Friday, January 30

ರಾಜ್ಯ

ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಹೆಸರಿಡುವಂತೆ ಕೇಂದ್ರಕ್ಕೆ ಸಿಎಂ ಆಗ್ರಹ

ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಹೆಸರಿಡುವಂತೆ ಕೇಂದ್ರಕ್ಕೆ ಸಿಎಂ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ರಾಣಿ ಚೆನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಕೂಡ ನಮ್ಮ ಸರ್ಕಾರವೇ. ಹಲವು ಮಹಾನ್ ವ್ಯಕ್ತಿಗಳ ಜಯಂತಿಯನ್ನು ಆಚರಣೆಗೆ ತಂದಿದ್ದು ಕೂಡ ನಾವೆ. ಇದು ನಮ್ಮ‌ ಸಂಸ್ಕೃತಿ ಎಂದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಅವರು ಸ್ಮರಿಸಿದರು. 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ ಎಂದು ಸಿದ್ದರಾಮಯ್ಯ ಹೇಳಿದರು. ...
ವಂಚಕ ಸಂಬಂಧಿ ಪರ ಬ್ಯಾಟಿಂಗ್; ಸಿದ್ದು ಆಪ್ತನನ್ನು ಸೆಟಲ್‌ಮೆಂಟ್‌ ಸಚಿವ ಎಂದ ಜೆಡಿಎಸ್

ವಂಚಕ ಸಂಬಂಧಿ ಪರ ಬ್ಯಾಟಿಂಗ್; ಸಿದ್ದು ಆಪ್ತನನ್ನು ಸೆಟಲ್‌ಮೆಂಟ್‌ ಸಚಿವ ಎಂದ ಜೆಡಿಎಸ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವಂಚಕ ಸಂಬಂಧಿಗೆ ಸಹಾಯ ಮಾಡಲು ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ವಂಚನೆ ಪ್ರಕರಣದಲ್ಲಿ ತಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಅವರು, ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ಜೆಡಿಎಸ್ ಪಕ್ಷ ಆರೋಪಿಸಿದೆ. ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆಯುವ ಸಚಿವ @BZZameerAhmedK ನಿಮಗೆ ನಾಚಿಕೆಯಾಗಬೇಕು !ರಾಜ್ಯದ ರೈತರಿಗೆ ವಂಚಿಸಿರುವ ನಿಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವುದು ಅಕ್ಷಮ್ಯ. ರಾಜ್ಯದ ಜವಾಬ್ದಾರಿಯುತ ಸಚಿವರಾಗಿ ವಂಚಕರ ಪರ ವಹಿಸಿ,… pic.twitter.com/rNrq8xNbTV— Janata Dal Secular (@JanataDal_S) October 25, 2025 ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಫೋನೋ ಆಡಿಯೋವನ್...
‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?

‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ಹಿಟ್ ಅಂಡ್ ರನ್ ಪ್ರಕರಣದ ಪೊಲೀಸ್ ತನಿಖೆಯಲ್ಲಿ ಕನ್ನಡ ನಟಿ ಮತ್ತು ಬಿಗ್ ಬಾಸ್ ಕನ್ನಡ ಸ್ಪರ್ಧಿ ದಿವ್ಯಾ ಸುರೇಶ್ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಮೂವತ್ನಾಲ್ಕು ವರ್ಷದ ಅನಿತಾ ಅವರ ಕಾಲಿನ ಮೂಳೆ ಮುರಿತಕ್ಕೊಳಗಾಗಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ ಇಬ್ಬರು ಸವಾರರು ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. Weeks after a late-night hit-and-run accident in Bengaluru, the city traffic police on Friday identified ex Bigg Boss Kannada contestant Divya Suresh as the alleged driver of the car involved in the accident that left three people injured. The accident took place near Nithya… pic.twitter.com/ucoigQ6FWn— Karnataka Portfolio (@karnatakaportf) October 24, 2025 ದಿವ್ಯಾ ಸುರೇಶ್ ಪ್ರಸ್ತುತ ಒಂದು ಪ್...
ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಅದರಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಅವರು ಅಕ್ರೋಶ ವ್ಯಕ್ತಪಡಿಸಿರುವ ವೈಖರಿ ಗಮನಸೆಳೆದಿದೆ. ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ. ನೂರು ವರ್ಷಗಳಿಂದ ದೇಶಕ್ಕಾಗಿ ಮತ್ತು ಸಮಾಜಕ್ಕಾಗಿ ಕೆಲಸ ಮಾಡಿರುವ… pic.twitter.com/oP5sHqdPU7— BJP Karnataka (@BJP4Karnataka) October 24, 2025 'ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ' ಎಂದು ಛಲವಾದಿ ನಾರಾಯಣ...
ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧಾರ

ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ಗುರಿಯೊಂದಿಗೆ ಕೈಗೊಂಡಿರುವ ಈ ಕ್ರಮದಡಿ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವುದು, ಅವರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದು ಹಾಗೂ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವುದು ಸಂಘಗಳ ಪ್ರಮುಖ ಉದ್ದೇಶವಾಗಲಿದೆ. “ಗೃಹಲಕ್ಷ್ಮಿಯರಿಗೆ ಆರ್ಥಿಕ ಬಲ – ಸ್ವ ಉದ್ಯೋಗಕ್ಕೆ ಬೆಂಬಲ” ಎಂಬ ಆಶಯದೊಂದಿಗೆ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣದ ನವ ಅಧ್ಯಾಯವನ್ನು ಆರಂಭಿಸಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ಗುರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ "ಗೃಹಲಕ್ಷ್ಮಿ ಯೋಜನೆ"ಯ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸುವ ಮಹತ್ವದ ನಿರ್ಣ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವೇ? ಯತೀಂದ್ರ ಹೇಳಿಕೆ ಬಗ್ಗೆ ಡಿಕೆಶಿ ಸ್ಪಷ್ಟನೆ ಹೀಗಿದೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವೇ? ಯತೀಂದ್ರ ಹೇಳಿಕೆ ಬಗ್ಗೆ ಡಿಕೆಶಿ ಸ್ಪಷ್ಟನೆ ಹೀಗಿದೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ವೈಜ್ಞಾನಿಕ ಹಾಗೂ ಪ್ರಗತಿಪರ ಚಿಂತನೆ ಹೊಂದಿರುವ ಸತೀಶ್ ಜಾರಕಿಹೊಳಿ ಅವರು ನಾಯಕತ್ವ ವಹಿಸಬಹುದು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವೇ ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ. ಯತೀಂದ್ರರ ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ, ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, 'ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯೇ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ' ಎಂದಿದ್ದಾರೆ. ರಾಜ್ಯ ನಾಯಕತ್ವ ಬದಲಾವಣೆಯ ಕುರಿತಂತೆ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಂತ್ರಾಲಯ ಪ್ರವಾಸದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, “ಯತೀಂದ್ರ ಏನು ಹೇಳಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ” ಎಂದರು. “ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು ಪಕ್ಷದ ಅಧ್ಯಕ್ಷನೂ,...
2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

Focus, ಪ್ರಮುಖ ಸುದ್ದಿ, ರಾಜ್ಯ
ರಾಯಚೂರು: “2028ರಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಅದಕ್ಕಾಗಿ ಕಾರ್ಯಕರ್ತರು ಸಿದ್ಧತೆ ಪ್ರಾರಂಭಿಸಬೇಕು,” ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಪಂಚಮುಖಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವು ವ್ಯಕ್ತಿಗಳಿಗಿಂತ ಶ್ರೇಷ್ಠ ಎಂಬುದನ್ನು ಕಾರ್ಯಕರ್ತರು ಅರಿತುಕೊಳ್ಳಬೇಕು ಎಂದು ಹೇಳಿದರು. “ಪಕ್ಷವೇ ನಮಗೆ ಅಸ್ತಿತ್ವ ನೀಡಿದೆ. ಪಕ್ಷದ ಆಶ್ರಯದಿಂದಲೇ ನಾನು ಉಪಮುಖ್ಯಮಂತ್ರಿಯಾಗಿದ್ದೇನೆ, ಬಸನಗೌಡ ದದ್ದಲ್ ಶಾಸಕರಾಗಿದ್ದಾರೆ, ಮತ್ತು ಎನ್.ಎಸ್. ಬೋಸರಾಜು ಸಚಿವರಾಗಿದ್ದಾರೆ,” ಎಂದರು. “ಪಕ್ಷದ ಕಾರ್ಯಕರ್ತರ ಸೇವೆ ಹಾಗೂ ನಿಷ್ಠೆಗೆ ಗೌರವ ನೀಡಲಾಗುತ್ತದೆ. ಯಾವುದೇ ಹುದ್ದೆಯನ್ನು ಅಲ್ಪ ಎಂದು ಭಾವಿಸಬೇಡಿ; ರಾಜಕೀಯದಲ್ಲಿ ಯಾರಾದರೂ ಯಾವುದೇ ಮಟ್ಟಕ್ಕೆ ಏರಬಹುದು,” ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು. “ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಾವು ಐದು ಖಾತರಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬಿಜೆಪಿ ಅಣಕಿಸಿದರೂ, ನಮ್ಮ ಮೊದಲ ಸಚಿವ ...
‘ನೀವು ಮರೆತಿದ್ದರೆ, ಈ ವೀಡಿಯೊದಲ್ಲಿನ ಚರ್ಚೆನ್ನು ಮತ್ತೊಮ್ಮೆ ನೋಡಿ’; ಪ್ರಿಯಾಂಕ್’ಗೆ ಐಶ್ವರ್ಯ ಟಾಂಗ್

‘ನೀವು ಮರೆತಿದ್ದರೆ, ಈ ವೀಡಿಯೊದಲ್ಲಿನ ಚರ್ಚೆನ್ನು ಮತ್ತೊಮ್ಮೆ ನೋಡಿ’; ಪ್ರಿಯಾಂಕ್’ಗೆ ಐಶ್ವರ್ಯ ಟಾಂಗ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರೆಸ್ಸೆಸ್ ಬಿಜೆಪಿ ನಾಯಕರನ್ನು ಟೀಕಿಸುವ ಆತುರದಲ್ಲಿ ದಿವಂಗತ ಅನಂತ್ ಕುಮಾರ್ ಅವರ ಹಳೆಯ ವೀಡಿಯೋವನ್ನು ವೈರಲ್ ಮಾಡಿದ ಸಚಿವ ಪ್ರಿಯಾಂಕ್ ವಿರುದ್ಧ ಐಶ್ವರ್ಯ ಅನಂತಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. 'Priank Kharge, this is a new low for you too' ಎನ್ನುತ್ತಾ ಕಟುವಾಗಿ ಟೀಕಿಸಿರುವ ಐಶ್ವರ್ಯ, 'ಆರ್‌ಎಸ್‌ಎಸ್‌ಗೆ ಮಸಿ ಬಳಿಯುವ ನಿಮ್ಮ ವಿಫಲ ಪ್ರಯತ್ನದ ನಂತರ, ನೀವು ಈಗ ಕರ್ನಾಟಕಕ್ಕಾಗಿ ಅನಂತಕುಮಾರ್ ಜಿ ಅವರ ಕೆಲಸವನ್ನು ನಿಮ್ಮ ಸ್ವಂತ ಪಕ್ಷದ ನಾಯಕರು ಸಹ ಮೆಚ್ಚಿದ್ದಾರೆ. ಆದಷ್ಟೇ ನೀವು ಮರೆತಿದ್ದೀರಿ' ಎಂದು ಚಿವುಟಿದ್ದಾರೆ. 'ನೀವು ಮರೆತಿದ್ದರೆ, ಈ ವೀಡಿಯೊದಲ್ಲಿನ ಚರ್ಚೆಯು ನಿಮ್ಮ ಪಕ್ಷದ ಹೈಕಮಾಂಡ್‌ನ ಮೊದಲಕ್ಷರಗಳನ್ನು ಹೊಂದಿದ್ದ ಕಾಂಗ್ರೆಸ್ ಸಿಎಂ ಬಗ್ಗೆ ಒಬ್ಬ ಕುಖ್ಯಾತರ ಡೈರಿಯ ಬಗ್ಗೆ ಮತ್ತು ಅವರಿಗೆ ನೀಡಲಾದ ದೊಡ್ಡ ಪ್ರಮಾಣದ ಲಂಚದ ಬಗ್ಗೆ ಎಂಬುದನ್ನು ನಿಮಗೆ ನೆನಪಿಸುತ್ತೇನೆ ಎಂದು ಐಶ್ವರ್ಯ ಎದಿರೇಟು ನೀಡಿದ್ದಾರೆ. 'ನಿಮ್ಮ ಟ್ವೀಟ್ ನಿಮ್ಮ ಸ್ವಂತ ನಾಯಕರನ್ನು ಕಾಡಲು ಮತ್ತೆ ಬರುತ್ತದೆ. ಸತ್ಯವು ತನ್ನನ್ನು ತಾನೇ ಬಹಿರಂಗಪಡಿಸಿಕೊಳ್ಳುವ ಪ್...
ಮೈಸೂರು: ಕಾಲುವೆಗೆ ಈಜಲು ಹೋದ ಮಕ್ಕಳು ಜಲಸಮಾಧಿ

ಮೈಸೂರು: ಕಾಲುವೆಗೆ ಈಜಲು ಹೋದ ಮಕ್ಕಳು ಜಲಸಮಾಧಿ

Focus, ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮೈಸೂರಿನಲ್ಲಿ ದಾರುಣ ಘಟನೆ ಸಂಭವಿಸಿದೆ. ಕಾಲುವೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲಾಗಿ ಮೃತಪಟ್ಟಿದ್ದಾರೆ. ಸಾಲಿಗ್ರಾಮ ಪಟ್ಟಣದ ಚಾಮರಾಜ ಎಡದಂಡೆ ಕಾಲುವೆಯಲ್ಲಿ ಈ ಘಟನೆ ಸಂಭವಿಸಿದ್ದು, ಮೃತರು ಕೆ.ಆರ್. ಪೇಟೆಯ ನವೋದಯ ಶಾಲೆಯ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಭಾನುವಾರ ಮಧ್ಯಾಹ್ನ ಸ್ನಾನಕ್ಕಾಗಿ ಕಾಲುವೆಗೆ ತೆರಳಿದ ಮಕ್ಕಳು ಸಂಜೆಗೂ ಮನೆಗೆ ಮರಳದ ಕಾರಣ ಕುಟುಂಬದವರು ಹುಡುಕಾಟ ನಡೆಸಿದರು. ಹುಡುಕಾಟದ ವೇಳೆ ಕಾಲುವೆದಂಡೆಯಲ್ಲಿ ಮಕ್ಕಳ ಬಟ್ಟೆ ಹಾಗೂ ಚಪ್ಪಲಿಗಳು ಪತ್ತೆಯಾಗಿದ್ದವು. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ಈ ವೇಳೆ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬ ಬಾಲಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ....
ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ; ಸಿಎಂ ಸ್ಪಷ್ಟನೆ

ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ; ಸಿಎಂ ಸ್ಪಷ್ಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ - ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ ಆಯೋಜಿಸಿದ್ದ 'ಅಶೋಕ ಜನ - ಮನ 2025' ಕಾರ್ಯಕ್ರಮ ಉದ್ಘಾಟಿಸಿದ ಸಿದ್ದರಾಮಯ್ಯ, ಆಶಿಕ್ ರೈ ಅವರ ಜನಪರ ಸೇವೆಯನ್ನು ಕೊಡಾಡಿದರು. ಈ ಸಂದರ್ಭದಲ್ಲಿ RSS ನಿಷೇಧ ಕುರಿತ ಬಿಜೆಪಿ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಾಲಾ - ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದರು. ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ? ಎಂದು ಪ್ರಶ್ನಿಸಿದರು. 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ...