Tuesday, August 4

ರಾಜ್ಯ

ವಿವೇಕ ಸ್ಮಾರಕ ಲೋಕಾರ್ಪಣೆ: ಸ್ವಾಮಿ ವಿವೇಕಾನಂದರ ಭಾರತ ನಿರ್ಮಾಣದ ಕನಸು ನನಸಾಗಿಸಿ ಎಂದ ಪ್ರಧಾನಿ ಮೋದಿ

ವಿವೇಕ ಸ್ಮಾರಕ ಲೋಕಾರ್ಪಣೆ: ಸ್ವಾಮಿ ವಿವೇಕಾನಂದರ ಭಾರತ ನಿರ್ಮಾಣದ ಕನಸು ನನಸಾಗಿಸಿ ಎಂದ ಪ್ರಧಾನಿ ಮೋದಿ

ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ನಿರ್ಮಿಸಲಾದ **‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ–ವಿವೇಕ ಸ್ಮಾರಕ’**ವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಈ ವೇಳೆ ಯುವಜನತೆಗೆ ಕರೆ ನೀಡಿದ ಅವರು, ಸ್ವಾಮಿ ವಿವೇಕಾನಂದರ ಬಲಿಷ್ಠ, ಆತ್ಮನಿರ್ಭರ ಮತ್ತು ಮೌಲ್ಯಾಧಾರಿತ ಭಾರತದ ಕನಸನ್ನು ನನಸಾಗಿಸುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ ಎಂದು ಹೇಳಿದರು. ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸ್ವಾಮಿ ವಿವೇಕಾನಂದರು ಭಾರತದ ಆತ್ಮಸ್ವರೂಪದ ಪ್ರತೀಕವಾಗಿದ್ದು, ಅವರ ವಿಚಾರಗಳು ಇಂದಿಗೂ ಯುವಜನತೆಗೆ ಸ್ಫೂರ್ತಿಯ ಮೂಲವಾಗಿವೆ ಎಂದರು. ಚಾಮುಂಡೇಶ್ವರಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ ಅವರು, ರಾಮಕೃಷ್ಣ ಮಿಷನ್‌ನೊಂದಿಗಿನ ತಮ್ಮ ದೀರ್ಘಕಾಲದ ನಂಟನ್ನು ಸ್ಮರಿಸಿ, ತಮ್ಮ ವ್ಯಕ್ತಿತ್ವ ರೂಪಿಸುವಲ್ಲಿ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಮೈಸೂರು ಮತ್ತು ಸ್ವಾಮಿ ವಿವೇಕಾನಂದರ ಐತಿಹಾಸಿಕ ಸಂಬಂಧವನ್ನು ಉಲ್ಲೇಖಿಸಿದ ಮೋದಿ, 1893ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಲು ಅಂದಿನ ಮೈಸೂರು ಮಹಾರಾಜ ಚಾಮರಾಜ ಒಡ...
‘ಇಡೀ ವಿಶ್ವವೇ ಇಂದು ಕರ್ನಾಟಕವನ್ನು ಗಮನ ಹರಿಸುತ್ತಿದೆ, ರಾಜ್ಯದ ಅಭಿವೃದ್ಧಿಗೆ ಸಹಕರಿಸಿ’: ಪ್ರಧಾನಿಗೆ ಡಿಕೆಶಿ ಮನವಿ

‘ಇಡೀ ವಿಶ್ವವೇ ಇಂದು ಕರ್ನಾಟಕವನ್ನು ಗಮನ ಹರಿಸುತ್ತಿದೆ, ರಾಜ್ಯದ ಅಭಿವೃದ್ಧಿಗೆ ಸಹಕರಿಸಿ’: ಪ್ರಧಾನಿಗೆ ಡಿಕೆಶಿ ಮನವಿ

ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಕರ್ನಾಟಕ ಮತ್ತು ಬೆಂಗಳೂರಿನತ್ತ ಇಂದು ಇಡೀ ವಿಶ್ವವೇ ಗಮನ ಹರಿಸುತ್ತಿದೆ. ರಾಜ್ಯದ ಅಭಿವೃದ್ಧಿಯ ವೇಗವನ್ನು ಮತ್ತಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರದ ನಿರಂತರ ಸಹಕಾರ ಅಗತ್ಯವಾಗಿದ್ದು, ನಾಡಿನ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಬೆಂಬಲ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ನಿರ್ಮಿಸಲಾದ ‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ–ವಿವೇಕ ಸ್ಮಾರಕ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿಯವರೊಂದಿಗೆ ಪಾಲ್ಗೊಂಡು ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಚಿಂತನೆಗಳು ಇಂದಿನ ಯುವಜನತೆಗೆ ದಾರಿದೀಪವಾಗಿವೆ ಎಂದು ಹೇಳಿದರು.‘ಯುವ ಯುಗ–ನವ ಯುಗ’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಸರ್ಕಾರ ಯುವಶಕ್ತಿಯನ್ನು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಯುವಕರ ಶಕ್ತಿ, ಚಿಂತನೆ ಮತ್ತು ಕನಸುಗಳೇ ಭವ್ಯ ಭಾರತದ ಭವಿಷ್ಯ ಎಂದು ಅವರು ಅಭಿಪ್ರಾಯಪಟ್ಟರು. ಮೈಸೂರು ಇತಿಹಾಸವನ್ನು ಸ್ಮರಿಸಿದ ಮುಖ್ಯಮಂತ್ರಿ, 1892ರಲ್ಲಿ ಸ್ವಾಮಿ ವಿವೇಕ...
ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

ಸ್ವಚ್ಛ ಬೆಂಗಳೂರು ನಗರಕ್ಕಾಗಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ತ್ಯಾಜ್ಯ ಮುಕ್ತ ಹಾಗೂ ಸುಂದರ ಬೆಂಗಳೂರನ್ನು ನಿರ್ಮಿಸುವ ಉದ್ದೇಶದಿಂದ, ಶನಿವಾರ ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ ʼತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಈ ಅಭಿಯಾನದಡಿ ಕಟ್ಟಡ ನಿರ್ಮಾಣ ತ್ಯಾಜ್ಯ, ಘನ ತ್ಯಾಜ್ಯ, ಹಳೆಯ ವಿದ್ಯುತ್ ಕಂಬಗಳು, ಪೈಪ್‌ಗಳು, ಮಣ್ಣಿನ ಗುಡ್ಡೆಗಳು, ಬೆಳೆದು ನಿಂತ ಕಳೆಗಿಡಗಳು ಹಾಗೂ ಮರದ ಕೊಂಬೆಗಳು ಸೇರಿದಂತೆ ಒಟ್ಟು 22,372 ಟನ್‌ಗಳಷ್ಟು ತ್ಯಾಜ್ಯವನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.ಈ ಅಭಿಯಾನದ ಮೂಲಕ ನಗರದ ಸ್ವಚ್ಛತೆ, ಸೌಂದರ್ಯ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಬೆಂಗಳೂರು ನಗರವನ್ನು ತ್ಯಾಜ್ಯ ಮುಕ್ತ ಹಾಗೂ ಮಾದರಿ ಮಹಾನಗರವನ್ನಾಗಿ ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದವರು ತಿಳಿಸಿದರು. ಈ ವೇಳೆ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ, ಇಂಧನ ಸಚಿವರಾದಕೆ.ಜೆ ಜಾರ್ಜ್‌, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಎಸ್‌.ಆರ್‌ ವಿಶ್ವನಾಥ್‌ ಹಾಗೂ ಎ.ಸಿ ಶ್ರೀನಿ...
ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

ಕರ್ನಾಟಕದ ನೀಲಂ, ತೋತಾಪುರಿ ಮಾವಿಗೆ ಹೊಸ ಮಾರುಕಟ್ಟೆ; ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು

ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (APEDA) ನೆರವಿನಿಂದ ಕರ್ನಾಟಕದ ನೀಲಂ ಮತ್ತು ತೋತಾಪುರಿ ಮಾವಿನ ಹಣ್ಣುಗಳನ್ನು ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ಗೆ ರಫ್ತು ಮಾಡಲಾಗಿದೆ. ರಾಜ್ಯದ ತಡವಾಗಿ ಕೊಯ್ಲಾಗುವ ಮಾವಿನ ತಳಿಗಳಿಗೆ ಜಾಗತಿಕ ಮಾರುಕಟ್ಟೆ ತೆರೆಯುವ ಮಹತ್ವದ ಹೆಜ್ಜೆಯಾಗಿ ಇದನ್ನು ಪರಿಗಣಿಸಲಾಗಿದೆ. ಜುಲೈ 30ರಂದು ಒಂದು ಮೆಟ್ರಿಕ್ ಟನ್ ಮಾವಿನ ಹಣ್ಣುಗಳ ಮೊದಲ ಸಾಗಣೆ ನಡೆದಿದ್ದು, ಈ ಹಣ್ಣುಗಳನ್ನು ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಪ್ರಕೃತಿಮಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ (FPC)ಗೆ ಸೇರಿದ ರೈತರಿಂದ ನೇರವಾಗಿ ಸಂಗ್ರಹಿಸಲಾಗಿದೆ. ಹೊಸದಾಗಿ ನೋಂದಾಯಿತ ಮಹಿಳಾ ಉದ್ಯಮಿಯಾದ ಅಹಲ್ಯಾ ದೇವಿ ವೆಂಚರ್ಸ್ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಎ. ಈ ಸಾಗಣೆಯ ರಫ್ತಿನ ನೇತೃತ್ವ ವಹಿಸಿದ್ದಾರೆ. ಈ ಉಪಕ್ರಮವು ಭಾರತೀಯ ಮಾವಿನ ಹಣ್ಣುಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ, ತಡವಾಗಿ ಕೊಯ್ಲಾಗುವ ಮಾವಿನ ತಳಿಗಳ ರಫ್ತಿಗೆ ಉತ್ತೇಜನ ನೀಡಲಿದೆ ಎಂದು APEDA ಅಧ್ಯಕ್ಷ ಅಭಿಷೇಕ್ ದೇವ್ ...
ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

ದೇಶದ ಕಾನೂನು ರಾಜ್ಯಕ್ಕೆ ಅನ್ವಯವಾಗುವುದಿಲ್ಲವೆ? RTI ಅರ್ಜಿಗೆ ದಿಢೀರ್ ಬ್ರೇಕ್! ನಗರಾಭಿವೃದ್ಧಿ ಇಲಾಖೆ ಅವಾಂತರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಮೀಷನ್ ಆರೋಪ ಸಹಿತ ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕರ್ನಾಟಕದಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವಾಗಲೇ, ರಾಜ್ಯ ಸರ್ಕಾರದ ನಾಗರಾಭಿವೃದ್ದಿ ಇಲಾಖೆ ಅಧಿಕಾರಿಗಳ ನಡೆ ಮತ್ತೊಂದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ದೇಶದಲ್ಲಿ ಜಾರಿಯಲ್ಲಿರುವ ಮಾಹಿತಿ ಹಕ್ಕು ಕಾಯ್ದೆಯು ತಮ್ಮ ಇಲಾಖೆಗೆ ಅನ್ವಯವಾಗುವುದಿಲ್ಲ ಎಂಬಂತೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ನಡೆದುಕೊಂಡಿದ್ದಾರೆ. RTI ಅರ್ಜಿ ಸ್ವೀಕೃತಿಗೂ ಮಂತ್ರಿಗಳ ಶಿಫಾರಸು ಬೇಕೇ ಎಂಬ ಅನುಮಾನಗಳು ವ್ಯಕ್ತವಾಗಿದ್ದು, ಸರ್ಕಾರದ ಈ ನಡೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಅಷ್ಟಕ್ಕೂ ವಿವಾದ ಏನು ಗೊತ್ತೇ? ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಬೇಕಾಬಿಟ್ಟಿ ಅನುದಾನ ಬಿಡುಗಡೆಯಾಗಿದೆ ಎನ್ನಲಾಗಿದೆ. ಆದರೆ ಕಾಮಗಾರಿಗಳು ನಡೆದಿರುವ ಅನುಮಾನವೂ ಇದೆ. ಹಲವೆಡೆಯ ಕಳಪೆ ಕಾಮಗಾರಿ ಆರೋಪಗಳೂ ಈಗಿನ GBA ಸಚಿವ ಕೃಷ್ಣಾ ಬೈರೇಗೌಡರನ್ನೇ ಕೆರಳಿಸಿದ್ದು, ಇತ್ತೀಚಿಗೆ ಸಭೆಗಳಲ್ಲೇ ಅವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ನಡುವೆ, ನಗರಾಭಿವೃದ್ಧಿ ಇಲಾಖೆಗೆ ಬಿಡುಗಡೆಯಾಗಿರುವ ಅ...
ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನವನ್ನು ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯವ್ಯಾಪಿ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಸಿಡಬ್ಲ್ಯುಎಂಎ ನೀಡಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕ ರಾಜ್ಯ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್, ವ್ಯಾಪಾರಿಗಳು, ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರು ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಕುಡಿಯುವ ನೀರು ಹಾಗೂ ನೀರಾವರಿಗೆ ಸಂಕಷ್ಟ ಎದುರಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ರೈತರಿಗೆ ಅನ್ಯಾಯವಾಗಲಿದೆ ಎಂದು ಅವರು ಹೇಳಿದರು.ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ಸಭೆಯ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ತಮಿಳುನಾಡು ಮುಖ್ಯಮಂತ್ರಿ...
ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ಪರಿಹಾರ ನೀಡಿದೆ. ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಮತ್ತು ದೋಷಾರೋಪಣೆಯ ಆದೇಶದ ಜಾರಿಗೆ ತಾತ್ಕಾಲಿಕ ತಡೆ ನೀಡಿ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬಸವರಾಜ್ ಹಾಗೂ ಮೊಹಮ್ಮದ್ ನವಾಜ್ ಅವರ ವಿಭಾಗೀಯ ಪೀಠ, ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೆ ಜಾಮೀನು ನೀಡಿದೆ. ಚನ್ನಕೇಶವ ಟಿಂಗರಿಕರ್ ಅವರಿಗೂ ಜಾಮೀನು ದೊರೆತಿದೆ. ಹೈಕೋರ್ಟ್ ಐದು ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿ ಸಲ್ಲಿಸುವಂತೆ ಷರತ್ತು ವಿಧಿಸಿದೆ. ಅಲ್ಲದೆ, ನ್ಯಾಯಾಲಯದ ಅನುಮತಿ ಇಲ್ಲದೆ ಭಾರತದಿಂದ ಹೊರಗೆ ಪ್ರಯಾಣಿಸದಂತೆ ಸೂಚಿಸಿದೆ. ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸುವಂತೆ ಸಲ್ಲಿಸಲಾಗಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.2016ರ ಜೂನ್‌ನಲ್ಲಿ ಧಾರವಾಡದಲ್ಲಿ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌ...
ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿದೆ. ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ ಬಳಿಕವೂ ಆದೇಶದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಅಧಿಕಾರಿಗಳು ತಮ್ಮ ವಾದ ಮಂಡಿಸಿದರು. ಕರ್ನಾಟಕದ ಪರವಾಗಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಸೇರಿದಂತೆ ಅಧಿಕಾರಿಗಳು, ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲಾಶಯಗಳಿಗೆ ಹರಿದುಬರುವ ನೀರು ತೀವ್ರವಾಗಿ ಕುಸಿದಿದ್ದು, ನೀರಾವರಿಗೂ ನೀರು ಬಿಡುಗಡೆ ಮಾಡದ ಪರಿಸ್ಥಿತಿ ಇದೆ ಎಂದು ವಿವರಿಸಿದರು. ಕರ್ನಾಟಕದ ವಾದದ ಪ್ರಕಾರ, ಜೂನ್ 1ರಿಂದ ಜುಲೈ 29ರವರೆಗೆ ನಾಲ್ಕು ಪ್ರಮುಖ ಜಲಾಶಯಗಳಿಗೆ 38.736 ಟಿಎಂಸಿ ನೀರು ಮಾತ್ರ ಹರಿದುಬಂದಿದ್ದು, ಇದು ದೀರ್ಘಾವಧಿಯ ಸರಾಸರಿಗಿಂತ 65.65 ಶೇಕಡಾ ಕಡಿಮೆ. ಸೂಪರ್ ಎಲ್‌ನಿನೋ ಪರಿಣಾಮದಿಂದ ಮ...
ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ, ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ರಾಜ್ಯದಲ್ಲಿ ಕುಡಿಯುವ ನೀರಿನ ಸಂಕಷ್ಟ ಗಂಭೀರವಾಗಿದ್ದು, ಈ ಸಂದರ್ಭದಲ್ಲಿ ರಾಜಕೀಯ ಮಾಡದೆ ಎಲ್ಲರೂ ಸಹಕರಿಸಬೇಕು ಎಂದು ವಿಪಕ್ಷಗಳಿಗೆ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬೆಳೆಗಿಂತ ಕುಡಿಯುವ ನೀರನ್ನು ಸಂರಕ್ಷಿಸುವುದೇ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿದರು. ತಮಿಳುನಾಡಿಗೆ ರಾತ್ರೋರಾತ್ರಿ ನೀರು ಹರಿಸಲಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ಸರ್ಕಾರ ಯಾವುದೇ ನೀರು ಬಿಡುಗಡೆ ಮಾಡಿಲ್ಲ. ನೀರು ಬಿಡಲು ಸಾಧ್ಯವಿಲ್ಲ ಎಂಬ ನಿಲುವಿನೊಂದಿಗೆ ಕಾವೇರಿ ಪ್ರಾಧಿಕಾರದ ಮುಂದೆ ರಾಜ್ಯ ತನ್ನ ವಾದವನ್ನು ಸಮರ್ಥವಾಗಿ ಮಂಡಿಸಿದೆ ಎಂದು ತಿಳಿಸಿದರು.ಬಿಜೆಪಿ ಹಾಗೂ ಇತರೆ ವಿಪಕ್ಷಗಳು ಈ ಸೂಕ್ಷ್ಮ ವಿಚಾರದಲ್ಲಿ ರ...
ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬೆಂಗಳೂರು ನಗರದ ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ₹81 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಿಂದ ಅವಲಹಳ್ಳಿ ಹಾಗೂ ಹೊಸಕೋಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂರು ಮನೆಗಳ್ಳತನ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 3ರಂದು ಮನೆಗೆ ಬೀಗ ಹಾಕಿ ತೆರಳಿದ್ದ ಕುಟುಂಬ, ಜುಲೈ 5ರಂದು ಮರಳಿದಾಗ ಮನೆ ಬಾಗಿಲು ಮುರಿದು ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಸುಮಾರು ₹5 ಲಕ್ಷ ನಗದು ಕಳವಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ದಾಖಲಾದ ದೂರಿನ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು.ವಿಚಾರಣೆ ವೇಳೆ ಪ್ರಮುಖ ಆರೋಪಿ ಕಳವು ಮಾಡಿದ ಚಿನ್ನಾಭರಣವನ್ನು ಇತರ ಇಬ್ಬರು ಆರೋಪಿಗಳ ಮೂಲಕ ಅಡಮಾನ ಇಡುವುದು ಹಾಗೂ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ 475.04 ಗ್ರಾಂ ಚಿನ್ನಾಭರಣ (ಸುಮಾರು ₹66.50 ಲಕ್ಷ ಮೌಲ್ಯ), ₹9.50 ಲಕ್ಷ ನಗದು ಹಾಗೂ ₹5 ಲಕ್...