Thursday, January 29

ರಾಜ್ಯ

ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ, ಬಿಜೆಪಿ ನಾಯಕರ ಆಕ್ರೋಶ

ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ, ಬಿಜೆಪಿ ನಾಯಕರ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಅಂಕುಶ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಪ್ರಯತ್ನ ನಡೆಸಿರುವ ವಿಚಾರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಆದರೆ, ಮತ್ತೊಂದೆಡೆ ಏರ್ಪೋರ್ಟ್ ಆವರಣದಲ್ಲಿ ಸಾಮೂಹಿಕ ನಮಾಜ್ ನಡೆಸಲು ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ನಮಾಜ್ ಬಗ್ಗೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಸಹಿತ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳಿಗೆ ರಾಜ್ಯ ಸರ್ಕಾರ ಹೊಣೆ ಎಂದು ಅವರು ದೂರಿದ್ದಾರೆ. How is this even allowed inside the T2 Terminal of Bengaluru International Airport?Hon’ble Chief Minister @siddaramaiah and Minister @PriyankKharge do you approve of this?Did these individuals obtain prior permission to offer Namaz in a high-security airport zone?Why is it… pic.twitter.com/iwWK2rYWZa— Vijay Prasad (@v...
ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ಆರೋಪ: ಸಿಎಂ, ಗೃಹ ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ

ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ಆರೋಪ: ಸಿಎಂ, ಗೃಹ ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೆಸಾರ್ಟ್‍ಗೆ ಹೋಗಬೇಕಾದ ಅವಶ್ಯಕತೆ ಇಲ್ಲ; ಜೈಲಿಗೆ ಹೋದರೆ ಸಾಕು. ನಿಮಗೆ ಗಾಂಜಾ, ಡ್ರಿಂಕ್ಸ್ (ದಾರೂ) ಸಿಗುತ್ತದೆ. ಬ್ಲೂಫಿಲಂ ನೋಡಬೇಕಾದರೆ ಅದೂ ಸಿಗುತ್ತದೆ. ಮೊಬೈಲ್‍ನಲ್ಲಿ ಮಾತನಾಡಲೂ ವ್ಯವಸ್ಥೆ ಇದೆ. ಇವರಿಗೆ ನಾಚಿಕೆ ಆಗಬೇಕಲ್ಲವೇ ಎಂದು ಆಕ್ಷೇಪಿಸಿದರು. ಭಯೋತ್ಪಾದಕನ ಕೈಗೆ ಮೊಬೈಲ್ ಸಿಗುವುದಾದರೆ ದೇಶದ್ರೋಹದ ಚಟುವಟಿಕೆಗೆ ರಾಜಾಶ್ರಯ ನೀಡಿದಂತೆ ಅಲ್ಲವೇ ಎಂದು ಕೇಳಿದರು. ಉಮೇಶ್ ರೆಡ್ಡಿ ಎಂಬ ಅತ್ಯಾಚಾರಿ ಜೈಲಿನಲ್ಲಿ ಮೋಜು ಮಸ್ತಿ ಮಾಡಬಹುದಾದರೆ, ಜೈಲಿನಲ್ಲಿ ಕ್ರಿಮಿನಲ್‍ಗಳಿಗೆ ರಾಜಾಶ್ರಯ ಇದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಮಾದಕ ವಸ್ತು ಉತ್ಪಾದನಾ ಕಾರ್ಖಾನೆ ಆರಂಭವಾಗುತ್ತದೆ. ಕರ್ನಾಟಕದವರಿಗೆ ಮಾಹಿತಿಯೇ ಇಲ್ಲ; ಮಹಾರಾಷ್ಟ್ರ ಪ...
‘ಧ್ವನಿಸ್ಪಂದನ’ಕ್ಕೆ ರಾಷ್ಟ್ರ ಮಟ್ಟದ ಗೌರವ; ನಾವೀನ್ಯತೆ ತೋರಿದ ಕೆಎಸ್‌ಆರ್‌ಟಿಸಿ ಪ್ರಶಸ್ತಿ ಪುರಸ್ಕೃತ

‘ಧ್ವನಿಸ್ಪಂದನ’ಕ್ಕೆ ರಾಷ್ಟ್ರ ಮಟ್ಟದ ಗೌರವ; ನಾವೀನ್ಯತೆ ತೋರಿದ ಕೆಎಸ್‌ಆರ್‌ಟಿಸಿ ಪ್ರಶಸ್ತಿ ಪುರಸ್ಕೃತ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಗುರುಗ್ರಾಮ್ (ಹರಿಯಾಣ): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತೊಂದು ರಾಷ್ಟ್ರ ಮಟ್ಟದ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ವತಿಯಿಂದ ನೀಡಲಾಗುವ ‘Award of Excellence in Urban Transport – 2025’ ಪ್ರಶಸ್ತಿಯನ್ನು ಈ ಬಾರಿ ನಿಗಮದ ‘ಧ್ವನಿಸ್ಪಂದನ’ ಯೋಜನೆಗೆ ಪ್ರದಾನ ಮಾಡಲಾಗಿದೆ. ಈ ಪ್ರಶಸ್ತಿಯನ್ನು “The State which has implemented the Best Urban Transport Projects during the Previous Year” ವರ್ಗದಲ್ಲಿ ಕೆಎಸ್‌ಆರ್‌ಟಿಸಿ ಮೈಸೂರಿನ ನಗರ ಸಾರಿಗೆಯ ಧ್ವನಿಸ್ಪಂದನ ಉಪಕ್ರಮಕ್ಕೆ ನೀಡಲಾಗಿದೆ. ದೇಶದ ಮೊದಲ ಧ್ವನಿ ಆಧಾರಿತ ಬಸ್ ಗುರುತಿಸುವ ವ್ಯವಸ್ಥೆ ಮೈಸೂರು ನಗರ ಸಾರಿಗೆಯ 200ಕ್ಕೂ ಹೆಚ್ಚು ಬಸ್ಸುಗಳಲ್ಲಿ ಜಾರಿಗೆ ತರಲಾದ ‘ಧ್ವನಿಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್’ ದೇಶದಲ್ಲೇ ಮೊದಲ ಪ್ರಯತ್ನವಾಗಿದೆ. ಈ ವ್ಯವಸ್ಥೆಯ ಮೂಲಕ ದೃಷ್ಟಿವಿಕಲ ಚೇತನ ಪ್ರಯಾಣಿಕರು ಬಸ್ಸುಗಳನ್ನು ಸುಲಭವಾಗಿ ಗುರುತಿಸಲು, ಪ್ರವೇಶದ ಸ್ಥಳವನ್ನು ಸುರಕ್ಷ...
ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆ

ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆ

Focus, ಪ್ರಮುಖ ಸುದ್ದಿ, ರಾಜ್ಯ
ವಿಜಯನಗರ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಭೂ ಒಡೆತನವನ್ನು ಆರನೇ ಗ್ಯಾರಂಟಿಯಾಗಿ, ಏಳನೇ ಗ್ಯಾರಂಟಿಯಾಗಿ ರೈತರಿಗೆ ನೀರನ್ನು ನೀಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಗಂಗಾ ಸ್ನಾನ ತುಂಗಾ ಪಾನ ಎನ್ನುವ ಮಾತಿದೆ. ಅಂದರೆ ತುಂಗಾನದಿ ನೀರು ಕುಡಿಯುವುದಕ್ಕೆ ಅಷ್ಟು ಪವಿತ್ರವಾದುದು. ಅಂತಹ ನೀರನ್ನು ಜನರ ಉಪಯೋಗಕ್ಕಾಗಿ ಕೆರೆಗಳಿಗೆ ಹರಿಸುತ್ತಿದ್ದೇವೆ ಎಂದರು. ಕೆರೆಗಳಿಗೆ ನೀರು ಹರಿಸಲು 800 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಈಗಾಗಲೇ ವೆಚ್ಚ ಮಾಡಲಾಗಿದೆ. ಎಲ್ಲಾ ಕೆರೆಗಳನ್ನು ತುಂಬಿಸುವ ಸಲುವಾಗಿ ವಾರ್ಷಿಕ ವಿದ್ಯುತ್ ವೆಚ್ಚವೇ 80 ಲಕ್ಷ ರೂಪಾಯಿ ತಲುಪುತ್ತದೆ. ಸರ್ಕಾರವು ಒಂದೆರಡು ವರ್ಷ ಈ ವೆಚ್ಚವನ್ನು ಭರಿಸಬಹುದು. ಆದ ಕಾರಣಕ್ಕೆ ಎಲ್ಲಾ...
‘ಹಿಂದೂ ಧರ್ಮವೂ ನೋಂದಣಿಯಾಗಿಲ್ಲ’: RSS ಕಾನೂನು ಸ್ಥಿತಿ ಕುರಿತು ಭಾಗವತ್ ಸ್ಪಷ್ಟನೆ

‘ಹಿಂದೂ ಧರ್ಮವೂ ನೋಂದಣಿಯಾಗಿಲ್ಲ’: RSS ಕಾನೂನು ಸ್ಥಿತಿ ಕುರಿತು ಭಾಗವತ್ ಸ್ಪಷ್ಟನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು, ಸಂಘದ ಕಾನೂನು ದೃಢೀಕರಣ ಹಾಗೂ ನೋಂದಣಿ ಕುರಿತ ಪ್ರಶ್ನೆಗೆ ಸ್ಪಷ್ಟನೆ ನೀಡುತ್ತಾ — “ನೋಂದಣಿ ಇಲ್ಲದೆ ಅನೇಕ ವಿಷಯಗಳು ಅಸ್ತಿತ್ವದಲ್ಲಿವೆ. ಹಿಂದೂ ಧರ್ಮವೂ ಸಹ ನೋಂದಾಯಿಸಲ್ಪಟ್ಟಿಲ್ಲ” ಎಂದು ಹೇಳಿದರು. ಭಾನುವಾರ ಬೆಂಗಳೂರಿನಲ್ಲಿ ನಡೆದ ‘100 ವರ್ಷಗಳ ಸಂಘ ಪ್ರಯಾಣ: ಹೊಸ ದಿಗಂತಗಳು’ ಕಾರ್ಯಕ್ರಮದ ಎರಡನೇ ದಿನದ ಪ್ರಶ್ನೋತ್ತರ ಸತ್ರದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.“ಈ ಪ್ರಶ್ನೆಗೆ ಹಲವಾರು ಬಾರಿ ಉತ್ತರಿಸಲಾಗಿದೆ. ಕೇಳುವವರು ಪುನಃ ಪುನಃ ಅದನ್ನೇ ಕೇಳುತ್ತಾರೆ. ನಾವು ಪ್ರತೀ ಬಾರಿ ಉತ್ತರಿಸುತ್ತಲೇ ಇದ್ದೇವೆ. ಇದು ಹೊಸ ಪ್ರಶ್ನೆಯೇ ಅಲ್ಲ” ಎಂದು ಭಾಗವತ್ ಹೇಳಿದರು, “ಆರ್‌ಎಸ್‌ಎಸ್ 1925ರಲ್ಲಿ ಪ್ರಾರಂಭವಾಯಿತು. ನಮ್ಮ ಸರಸಂಘಚಾಲಕರೇ ಹೋರಾಡುತ್ತಿದ್ದ ಆ ಸರ್ಕಾರದೊಡನೆ ನಾವು ನೋಂದಾಯಿಸಿಕೊಂಡಿರುತ್ತೇವೇ? ಸ್ವಾತಂತ್ರ್ಯಾನಂತರ ಕಾನೂನುಗಳು ನೋಂದಣಿಯನ್ನು ಕಡ್ಡಾಯಗೊಳಿಸಲಿಲ್ಲ. ನೋಂದಣಿಯಾಗದ ಸಂಸ್ಥೆಗೂ ಕಾನೂನು ಮಾನ್ಯತೆ ಇದೆ. ನಮ್ಮನ್ನೂ ಅಂತಹ ಸಂಸ್ಥೆಯೆಂದು ಪರಿಗಣಿಸಲಾಗಿದೆ,” ...
ಕೃಷಿಕ ಸಮಾಜ ರೈತರ ಸಮಸ್ಯೆ ಬಿಂಬಿಸುವ ಸಂಪರ್ಕ ಕೊಂಡಿ: ಎನ್.ಚಲುವರಾಯಸ್ವಾಮಿ

ಕೃಷಿಕ ಸಮಾಜ ರೈತರ ಸಮಸ್ಯೆ ಬಿಂಬಿಸುವ ಸಂಪರ್ಕ ಕೊಂಡಿ: ಎನ್.ಚಲುವರಾಯಸ್ವಾಮಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬಳ್ಳಾರಿ: ರೈತರ ಸಮಸ್ಯೆಗಳನ್ನು ಕೃಷಿ ಇಲಾಖೆಯ ಮೂಲಕ ಸರ್ಕಾರದ ಗಮನ ಸೆಳೆಯುವ ಸಂಪರ್ಕ ಕೊಂಡಿಯಾಗಿ ಕೃಷಿಕ ಸಮಾಜವು ಕೆಲಸ ನಿರ್ವಹಿಸುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಲ್ಲಾ ಕೃಷಿ ಇಲಾಖೆ ಮತ್ತು ಕೃಷಿಕ ಸಮಾಜ ಇವರ ಸಹಯೋಗದಲ್ಲಿ ನಗರದ ಹಳೇ ತಾಲ್ಲೂಕು ಕಚೇರಿ ಆವರಣದಲ್ಲಿಂದು ಏರ್ಪಡಿಸಿದ್ದ ಬಳ್ಳಾರಿ ಘಟಕ ಕೃಷಿಕ ಸಮಾಜದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ ಅವರು, ಸ್ವತಂತ್ರ ಪೂರ್ವದಲ್ಲೇ ಪ್ರಾರಂಭವಾದ ಕೃಷಿಕ ಸಮಾಜವು ತನ್ನದೇ ಆದ ಇತಿಹಾಸ ಹೊಂದಿದೆ. ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅವರಿಗಾಗಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿಯೂ ಕೃಷಿಕ ಸಮಾಜ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು. ಎಲ್ಲಾ ಇಲಾಖೆಗಳಿಗಿಂತಲೂ ಕೃಷಿ ಇಲಾಖೆಯು ವಿಶಿಷ್ಟವಾಗಿದೆ. ಲೆಸ್ಲಿ ಚಾರ್ಲ್ಸ್ ಕೋಲ್ಮನ್ ಎಂಬುವವರು ಸ್ವತಂತ್ರ ಪೂರ್ವದಲ್ಲಿ ರಾಜ್ಯದ ಕೃಷಿ ಇಲಾಖೆಯ ಮೊದಲ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಕೃಷಿಕ ಸಮಾಜ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯದ 36 ತಾಲ್ಲೂಕುಗಳಲ್ಲಿ ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕ...
ಶಿಶುವನ್ನು ಬೀದಿಯಲ್ಲಿ ಬಿಸಾಡಿದ ಪಾಪಿಗಳು; ಹಾಲುಣಿಸಿ ಮಾನವೀಯತೆ ಮೆರೆದ ಆಂಜಿನಮ್ಮ ಕುಟುಂಬ

ಶಿಶುವನ್ನು ಬೀದಿಯಲ್ಲಿ ಬಿಸಾಡಿದ ಪಾಪಿಗಳು; ಹಾಲುಣಿಸಿ ಮಾನವೀಯತೆ ಮೆರೆದ ಆಂಜಿನಮ್ಮ ಕುಟುಂಬ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ: ಜನ್ಮ ಪಡೆದ ಕೆಲವೇ ವಾರಗಳ ನವಜಾತ ಗಂಡು ಶಿಶುವನ್ನು ಮಾನವೀಯತೆ ಮರೆತ ಪಾಪಿಗಳು ಬೀದಿಯಲ್ಲೇ ಬಿಸಾಡಿ ಹೋದ ಹೃದಯ ಕಲುಕುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪೆರಮಗೊಂಡನಹಳ್ಳಿ ಲೇಔಟ್‌ ಬಳಿ ನಡೆದಿದೆ. ಮಗು ಅಳುವ ಶಬ್ದ ಕೇಳಿ ಸ್ಥಳೀಯ ಯುವಕರು ತಕ್ಷಣ ಸ್ಥಳಕ್ಕೆ ಧಾವಿಸಿ, ಮಗು ಜೀವಂತವಾಗಿರುವುದನ್ನು ಕಂಡು ಸಹಾಯವಾಣಿ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಗು ತೀವ್ರ ಹಸಿವಿನಿಂದ ಅಳುತ್ತಿದ್ದುದರಿಂದ ಗ್ರಾಮದ ಆಂಜಿನಮ್ಮ ಕುಟುಂಬವು ಹಾಲುಣಿಸಿ ಮಾನವೀಯತೆ ಮೆರೆದಿದೆ. ನಂತರ ಮಕ್ಕಳ ಸಹಾಯವಾಣಿ ತಂಡ ಸ್ಥಳಕ್ಕೆ ಬಂದು ಮಗುವನ್ನು ವಶಕ್ಕೆ ಪಡೆದಿದೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪಾಪಿ ಪೋಷಕರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಘಟನೆ ಮತ್ತೆ ಸಮಾಜದಲ್ಲಿ ಮಾನವೀಯತೆ ಹಾಗೂ ಮಕ್ಕಳ ರಕ್ಷಣೆಯ ಅಗತ್ಯತೆಯ ಬಗ್ಗೆ ಚಿಂತನೆ ಮೂಡಿಸಿದೆ....
ರಸ್ತೆ ಗುಂಡಿ, ಕಸ ಅವಾಂತರ ವಿರುದ್ಧ ಬಿಜೆಪಿ ಜಾಗೃತಿ ಅಭಿಯಾನ

ರಸ್ತೆ ಗುಂಡಿ, ಕಸ ಅವಾಂತರ ವಿರುದ್ಧ ಬಿಜೆಪಿ ಜಾಗೃತಿ ಅಭಿಯಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಗುಂಡಿ ಬಿದ್ದ ರಸ್ತೆಗಳು ಮತ್ತು ಕಸ ವಿಲೇವಾರಿಯಾಗದೇ ಇರುವುದು ಕಾಂಗ್ರೆಸ್ ಸರ್ಕಾರ ವೈಫಲ್ಯ ಖಂಡಿಸಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ಜನಜಾಗೃತಿ ಅಭಿಯಾನ ನಡೆಯಿತು. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರವರು, ಶಾಸಕರುಗಳಾದ ಎಸ್.ಸುರೇಶ್ ಕುಮಾರ್, ಡಾ.ಸಿ.ಎನ್.ಅಶ್ವಥ್ ನಾರಾಯಣ್, ಮುನಿರತ್ನ, ವಿಧಾನಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ್, ಬಿಜೆಪಿ ಉತ್ತರ ಜಿಲ್ಲಾಧ್ಯಕ್ಷರಾದ ಎಸ್.ಹರೀಶ್, ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗುಂಡಿ ಬಿದ್ದ ರಸ್ತೆಗಳು ಹಾಗೂ ಕಸ ರಾಶಿಗಳು ಬಿದ್ದಿರುವ ಸ್ಥಳಕ್ಕೆ ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಆರ್.ಅಶೋಕ್ ರವರು ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಗುಂಡಿಗಳ ಸರ್ಕಾರ, ಗುಂಡಿಗಳ ಕ್ಯಾಬಿನೇಟ್ ಆಗಿದೆ ಎಂದರು. ಎರಡುವರೆ ವರ್ಷಗಳಿಂದ ಯಾವುದೇ ಅಭವೃದ್ದಿ ಕೆಲಸವಾಗಿಲ್ಲ ಗ್ಯಾರೆಂಟಿ, ಗ್ಯಾರೆಂಟಿ ಎಂದು ಹೇಳುತ್ತಿದ್ದಾರೆ. ಗುಂಡಿ ಮುಚ್ಚಲು...
‘ನಮ್ಮ ಮತ- ನಮ್ಮ ಹಕ್ಕು’: ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ

‘ನಮ್ಮ ಮತ- ನಮ್ಮ ಹಕ್ಕು’: ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ನಮ್ಮ ಮತ- ನಮ್ಮ ಹಕ್ಕು' ಘೋಷಣೆಯಡಿ, ಮತಗಳ್ಳತನ ವಿರುದ್ಧದ ರಾಹುಲ್ ಗಾಂಧಿಯವರ ಹೋರಾಟಕ್ಕೆ ಕೈ ಜೋಡಿಸಿರುವ ಪ್ರದೇಶ ಕಾಂಗ್ರೆಸ್, ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ ಮಾಡಿದೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಉಪಮುಖ್ಯಮಂತ್ರಿಯೂ ಆದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿಸಮೇತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ ಎಂದರು. ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು ರಾಜ್ಯದ ಜನರು ಗಮನಿಸಿದ್ದಾ...
‘ಸಂವೇದನೆ ಉಳ್ಳವರು ನರನಿಂದ ನಾರಾಯಣರಾಗಬಲ್ಲರು’ ಡಾ.ಮೋಹನ್‌ ಭಾಗವತ್‌

‘ಸಂವೇದನೆ ಉಳ್ಳವರು ನರನಿಂದ ನಾರಾಯಣರಾಗಬಲ್ಲರು’ ಡಾ.ಮೋಹನ್‌ ಭಾಗವತ್‌

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಮಾಜದ ಕುರಿತು ಸೂಕ್ಷ್ಮ ಸಂವೇದನೆಯನ್ನು ಬೆಳೆಸಿಕೊಂಡ ವ್ಯಕ್ತಿಯು ನರನಿಂದ ನಾರಾಯಣನಾಗಬಲ್ಲ. ಅದೇ ರೀತಿ ಸಂಸ್ಕಾರ ರಹಿತ ವ್ಯಕ್ತಿಯು ನರಾಧಮನೂ ಆಗುವ ಅಪಾಯವಿದೆ. ಇಡೀ ಸಮಾಜ ಸಂವೇದನಶೀಲವಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್‌ ಭಾಗವತ್‌ ಅವರು ಅಭಿಪ್ರಾಯಪಟ್ಟರು. ಅವಕಾಶವಂಚಿತ ಮಕ್ಕಳ ಆಶ್ರಯ ತಾಣವಾದ 'ನೆಲೆ'ಯ 25 ವರ್ಷದ ಸಮಾರೋಪ ಸಮಾರಂಭದ ಪ್ರಯುಕ್ತ ಜೆ.ಪಿ. ನಗರದ ಆರ್‌.ವಿ. ದಂತ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಒಂದು ಕೆಲಸವನ್ನು 25 ವರ್ಷ ನಿರಂತರವಾಗಿ ನಡೆಸುವುದು ಕಷ್ಟದ ಕೆಲಸ. ಕೆಲಸ‌ ಒಳ್ಳೆಯದೇ ಆದರೂ ಸಾಗುವ ದಾರಿಯಲ್ಲಿ ಬಳಲಿಕೆ ಆಗುತ್ತದೆ. ಗುಡ್ಡ ಏರಬೇಕಾದರೆ ಶ್ರಮ ವಹಿಸಬೇಕಾಗುತ್ತದೆ, ಇಳಿಯಬೇಕಾದರೂ ಸಮತೋಲನಕ್ಕೆ ಶ್ರಮ ವಹಿಸಬೇಕಾಗುತ್ತದೆ. ಯಾರು ಜೊತೆಗೆ ಬರಲಿ, ಬಿಡಲಿ ಎಂಬ ಚಿಂತೆಯಿಲ್ಲದೆ ಆರಂಭವಾದ ನೆಲೆಯ ಕೆಲಸ 25 ವರ್ಷ ಪೂರೈಸಿ ಮುನ್ನಡೆಯುತ್ತಿದೆ ಎನ್ನುವುದು ನಮ್ಮೆಲ್ಲರಿಗೆ ಸಂತಸದ ವಿಚಾರ ಎಂದು ನುಡಿದರು‌. ಭೌತಿಕವಾದದ ಜಾಲಕ್ಕೆ ಸಿಕ್ಕಿರುವ ಪ್ರಪಂಚವು ಇಂದು ಎಲ್ಲದರಲ್ಲೂ ಲಾಭ‌-ನಷ್ಟದ ಯೋಚ...