Wednesday, April 29

ರಾಜ್ಯ

‘ಕೆಡಿ: ದಿ ಡೆವಿಲ್’: ಟ್ರೇಲರ್‌ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ

‘ಕೆಡಿ: ದಿ ಡೆವಿಲ್’: ಟ್ರೇಲರ್‌ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಚೆನ್ನೈ: ನಿರ್ದೇಶಕ ಪ್ರೇಮ್ ಅವರ ಬಹುನಿರೀಕ್ಷಿತ ಚಿತ್ರ ಕೆಡಿ: ದಿ ಡೆವಿಲ್ ಟ್ರೇಲರ್‌ಗೆ ಸಂಬಂಧಿಸಿದಂತೆ ನಿರ್ಮಾಪಕರು ವಿಷಾದ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್‌ನಲ್ಲಿ ಪ್ರಮಾಣೀಕರಿಸದ ಕೆಲವು ದೃಶ್ಯಗಳು ಆಕಸ್ಮಿಕವಾಗಿ ಸೇರಿರುವುದನ್ನು ಗಮನಿಸಿದ ಹಿನ್ನೆಲೆಯಲ್ಲಿ, ಟ್ರೇಲರ್ ಅನ್ನು ಯೂಟ್ಯೂಬ್‌ನಿಂದ ತೆಗೆದುಹಾಕಲಾಗಿದೆ.ಚಿತ್ರವನ್ನು ನಿರ್ಮಿಸಿರುವ KVN Productions ಸಂಸ್ಥೆ ಸಾಮಾಜಿಕ ಮಾಧ್ಯಮದ ಮೂಲಕ ಪ್ರಕಟಣೆ ನೀಡಿ, “ಪ್ರಮಾಣೀಕರಣ ಪ್ರಕ್ರಿಯೆಯಲ್ಲಿ ಕೆಲವು ದೃಶ್ಯಗಳು ಅಜಾಗರೂಕತೆಯಿಂದ ಒಳಗೊಂಡಿವೆ. ಈ ಕಾರಣದಿಂದ ಟ್ರೇಲರ್ ಅನ್ನು ತೆಗೆದುಹಾಕಲಾಗಿದೆ. ಶೀಘ್ರದಲ್ಲೇ ಮಾರ್ಗಸೂಚಿಗಳಿಗೆ ಅನುಗುಣವಾದ ಪರಿಷ್ಕೃತ ಆವೃತ್ತಿಯನ್ನು ಅಪ್‌ಲೋಡ್ ಮಾಡಲಾಗುತ್ತದೆ” ಎಂದು ತಿಳಿಸಿದೆ.ಈ ತಪ್ಪಿಗೆ ವಿಷಾದ ವ್ಯಕ್ತಪಡಿಸಿರುವ ನಿರ್ಮಾಪಕರು, ಎಲ್ಲಾ ಪ್ರಮಾಣೀಕರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.ಕೆಡಿ: ದಿ ಡೆವಿಲ್ ಚಿತ್ರವು ಈಗಾಗಲೇ ದೇಶಾದ್ಯಂತ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸ...
Bharat Petroleum Corporation Limited (BPCL)ನಲ್ಲಿ ಉದ್ಯೋಗಾವಕಾಶ

Bharat Petroleum Corporation Limited (BPCL)ನಲ್ಲಿ ಉದ್ಯೋಗಾವಕಾಶ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ದೇಶದ ಪ್ರಮುಖ ತೈಲ ಸಂಸ್ಥೆಯಾದ Bharat Petroleum Corporation Limited (BPCL) ದೇಶಾದ್ಯಂತ ಖಾಲಿ ಇರುವ 250 ಜೂನಿಯರ್ ಎಕ್ಸಿಕ್ಯೂಟಿವ್ ಹಾಗೂ ಇತರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ:ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್) – 175 ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಕ್ವಾಲಿಟಿ ಅಶ್ಯೂರೆನ್ಸ್) – 30 ಜೂನಿಯರ್ ಎಕ್ಸಿಕ್ಯೂಟಿವ್ (ಅಕೌಂಟ್ಸ್) – 25 ಜೂನಿಯರ್ ಎಕ್ಸಿಕ್ಯೂಟಿವ್ (ವೇಸೈಡ್ ಸೌಕರ್ಯಗಳು) – 10 ಕಾರ್ಯದರ್ಶಿ (Secretary) – 08 ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಅಧಿಕೃತ ಭಾಷೆ) – 02ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ, ಬಿ.ಇ/ಬಿ.ಟೆಕ್ (ಎಂಜಿನಿಯರಿಂಗ್ ವಿಭಾಗಗಳಿಗೆ), ಸಿಎ/ಸಿಎಮ್ಎ (ಅಕೌಂಟ್ಸ್ ವಿಭಾಗಕ್ಕೆ) ಅಥವಾ ಎಂ.ಎ/ಎಂ.ಎಸ್ಸಿ (ಇತರ ವಿಭಾಗಗಳಿಗೆ) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವವೂ ಅಗತ್ಯವಾಗಿದೆ.ಏಪ್ರಿಲ್ 1, 2026ರಂತೆ ಅಭ್ಯರ್ಥಿಗಳ ವಯಸ್ಸು 30 ರಿಂದ 35...
ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25, 5.25 ಮತ್ತು 4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ.ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗದಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ3 ರಷ್ಟು ಮೀಸಲಾತಿ ನೀಡಲಾಗಿದೆ. ಒಳಮೀಸಲಾತಿಗೆ ರಚಿಸಲಾಗಿದ್ದ ಕಾಯ್ದೆಗೆ ಅನುಗುಣವಾಗಿ 17% ಮೀಸಲಾತಿಗೆ 6%, 6% ಹಾಗೂ 5% ಇದ್ದರೆ, ಈಗಿನ 15% ಮೀಸಲಾತಿಗೆ 5.3%, 5.3% ಹಾಗೂ 4.4% ಮೀಸಲಾತಿಯನ್ನು ನಿಗದಿ ಮಾಡಿ ವರದಿ ನೀಡಲಾಗಿದ್ದು, ಅಂತಿಮವಾಗಿ ಸಚಿವ ಸಂಪುಟ ಸಭೆಯು ಎಡಗೈ ಸಂಬಂಧಿತ ಜಾತಿಗಳಿಗೆ 5.25%, ಬಲಗೈ ಜಾತಿಗಳಿಗೆ 5.25%, ಬೋವಿ, ಲಂಬಾಣಿ, ಕೊರಚ, ಕೊರಮ ಹಾಗೂ 59 ಅಲೆಮ...
ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಎಲ್ಲರಿಗೂ ಕೈಗೆಟಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ.ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಜೆಐಸಿಎಸ್ ಮತ್ತು ಆರ್) ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಮಾಡಿದ ಪ್ರಮುಖ ಭರವಸೆಯನ್ನು ಈಡೇರಿಸಿದಂತಾಗಿದೆ.ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಬಿ. ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್. ಮಹೇಶ್ವರ ರಾವ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತ ಕೆ.ವಿ. ರಾಜೇಂದ್ರ ಸಮ್ಮುಖದಲ್ಲಿ ವಿಕಾಸ ಸೌಧದಲ್...
ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಗ್ರಿ-ಟೆಕ್ ಸಮಿಟ್-2026ರಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ರಾಜ್ಯದ ಒಟ್ಟು ಆದಾಯದಲ್ಲಿ ಸುಮಾರು 17% ಕೊಡುಗೆ ನೀಡುವುದರ ಜೊತೆಗೆ, ಶೇಕಡಾ 58ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ ಎಂದು ತಿಳಿಸಿದರು.2025-26ನೇ ಸಾಲಿನಲ್ಲಿ ದೇಶದ ಆಹಾರ ಉತ್ಪಾದನೆ 355 ದಶಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು, ಕರ್ನಾಟಕದಲ್ಲಿಯೂ 155-160 ದಶಲಕ್ಷ ಟನ್ ಮಟ್ಟದಲ್ಲಿ ಉತ್ಪಾದನೆ ಸಾಧನೆಯಾಗಿದೆ ಎಂದು ಅವರು ಹೇಳಿದರು.ಸರ್ಕಾರದ ಯೋಜನೆಗಳು, ಕೃಷಿ ವಿಜ್ಞಾನಿಗಳ ಸಂಶೋಧನೆ ಹಾಗೂ ರೈತರ ಪರಿಶ್ರಮದಿಂದ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ತೋಟಗಾರಿಕೆ ಉತ್ಪಾದನೆ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಲಾಗಿದ್ದು, ಸಂಸ್ಕರಣೆ, ಪ್ಯಾಕೇಜಿಂಗ್, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕವನ್ನು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.ಇನ್ನೂ 202...
ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಗರದ ಟೌನ್ ಹಾಲ್‌ನಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯಿತ ಮಹಾಸಭಾ (ರಿ) ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಭಾನುವಾರ ವೈಭವವಾಗಿ ನಡೆಯಿತು.ಪಟ್ಟದ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಹಾಸಭಾ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ ಬಿ. ಖಂಡ್ರೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಹಾನಗಲ್ ಕುಮಾರಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪದಗ್ರಹಣಕ್ಕೆ ಚಾಲನೆ ನೀಡಲಾಯಿತು.ಸಭೆಯನ್ನುದ್ದೇಶಿಸಿ ಮಾತನಾಡಿದ ಮಲಯಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು. ಪ್ರತೀ ಮನೆಯಲ್ಲಿ ಒಬ್ಬ ಸಮಾಜಸೇವಕ ಇದ್ದರೆ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ವೀರಶೈವ–ಲಿಂಗಾಯಿತ ಧರ್ಮವು ಕಾಯಕ ಮತ್ತು ದಾಸೋಹದ ...
ಹರಾಜು ಮಾರಾಟವಾಗಿದ್ದು 2.4 ಕೋಟಿಗೆ, ಆ ಅಸ್ತಿ32 ಕೋಟಿಗೆ ಅಡಮಾನ

ಹರಾಜು ಮಾರಾಟವಾಗಿದ್ದು 2.4 ಕೋಟಿಗೆ, ಆ ಅಸ್ತಿ32 ಕೋಟಿಗೆ ಅಡಮಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಯೋವೃದ್ಧನಿಗೆ ಸೇರಿದ್ದೆನ್ನಲಾದ ಆಸ್ತಿಯನ್ನು ಖಾಸಗಿ ಸಂಸ್ಥೆಗಳ ಗೂಂಡಾಗಳು ಅತಿಕ್ರಮಿಸಲು ಯತ್ನಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಯಲಹಂಕ ಠಾಣೆ ಪೊಲೀಸರು ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದರಿಂದ ನೊಂದ ವೃದ್ಧ FIR ದಾಖಲಿಸಲು ನಿರ್ದೇಶನ ಕೋರಿ ಬೆಂಗಳೂರು ಪೊಲೀಸ್ ಕಮೀಷನರ್'ಗೆ ದೂರು ಸಲ್ಲಿಸಿದ್ದಾರೆ.ಬೆಂಗಳೂರಿನ ಆಡುಗೋಡಿ ನಿವಾಸಿ 70 ವರ್ಷ ಪ್ರಾಯದ ಅಬ್ದುಲ್ ಸತ್ತಾರ್, ಎಂಬವರು ತಮಗೆ ಸೇರಿದ್ದೆನ್ನಲಾದ ಯಲಹಂಕದ ಸರ್ವೇ ನಂಬರ್ 29/3ರ 7 ಗುಂಟೆ ನಿವೇಶನವನ್ನು ಕೆಲವು ವ್ಯಕ್ತಿಗಳು ಅತಿಕ್ರಮಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಆದರೂ ಏಪ್ರಿಲ್ 8 ರಂದು ಮಧ್ಯಾಹ್ನ 25 ಕ್ಕೂ ಹೆಚ್ಚು ಮಂದಿ ಸದರಿ ಸ್ಥಳಕ್ಕೆ ಬಂದು 'ತಾವು Mac Charles Hob Projects Pvt Ltd ಮತ್ತು Embassy ಕಂಪನಿ ಕಡೆಯವರು ಈ ನಿವೇಶನಕ್ಕೆ ತೆರಳಿ ಈ ಸ್ವತ್ತನ್ನು ತಮಗೆ ಬಿಟ್ಟುಕೊಟ್ಟು ಸ್ಥಳದಿಂದ ತೆರಳಬೇಕು' ಎಂದು ಅಬ್ದುಲ್ ಸತ್ತಾರ್ ಆರೋಪಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಭೇಟಿ ನೀಡಿರುವ ಪೊಲೀ...
ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹುಬ್ಬಳ್ಳಿ, ಏ.12: ಹೈದರಾಬಾದ್‌ನಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ Fly91 Airlines ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ನಿಯಂತ್ರಣ ಸಮಸ್ಯೆ ಎದುರಿಸಿ, ಸುಮಾರು ಮೂರು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ಭಾನುವಾರ ನಡೆದಿದೆ. ಕೊನೆಗೆ ವಿಮಾನವನ್ನು ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.ಮಧ್ಯಾಹ್ನ 3 ಗಂಟೆಗೆ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ವಿಮಾನ, ಸಂಜೆ 4.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ, ಲ್ಯಾಂಡಿಂಗ್‌ಗೆ ಹಲವಾರು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗದೆ, ವಿಮಾನವು ಮುಂಡಗೋಡ, ದಾವಣಗೆರೆ, ಶಿವಮೊಗ್ಗ ಪ್ರದೇಶಗಳಲ್ಲಿ ಸುತ್ತಾಡಿತು. ಸಂಜೆ 7.30ರ ಸುಮಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು.ವಿಮಾನ ಲ್ಯಾಂಡಿಂಗ್ ವೇಳೆ ಉಂಟಾದ ತಾಂತ್ರಿಕ ದೋಷವೋ ಅಥವಾ ಹವಾಮಾನ ವೈಪರಿತ್ಯವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ನಡುವೆ, ವಿಮಾನ ದೀರ್ಘ ಕಾಲ ಆಗಸದಲ್ಲೇ ಸುತ್ತಾಡಿದ ಕಾರಣ ಪ್ರಯ...
ದಕ್ಷಿಣದ ರಾಜ್ಯಗಳ ಧ್ವನಿಯನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಯತ್ನ; ಖರ್ಗೆ ಆರೋಪ

ದಕ್ಷಿಣದ ರಾಜ್ಯಗಳ ಧ್ವನಿಯನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಯತ್ನ; ಖರ್ಗೆ ಆರೋಪ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಹೋಸೂರು (ತಮಿಳುನಾಡು): ದೇಶದ ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸಲು ಜನರು ಜಾಗರೂಕರಾಗಿರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶದ ಜನರಿಗೆ ಕರೆ ನೀಡಿದ್ದಾರೆ.ತಮಿಳುನಾಡಿನ ಹೋಸೂರಿನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಸಿಎಂ ಎಂ.ಕೆ. ಸ್ಟಾಲಿನ್ ಉಪಸ್ಥಿತಿಯಲ್ಲಿ ಮಾತನಾಡಿದ ಖರ್ಗೆ, ತಮಿಳುನಾಡು ದೇಶಕ್ಕೆ ದಾರಿದೀಪವಾಗಿದ್ದು, ಪೆರಿಯಾರ್, ಅಣ್ಣಾ ಮತ್ತು ಕಲೈಗ್ನಾರ್ ಅವರ ಆದರ್ಶಗಳನ್ನು ಮುಂದುವರಿಸುತ್ತಿದೆ ಎಂದು ಹೇಳಿದರು. ಡಿಎಂಕೆ–ಕಾಂಗ್ರೆಸ್ ಮೈತ್ರಿಕೂಟವು ಆ ಮೌಲ್ಯಗಳನ್ನು ಕಾಪಾಡುತ್ತಿದೆ ಎಂದು ಅವರು ಶ್ಲಾಘಿಸಿದರು.ಸಂಸತ್ತಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ (ಸೀಮಾ ನಿರ್ಣಯ) ಪ್ರಯತ್ನವನ್ನು ತೀವ್ರವಾಗಿ ಟೀಕಿಸಿದ ಖರ್ಗೆ, “ಇದು ಪ್ರಜಾಪ್ರಭುತ್ವ ಸಮತೋಲನವನ್ನು ಬದಲಾಯಿಸುವ ದುರುದ್ದೇಶಪೂರಿತ ಯತ್ನವಾಗಿತ್ತು. ಕಾಂಗ್ರೆಸ್–ಡಿಎಂಕೆ ಮೈತ್ರಿ ಸೇರಿದಂತೆ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಿ ಅದನ್ನು ಸೋಲಿಸಿವೆ. ಇದು ನ್ಯಾಯದ ಗೆಲುವು” ಎಂದು ಹೇಳಿದರು.ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದಕ್ಷಿಣ ಭಾ...
‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

Focus, ಪ್ರಮುಖ ಸುದ್ದಿ, ರಾಜ್ಯ
ಹುಬ್ಬಳ್ಳಿ: ಕಾನೂನು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು—ಶಿಕ್ಷಕರು, ಶಿಕ್ಷಕೇತರರು, ನ್ಯಾಯವಾದಿಗಳು ಹಾಗೂ ವಿದ್ಯಾರ್ಥಿಗಳು—ಜನಸಾಮಾನ್ಯರಲ್ಲಿ ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಅರಿವು ಮೂಡಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಕುಲಪತಿ ಪ್ರೊ. ಡಾ. ಸಿ. ಬಸವರಾಜು ಹೇಳಿದ್ದಾರೆ. ಜನರು ಕಾನೂನು ನೆರವನ್ನು ಪಡೆಯಲು ಸೂಕ್ತ ಕೇಂದ್ರಗಳಿಗೆ ಸಂಪರ್ಕಿಸುವ ಕೊಂಡಿಗಳಾಗಿ ಕೆಲಸ ಮಾಡಬೇಕೆಂದೂ ಅವರು ಸೂಚಿಸಿದ್ದಾರೆ.ಕಾನೂನು ವಿಶ್ವವಿದ್ಯಾಲಯದಲ್ಲಿ “ನವ ಯುಗದಲ್ಲಿ ಸ್ವಾತಂತ್ರ್ಯ” ವಿಷಯದಡಿ ನ್ಯಾಯಾಧೀಶ ಆರ್.ಜಿ. ದೇಸಾಯಿ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಸಿಗೆ ನೀರುಣಿಸುವುದು ಹಾಗೂ ದೇಸಾಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕುಲಪತಿ ಪ್ರೊ. ಡಾ. ಸಿ. ಬಸವರಾಜು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಮಾತುಗಳನ್ನು ಉಲ್ಲೇಖಿಸಿ, ಸಮಾನತೆ ಇಲ್ಲದ ಸ್ವಾತಂತ್ರ್ಯಕ್ಕೆ ಮೌಲ್ಯವಿಲ್ಲ ಎಂದರು. ಸಂವಿಧಾನದ ಅನುಚ್ಛೇದ 21ರಡಿ ಎಲ್ಲರಿಗೂ ಹಕ್ಕುಗಳಿದ್ದರ...