Tuesday, January 27

ರಾಜ್ಯ

ಲವ್ ಜಿಹಾದಿಗೆ ಮತ್ತೊಂದು ಬಲಿ? ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದಿ ಪ್ರಕರಣಗಳು ಮುಂದುವರಿದಿದ್ದು, ಉತ್ತರಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ರಂಜಿತಾ ಎಂಬ ಯುವತಿಯ ಹತ್ಯೆಯಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ, 'ಮತಾಂಧರ ನಟ್ಟು - ಬೋಲ್ಟ್ ಸರಿ ಮಾಡಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಿ' ಎಂದು ಆಕ್ರೋಶ ಹೊರಹಾಕಿದೆ. ರಾಜ್ಯದಲ್ಲಿ ಮತಾಂಧ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ಹಿಂದು ಯುವತಿಯರ ಸರಣಿ ಹತ್ಯೆಗಳು ನಡೆಯುತ್ತಿವೆ. ನೇಹಾ ಹಿರೇಮಠ್ ಹತ್ಯೆಯ ನೆನಪು ಮರೆಯಾಗುವ ಮುನ್ನವೇ ಯಲ್ಲಾಪುರದಲ್ಲಿ ಲವ್ ಜಿಹಾದ್ ಕಾರಣದಿಂದ ರಂಜಿತಾಳನ್ನು ಮತಾಂಧ ರಫೀಕ್ ಹತ್ಯೆಗೈದಿದ್ದಾನೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯದಲ್ಲಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಹಿಂದುಗಳ ಹತ್ಯೆ, ಭಯೋತ್ಪಾದನಾ ಚಟುವಟಿಕೆ, ಲವ್‌ ಜಿಹಾದ್ ಪ್ರಕರಣಗಳು ದಿನನಿತ್ಯ ವರದಿಯಾಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಬಿಜೆಪಿ ತನ್ನ X ಖಾತೆಯಲ್ಲಿ ಆರೋಪ ಮಾಡಿದೆ. 'ಮತಾಂಧರನ್ನು ಮುಟ್ಟಬೇಡಿ ಎಂದು ಪೊಲೀಸರಿಗೆ ಸರ್ಕಾರದಿಂದ ಫತ್ವಾ ಏನಾದರೂ ಹೊರಡಿ...
ಮಂಗಳೂರು ಗರೋಡಿ: ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಪೊಲೀಸರಿಂದ FIR

ಮಂಗಳೂರು ಗರೋಡಿ: ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಪೊಲೀಸರಿಂದ FIR

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಬಂದರು ನಗರಿ ಮಂಗಳೂರಿನ ಪ್ರಸಿದ್ಧ ಗರೋಡಿ ಕ್ಷೇತ್ರದ ಜಾತ್ರೋತ್ಸವ ಸಂದರ್ಭದಲ್ಲಿ ‘ಕೋಳಿ ಅಂಕ’ ನಡೆಸುವ ವಿಚಾರವಾಗಿ ಪರ–ವಿರೋಧ ಚರ್ಚೆಗಳು ತೀವ್ರಗೊಂಡಿವೆ. ಕೆಲವರು ಇದನ್ನು ಉತ್ಸವದ ಸಂದರ್ಭದ ಮನರಂಜನಾ ಆಟವೆಂದು ಪರಿಗಣಿಸುತ್ತಿದ್ದರೆ, ಇನ್ನು ಕೆಲವರು ಇದನ್ನು ಜಾತ್ರಾ ಸಂಪ್ರದಾಯದ ಭಾಗವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳು ಹರಿದಾಡುತ್ತಿವೆ ಎಂದು ಆರೋಪಿಸಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯೂ ಆಗಿರುವ ಬಿಲ್ಲವ ಸಮುದಾಯದ ಮುಖಂಡ ಪದ್ಮರಾಜ್ ಪೂಜಾರಿ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದೂರು ವಿವರಗಳ ಪ್ರಕಾರ, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ “Kalyug Kalki Post” ಎಂಬ ಶೀರ್ಷಿಕೆಯಡಿ ಹರಿದಾಡುತ್ತಿರುವ ಒಂದು ಪೋಸ್ಟ್ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಿದ್ದು, ಸಮಾಜದಲ್ಲಿ ಅಶಾಂತಿ, ವೈಮನಸ್ಸು ಹಾಗೂ ಶಾಂತಿ ಭಂಗಕ್ಕೆ ಕಾರಣವಾಗುವ ...
ಬೆಂವಿವಿಯ ಶಿಕ್ಷಣ ವಿಭಾಗದಿಂದ ಸಾವಿತ್ರಿ ಬಾಯಿ ಫುಲೆ 195ನೇ ಜಯಂತಿ ಆಚರಣೆ

ಬೆಂವಿವಿಯ ಶಿಕ್ಷಣ ವಿಭಾಗದಿಂದ ಸಾವಿತ್ರಿ ಬಾಯಿ ಫುಲೆ 195ನೇ ಜಯಂತಿ ಆಚರಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಣ ವಿಭಾಗದಿಂದ ಅಯೋಜಿಸಿದ್ದ ಮಾತೆ ʻಸಾವಿತ್ರಿ ಬಾಯಿ ಫುಲೆʼ ಅವರ 195ನೇ ಜಯಂತಿ ಸಮಾರಂಭದ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಶಿಕ್ಷಣ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಎಂ.ಸಿ. ಎರ್ರಿಸ್ವಾಮಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಸಾವಿತ್ರಿ ಬಾಯಿ ಫುಲೆ ಬಗ್ಗೆ ಹೆಚ್ಚು ಹೆಚ್ಚಾಗಿ ಪುಸ್ತಕಗಳನ್ನು ಓದಬೇಕು. ಸಾವಿತ್ರಿ ಬಾಯಿ ಫುಲೆ ಅವರು ಒಬ್ಬ ಶಿಕ್ಷಕಿಯಾಗಿ ಇವರ ಸೇವೆ ನಮ್ಮ ಸಮಾಜಕ್ಕೆ ದಾರಿ ದ್ವೀಪ ಇದ್ದಂತೆ, ಇವರ ಕೊಡುಗೆ ಅಪಾರ, ಸಮಾಜದ ಬೆಳಕಾಗಿ, ಕವಿಯಾಗಿ ತಮ್ಮ ಜೀವನ ಉದ್ದಕ್ಕೂ ಹಗಲಿರುಳು ಶ್ರಮಿಸಿದ ಹೆಮ್ಮೆಯ ಮಾತೆ ಎಂದರು. ವಿದ್ಯುನ್ಮಾನ ವಿಭಾಗದ ಪ್ರಾಧ್ಯಾಪಕರಾದ ಡಾ.ವಾಹಿನಿ ಅರವಿಂದ್ ಮಾತನಾಡಿ, ನನ್ನ ಅಧ್ಯಯನಕ್ಕೆ ಪೂರಕವಾಗಿ ಇಲ್ಲಿ ನನ್ನ ತಾತ ಅಜ್ಜ, ನನ್ನ ಅಪ್ಪ, ನನ್ನ ಮಾವ ಅಧ್ಯಾಪಕರಾಗಿದ್ದರು. ಪ್ರಮುಖ ಕ್ಷೇತ್ರಗಳೆಂದರೆ ಇವು ಅಧ್ಯಾಪಕ ವೃತ್ತಿ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಇಡೀ ಸಮಾಜಕ್ಕೆ ಮಾದರಿ. ಹಾಗೆ ಮಾತೆ ಸಾವಿತ್ರಿ ಬಾಯಿ ಫುಲೆರವರು ಆ ಕಾಲಘಟ್ಟದಲ್ಲಿ ಎಲ್ಲಾ ಮಹಿಳೆಯರ ಸಬಲೀಕರಣಕ್...
ವೈದ್ಯಕೀಯ ಶಿಕ್ಷಣ ಇಲಾಖೆ: ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ಹುದ್ದೆಗಳಿಗೆ ನೇಮಕ

ವೈದ್ಯಕೀಯ ಶಿಕ್ಷಣ ಇಲಾಖೆ: ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ಹುದ್ದೆಗಳಿಗೆ ನೇಮಕ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿವುಸು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಸ್ನೇಹಿ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ‌. ಶರಣಪ್ರಕಾಶ್ ಆರ್. ಪಾಟೀಲ್ ಮುಂದಾಗಿದ್ದಾರೆ. ತಮ್ಮ ಇಲಾಖೆ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿಮಾ ಭದ್ರತೆ ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಕಳೆದ ತಿಂಗಳು ರಸ್ತೆ ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬ ಸದಸ್ಯರು ವಿಮಾ ಹಣ ಪಡೆಯಲು ತಾಂತ್ರಿಕ ಸಮಸ್ಯೆಗಳು ಎದುರಾದ ಹಿನ್ನೆಲೆಯಲ್ಲಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ತಮ್ಮ ಇಲಾಖೆಯ ಅಡಿಯಲ್ಲಿರುವ ಎಲ್ಲಾ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾಜಿಕ ಭದ್ರತಾ ಕ್ರಮವಾಗಿ ಕಡ್ಡಾಯವಾಗಿ ಟರ್ಮ್‌ ಇನ್ಶೂರೆನ್ಸ್‌ ಪಡೆಯಬೇಕೆಂದು ಸೂಚಿಸಿದ್ದಾರೆ. ಶನಿವಾರ ನಡೆದ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ ಸಭೆಯಲ್ಲಿ ಈ ವಿಷಯ ...
ಬಳ್ಳಾರಿ ಗಲಾಟೆ: ಗುಂಡು ಹಾರಿಸಿದ ಮೂಲವನ್ನು ಪತ್ತೆಹಚ್ಚಲು ಫಾರೆನ್ಸಿಕ್ ಪರೀಕ್ಷೆ

ಬಳ್ಳಾರಿ ಗಲಾಟೆ: ಗುಂಡು ಹಾರಿಸಿದ ಮೂಲವನ್ನು ಪತ್ತೆಹಚ್ಚಲು ಫಾರೆನ್ಸಿಕ್ ಪರೀಕ್ಷೆ

Focus, ಪ್ರಮುಖ ಸುದ್ದಿ, ರಾಜ್ಯ
ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿನ ಪ್ರಕರಣದಲ್ಲಿ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿಯವರ ಗನ್‌ಮ್ಯಾನ್ ಹಾರಿಸಿದ ಗುಂಡು ತಗುಲಿಯೇ ಯುವಕ ರಾಜಶೇಖರ್ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ಬ್ರೂಸ್‌ಪೇಟೆ ಪೊಲೀಸರು ಐದು ಬಂದೂಕುಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಗುಂಡು ಹಾರಿಸಿದ ಮೂಲವನ್ನು ಪತ್ತೆಹಚ್ಚಲು ಫಾರೆನ್ಸಿಕ್ ಪರೀಕ್ಷೆಗೂ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಎರಡೂ ಗುಂಪುಗಳ ವಿರುದ್ಧ ಪೊಲೀಸರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಇದುವರೆಗೆ 50ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ....
ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಹಾಸನ: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರ ಸುದ್ದಿಯಲ್ಲಿರುವ ನಡುವೆಯೇ, ಅವರ ತಾಯಿ ಪುಷ್ಪಾ ವಿರುದ್ಧ ಭೂ ವಿವಾದಕ್ಕೆ ಸಂಬಂಧಿಸಿದ ಬೆಳವಣಿಗೆ ಸುದ್ದಿಯ ಕೇಂದ್ರಬಿಂದುವಾಗಿದೆ. ಹಾಸನದ ವಿದ್ಯಾನಗರದಲ್ಲಿ ಭಾನುವಾರ ಬೆಳಗಿನ ಜಾವ ಜೆಸಿಬಿ ಬಳಸಿ ಕಾಂಪೌಂಡ್ ತೆರವುಗೊಳಿಸಲಾಗಿದೆ. ವಿದ್ಯಾನಗರದಲ್ಲಿರುವ ಲಕ್ಷ್ಮಮ್ಮ ಎಂಬುವರಿಗೆ ಸೇರಿದ್ದ ಜಾಗಕ್ಕೆ ಯಶ್ ಅವರ ತಾಯಿ ಪುಷ್ಪಾ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲಕ್ಷ್ಮಮ್ಮ ಅವರ ಸಂಬಂಧಿ ದೇವರಾಜ್ ಈ ವಿಚಾರವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣದಲ್ಲಿ ನ್ಯಾಯಾಲಯವು ದೇವರಾಜ್ ಪರವಾಗಿ ಆದೇಶ ನೀಡಿದೆ ಎನ್ನಲಾಗಿದೆ. ಭಾನುವಾರ ಬೆಳಗ್ಗೆ ಜೆಸಿಬಿ ಮೂಲಕ ಕಾಂಪೌಂಡ್ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಟ Yash ತಾಯಿ ವಿರುದ್ಧ ಭೂಒತ್ತುವರಿ ಆರೋಪ.. ಯಶ್ ತಾಯಿ ವಿರುದ್ಧ ಜಿಪಿಎ ಹೋಲ್ಡರ್ ದೇವರಾಜು ಕಿಡಿ | #TV9D #TV9Kannada #Yashmother #Yash #Yashmotherpushpa #Hassan #Mysuru #Rockingstaryash #Landencroachment #H...
ಕರ್ನಾಟಕದ ಮುಖ್ಯಮಂತ್ರಿ ಎಂಬಂತೆ ಕೆ. ಸಿ. ವೇಣುಗೋಪಾಲ್‌ ದರ್ಪ

ಕರ್ನಾಟಕದ ಮುಖ್ಯಮಂತ್ರಿ ಎಂಬಂತೆ ಕೆ. ಸಿ. ವೇಣುಗೋಪಾಲ್‌ ದರ್ಪ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಕುರ್ಚಿ ಗೊಂದಲಗಳು ತಾರಕಕ್ಕೇರಿದೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟ ಇನ್ನೂ ಜೀವಂತವಾಗಿದೆ. ಇದರ ನಡುವೆ ಕೇರಳದ ನಾಯಕರ ಆಣತಿಗೆ ಕಾಂಗ್ರೆಸ್ ಸರ್ಕಾರವೇ ಗಡಗಡ ನಡುಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಟೀಕಿಸಿದೆ. ಕೇರಳ ಕಾಂಗ್ರೆಸ್‌ ನಾಯಕ ಕೆ. ಸಿ. ವೇಣುಗೋಪಾಲ್‌ ಅವರೇ ಕರ್ನಾಟಕದ ಮುಖ್ಯಮಂತ್ರಿ ಎಂಬಂತೆ ದರ್ಪ ತೋರಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇಷ್ಟೆಲ್ಲಾ ವಿವಾದಗಳಿರುವಾಗ, ರಾಜ್ಯದ ಮುಖ್ಯಮಂತ್ರಿ ಯಾರೆಂಬುದು ಗೊಂದಲದಲ್ಲಿರುವಾಗ ಬಜೆಟ್‌ ತಯಾರಿ ನಡೆಸುವುದು ಸರಿಯಲ್ಲ. ರಾಜ್ಯದ ಮುಖ್ಯಮಂತ್ರಿ ಯಾರೆಂಬುದು ಮೊದಲು ನಿರ್ಧರಿತವಾಗಲಿ ಎಂದು ಸಾಮಾಜಿಕ ಮಾಧ್ಯಮ X ನಲ್ಲಿ ಬರೆದುಕೊಂಡಿರುವ ಬಿಜೆಪಿ, ಕರ್ನಾಟಕದ ಜನತೆಗೆ ನಿಮ್ಮ ಕಾಟಾಚಾರದ, ದಾಖಲೆ ನಿರ್ಮಿಸಲು ಎಂದು ಮಂಡಿಸುವ ಬಜೆಟ್‌ನ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ರಾಜ್ಯದಲ್ಲಿ ಕುರ್ಚಿ ಗೊಂದಲಗಳು ತಾರಕಕ್ಕೇರಿದೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟ ಇನ್ನೂ ಜೀವಂತವಾಗಿದೆ. ಇದರ ನಡುವೆ ಕೇರಳದ ನಾ...

ಮತ್ತೆ ರಣಕಹಳೆ; ಆಶಾ ಕಾರ್ಯಕರ್ತೆಯರಿಂದ ಶನಿವಾರ ಪ್ರತಿಭಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಆಶಾ ಕಾರ್ಯಕರ್ತೆಯರು ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಬಾಕಿ ವೇತನ ಬಿಡುಗಡೆ ಮಾಡಬೇಕು ಹಾಗೂ ರೂ.10,000 ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿ ಈ ಹೋರಾಟ ನಡೆಯಲಿದೆ ಎಂದು ಆಶಾ ಸಂಘಟನೆ ನಾಯಕಿ ಟಿ.ಸಿ.ರಮಾ ತಿಳಿಸಿದ್ದಾರೆ. ಆಶಾ, ಕಾರ್ಯಕರ್ತೆಯರಿಗೆ ನಾಲ್ಕೈದು ತಿಂಗಳಿಂದ ಬಾಕಿ ಇರುವ ವೇತನ ಮತ್ತು ಮಾನ್ಯ ಮುಖ್ಯಮಂತ್ರಿಗಳು 2025 ಜನವರಿಯಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ಕನಿಷ್ಠ ರೂ.10,000 ಏಪ್ರಿಲ್ 2025 ರಿಂದ ಅನ್ವಯವಾಗುತ್ತದೆ ಎಂದು ಭರವಸೆ ನೀಡಿದ್ದರು. ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈಎರಡು ಪ್ರಮುಖ ಬೇಡಿಕೆಯೊಂದಿಗೆ ಬೆಂಗಳೂರು ಜಿಲ್ಲಾಮಟ್ಟದ ಪ್ರತಿಭಟನೆ ನಡೆಯಲಿದೆ ಎಂದು ಟಿ.ಸಿ.ರಮಾ ತಿಳಿಸಿದ್ದಾರೆ....
ಬಳ್ಳಾರಿ ಗುಂಡಿನ ದಾಳಿ ‘ಪೂರ್ವಯೋಜಿತ’: ಜನಾರ್ದನ ರೆಡ್ಡಿ ಗುರಿಯಾಗಿಸಿ ದಾಳಿ ಆರೋಪ

ಬಳ್ಳಾರಿ ಗುಂಡಿನ ದಾಳಿ ‘ಪೂರ್ವಯೋಜಿತ’: ಜನಾರ್ದನ ರೆಡ್ಡಿ ಗುರಿಯಾಗಿಸಿ ದಾಳಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬಳ್ಳಾರಿ: ನಗರದ ಬ್ಯಾನರ್ ಗಲಾಟೆ ಹಾಗೂ ಗುಂಡಿನ ದಾಳಿ ಪ್ರಕರಣ ರಾಜಕೀಯವಾಗಿ ತೀವ್ರ ತಿರುವು ಪಡೆದುಕೊಂಡಿದ್ದು, ಮಾಜಿ ಸಚಿವರಾದ ಬಿ. ಶ್ರೀರಾಮುಲು ಹಾಗೂ ಗಣಿಗಾರಿಕಾ ಉದ್ಯಮಿ ಜನಾರ್ದನ ರೆಡ್ಡಿ ಅವರು, ಈ ದಾಳಿ ಜನಾರ್ದನ ರೆಡ್ಡಿಯವರನ್ನೇ ಗುರಿಯಾಗಿಸಿಕೊಂಡು ನಡೆಸಿದ ‘ಪೂರ್ವಯೋಜಿತ ದಾಳಿ’ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದು ಆಕಸ್ಮಿಕ ಘಟನೆ ಅಲ್ಲ. ಜನಾರ್ದನ ರೆಡ್ಡಿಯವರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಸಂಪೂರ್ಣವಾಗಿ ಸುಟ್ಟುಹಾಕುವ ಉದ್ದೇಶದೊಂದಿಗೆ ದಾಳಿ ನಡೆಸಲಾಗಿದೆ,” ಎಂದು ಹೇಳಿದರು. ಇದೇ ವೇಳೆ, ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ವಿರುದ್ಧವೂ ಅವರು ಆರೋಪ ಹೊರಿಸಿದರು. “ಕಾಂಗ್ರೆಸ್ ಕಾರ್ಯಕರ್ತರು ಕೇವಲ ಬ್ಯಾನರ್ ಕಟ್ಟಲು ಬಂದಿರಲಿಲ್ಲ. ಜನಾರ್ದನ ರೆಡ್ಡಿಯವರ ಮೇಲೆ ಗುಂಡು ಹಾರಿಸುವ ಹಾಗೂ ಮನೆಗೆ ಬೆಂಕಿ ಹಚ್ಚುವ ಉದ್ದೇಶದಿಂದಲೇ ಬಂದಿದ್ದರು. ಗುಂಡು ಗಾಳಿಗೆ ಹಾರಿಸಲ್ಪಟ್ಟಿಲ್ಲ, ಅದು ನೇರವಾಗಿ ಜನಾರ್ದನ ರೆಡ್ಡಿಯವರನ್ನೇ ಗುರಿಯಾಗಿಸಿಕೊಂಡಿತ್ತು. ದುರ್ಬಾಗ್ಯವಶಾತ್, ಅಮಾಯಕ ಯುವಕ ರಾಜಶೇಖರ್ ಪ್ರಾಣ ಕಳೆದುಕೊಂಡ...
ಬಳ್ಳಾರಿ ಘಟನೆ: ಗುಂಪುಘರ್ಷಣೆ ತನಿಖೆಗೆ ಸೂಚನೆ – ಸಿಎಂ ಸಿದ್ದರಾಮಯ್ಯ

ಬಳ್ಳಾರಿ ಘಟನೆ: ಗುಂಪುಘರ್ಷಣೆ ತನಿಖೆಗೆ ಸೂಚನೆ – ಸಿಎಂ ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಹಾಗೂ ಗೋಲಿಬಾರ್ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬ ಯುವಕ ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿ ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಆರಂಭಿಸಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು, ಹೇಗೆ ಬಳಸಲಾಗಿದೆ ಎಂಬ ಎಲ್ಲ ಅಂಶಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಯತ್ನಿಸಿದ ವೇಳೆ ಅದು ತಪ್ಪಾಗಿ ರಾಜಶೇಖರ್‌ಗೆ ತಗುಲಿರುವ ಸಾಧ್ಯತೆಯೂ ಇದೆ. ಈ ಎಲ್ಲ ಅಂಶಗಳನ್ನು ತನಿಖೆಯ ಮೂಲಕ ಸ್ಪಷ್ಟಪಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದ್ದು, ತಪ್ಪಿತಸ್ಥರು ಯಾರು ಎನ್ನುವು...