
ರಾಜ್ಯದ ಜನರಿಗೆ ‘ಗ್ಯಾರೆಂಟಿ’ ನ್ಯಾಯ; ಸ್ವಾತಂತ್ಯೋತ್ಸವದಲ್ಲಿ ಕೆಪಿಸಿಸಿ ನಾಯಕರ ಭರವಸೆ
ಬೆಂಗಳೂರು: "ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಆವರಣದಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು "ಸ್ವಾತಂತ್ರ ಹೋರಾಟದಲ್ಲಿ ಸುಮಾರು 6.5 ಲಕ್ಷ ಜನ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ ಎಂಬುದು ನಮ್ಮ ಹೆಗ್ಗಳಿಕೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಧೈರ್ಯದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ಎಂದು ಹೇಳಬೇಕು" ಎಂದರು."ಶಾಮ ಪ್ರಸಾದ ಮುಖರ್ಜಿ ಅವರು ಕ್ವಿಟ್ ಇಂಡಿಯಾ ಚಳುವಳಿ ಹತ್ತಿಕ್ಕಬೇಕು ಎಂದು ಬ್ರಿಟಿಷರಿಗೆ ಪತ್ರ ಬರೆದಿದ್ದರು. ಇವರ ಹಿಂಬಾಲಕರು ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ಕೇಳುತ್ತಾರೆ. ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿರುವ ಸಾರ್ವಜನಿಕ ವಲಯ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದೇ ಕಾ...





