Saturday, December 6

ರಾಜ್ಯ

ಈ ಪೀಠಿಕೆಯೇ ದೇಶದ ‘ಸುರಕ್ಷಾ ಮಂತ್ರ’; ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ’ಸಂವಿಧಾನ ಫಲಕ’ ಅನಾವರಣ

ಈ ಪೀಠಿಕೆಯೇ ದೇಶದ ‘ಸುರಕ್ಷಾ ಮಂತ್ರ’; ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ’ಸಂವಿಧಾನ ಫಲಕ’ ಅನಾವರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ದೇಶಾದ್ಯಂತ ಬುಧವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳು ದೇಶಭಕ್ತಿಯ ಪ್ರತೀಕ ಎಂಬಂತೆ ನೆರವೇರಿದವು. ಅದರಲ್ಲೂ ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ದಿನವನ್ನು ವಿಭಿನ್ನವಾಗಿ ಆಚರಿಸಲಾಯಿತು. ದೇಶದ ಸಾಮಾಜಿಕ ವ್ಯವಸ್ಥೆಗೆ ಆಧಾರವಾಗಿರುವ, ಸುರಕ್ಷಾ ಮಂತ್ರವೆನಿಸಿರುವ 'ಸಂವಿಧಾನ' ಕುರಿತಂತೆ ಒಂದು ದಿಂದಾದ ಶ್ರದ್ದೆ-ಭಕ್ತಿಯಲ್ಲ, ಪ್ರತೀ ದಿನವೂ ಸಂವಿಧಾನದ ಆಶಯಗಳನ್ನು ನೆನೆಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿರುವ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ (ಇಂದಿರಾ ಜನ್ಮ ಶತಾಬ್ದಿ ಭವನ) ಭವನದಲ್ಲಿ 'ಸಂವಿಧಾನ ಫಲಕ'ವನ್ನು ಅನಾವರಣ ಮಾಡಲಾಗಿದೆ. ಖ್ಯಾತ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿರುವ ಮನೋರಾಜ್ ರಾಜೀವ್ ಅವರ ಪರಿಕಲ್ಪನೆಯಲ್ಲಿ ಈ ಸಂವಿಧಾನ ಫಲಕವನ್ನು ಸ್ಥಾಪಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಂವಿಧಾನದ ಪೀಠಿಕೆ ಹಾಗೂ ಮಧ್ಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇರುವ ಈ ಫಲಕ ಎಲ್ಲರ ಗಮನಕೇಂದ್ರೀಕರಿಸುತ್ತಿದೆ. ಸಂವಿಧಾನ ದಿನಾಚರಣೆಯ ಭಾಗವಾಗಿ 'ಸಂವಿಧಾನ ಓದು...
“ನಾನು ಏನೇ ಮಾಡಿದರೂ, ಮಾತನಾಡಿದರೂ ಮಾಧ್ಯಮಗಳಲ್ಲಿ ಬೇರೆ ರೀತಿ ಚರ್ಚೆ”; ಡಿಕೆಶಿ ಬೇಸರ

“ನಾನು ಏನೇ ಮಾಡಿದರೂ, ಮಾತನಾಡಿದರೂ ಮಾಧ್ಯಮಗಳಲ್ಲಿ ಬೇರೆ ರೀತಿ ಚರ್ಚೆ”; ಡಿಕೆಶಿ ಬೇಸರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ನಾಯಕರನ್ನು ನೆನಪಿಸಿದಂತಿದೆ. "ನ್ಯಾಯಾಧೀಶರಾಗಲಿ, ರಾಷ್ಟ್ರಪತಿಗಳಾಗಲಿ, ನಾನಾಗಲೀ, ಯಾರೇ ಆಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆದು ಸಾಗಬೇಕು” ಎಂಬ ಅವರ ಮಾತು ಪ್ರಸಕ್ತ ಸನ್ನಿವೇಶದಲ್ಲಿ ಅನೇಕಾನೇಕ ವಿಶ್ಲೇಷಣೆಗೆ ಎಡೆಮಾಡಿಕೊಟ್ಟಿದೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮಾತನಾಡಿದರು. ನಾನು ಏನೇ ಮಾಡಿದರೂ, ಮಾತನಾಡಿದರೂ ಮಾಧ್ಯಮಗಳು ಬೇರೆ ರೀತಿ ಚರ್ಚೆ ಮಾಡುತ್ತವೆ ಎಂದ ಡಿಕೆಶಿ, “ನಾನು ಬೇರೆ ವಿಚಾರವಾಗಿ ಮಾತನಾಡಲು ಹೋಗುವುದಿಲ್ಲ. ನಾನು ಏನೇ ಹೇಳಿದರೂ ಅದನ್ನು ಬೇರೆ ರೀತಿ ತಿರುಗಿಸಿ ಅರ್ಧ ಗಂಟೆ ಚರ್ಚೆ ಮಾಡುತ್ತಾರೆ. ನಾನು ಇಂದಿರಾ ಗಾಂಧಿ ಅವರ ಕಾರ್ಯಕ್ರಮದ ವೇಳೆ ಅವರ ಹೇಳಿಕೆಯೊಂದನ್ನು ಉಲ್ಲೇಖಿಸಿದೆ. ಅದರ ಮೇಲೆ ಅರ್ಧ ಗಂಟೆ ಚರ್ಚೆ ಮಾಡಿದರು. ನಂತರ ವಿಶ್ವ ಮೀನುಗಾರಿಕೆ ...
ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ: ಚಲುವರಾಯಸ್ವಾಮಿ

ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ: ಚಲುವರಾಯಸ್ವಾಮಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹವಾಮಾನ ಬದಲಾವಣೆ, ಭೂಕ್ಷಯ ಮತ್ತು ಶಾಶ್ವತ ಜಲಾನಯನ ನಿರ್ವಹಣೆಗೆ ಸಂಬಂಧಿಸಿದ ಜ್ಞಾನ ಮತ್ತು ಅನುಭವ ವಿನಿಮಯಕ್ಕೆ ಜಾಗತಿಕ ತಜ್ಞರು, ಸಂಶೋಧಕರು ಮತ್ತು ವಿಜ್ಞಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಮೂಲಕ ರೈತರ ಹಾಗೂ ಕೃಷಿ ಅಭಿವೃದ್ಧಿಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದ್ದಾರೆ. ಜಲಾನಯನ ಅಭಿವೃದ್ಧಿ ಇಲಾಖೆ, ಕೇಂದ್ರದ ಭೂ ಸಂಪನ್ಮೂಲ ಇಲಾಖೆ, ವಿಶ್ವ ಬ್ಯಾಂಕ್ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಮೂರು ದಿನಗಳ ಜಲಾನಯನ ಸ್ಥಿತಿಸ್ಥಾಪಕತ್ವ, ವಿಜ್ಞಾನ ಸುಸ್ಥಿರತೆ ಮತ್ತುಸಮಾಜವನ್ನು ಸಂಯೋಜಿಸುವ ಕುರಿತ ಅಂತರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಚಲುವರಾಯಸ್ವಾಮಿ, ಕಳೆದ ನಾಲ್ಕು ದಶಕಗಳಿಂದ ಜಲಾನಯನ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ ಎಂದರು. ವಿಶ್ವಬ್ಯಾಂಕ್ REWARD ಕಾರ್ಯಕ್ರಮದಡಿ ನಡೆಯುತ್ತಿರುವ LRI ಆಧಾರಿತ ಜಲಾನಯನ ಅಭಿವೃದ್ಧಿಯಿಂದ ರಾಜ್ಯದ ಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಭೂಸಂಪನ್ಮೂಲ ಇಲಾಖೆ, ಭಾರತ...
ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ? ನಿಖಿಲ್ ಪ್ರಶ್ನೆ

ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ? ನಿಖಿಲ್ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಶಿವಮೊಗ್ಗ : ಕಾಂಗ್ರೆಸ್ ಪಕ್ಷದೊಳಗೆ ಕುರ್ಚಿಗಾಗಿ ಗುದ್ದಾಟ ತೀವ್ರಗೊಂಡಿದ್ದು, ಶಾಸಕರ ಖರೀದಿ ನಡೆಯುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಈ ಬೆಳವಣಿಗೆ ಬಗ್ಗೆ ಟೀಕಿಸಿರುವ ಪ್ರದೇಶ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರ ಖರೀದಿಗೆ ಹಣವಿದೆ ಆದರೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಬ್ಬೊಬ್ಬ ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ ಜಲಸಂಪನ್ಮೂಲ ಸಚಿವರೇ ? ಎಂದು ನಿಖಿಲ್ ಅವರು ಪ್ರಶ್ನಿಸಿದ್ದಾರೆ. ಒಬ್ಬೊಬ್ಬ ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ ಜಲಸಂಪನ್ಮೂಲ ಸಚಿವರೇ ?- ಶ್ರೀ @Nikhil_Kumar_k , ಯುವ ಘಟಕದ ರಾಜ್ಯಾಧ್ಯಕ್ಷರು #ಸಿಂಧನೂರು#ರಾಯಚೂರು#ರೈತವಿರೋಧಿಕಾಂಗ್ರೆಸ್‌ pic.twitter.com/kODWF5e6h6— Janata Dal Secular (@JanataDal_S) November 26, 2025...
ಬೆಂಗಳೂರು ದರೋಡೆ ಪ್ರಕರಣ; ಪೊಲೀಸ್ ಭರ್ಜರಿ ಬೇಟೆ; ಒಟ್ಟು 9 ಸೆರೆ

ಬೆಂಗಳೂರು ದರೋಡೆ ಪ್ರಕರಣ; ಪೊಲೀಸ್ ಭರ್ಜರಿ ಬೇಟೆ; ಒಟ್ಟು 9 ಸೆರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು ₹7.11 ಕೋಟಿ ನಗದು ವ್ಯಾನ್ ದರೋಡೆ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ಇತ್ತೀಚಿನ ಬಂಧನಗಳಿಂದ ₹1.45 ಕೋಟಿ ಹಣ ಮರುಪಡೆಯಲಾಗಿದ್ದು, ಒಟ್ಟಾರೆಯಾಗಿ ಮರುಪಡೆದ ಹಣದ ಮೊತ್ತ ₹7.1 ಕೋಟಿಗೆ ತಲುಪಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಆರೋಪಿಗಳನ್ನು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹಲವು ತಂಡಗಳ ಸಮನ್ವಯದಿಂದ ಪತ್ತೆ ಮಾಡಿ ಬಂಧಿಸಲಾಗಿದೆ. ಆರು ಮಂದಿಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಿಜೆಪಿ ನಾಯಕ್ರು ಮಾಡುತ್ತಿರುವ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ. “ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ, ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್...
ಭೀಕರ ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಸಹಿತ ಮೂವರು ದುರ್ಮರಣ

ಭೀಕರ ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಸಹಿತ ಮೂವರು ದುರ್ಮರಣ

Focus, ಪ್ರಮುಖ ಸುದ್ದಿ, ರಾಜ್ಯ
ಕಲಬುರಗಿ: ವಿವಾಹ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದವರಿದ್ದ ಕಾರು ಅಪಘಾತಕ್ಕೀಡಾಗಿ ಕಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ , ಅವರ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ. ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ, ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು....
ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು.ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ. pic.twitter.com/FuAsWbd8xP— Siddaramaiah (@siddaramaiah) November 25, 2025 ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡ...
ರಾಜ್ಯದ 10 ಕಡೆ ಲೋಕಾಯುಕ್ತ ದಾಳಿ; ಅಧಿಕಾರಿಗಳಿಗೆ ಶಾಕ್

ರಾಜ್ಯದ 10 ಕಡೆ ಲೋಕಾಯುಕ್ತ ದಾಳಿ; ಅಧಿಕಾರಿಗಳಿಗೆ ಶಾಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಮಂಗಳವಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮಂಡ್ಯ, ಬೀದರ್, ಮೈಸೂರು, ಧಾರವಾಡ, ಹಾವೇರಿ, ಬೆಂಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ 10 ಸ್ಥಳಗಳಲ್ಲಿ ಅಧಿಕಾರಿ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಂ. ಗಿರೀಶ್ (ಮಂಡ್ಯ) ಮುಖ್ಯ ಲೆಕ್ಕಾಧಿಕಾರಿ (ಪಟ್ಟಣ ಯೋಜನೆ) ಸಿ. ಪುಟ್ಟಸ್ವಾಮಿ (ಮಂಡ್ಯ) ಮುಖ್ಯ ಎಂಜಿನಿಯರ್ (ಮೇಲ್ ಕೃಷ್ಣ ಯೋಜನೆ) ಪ್ರೇಮ್ ಸಿಂಗ್ (ಬೀದರ್) ಕಂದಾಯ ನಿರೀಕ್ಷಕ ಸಿ. ರಾಮಸ್ವಾಮಿ (ಹೂಟಗಳ್ಳಿ ಪುರಸಭೆ, ಮೈಸೂರು) ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸುಭಾಷ್ ಚಂದ್ರ (ಧಾರವಾಡ) ಹಿರಿಯ ಪಶುವೈದ್ಯಕೀಯ ಪರೀಕ್ಷಕ ಹುಯಿಲ್ಗೋಳ್ ಸತೀಶ್ ಯೋಜನ ನಿರ್ದೇಶಕರ ಕಚೇರಿ, ಹಾವೇರಿ ಶೇಕಪ್ಪ ಆರ್‌ಟಿಒ ಕಚೇರಿ ಅಧೀಕ್ಷಕ ಪಿ. ಕುಮಾರಸ್ವಾಮಿ (ಇಲೆಕ್ಟ್ರಾನಿಕ್ಸ್ ಸಿಟಿ, ಬೆಂಗಳೂರು) ಸಿಮ್ಸ್ ವೈದ್ಯಕೀಯ ಕಾಲೇಜು, ಶಿವಮೊಗ್ಗ ಸಿಎನ್ ಲಕ್ಷ್ಮಿಪತಿ ಈ 10 ಅಧಿಕಾ...
ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ; ಕೃಷಿ ಅಭಿವೃದ್ಧಿ ಬಗ್ಗೆ ಚಿಂತನ ಮಂಥನ

ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ; ಕೃಷಿ ಅಭಿವೃದ್ಧಿ ಬಗ್ಗೆ ಚಿಂತನ ಮಂಥನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಕೃಷಿಗೆ ಮುಖ್ಯವಾಗಿ ಬೇಕಿರುವುದು ಉತ್ತಮ ಗುಣಮಟ್ಟದ ಬೀಜದ ತಳಿಗಳು ಹಾಗೂ ತಂತ್ರಜ್ಞಾನ. ಈ ಮೂಲಕ ಕೃಷಿ ಅಭಿವೃದ್ಧಿ ಸಾಧ್ಯ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೃಷಿ ಇಲಾಖೆ ಸಂಗಮ ಸಭಾಂಗಣದಲ್ಲಿ ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ದೇಶಿ ಬೀಜ ಸಂರಕ್ಷಣೆಯ ಕುರಿತು ಈ ಚಿಂತನ ಮಂತನ ಸಂವಾದವನ್ನು ಏರ್ಪಡಿಸಿರುವುದು ತುಂಬಾ ಸಮಯೋಜಿತವಾಗಿದೆ ಹಾಗೂ ಶ್ಲಾಘನೀಯವಾಗಿದೆ. ಬೀಜ ಪರಂಪರೆಯ ಕುರಿತು ನಡೆಯುವ ಈ ಸಂವಾದವೂ ರೈತರು, ಸಂಶೋಧಕರು, ಅನ್ವೇಷಕರು ಹಾಗೂ ವಿವಿಧ ಸಂಬಂಧಿತ ಸಂಸ್ಥೆಗಳನ್ನು ಒಂದೇ ಸೂರಿನಡಿ, ಬೀಜ ಪರಂಪರೆ ಮತ್ತು ಆಹಾರ ವ್ಯವಸ್ಥೆಯ ಭವಿಷ್ಯದ ಬಗ್ಗೆ ಒಟ್ಟಾಗಿ ಚಿಂತನೆ ನಡೆಸಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು. ಕೃಷಿಜೀವ ವೈವಿಧ್ಯತೆ, ರೈತರ ಜ್ಞಾನ, ಸಂಸ್ಕೃತಿ ಹಾಗೂ ಪರಂಪರೆಗಳ ಆಧಾರದ ಮೇಲೆ ಶತಮಾನಗಳ ಕಾಲದಿಂದ ಸ್ಥಳೀಯ ಆಹಾರ ಮತ್ತು ಪೌಷ್ಟಿಕ ಭದ್ರೆತೆ ರೂಪುಗೊಂಡಿದೆ. ದೇಶಿ ತಳಿಗಳು, ಪೌಷ್ಟಿಕತೆ ಮತ್ತು ಪರಿಸರ ಸುಸ್ಥಿರತೆಯನ್ನು ಕಾಪಾ...