕೆ ಹಾಕಿರಬೇಕು. ಸಿಕ್ಕ ಒಂದು ಸಚಿವ ಪದವಿ ಕೈಬಿಡುವ ಭಯದಲ್ಲಿ ಕುಮಾರಸ್ವಾಮಿ ಅವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮಂಜುನಾಥ ಭಂಡಾರಿ ಅವರು ಟೀಕಿಸಿದ್ದಾರೆ. ಇಂಥ ದ್ವಂದ್ವ ನಿಲುವಿನ ವ್ಯಕ್ತಿಯನ್ನು ನಂಬುವುದು ಹೇಗೆ..? ...