
ಹಿಂದುತ್ವ ದುರ್ಬಲವಾದರೆ ರಾಷ್ಟ್ರ ದುರ್ಬಲ; ಗಣೇಶೋತ್ಸವದಲ್ಲಿ ಜಾತೀಯತೆ, ಅಸ್ಪೃಶ್ಯತೆಗೆ ಅವಕಾಶ ಇರಬಾರದು: ಸಿ.ಟಿ.ರವಿ
ಮದ್ದೂರು: ಹಿಂದುತ್ವ ದುರ್ಬಲವಾದರೆ ರಾಷ್ಟ್ರವೂ ದುರ್ಬಲವಾಗುತ್ತದೆ. ಗಣೇಶೋತ್ಸವ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ ಹಿಂದೂ ಸಮಾಜದಲ್ಲಿ ಒಗ್ಗಟ್ಟು, ಸಾಮರಸ್ಯ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ವೇದಿಕೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತೀಯತೆ ಮತ್ತು ಅಸ್ಪೃಶ್ಯತೆಗೆ ಗಣೇಶೋತ್ಸವದಲ್ಲಿ ಯಾವುದೇ ಅವಕಾಶ ಇರಬಾರದು. ‘ನಾವೆಲ್ಲ ಹಿಂದೂ, ನಾವೆಲ್ಲ ಒಂದು’ ಎಂಬ ಭಾವನೆ ಸಮಾಜದಲ್ಲಿ ಬಲಗೊಳ್ಳಬೇಕು ಎಂದು ಹೇಳಿದರು.
ಜಾತೀಯತೆ ಮತ್ತು ಅಸ್ಪೃಶ್ಯತೆ ಹಿಂದೂ ಸಮಾಜವನ್ನು ದುರ್ಬಲಗೊಳಿಸಿವೆ. ಈ ದುರ್ಬಲತೆಯನ್ನು ನಿವಾರಿಸಿ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವಗಳು ನಡೆಯಬೇಕು ಎಂದರು.ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವ ಆರಂಭಿಸಿದ ಉದ್ದೇಶ ಸಾಮಾಜಿಕ ಜಾಗೃತಿ ಮೂಡಿಸುವುದಾಗಿತ್ತು. ಮತಾಂತರ, ಅಸ್ಪೃಶ್ಯತೆ ಹಾಗೂ ಜಾತೀಯತೆ ವಿರುದ್ಧ ಜಾಗೃತಿ ಮೂಡಿಸುವುದು ಮತ್ತು ಸಮಾಜವನ್ನು ಸಂಘಟಿಸುವುದು ಗಣೇಶೋತ್ಸವದ ಆಶಯವಾಗಬೇಕು ಎಂದು ಪ್ರ...









