
ರಾಯಚೂರು ವಿವಿಯಿಂದ ST ಸಮುದಾಯಕ್ಕೆ ಅನ್ಯಾಯ: ರಾಜ್ಯಪಾಲರಿಗೆ ದೂರು
ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದಿಂದ ಆಹ್ವಾನಿಸಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಹ್ವಾನಿಸಿರುವ ನೋಟಿಫಿಕೇಷನ್ ತಕ್ಷಣ ರದ್ದುಗೊಳಿಸಿ ಪರಿಶಿಷ್ಟ ಪಂಗಡಕ್ಕೆ ಶೇ. 7 ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನಾಯಕರ ಒಕ್ಕೂಟ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರಿಗೆ ಮನವಿ ಸಲ್ಲಿಸಿದೆ.ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರನ್ನು ಭೇಟಿ ಮಾಡಿದ ಕರ್ನಾಟಕ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷ ರಮೇಶ್ ಹಿರೇಜಂಬೂರು ನೇತೃತ್ವದ ನಿಯೋಗ, ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ (371-J) ಒಟ್ಟು 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಎಲ್ಲ ವರ್ಗದ ಅರ್ಹ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸುವಾಗ ಪ್ರತಿ ಅಭ್ಯರ್ಥಿಯಿಂದ 1000/-, 2000/- ರೂ. ಶುಲ್ಕ ಪಾವತಿಸಿಕೊಳ್ಳುತ್ತಿದ್ದಾರೆ. ಆದರೆ ಇಲ್ಲಿನ 18 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಸರ್ಕಾರದ ನಿಯಮಾವಳಿಗಳ ಪ್ರಕಾ...








