Tuesday, August 4

ರಾಜ್ಯ

BMTC: ನೌಕರರ ಐಚ್ಛಿಕ ಭವಿಷ್ಯ ನಿಧಿ ಚೀಟಿಗಳನ್ನು ನೋಡಲು ಅಂತರ್ಜಾಲ ಸೌಲಭ್ಯ; ಸಚಿವ ರಾಮಲಿಂಗರೆಡ್ಡಿ ಚಾಲನೆ

BMTC: ನೌಕರರ ಐಚ್ಛಿಕ ಭವಿಷ್ಯ ನಿಧಿ ಚೀಟಿಗಳನ್ನು ನೋಡಲು ಅಂತರ್ಜಾಲ ಸೌಲಭ್ಯ; ಸಚಿವ ರಾಮಲಿಂಗರೆಡ್ಡಿ ಚಾಲನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ನೌಕರರ/ಅಧಿಕಾರಿಗಳ 2023-2024ನೇ ಸಾಲಿನ ಭವಿಷ್ಯ ನಿಧಿ ಹಾಗೂ ಐಚ್ಛಿಕ ಭವಿಷ್ಯ ನಿಧಿ ಚೀಟಿಗಳನ್ನು ಅಂತರ್ಜಾಲದಲ್ಲಿ ವೀಕ್ಷಿಸುವ ಸೌಲಭ್ಯ ಗಮನಸೆಳೆದಿದೆ‌ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸುಮಾರು 27,000 ಅಧಿಕಾರಿ /ನೌಕಕರು ಕರ್ತವ್ಯ ನಿರ್ವಹಿಸುತ್ತಿದ್ದು ಸದರಿ ಅಧಿಕಾರಿ/ನೌಕರರ ಭವಿಷ್ಯನಿದಿ/ಐಚ್ಛಿಕ ಭವಿಷ್ಯನಿಧಿ ಮಾಹೆಯಾನ ವಂತಿಗೆಗಳ ಮಾಹಿತಿಯನ್ನು ಈ ಹಿಂದೆ ಮುದ್ರಿತ ಚೀಟಗಳ ರೂಪದಲ್ಲಿ ಮುದ್ರಿಸಿ ಪ್ರತಿ ನೌಕರರಿಗೆ ವಾರ್ಷಿಕವಾರು ವಿತರಿಸಲಾಗುತ್ತಿತ್ತು.2022-2023 ನೇ ಸಾಲಿನಿಂದ ಪ್ರಾಯೋಗಿಕವಾಗಿ ತಂತ್ರಜ್ಞಾನವನ್ನು ಬಳಸಿ ಆಂತರಿಕವಾಗಿಯೇ ಗಣಕ ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ems.mybmtc.com/pf ತಂತ್ರಜ್ಞಾನದಲ್ಲಿ ಆನ್ಲೈನ್ ನಲ್ಲಿಯೇ ಪ್ರತಿ ನೌಕರನು ತನ್ನ ಮೊಬೈಲ್ನಲ್ಲಿಯೇ ಆತನ ಪಿ.ಎಫ್ ಸಂಖ್ಯೆಯನ್ನ ನಮೂದಿಸಿ ಆತನ ಖಾತೆಯಲ್ಲಿರುವ ಪಿ.ಎಫ್ ಮೊತ್ತ, ವಿ.ಪಿ.ಎಫ್ ಮೊತ್ತ, ಬಡ್ಡಿ ಮೊತ್ತ, ಮುಂಗಡಗಳ ವಿವರಗಳು (ಪ್ರಾರಂಭಿಕ/ಅಂತಿಮ ಶಿಲ್ಲುಗಳೊಂದಿಗೆ) ವೀಕ್ಷಿಸಲು ಅವಕಾಶ ಇದೀಗ ಕಲ್ಪಿಸಲಾಗ...
ಅಕ್ರಮ ಆಸ್ತಿ ಕೇಸ್; ಡಿಕೆಶಿಗೆ ರಿಲೀಫ್

ಅಕ್ರಮ ಆಸ್ತಿ ಕೇಸ್; ಡಿಕೆಶಿಗೆ ರಿಲೀಫ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.ಸಿಬಿಐ ಸಲ್ಲಿಸಿದ್ದ ಅರ್ಜಿ ಕುರಿತಂತೆ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ರಾಜ್ಯ ಸರ್ಕಾರ- ಸಿಬಿಐ ನಡುವಿನ ವಿವಾದವನ್ನು ಸುಪ್ರೀಂ ಕೋರ್ಟಿನಲ್ಲಿ ಇತ್ಯರ್ಥ ಪಡಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಸಿಬಿಐ ಅರ್ಜಿಯನ್ನು ವಿಲೇವಾರಿ ಮಾಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸುವಂತೆ ಕೋರ್ಟ್ ಸಲಹೆ ಮುಂದಿಟ್ಟಿದೆ....
ಹಸ್ತ ಕಾರ್ಯಾಚರಣೆಗೆ ಸೆಡ್ಡು ಹೊಡೆದ ಜೆಡಿಎಸ್; ರಿವರ್ಸ್ ಆಪರೇಷನ್ ಮೂಲಕ ಮಂಡ್ಯ ನಗರಸಭೆಯಲ್ಲಿ ಹೆಚ್ಡಿಕೆ ಆಪ್ತನಿಗೆ ಜಯ

ಹಸ್ತ ಕಾರ್ಯಾಚರಣೆಗೆ ಸೆಡ್ಡು ಹೊಡೆದ ಜೆಡಿಎಸ್; ರಿವರ್ಸ್ ಆಪರೇಷನ್ ಮೂಲಕ ಮಂಡ್ಯ ನಗರಸಭೆಯಲ್ಲಿ ಹೆಚ್ಡಿಕೆ ಆಪ್ತನಿಗೆ ಜಯ

ಪ್ರಮುಖ ಸುದ್ದಿ, ರಾಜ್ಯ
ಮಂಡ್ಯ: ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನ ನಾಗೇಶ್ ಅವರು ಆಯ್ಕೆಯಾಗಿದ್ದಾರೆ. ಸಚಿವ ಚಲುವರಾಯ ಸ್ವಾಮಿ ಹಾಗೂ ಕೇಂದ್ರ ಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಪ್ರತಿಷ್ಠೆಉ ಅಖಾಡವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ನಾಗೇಶ್ ಆಯ್ಕೆಯಾಗಿದ್ದಾರೆ.ಆಪರೇಷನ್ ಹಸ್ತ ಮೂಲಕ ಜೆಡಿಎಸ್‌ನ ಇಬ್ಬರನ್ನು ಕಾಂಗ್ರೆಸ್ ಪಕ್ಷ ಗೆಲುವಿನ ನಿರೀಕ್ಷೆಯಲ್ಲಿತ್ತು. ಇದಕ್ಕೆ ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದ ಜೆಡಿಎಸ್ ನಾಯಕ ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ, ಮಂಡ್ಯ ನಗರಸಭಾ ಚುನಾವಣೆಯಲ್ಲಿ ಫಲಿತಾಂಶವನ್ನು ತಮ್ಮದಾಗೊಸಿಕೊಂಡಿದ್ದಾರೆ....
ದ್ವೇಷ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರ, ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ: ಆರ್‌.ಅಶೋಕ

ದ್ವೇಷ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರ, ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ: ಆರ್‌.ಅಶೋಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯ ಮರು ಆರಂಭಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಯಲ್ಲಿ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಲ್ಲಿನ ಅಧಿಕಾರಿಗಳು ಸ್ಥಳಕ್ಕೆ ಬಾರದೆ ವಿಧಾನಸೌಧದ ಕಡೆಗೆ ಮುಖ ಮಾಡಿಕೊಂಡು ಕೂತಿದ್ದಾರೆ. ಒಂದು ಕಡೆ ಮುಡಾ ಹಗರಣ, ಮತ್ತೊಂದು ಕಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಇನ್ನೊಂದು ಖರ್ಗೆ ಹಗರಣ ನಡೆದಿದೆ. ಇಂತಹ ಸ್ಥಿತಿಯಲ್ಲಿ ಸ್ವಾಯತ್ತ ಸಂಸ್ಥೆಯ ಮೇಲೆ ಈ ಕೆಟ್ಟ ಸರ್ಕಾರ ಒತ್ತಡ ಹೇರಿದೆ. ಹಿಂದುಳಿದ ಪ್ರದೇಶವಾದ ಕಲಬುರ್ಗಿಯಲ್ಲಿ ಮುಳುಗಿಹೋಗಿದ್ದ ಸಕ್ಕರೆ ಕಾರ್ಖಾನೆಯನ್ನು ಶಾಸಕ ಯತ್ನಾಳ್‌ ಅಭಿವೃದ್ಧಿಪಡಿಸಿದ್ದಾರೆ. ಈ ಕಾರ್ಖಾನೆಯಿಂದ ಎರಡು ಸಾವಿರ ಜನರಿಗೆ ಉದ್ಯೋಗ ದೊರೆತಿದೆ, ಸಾವಿರಾರು ರೈತರಿಗೆ ಲಾಭವಾಗುತ್ತಿದೆ. ಆದರೆ ಕಾಂಗ್ರೆಸ್‌ ದ್ವೇಷದ ರಾಜಕಾರಣ ಮಾಡುತ್ತಿದೆ. *ಹೈಕೋರ್ಟ್‌...
ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್, ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿ; ಸಾರಿಗೆ ಇಲಾಖೆಯಲ್ಲಿ ತ್ವರಿತ ಕ್ರಮ

ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್, ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿ; ಸಾರಿಗೆ ಇಲಾಖೆಯಲ್ಲಿ ತ್ವರಿತ ಕ್ರಮ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯು ಕ್ರಾಂತಿಕಾರಿ ಕ್ರಮಗಳಿಗೆ ಮುನ್ನುಡಿ ಬರೆದಿದೆ. ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್‌ಗಳು ಹೊಸ ಆಯಾಮ ನೀಡಲಿದ್ದು, ಜೊತೆಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರಿಂದು (28.08.2024) ಸಾರಿಗೆ ಆಯುಕ್ತರ ಕಛೇರಿಯಲ್ಲಿ, ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ, 2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ಕುರಿತಂತೆ ಮಾಹಿತಿ ಪಡೆದ ಸಚಿವರು ರಾಜಸ್ವ ಸಂಗ್ರಹಣೆಯ ಗುರಿಯನ್ನು ಶೇಕಡ 100 ರಷ್ಟು ಸಾಧಿಸಲು ಪ್ರವರ್ತನ ಚಟುವಟಿಕೆಗಳೂ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಕೈಗೊಂಡು ಕಾರ್ಯನಿರ್ವಹಿಸಲು ಸೂಚಿಸಿದರು.2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ವಿವರ: ವಾರ್ಷಿಕ ರಾಜಸ್ವ ಗುರಿ- ರೂ.13000‌ಕೋಟಿಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಬೇಕಾದ ರಾಜಸ್ವ- ರೂ 4325 ಕೋಟಿ. ಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಿರುವ ರಾಜಸ್ವ- 3534 ಶೇಕಡಾವಾರು-82%ಸಾರಿಗೆ ಇಲಾಖೆಗೆ ಹೊಸದಾ...
ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳಿಂದ ಅನ್ನದಾತರ ನಾಶ; ಕುರುಬೂರು ಆಕ್ರೋಶ

ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳಿಂದ ಅನ್ನದಾತರ ನಾಶ; ಕುರುಬೂರು ಆಕ್ರೋಶ

ದೇಶ, ಪ್ರಮುಖ ಸುದ್ದಿ, ರಾಜ್ಯ
ಕಾರೈಕಲ್: ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂಬುದನ್ನು ಅರಿಯಬೇಕು ಎಂದು ರಾಷ್ಟ್ರೀಯ ಕಿಸಾನ್ ಮೋರ್ಚಾದ ಸಂಚಾಲಕರೂ ಆದ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರ್ ಶಾಂತಕುಮಾರ್  ಆರೋಪಿಸಿದ್ದಾರೆ.ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಕೃಷಿ ಭೂಮಿ. ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ ಎಂದರು.ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ. ಬೆಳೆ ವಿಮೆ ಪದ್ಧತಿ ತಿದ್ದುಪಡಿ ಆಗಬೇಕು. 60 ವರ್ಷ ತುಂಬಿದ...
ಫ್ರಾನ್ಸ್‌ನ ‘ವಿಶ್ವ ಕೌಶಲ್ಯ ಸ್ಪರ್ಧೆ’ಯಲ್ಲಿ ಕರ್ನಾಟಕದ 9 ಮಂದಿ ವಿದ್ಯಾರ್ಥಿಗಳ ಕಮಾಲ್

ಫ್ರಾನ್ಸ್‌ನ ‘ವಿಶ್ವ ಕೌಶಲ್ಯ ಸ್ಪರ್ಧೆ’ಯಲ್ಲಿ ಕರ್ನಾಟಕದ 9 ಮಂದಿ ವಿದ್ಯಾರ್ಥಿಗಳ ಕಮಾಲ್

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಫ್ರಾನ್ಸ್ ನ ಲಿಯೋನ್‌ನಲ್ಲಿ ನಡೆಯಲಿರುವ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕೌಶಲಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿ (ಕೆ.ಎಸ್.ಡಿ.ಸಿ) ರಾಜ್ಯದ 9 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದೆ. *ಫ್ರಾನ್ಸ್ ತೆರಳುವ ಮುನ್ನ ಭೇಟಿಯಾದ ವಿದ್ಯಾರ್ಥಿಗಳಿಗೆ ವೈದ್ಯ ಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಬುಧವಾರ ಶುಭಕೋರಿದರು.2024 ಸೆಪ್ಟೆಂಬರ್ 10 ರಿಂದ 15ರವರೆಗೆ ಫ್ರಾನ್ಸ್ ನ ಲಿಯೋನ್ ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ವೃತ್ತಿಪರ ಕೌಶಲಗಳ “ಒಲಂಪಿಕ್ಸ್” ಎಂದೇ ಬಣ್ಣಿಸಲಾಗುತ್ತದೆ. 1 ವಿಭಿನ್ನ ಕೌಶಲ್ಯ ಸ್ಪರ್ಧೆಗಳು ನಡೆಯುವ ವಿಶ್ವದ ಅತಿ ದೊಡ್ದ ಕಾರ್ಯಕ್ರಮವಾಗಿದೆ. 22 ವರ್ಷದ ಒಳಗಿನ ಸುಮಾರು 1000 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು, ತಮ್ಮ ವೃತ್ತಿಪರ ಕೌಶಲ್ಯ ಪ್ರದರ್ಶಿಸಲಿದ್ದಾರೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿಯು ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಆಶ್ರಯದಲ್ಲಿ ಕರ್ನಾಟಕದ ಕೌಶಲಪೂರ್ಣ ಅಭ್ಯರ...
ಜೈಲಿನಲ್ಲಿ ಎಲ್ಲರಿಗೂ ಒಂದೇ ರೀತಿಯ ವ್ಯವಸ್ಥೆ; ದರ್ಶನ್ ವಿಚಾರವನ್ನು ಗಂಭೀರವಾಗಿ ಪರಿಣಿಸಿದ ಸರ್ಕಾರ

ಜೈಲಿನಲ್ಲಿ ಎಲ್ಲರಿಗೂ ಒಂದೇ ರೀತಿಯ ವ್ಯವಸ್ಥೆ; ದರ್ಶನ್ ವಿಚಾರವನ್ನು ಗಂಭೀರವಾಗಿ ಪರಿಣಿಸಿದ ಸರ್ಕಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್‌ಗೆ ಯಾವುದೇ ವಿನಾಯಿತಿ, ವಿಶೇಷ ಸೌಲಭ್ಯ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಂಗಳವಾರ ಹೇಳಿದ್ದಾರೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ವಿಶೇಷ ಸೌಲಭ್ಯ ದೊರೆತಿರುವ ಬಗ್ಗೆ ಸರ್ಕಾರದ ನಿಲುವನ್ನು ಪ್ರಕಟಿಸಿದ ಸಚಿವ ಪಾಟೀಲ್, "ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ವ್ಯವಸ್ಥೆ ಎಲ್ಲರಿಗೂ ಒಂದೇ,"ಎಂದು ಪ್ರತಿಪಾದಿಸಿದರು."ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ. ವ್ಯವಸ್ಥೆ ಎಲ್ಲರಿಗೂ ಒಂದೇ ಆಗಿರುಬೇಕು. ಜೈಲು ಅಧಿಕಾರಿಗಳು ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು. ಇಂತಹ ಲೋಪಗಳಿಗೆ ಅವಕಾಶ ನೀಡಬಾರದು, ವಿಐಪಿಗಳು ಜೈಲು ಪಾಲಾದಾಗ ಇಂತಹ ವಿಷಯಗಳು ಸುದ್ದಿಯಾಗುತ್ತವೆ. ಇಂತಹ ಲೋಪಗಳಿಂದ ಜನರು ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ. ಇಂತಹ ಲೋಪಗಳು ಮರುಕಳಿಸದಂತೆ ಗೃಹ ಸಚಿವರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ,’’ ಎಂದು ತಿಳಿಸಿದರು....
ಕೋಲ್ಕತ್ತಾ ಕ್ರೌರ್ಯದ ಪ್ರತಿಧ್ವನಿ; ಕರ್ನಾಟಕದಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಸರ್ಕಾರದ ಕ್ರಮ

ಕೋಲ್ಕತ್ತಾ ಕ್ರೌರ್ಯದ ಪ್ರತಿಧ್ವನಿ; ಕರ್ನಾಟಕದಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಸರ್ಕಾರದ ಕ್ರಮ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ವೈದ್ಯಾಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದರು.ಕೋಲ್ಕತ್ತಾದಲ್ಲಿ ಇತ್ತೀಚೆಗೆ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಭೆ ನಡೆಸಿದ ಸಚಿವರು, ವೈದ್ಯಕೀಯ ಸಂಸ್ಥೆಗಳಲ್ಲಿ ಭದ್ರತೆ ಹೆಚ್ಚಿಸುವ ಬಗ್ಗೆ ಸಮಾಲೋಚಿಸಿದರು.ಭದ್ರತಾ ಕ್ರಮಗಳನ್ನು ಹೆಚ್ಚಿಸುವ ಮೂಲಕ ವೈದ್ಯಕೀಯ ವೃತ್ತಿಪರರನ್ನು, ವಿಶೇಷವಾಗಿ ಮಹಿಳೆಯರನ್ನು ರಕ್ಷಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದ ಸಚಿವ ಪಾಟೀಲ್, "ಮಹಿಳಾ ವೈದ್ಯರ ಸುರಕ್ಷತೆಗೆ ನಾವು ಬದ್ಧ. ಈ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಆಧಾರದ ಮೇಲೆ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ವಹಿಸಲಾಗುವುದು," ಎಂದರು.ಸಭೆಯ ನಂತರ ಮಾತನಾಡಿದ ಡಾ. ಶರಣ ಪ್ರಕಾಶ ಪಾಟೀಲ್ , "ಎಲ್ಲಾ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲ...
ಜಾತ್ರೆಯಲ್ಲಿ ಅವಾಂತರ; ಆಹಾರ ಸೇವಿಸಿದ ಮೂವರ ಸಾವು

ಜಾತ್ರೆಯಲ್ಲಿ ಅವಾಂತರ; ಆಹಾರ ಸೇವಿಸಿದ ಮೂವರ ಸಾವು

ಪ್ರಮುಖ ಸುದ್ದಿ, ರಾಜ್ಯ
ತುಮಕೂರು: ಜಾತ್ರೆಯಲ್ಲಿ ಊಟ ಸೇವಿಸಿದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದೆ.ಮಧುಗಿರಿ ಸಮೀಪದ ಬುಳ್ಳಸಂದ್ರ ಗ್ರಾಮದಲ್ಲಿ ಭಾನುವಾರ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಹಲವರು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.‌ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ 80 ವರ್ಷದ ತಿಮ್ಮಕ್ಕ, 86 ವರ್ಷದ ಗಿರಿಯಮ್ಮ ಮತ್ತು ಆಂಧ್ರಪ್ರದೇಶದ ಮಡಕಶಿರಾ ಮೂಲದವರೆನ್ನಲಾದ 45 ವರ್ಷದ ಕಾಟಮ್ಮ ಎಂದು ಗುರುತಿಸಲಾಗಿದೆ....