
ಬಿಜೆಪಿ ಸರ್ಕಾರದ ಅವಧಿಯಲ್ಲೇ ₹1,281 ಕೋಟಿ ನೀರಾವರಿ ಯೋಜನೆ ಮಂಜೂರು: ಸಿ.ಟಿ. ರವಿ
ಚಿಕ್ಕಮಗಳೂರು: ಭದ್ರಾ ಉಪಜಲಾನಯನ ಪ್ರದೇಶದಿಂದ ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ತಾಲೂಕುಗಳ 245 ಕೆರೆಗಳಿಗೆ ನೀರು ತುಂಬಿಸುವ ₹1,281 ಕೋಟಿ ವೆಚ್ಚದ ನೀರಾವರಿ ಯೋಜನೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ ಹೇಳಿದ್ದಾರೆ.
ಬೆಳವಾಡಿ ಕೆರೆಗೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ನಮಗೆ ಉಪಕಾರ ಮಾಡುವ ಪ್ರತಿಯೊಂದಕ್ಕೂ ಕೃತಜ್ಞತೆ ಸಲ್ಲಿಸುವ ಪರಂಪರೆ ಇದೆ. ಜೀವಜಲದ ಪ್ರತೀಕವಾಗಿರುವ ಗಂಗಾಮಾತೆಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಬಾಗಿನ ಅರ್ಪಿಸಲಾಗಿದೆ ಎಂದರು.
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ರಾಜಕೀಯ ಮಾತನಾಡುವುದಿಲ್ಲ. ಆದರೆ ಸತ್ಯ ಮೌನವಾಗಿದ್ದಾಗ ಸುಳ್ಳು ವಿಜೃಂಭಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅಂತಿಮವಾಗಿ ಗೆಲ್ಲುವುದು ಸತ್ಯವೇ. ಸರಿಯಾದ ಸಮಯದಲ್ಲಿ ಸತ್ಯ ಹೊರಬಂದು ತನ್ನ ಸ್ಥಾನ ಪಡೆದುಕೊಳ್ಳುತ್ತದೆ ಎಂದು ಹೇಳಿದರು.
245 ಕೆರೆಗಳಿಗೆ ನೀರು
ನೀರಾವರಿ ವಿಚಾರದಲ್ಲಿ ಹಿಂದೆ ಗುರುತ್ವಾಕರ್ಷಣೆಯ ಆಧಾರದ ಮೇಲೆ ಕರಗಡ ಯೋಜನೆಯ ಮೂಲಕ ನೀರು ತರಲು ಪ್ರಯತ್ನಿಸಲಾಗಿತ್ತು. ಅದು ವಿಫಲ...









