Tuesday, March 17

ರಾಜ್ಯ

ಪ್ರಾಸಿಕ್ಯೂಷನ್ ಅನುಮತಿ ವಿಚಾರ; ಇದೀಗ ಹೆಚ್ಡಿಕೆ, ಜೊಲ್ಲೆ, ನಿರಾಣಿ ವಿರುದ್ದದ ಪ್ರಕರಣಗಳು ಮುಂಚೂಣಿಗೆ

ಪ್ರಾಸಿಕ್ಯೂಷನ್ ಅನುಮತಿ ವಿಚಾರ; ಇದೀಗ ಹೆಚ್ಡಿಕೆ, ಜೊಲ್ಲೆ, ನಿರಾಣಿ ವಿರುದ್ದದ ಪ್ರಕರಣಗಳು ಮುಂಚೂಣಿಗೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಹಾಗೂ ಹಿಂದಿನ ಬಿಜೆಪಿ ಸರ್ಕಾರದದಲ್ಲಿ ಸಚಿವರಾದ ಅಗಿದ್ದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಅವರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವ ಪೊಲೀಸ್ ಆಫೀಸರ್ ಕೂಡ ಅನುಮತಿ ಕೇಳದಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮದ ಹಿಂದಿನ ಅಜೆಂಡಾ ಏನು ಎಂದು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ.ಮುಡಾ ನಿವೇಶನ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ್ ರೆಡ್ಡಿ ವಿರುದ್ದದ ಪ್ರಕರಣಗಳು ಮುನ್ನಲೆಗೆ ಬಂದಿವೆ. ಈ ನಾಯಕರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ ಹಾಗೂ ಕಂದಾಯ ಮಂತ್ರಿ ಕೃಷ್ಣಬೈರೇಗೌಡ ಹೇಳಿದ್ದಾರೆ.ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈ ನಾಯಕರು ರಾಜ್ಯಪಾಲರ ಕ್ರಮದ ಬಗ್ಗೆ ಆಕ್ಷೇಪ ...
ಸಿಎಂ ವಿರುದ್ದದ ಪ್ರಾಸಿಕ್ಯೂಷನ್; ಹೈಕೋರ್ಟ್‌ನಲ್ಲಿ ತಡೆ ಸಿಗುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರು

ಸಿಎಂ ವಿರುದ್ದದ ಪ್ರಾಸಿಕ್ಯೂಷನ್; ಹೈಕೋರ್ಟ್‌ನಲ್ಲಿ ತಡೆ ಸಿಗುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ನಿಯಮ ಪಾಲಿಸದೆ ಇದ್ದರೂ ಅನುಮತಿ ನೀಡಿದ್ದಾರೆ. ಹಾಗಾಗಿ ಈ ಪ್ರಕರಣ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ. ಪ್ರಕರಣ ವಿಚಾರಣೆಗೆ ಹೋದ ತಕ್ಷಣ ಇದಕ್ಕೆ ತಡೆಯಾಜ್ಞೆ ಸಿಗುತ್ತದೆ ಎಂದು ಬಿ.ಎಲ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಲ್. ಶಂಕರ್, ರಾಜಕೀಯ ಪ್ರೇರಿತ ನಡೆಯುವುದಕ್ಕೆ ಸಾಕಷ್ಟು ಉದಾಹರಣೆಗಳು ದೊರೆಯುತ್ತವೆ. ಎಲ್ಲಾ ನಿಯಮಗಳನ್ನು ಪಾಲಿಸಿ ಪ್ರಕರಣಕ್ಕೆ ಅನುಮತಿ ನೀಡಿ ಎಂದು ಕೇಳಿದಾಗ ರಾಜ್ಯಪಾಲರು ಅನುಮತಿ ನೀಡಿರಲಿಲ್ಲ. ಆದರೆ ಈಗ ನಿಯಮ ಪಾಲಿಸದೆ ಇದ್ದರೂ ಅನುಮತಿ ನೀಡಿದ್ದಾರೆ ಎಂದು ದೂರಿದ್ದಾರೆ.ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತನಿಖೆಗೆ ಅನುಮತಿ ನೀಡಿ ಎಂದು ಈ ಹಿಂದೆ ಕೇಳಿರುವ ನಾಲ್ಕು ಪ್ರಕರಣಗಳು ನಿಮ್ಮ ಮುಂದೆ ಬಾಕಿ ಇವೆ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ್ ರೆಡ್ಡಿ ಅವರ ಮೇಲೆ...
‘ಸಿಎಂ ವಿರುದ್ದದ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿ ರೀತಿ ಸರಿಯಿಲ್ಲ’; ಮಾಜಿ ಪ್ರಾಸಿಕ್ಯೂಟರ್ ಹೇಳೋದು ಹೀಗೆ..!

‘ಸಿಎಂ ವಿರುದ್ದದ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿ ರೀತಿ ಸರಿಯಿಲ್ಲ’; ಮಾಜಿ ಪ್ರಾಸಿಕ್ಯೂಟರ್ ಹೇಳೋದು ಹೀಗೆ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ವಿರುದ್ದ ಟಿ.ಜೆ.ಅಬ್ರಾಹಿಂ ಎನ್ನುವ ವ್ಯಕ್ತಿ ಲೋಕಾಯುಕ್ತದಲ್ಲಿ ದೂರನ್ನು ದಾಖಲಿಸುತ್ತಾರೆ. ಅದರ ಪ್ರಕಾರ ಪೊಲೀಸರು ಇದರಲ್ಲಿ ಅನುಮತಿ ಪಡೆಯಬೇಕೆ ಹೊರತು ಬೇರೆಯವರು ಪಡೆಯುವಂತಿಲ್ಲ ಎಂದು ಮಾಜಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಚಂದ್ರಮೌಳಿ ಹೇಳಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಮೌಳಿ, ದೂರುದಾರ ಟಿ.ಜೆ.ಅಬ್ರಾಹಿಂ ಎನ್ನುವ ವ್ಯಕ್ತಿ ಲೋಕಾಯುಕ್ತದಲ್ಲಿ ದೂರನ್ನು ದಾಖಲಿಸುತ್ತಾರೆ. ಅದರ ಪ್ರಕಾರ ಪೊಲೀಸರು ಇದರಲ್ಲಿ ಅನುಮತಿ ಪಡೆಯಬೇಕೆ ಹೊರತು ಬೇರೆಯವರು ಪಡೆಯುವಂತಿಲ್ಲ. ಎಲ್ಲಿಯೂ ದೂರನ್ನು ದಾಖಲಿಸದೆ ಸೀದಾ ರಾಜ್ಯಪಾಲರ ಭವನದ ಕದ ತಟ್ಟುತ್ತಾರೆ. ರಾಜ್ಯಪಾಲರ ಬಳಿ ದೂರನ್ನು ದಾಖಲಿಸುವ ಮೊದಲು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಬೇಕು. ಹಾಗೂ ಪೊಲೀಸರ ಬಳಿ ನನಗೆ ನ್ಯಾಯ ದೊರಕುತ್ತಿಲ್ಲ ನನ್ನ ಬಳಿ ಅಗತ್ಯ ದಾಖಲೆಗಳಿವೆ. ನಾನು ಈ ಪ್ರಕರಣವನ್ನು ಸಾಬೀತುಪಡಿಸುತ...
ಕರ್ನಾಟಕದಲ್ಲಿ ರಾಜ್ಯಪಾಲರ ಹುದ್ದೆ ಮಹತ್ವ ಕಳೆದುಕೊಂಡಿತೇ?

ಕರ್ನಾಟಕದಲ್ಲಿ ರಾಜ್ಯಪಾಲರ ಹುದ್ದೆ ಮಹತ್ವ ಕಳೆದುಕೊಂಡಿತೇ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಕರ್ನಾಟಕದಲ್ಲಿ ರಾಜ್ಯಪಾಲರ ಹುದ್ದೆ ಮಹತ್ವ ಕಳೆದುಕೊಂಡಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ವಿ.ಆರ್.ಸುದರ್ಶನ್ ಹೇಳಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕರ್ನಾಟಕದ ರಾಜ್ಯಪಾಲರು ತಮ್ಮ ಹುದ್ದೆಯ ಮಹತ್ವವನ್ನು ಕಡಿಮೆ ಮಾಡುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆಡಳಿತ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ ಎಂದು ದೂರಿದರು.ರಾಜ್ಯಪಾಲರು ತಮ್ಮ ಹುದ್ದೆಯಲ್ಲಿ ಮುಂದುವರೆಯುವಂತಹ ಯಾವುದೇ ಹಕ್ಕು ಮತ್ತು ಗೌರವವನ್ನು ಉಳಿಸಿಕೊಂಡಿಲ್ಲ. ಕೂಡಲೇ ರಾಷ್ಟ್ರಪತಿಗಳು ರಾಜ್ಯಪಾಲರ ಅಧಿಕಾರವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಗ್ರಹಿಸುತ್ತದೆ ಎಂದ ಸುದರ್ಶನ್, ರಾಜ್ಯ ಹಾಗೂ ಕೇಂದ್ರ ಬಿಜೆಪಿಯ ಪ್ರಭಾವಕ್ಕೆ ಒಳಗಾಗಿ ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕವಾಗ...
ಅತ್ಯಾಚಾರ ಕೊಲೆ ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕು; ಆಶಾ ಕಾರ್ಯಕರ್ತೆಯರ ಸಂಘ

ಅತ್ಯಾಚಾರ ಕೊಲೆ ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕು; ಆಶಾ ಕಾರ್ಯಕರ್ತೆಯರ ಸಂಘ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೋಲ್ಕತ್ತಾದ ಆರ್ ಜಿ ಕರ್ ಕಾಲೇಜು ಮತ್ತು ವೈದ್ಯಕೀಯ ಆಸ್ಪತ್ರೆಯಲ್ಲಿ ತರಬೇತಿ ನಿರತ ಮಹಿಳಾ ವೈದ್ಯೆಯ ಮೇಲೆ ನಡೆದ ಘೋರ ಅತ್ಯಾಚಾರ ಹಾಗೂ ಕೊಲೆಯನ್ನು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಖಂಡಿಸಿದೆ.  ಇಡೀ ದೇಶವನ್ನೇ ಬೆಚ್ಚಿ ಬೆಳೆಸುವ ಈ ಘಟನೆ ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸುವಂತೆ ಮಾಡಿದೆ ಎಂದು ಸಂಘ ಹೇಳಿದೆ.ನಮ್ಮ ಸಮಾಜವು ಇಂದು ಅತ್ಯಂತ ತೀವ್ರ ಸಾಂಸ್ಕೃತಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಮಹಿಳೆಯರ ಮೇಲೆ ಅಪರಾಧಗಳು ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ತಿಂಗಳು ಆಂಧ್ರಪ್ರದೇಶದಲ್ಲಿ, 12-13 ವರ್ಷದ ಮೂವರು ಶಾಲಾ ಮಕ್ಕಳು 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಅವಳನ್ನು ಕೊಂದರು. ಮುಂಬೈನಲ್ಲಿ ಕೂಡ ಇದೇ ವಯಸ್ಸಿನ ಬಾಲಕಿಯ ಮೇಲೆ ಬಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಕಲ್ಕತ್ತಾದ ವೈದ್ಯಕೀಯ ಕಾಲೇಜೊಂದರಲ್ಲಿ ಪಾತಕಿಗಳ ಅಮಾನುಷ ಕೃತ್ಯಕ್ಕೆ ಬಲಿಯಾಗಿ ಘೋರ ಸಾವಿಗೀಡಾದ ವೈದ್ಯೆ ಈ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆಯಾಗಿದೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ...
ಸಿಎಂ ಬೆನ್ನಿಗೆ ನಿಂತ ಕಾಂಗ್ರೆಸ್; ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ

ಸಿಎಂ ಬೆನ್ನಿಗೆ ನಿಂತ ಕಾಂಗ್ರೆಸ್; ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಂಪುಟ ಸಹೋದ್ಯೋಗಿಗಳ ಜತೆ ಶನಿವಾರ ಮಾಧ್ಯಮಗೋಷ್ಠಿ ನಡೆಸಿದರು. ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ನಮ್ಮ ಮುಖ್ಯಮಂತ್ರಿಗಳು ಈ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಅವರು ನಮ್ಮ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ನಾವು ಒಟ್ಟಾಗಿ ರಾಜ್ಯದ ಜನರ ಸೇವೆ ಮುಂದುವರಿಸುತ್ತೇವೆ. ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ಇಂಡಿಯಾ ಒಕ್ಕೂಟ ನಮ್ಮ ಮುಖ್ಯಮಂತ್ರಿಗಳ ಬೆನ್ನಿಗೆ ನಿಲ್ಲಲಿದೆ. ಮುಖ್ಯಮಂತ್ರಿಗಳ ವಿರುದ್ಧ ಸು...
ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಮುಖ್ಯಮಂತ್ರಿಗಳಿಗೆ ವಿಜಯೇಂದ್ರ ಆಗ್ರಹ

ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಮುಖ್ಯಮಂತ್ರಿಗಳಿಗೆ ವಿಜಯೇಂದ್ರ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದಾರೆ. “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.” ಎಂದು ಗಮನ ಸೆಳೆದಿದ್ದಾರೆ.ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು. ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆ...
ತನಿಖೆಗೆ ರಾಜ್ಯಪಾಲರ ಅನುಮತಿ ಹಿನ್ಬೆಲೆ; ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು

ತನಿಖೆಗೆ ರಾಜ್ಯಪಾಲರ ಅನುಮತಿ ಹಿನ್ಬೆಲೆ; ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭ...
ದೇಶಾಧ್ಯಂತ ಆಸ್ಪತ್ರೆ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ದೇಶಾಧ್ಯಂತ ಆಸ್ಪತ್ರೆ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲಿನ ಅಮಾನುಷ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ದೇಶಾದ್ಯಂತ ವೈದ್ಯರು ಇಂದು ಮುಷ್ಕರ ಕೈಗೊಂಡಿದ್ದಾರೆ.ದೆಹಲಿ, ಮಹಾರಾಷ್ಟ್ರ, ಕರ್ನಾಟಕ ಸಹಿತ ಬಹುತೇಕ ರಾಜ್ಯಗಳಲ್ಲಿ ಆಸ್ಪತ್ರೆಯ ಸೇವೆಗಳನ್ನು ಸ್ಥಗಿತಗೊಳಿಸಿ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಮುಷ್ಕರ ನಡೆಯುತ್ತಿದ್ದು ಭಾನುವಾರ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಯಲಿದೆ ಎಂದು ವೈದ್ಯರ ಸಂಘದ ಮುಖಂಡರು ತಿಳಿಸಿದ್ದಾರೆ.ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​ಮುಂದಾಳುತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ರೋಗಿಗಳಿಗೆ ತೊಂದರೆಯಾಗದಂತೆ ಈ ಹೋರಾಟ ನಡೆಸಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ಈ ನಡುವೆ ವೈದ್ಯರ ಮುಷ್ಕರದಿಂದಾಗಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳು ಪರದಾಡುವಂತಾಗಿದೆ....
ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ; ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಆಕ್ಷೇಪ; ಕಾನೂನು ಸಂಘರ್ಷದ ರಣಕಹಳೆ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ; ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಆಕ್ಷೇಪ; ಕಾನೂನು ಸಂಘರ್ಷದ ರಣಕಹಳೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆಂಬ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯಪಾಲರ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ರಾಜಕೀಯ ವಿಶ್ಲೇಷಕರೂ, ಕಾನೂನು ತಜ್ಞರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು, ಪ್ರಾಸಿಕ್ಯೂಷನ್ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು 'ಹೈಕೋರ್ಟ್‌ ಹಿಂದೆ ನೀಡಿದ್ದ ಆದೇಶ'ವನ್ನು ಪರಿಗಣಿಸಿಲ್ಲ ಎಂಬ ಬಗ್ಗೆ ಬೊಟ್ಟುಮಾಡಿದ್ದಾರೆ.ಕೆಪಿಸಿಸಿ ಮಾಧ್ಯಮ-ಸಂವಹನ ವಿಭಾಗದ ಅಧ್ಯಕ್ಷರೂ ಆಗಿರುವ ರಮೇಶ್ ಬಾಬು, ರಾಜ್ಯಪಾಲರ ಆತುರದ ನಡೆಯು ರಾಜಕೀಯ ಪ್ರೇರಿತವಾಗಿದ್ದು, ಇದು ಅನಗತ್ಯ ಕಾನೂನು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಿದ್ದಾರೆ.ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶ, ಸಲಹೆಗಳನ್ನು ರಾಜ್ಯಪಾಲರು ಗೌರವಿಸಿಲ್ಲ. ಇದು ಪಕ್ಷಪಾತೀಯ ನಡೆಯಾಗಿದ್ದು, ಇದರಿಂದ ಅನಗತ್ಯ ಕಾನೂನು ಸಂಘರ್...