
ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಯಾವಾಗ? ಸಚಿವ ಕೃಷ್ಣ ಬೈರೇಗೌಡರಿಗೆ ಆರ್.ಅಶೋಕ್ ಪ್ರಶ್ನೆ
ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಮಾಡುವುದೇ ಯಾವಾಗ ಎಂದು ಅವರು ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್, ಬೆಂಗಳೂರಿನ ವಿವಿಧ ಭಾಗಗಳ ರಸ್ತೆ ಗುಂಡಿಗಳ ಫೋಟೋಗಳನ್ನು ಹಂಚಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿನಾಯಕ ಲೇಔಟ್, ನಾಗರಭಾವಿ, ಮುದ್ದಿನಪಾಳ್ಯ ರಸ್ತೆ, ಜಯನಗರ 8ನೇ ಬ್ಲಾಕ್ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಗಂಭೀರವಾಗಿದೆ ಎಂದು ಆರೋಪಿಸಿದ್ದಾರೆ.ಎಕ್ಸ್ ಪೋಸ್ಟ್ನಲ್ಲಿ ಆರ್.ಅಶೋಕ್ ಹೇಳಿದ್ದೇನು?
ರಾಜ್ಯ ಸರ್ಕಾರ ‘ಬ್ರ್ಯಾಂಡ್ ಬೆಂಗಳೂರು’ ನಿರ್ಮಾಣದ ಮಾತು ಆಡುತ್ತಿದ್ದರೂ, ವಾಸ್ತವದಲ್ಲಿ ನಗರ ರಸ್ತೆಗಳನ್ನು ಗುಂಡಿಗಳಿಂದ ಮುಕ್ತಗೊಳಿಸಲು ವಿಫಲವಾಗಿದೆ ಎಂದು ಆರ್.ಅಶೋಕ್ ಟೀಕಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ನಗರಾಭಿವೃದ್ಧಿ ಇಲಾಖೆಯ ವೈಫಲ್ಯದಿಂದ ಬೆಂಗಳ...









