‘ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ’; ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ
ಬೆಂಗಳೂರು: ರೈತರ ಬೇಡಿಕೆಗಳನ್ನು ಕಾಲಕಾಲಕ್ಕೆ ಈಡೇರಿಸುವುದು ಅಧಿಕಾರದಲ್ಲಿರುವ ಸರ್ಕಾರಗಳ ಕರ್ತವ್ಯ. ಕಾಂಗ್ರೆಸ್ ಸರ್ಕಾರ ಈ ನಿಟ್ಟಿನಲ್ಲಿ ಈವರೆವಿಗೂ ಅನುಸರಿಸಿದ ಉಪೇಕ್ಷೆ ಧೋರಣೆಗಳನ್ನು ಮುಂದಾದರೂ ನಿಲ್ಲಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ದೇಶದ ಬೆನ್ನೆಲುಬು ರೈತ, 'ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ' ಎಂಬ ಇತಿಹಾಸ ಮರುಕಳಿಸಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ನಡೆದ ಕಬ್ಬು ಬೆಳೆಗಾರ ರೈತರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ರೈತರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3300 ರೂ ದರ ನಿಗದಿ ಪಡಿಸಿ ನಿರ್ಧಾರ ಕೈಗೊಂಡಿದೆ. ಹೋರಾಟನಿರತ ರೈತ ಬಂಧುಗಳು ನಿರ್ಧಾರವನ್ನು ಸ್ವಾಗತಿಸಿ ಮುಷ್ಕರವನ್ನು ಕೈ ಬಿಟ್ಟಿರುವುದು ಸಮಂಜಸವಾಗಿದೆ ಎಂದು ಅವರು ಹೇಳಿದ್ದಾರೆ.
ಈ ಹೋರಾಟದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿ, ರೈತನಾಯಕ ಯಡಿಯೂರಪ್ಪ ಅವರ ಪುತ್ರನಾಗಿ ಭಾಗವಹಿಸಿ ರೈತ ಹೋರಾಟಕ್ಕೆ ದನಿಗೂಡಿಸಿದ ಸಂದರ್ಭ ನನ್ನಲ್...








