
ಬಿಡದಿ ಟೌನ್ಶಿಪ್ ವಿವಾದ: ಬೈರಮಂಗಲಕ್ಕೆ ಬಂದು ರೈತರ ಅಹವಾಲು ಆಲಿಸಿ; ಸಿಎಂಗೆ ಕುಮಾರಸ್ವಾಮಿ ಮತ್ತೆ ಆಹ್ವಾನ
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ಆತಂಕಗಳನ್ನು ಆಲಿಸಲು ಬೈರಮಂಗಲಕ್ಕೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಆಹ್ವಾನ ನೀಡಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವುದಲ್ಲದೆ, ಅದರ ವಿವರವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, ಬಿಡದಿ ಟೌನ್ಶಿಪ್ ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ರೈತರ ಕಳವಳಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳನ್ನು ಮತ್ತೊಮ್ಮೆ ಬೈರಮಂಗಲಕ್ಕೆ ಆಹ್ವಾನಿಸಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡನೇ ಬಾರಿ ಪತ್ರ ಬರೆದಿರುವುದಾಗಿ ಹೇಳಿರುವ ಅವರು, “ಈ ಹಿಂದೆ ತಿಳಿಸಿದಂತೆ ಜೂನ್ 27, 2026ರಂದು ನಾನು ಬೈರಮಂಗಲದಲ್ಲಿ ರೈತರು ಹಾಗೂ ಇತರ ಬಾಧಿತ ಪಾಲುದಾರರೊಂದಿಗೆ ಸಂವಾದ ನಡೆಸಲು ಲಭ್ಯವಿರುತ್ತೇನೆ. ಮುಖ್ಯಮಂತ್ರಿಗಳು ಸಹ ಸಕಾರಾತ್ಮಕ ಮನೋಭಾವದಿಂದ ಸ್ಪಂದಿಸಿ, ಜನರ ಸಮಸ್ಯೆಗಳನ್ನು ಅವರಿರ...









