Saturday, September 19

ರಾಜ್ಯ

ಸಿಎಂ ಬದಲಾವಣೆ ಸುದ್ದಿ! ಉತ್ತರಾಧಿಕಾರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್ ಚೇರ್ ರೀತಿ ಸ್ಪರ್ಧೆ ಎಂದ ಅಶೋಕ್ 

ಸಿಎಂ ಬದಲಾವಣೆ ಸುದ್ದಿ! ಉತ್ತರಾಧಿಕಾರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್ ಚೇರ್ ರೀತಿ ಸ್ಪರ್ಧೆ ಎಂದ ಅಶೋಕ್ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿದ್ದರಾಮಯ್ಯ ಅವರು ಮೂಡಾ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಸನ್ನಿಹಿತ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದೆ. ಈ ಕುರಿತ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್,  ಕಾಂಗ್ರೆಸ್ ಪಕ್ಷದಲ್ಲೀಗ ಸಿಎಂ ಸ್ಥಾನಕ್ಕಾಗಿ ನಾಯಕರ ಮ್ಯೂಸಿಕ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಈ ವಿಷಯ ಬಹಳ ಚರ್ಚೆಯಾಗುತ್ತಿದೆ ಎಂದರು.ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ, ಜನರಿಗೆ ನಿಯತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿಂದಿಸುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅಧಿಕಾರಿಗಳು ...
ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ.. 

ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ.. 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು ಎಂದರು.ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು.‌ ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕು. ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವುದು ಸರ್ಕಾರದ ಕರ್ತವ್ಯ. ಈ ಕರ್ತವ್ಯ ಮಾಡದೇ ಇದ್ದಲ್ಲಿ ಅದು ಸರ್ಕಾರದ ನಿರ್ಲಕ್ಷ್ಯವೇ ಹೊರತು ರಾಜ್ಯಪಾಲರ ತಪ್ಪಲ್ಲ. ಸರ್ಕಾರ ತಪ್ಪು ಮಾಡಿ ಅದನ್ನು ರಾಜ್ಯಪಾ...
11 ಮಸೂದೆಗಳು ವಾಪಸ್‌: ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ಗರಂ

11 ಮಸೂದೆಗಳು ವಾಪಸ್‌: ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ಗರಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷ ತೀವ್ತಗೊಂಡಂತೆ ಭಾಸವಾಗುತ್ತಿದೆ. ಇದೇ ವೇಳೆ ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಸಹಿತ 15 ಶಾಸಕರು ಜಂಟಿ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತ ಎಂದು ಸಿಟ್ಟು ಹೊರಹಾಕಿದ್ದು, ತಮ್ಮ ನಿಲುವನ್ನು ಮರು ಪರಿಶೀಲಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ಕಾಂಗ್ರೆಸ್‌ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್‌, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್‌, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ ,DT ಶ್ರೀನಿವಾಸ, ಶರಣಗೌಡ ಪಾಟೀಲ್‌, ಭೀಮರಾವ್‌ ಪಾಟಿಲ. ತಿಪ್ಪಣ್ಣಾ ಕಮಕನೂರು ಅವರು ಜಂಟಿ ಮಾಧ್ಯಮ ಹೇಳಿಕೆ ನೀಡಿ,ದ್ದಾರೆ.ಆಗಸ್ಟ್‌ ತಿಂಗಳಲ್ಲಿ ರಾ...
ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆನಡೆಸಿದೆ.ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು/ಪಾಲುದಾರರನ್ನು ಸಂಪರ್ಕಿಸಿ ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದರು.ಡಾ. ರಾಥೋಡ್ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಲ್ಲಾ ನಿರ್ದೇಶಕರುಗಳು, ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿರ್ದೇಶನ ನೀಡಿದರು. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು ಇನ್ನಿತರೆ ಪಾಲುದಾರರೊಂದಿಗೆ ಸಮಾಲೋಚಿಸಿ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈ...
ಮಂಕಿ ಫಾಕ್ಸ್ ಆತಂಕ : ವಿಮಾನ ನಿಲ್ದಾಣ, ಬಂದರಿನಲ್ಲಿ ಕಡೆ ಬಿಗಿಕ್ರಮ

ಮಂಕಿ ಫಾಕ್ಸ್ ಆತಂಕ : ವಿಮಾನ ನಿಲ್ದಾಣ, ಬಂದರಿನಲ್ಲಿ ಕಡೆ ಬಿಗಿಕ್ರಮ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು:  ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟಿಲ್‌ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡ...
ಪ್ರಾಸಿಕ್ಯೂಷನ್ ಬೆನ್ನಲ್ಲೇ ರಾಜ್ಯಪಾಲರ ಮತ್ತೊಂದು ಕ್ರಮ; ಸಿದ್ದು ಸರ್ಕಾರದ 11 ಮಸೂದೆಗಳು ವಾಪಸ್

ಪ್ರಾಸಿಕ್ಯೂಷನ್ ಬೆನ್ನಲ್ಲೇ ರಾಜ್ಯಪಾಲರ ಮತ್ತೊಂದು ಕ್ರಮ; ಸಿದ್ದು ಸರ್ಕಾರದ 11 ಮಸೂದೆಗಳು ವಾಪಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಡಾ ನಿವೇಶನ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷ ತೀವ್ತಗೊಂಡಂತೆ ಭಾಸವಾಗುತ್ತಿದೆ.ಆಗಸ್ಟ್‌ ತಿಂಗಳಲ್ಲಿ ರಾಜ್ಯಪಾಲರು 6 ಪ್ರಮುಖ ಮಸೂದೆಗಳನ್ನು ಹಿಂತಿರುಗಿಸಿದ್ದಾರೆ. ಒಟ್ಟು 11 ವಿಧೇಯಕಗಳನ್ನು ರಾಜ್ಯಪಾಲರು ವಾಪಸ್‌ ಕಳಿಸಿದ್ದಾರೆ ಎನ್ನಲಾಗಿದೆ.ಕರ್ನಾಟಕ ಸಾರ್ವಜನಿಕ ಭ್ರಷ್ಟಾಚಾರ ತಡೆ ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ, ಕರ್ನಾಟಕ ಟೌನ್‌ ಆಂಡ್‌ ಕಂಟ್ರೀ ಪ್ಲಾನಿಂಗ್‌ ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ಅನರ್ಹತೆ ತಡೆ ವಿಧೇಯಕ, ಕರ್ನಾಟಕ ಪುರಸಭಗಳು ಮತ್ತು ಇತರೇ ಕೆಲವು ಕಾನೂನು ವಿಧೇಯಕ, ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ ...
‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ

‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಎಂಟಿಸಿ ಲಾಭದಲ್ಲಿದೆ ಎಂದು ಕಾಂಗ್ರೆಸ್ ಸರ್ಕಾರ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.ಬಿಜೆಪಿಯ ಟ್ವೀಟ್‌ಗೆ ತಮ್ಮದೇ ದಾಟಿಯಲ್ಲಿ ಉತ್ತರ ನೀಡೊರುವ ರಾಮಲಿಂಗಾರೆಡ್ಡಿ, 'ಸಾಮಾನ್ಯ ಜ್ಞಾನವೇ ಇಲ್ಲದವರೊಂದಿಗೆ‌ ಪ್ರತಿದಿನ ಅವರು ಮಾಡುವ ಟ್ಟೀಟ್‌ಗಳಿಗೆ ಉತ್ತರ ಕೊಡಬೇಕಾಗಿದೆಯಲ್ಲ ಎಂಬುದು ದುರಂತ. ಆದರೂ ನಮ್ಮ‌ ಜವಾಬ್ದಾರಿಯಿಂದ ನಾವು ನುಳುಚಿಕೊಳ್ಳುವುದಿಲ್ಲ' ಎಂದಿದ್ದಾರೆ.ಕರ್ನಾಟಕ ಸರ್ಕಾರವು 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಅರಿವು ಕೂಡ ಇವರಿಗೆ ಇಲ್ಲವಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.ಸಾರಿಗೆ ಸಂಸ್ಥೆಗಳ‌ ಅಭಿವೃದ್ಧಿಯ ಎರಡು ...
ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ: ಸಿಎಂ

ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ: ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದರು‌ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂ...
‘ಮಾಂಗಲ್ಯ ಭಾಗ್ಯ ಯಶೋಗಾಥೆ; ಸಾಮೂಹಿಕ ಮದುವೆಗಳಿಗೆ ಉತ್ತೇಜನ; ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

‘ಮಾಂಗಲ್ಯ ಭಾಗ್ಯ ಯಶೋಗಾಥೆ; ಸಾಮೂಹಿಕ ಮದುವೆಗಳಿಗೆ ಉತ್ತೇಜನ; ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಾಂಗಲ್ಯ ಭಾಗ್ಯ ಯೋಜನೆಯಡಿ ಇಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 66 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿತ್ತು.ಪ್ರವರ್ಗ 'ಎ' ಮತ್ತು 'ಬಿ' ಅಧಿಸೂಚಿತ ದೇವಾಲಯಗಳಲ್ಲಿ 'ಮಾಂಗಲ್ಯ ಭಾಗ್ಯ' ಯೋಜನೆ ಅಡಿ ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸಲಾಯಿತು. ಈ ಕಾರ್ಯಕ್ರಮ ಮುಜರಾಯಿ ಸಚಿವರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದಿದ್ದು, ಶಾಸಕ ಎಂ.ಆರ್. ಮಂಜುನಾಥ್, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಆಧಿಕಾರಿಗಳು ಉಪಸ್ಥಿತರಿದ್ದರು.  ದೇಶಿಕೇಂದ್ರ ಮಹಾಸ್ವಾಮಿ, ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರು ಆಶೀರ್ವಚನವನ್ನು ನೀಡಿದರು.ಈ ಯೋಜನೆಯಡಿಯಲ್ಲಿ ವಧು-ವರರಿಗೆ ರೂ.55,000/-ಗಳ ಪ್ರೋತ್ಸಾಹ ಧನವನ್ನು ಆದಾಯ ಕಡಿಮೆ ಇರುವ ದೇವಾಲಯಗಳ ನಿಧಿಯಿಂದ ಬಳಸಿಕೊಳ್ಳಲಾಗುವುದು. ಆದಾಯ ಕಡಿಮೆ ಇರುವ ದೇವಾಲಯಗಳಲ್ಲಿ ರೂ.55,000/-ಗಳ ಪ್ರೋತ್ಸಾಹ ಧನವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ನೀಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು....
‘ಸತ್ಯಮೇವ ಜಯತೆ’; ಸಿದ್ದರಾಮಯ್ಯ ಕುರಿತು ಬೆಳವಣಿಗೆಯ ಕುತೂಹಲ

‘ಸತ್ಯಮೇವ ಜಯತೆ’; ಸಿದ್ದರಾಮಯ್ಯ ಕುರಿತು ಬೆಳವಣಿಗೆಯ ಕುತೂಹಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟು ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಕೋಲಾಹಲಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷ ಏರ್ಪಟ್ಟಿದೆ.ಒಂದೆಡೆ ಈ ಪ್ರಾಸಿಕ್ಯೂಷನ್ ಅನಿಮತಿಗೆ ತಡೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ. ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದು ಪ್ರತಿಕ್ರಿಯಿಸಿದ್ದಾರೆ.ಸಾಮಾಜಿಕ ಜಾಲತಾಣ 'X'ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್...