Saturday, December 6

ರಾಜ್ಯ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಒಮ್ಮತದಿಂದ ಮರು ಆಯ್ಕೆಗೊಂಡಿದ್ದಾರೆ. ಜೆಪಿ ಭವನದಲ್ಲಿ ಶುಕ್ರವಾರ ನಡೆದ ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಕರ್ನಾಟಕದಲ್ಲೂ ಸಂಘಟನೆ ವಿಸ್ತರಣೆ ಅಗತ್ಯವಾಗಿರುವ ಈ ಸಂದರ್ಭದಲ್ಲಿ, ದೇವೇಗೌಡ–ಕುಮಾರಸ್ವಾಮಿ ನೇತೃತ್ವ ಮುಂದುವರಿಯಬೇಕೆಂಬ ಅಭಿಪ್ರಾಯ ಪ್ರತಿನಿಧಿಗಳ ನಡುವೆ ನಿರ್ಮಾಣವಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಸಭೆಯಲ್ಲಿ ವಿವಿಧ ರಾಜ್ಯಗಳ ಜೆಡಿಎಸ್ ಪ್ರತಿನಿಧಿಗಳು, ರಾಜ್ಯದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು....
‘ಕಾಂಗ್ರೆಸ್‌ನಲ್ಲಿ ನಾಯಕತ್ವ ಗೊಂದಲ ಇಲ್ಲ’; ಗೃಹ ಸಚಿವ ಪರಮೇಶ್ವರ ಸ್ಪಷ್ಟನೆ

‘ಕಾಂಗ್ರೆಸ್‌ನಲ್ಲಿ ನಾಯಕತ್ವ ಗೊಂದಲ ಇಲ್ಲ’; ಗೃಹ ಸಚಿವ ಪರಮೇಶ್ವರ ಸ್ಪಷ್ಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಕುರಿತಾಗಿ ಕೇಳಿಬರುತ್ತಿರುವ ಊಹಾಪೋಹಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. 'ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವೇ ಇಲ್ಲ. ಎಲ್ಲವೂ ಸುಗಮವಾಗಿದೆ' ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಪಕ್ಷದೊಳಗೆ ಗೊಂದಲ ಇದ್ದಿದ್ದರೆ ಹೈಕಮಾಂಡ್ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸುವುದು. ಅಗತ್ಯವಿಲ್ಲದ ಕಾರಣ ಇದುವರೆಗೆ ಹೈಕಮಾಂಡ್ ಮಧ್ಯಪ್ರವೇಶಿಸಿಲ್ಲ” ಎಂದರು. ಹಲವಾರು ಸಚಿವರು ಮತ್ತು ಶಾಸಕರು ದೆಹಲಿಗೆ ಭೇಟಿ ನೀಡಿ ನಡೆಸಿದ “ಭೋಜನ ಸಭೆ” ರಾಜಕೀಯ ಚರ್ಚೆಗೆ ಕಾರಣವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಾರೇ ದೆಹಲಿಗೆ ಹೋದರೂ ತಮ್ಮ ವೈಯಕ್ತಿಕ ಅಥವಾ ಆಡಳಿತಾತ್ಮಕ ಕೆಲಸಗಳಿಗಾಗಿ ಹೋಗಿದ್ದಾರೆ. ರಾಜಕೀಯ ಕಾರಣವೇನೂ ಇಲ್ಲ ಎಂಬುದನ್ನು ಅವರು ಈಗಾಗಲೇ ವಿವರಿಸಿದ್ದಾರೆ” ಎಂದರು. ದೆಹಲಿಯಲ್ಲಿ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ವರದಿಗಳಿಗೆ ಸ್ಪಷ್ಟನೆ ನೀಡಿದ ಪರಮೇಶ್ವರ್, “ದೆಹಲಿಗೆ ಹೋದಾಗ ಪಕ್ಷದ ನಾಯಕರು, ಕ...
ನಾಯಕತ್ವ ಬಿಕ್ಕಟ್ಟು: ಹೈಕಮಾಂಡ್ ಮಧ್ಯಪ್ರವೇಶಿಸಿ, ಸಿಎಲ್‌ಪಿ ಸಭೆ ಕರೆಯಲು ಕಾಂಗ್ರೆಸ್ ಶಾಸಕರ ಒತ್ತಾಯ

ನಾಯಕತ್ವ ಬಿಕ್ಕಟ್ಟು: ಹೈಕಮಾಂಡ್ ಮಧ್ಯಪ್ರವೇಶಿಸಿ, ಸಿಎಲ್‌ಪಿ ಸಭೆ ಕರೆಯಲು ಕಾಂಗ್ರೆಸ್ ಶಾಸಕರ ಒತ್ತಾಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಇದೀಗ ಹೈವೋಲ್ಟೇಜ್ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕರು ಸಚಿವರು ಕಸರತ್ತಿನಲ್ಲಿ ತೊಡಗಿದರೆ, ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರು ರಹಸ್ಯ ಸಭೆ ನಡೆಸಿ ಆಯಕತ್ವ ಬದಲಾವಣೆಗೆ ರಂಗ ಸಜ್ಜುಗೊಳಿಸುತ್ತಿದ್ದಾರೆ. ಸರ್ಕಾರ ರಚನೆಯಾದ ಆರಂಭದಲ್ಲಿ ಚರ್ಚೆಗೆ ಬಂದಂತೆಯೇ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಬೆಂಬಲಿಗ ಶಾಸಕರು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಡಿಕೆಶಿ ಬೆಂಬಲಿಗರು ರಹಸ್ಯ ಸಭೆ ನಡೆಸಿದ ಸಂದರ್ಭದಲ್ಲಿ, ಇನ್ನೊಂದೆಡೆ ಕುತೂಹಲಕಾರಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಟ್ಟಾ ಬೆಂಬಲಿಗ ಶಾಸಕ ಎಚ್.ಸಿ. ಬಾಲಕೃಷ್ಣ, ಹೈಕಮಾಂಡ್‌ಗೆ ತಕ್ಷಣ ಮಧ್ಯಪ್ರವೇಶಿಸಿ ನಾಯಕತ್ವ ಬದಲಾವಣೆಯ ಒಟ್ಟಾರೆ ಬೆಳವಣಿಗೆ ಬಗ್ಗೆ ಶಾಸಕರಿಗೆ ಸ್ಪಷ್ಟನೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕೃಷ್ಣ, ಕಾಂಗ್ರೆಸ್ ಹೈಕಮಾಂಡ್ ಮಧ್ಯ...
ಬೆಂಗಳೂರು ದರೋಡೆ; ಪೊಲೀಸ್’ಗೂ ಕೃತ್ಯಕ್ಕೂ ನಂಟು? ಇಬ್ಬರ ಸೆರೆ

ಬೆಂಗಳೂರು ದರೋಡೆ; ಪೊಲೀಸ್’ಗೂ ಕೃತ್ಯಕ್ಕೂ ನಂಟು? ಇಬ್ಬರ ಸೆರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿಯಲ್ಲಿ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತನಿಖೆಗೆ ರಚಿಸಲಾದ ವಿಶೇಷ ತಂಡಗಳು ದರೋಡೆ ಕೃತ್ಯಕ್ಕೆ ಸಂಬಂಧಿಸಿದ ಸುಳಿವುಗಳನ್ನು ಪತ್ತೆಹಚ್ಚಿ ಶಂಕಿತರನ್ನು ವಶಕ್ಕೆ ಪಡೆದಿವೆ. ನವೆಂಬರ್‌ 20ರ ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಕಾನ್‌ಸ್ಟೆಬಲ್‌ನ್ನು ಬೆಳ್ಳಂಬೆಳಗ್ಗೆ ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿಯು ಕೇರಳ ಮೂಲದವನು ಎನ್ನಲಾಗಿದೆ. ಆತ ಇತ್ತೀಚೆಗೆ CMS ಇನ್‌ಫೋ ಸಿಸ್ಟಮ್ಸ್ ಲಿಮಿಟೆಡ್‌ ಸಂಸ್ಥೆಗೆ ರಾಜೀನಾಮೆ ನೀಡಿರುವ ಮಾಜಿ ಉದ್ಯೋಗಿ ಎಂಬುದು ತಿಳಿದು ಬಂದಿದೆ. ದರೋಡೆಗೆ ಗುರಿಯಾದ ವಾಹನ ಇದೇ ಕಂಪನಿಗೆ ಸೇರಿದ್ದೇ ಎಂಬ ಬಗ್ಗೆ ತನಿಖೆ ಬಿರುಸುಗೊಂಡಿದೆ. ಮೂಲಗಳ ಪ್ರಕಾರ, ಬಂಧಿತ ಇಬ್ಬರೂ ಕಳೆದ ಆರು ತಿಂಗಳುಗಳಿಂದ ಪರಸ್ಪರ ಸಂಪರ್ಕದಲ್ಲಿದ್ದು, ದರೋಡೆ ಯೋಜನೆಯನ್ನು ಸೂಕ್ಷ್ಮವಾಗಿ ರೂಪಿಸಿದ್ದರು. ಘಟನೆಯ ಸುಮಾರು 45 ನಿಮಿಷಗಳ ನಂತರ ಮಾತ್ರ ನಿಯಂತ್ರಣ ಕೊಠಡಿಗೆ ದರೋಡೆ ...
KSRTCಗೆ ಎರಡು ರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಪ್ರಶಸ್ತಿಗಳು

KSRTCಗೆ ಎರಡು ರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಪ್ರಶಸ್ತಿಗಳು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತಷ್ಟು ಪ್ರಶಸ್ತಿ ಬಂದಿವೆ. ಎರಡು ರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಪ್ರಶಸ್ತಿಗಳು ಸಿಕ್ಕಿದ್ದು, ಸಾರಿಗೆ ವಲಯಕ್ಕೆ ಕರ್ನಾಟಕದ ಸಾರಿಗೆ ಸಂಸ್ಥೆ ಮಾದರಿಯಾಗಿದೆ. ರಾಜಸ್ಥಾನದ ಉದಯಪುರದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ KSRTCಗೆ10ನೇ ಅಫೆಕ್ಸ್ ಇಂಡಿಯಾ Safety, Quality, HR & Business Excellence ಪ್ರಶಸ್ತಿ ಗಳನ್ನು ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ ಗಳಿಗಾಗಿ ಚಿನ್ನದ ವರ್ಗದಲ್ಲಿ ಅಪೆಕ್ಸ್ ಇಂಡಿಯಾ ಮಾನವ ಸಂಪನ್ಮೂಲ ಶ್ರೇಷ್ಠತೆ ಪ್ರಶಸ್ತಿ ಮತ್ತು 2600 ವಿವಿಧ ಹುದ್ದೆಗಳ ನೇಮಕಾತಿ‌ ಪ್ರಕ್ರಿಯೆಯಲ್ಲಿನ‌ ಪಾರದರ್ಶಕತೆ, ತ್ವರಿತ, ತಂತ್ರಜ್ಞಾನ ಅವಲಂಬಿತ ಪ್ರಕ್ರಿಯೆಗೆ ಅಪೆಕ್ಸ್ ಇಂಡಿಯಾ ಮಾನವ ಸಂಪನ್ಮೂಲ ಧಾರಣಾ ಶ್ರೇಷ್ಠತೆ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಗಳನ್ನು ಉದಯಪುರ (ರಾಜಸ್ಥಾನ) ದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಎಸ್ ಸಿ ಬಾಸಿನ್, ಮಾಜಿ ಪ್ರಧಾನ ವ್ಯವಸ್ಥಾಪಕರು SAIL ಮತ್ತು ರಾಯಲ್...
ಹಗಲು ದರೋಡೆ ಪ್ರಕರಣ ಬೇಧಿಸಲು ಪ್ರಯತ್ನ; ಹೆಜ್ಜೆಗುರುತು ಬೆನ್ನತ್ತಿದ ಬೆಂಗಳೂರು ಪೊಲೀಸ್

ಹಗಲು ದರೋಡೆ ಪ್ರಕರಣ ಬೇಧಿಸಲು ಪ್ರಯತ್ನ; ಹೆಜ್ಜೆಗುರುತು ಬೆನ್ನತ್ತಿದ ಬೆಂಗಳೂರು ಪೊಲೀಸ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಅತಿ ದೊಡ್ಡ ದರೋಡೆ ರಾಜ್ಯ ಪೊಲೀಸ್ ವ್ಯವಸ್ಥೆಗೆ ಸವಾಲಾಗಿದೆ. ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿದ ದುಷ್ಕರ್ಮಿಗಳ ಗುಂಪೊಂದು ಜಯನಗರದಲ್ಲಿ 7 ಕೋಟಿ ರೂಪಾಯಿ ದೋಚಿ ಪರಾರಿಯಾದ ಘಟನೆ ಬುಧವಾರ ನಡೆದಿದೆ. ಜೆ.ಪಿ.ನಗರದ ಬ್ಯಾಂಕ್‌ ಶಾಖೆಯಿಂದ ಎಟಿಎಂಗಳಿಗೆ ನಗದು ಸಾಗಿಸುತ್ತಿದ್ದ ವ್ಯಾನನ್ನು ಜಯನಗರ ಅಶೋಕ ಪಿಲ್ಲರ್ ಬಳಿ ತಡೆದು ದಾಖಲೆ ಪರಿಶೀಲನೆ ನೆಪದಲ್ಲಿ ಜಾಲಾಡಿದ್ದಾರೆ ಎನ್ನಲಾಗಿದೆ. ಭಾರತ ಸರ್ಕಾರದ ಸ್ಟಿಕ್ಕರ್ ಅಂಟಿಸಿದ್ದ ಕಾರಿನಲ್ಲಿ ಬಂದಿದ್ದ ಆರೋಪಿಗಳು ಸಿಬ್ಬಂದಿಯನ್ನು ಬೆದರಿಸಿ, ನಗದು ತುಂಬಿದ ಚೀಲಗಳೊಂದಿಗೆ ತಮ್ಮ ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ನಂತರ ಡೈರಿ ಸರ್ಕಲ್ ಬಳಿ ಸಿಬ್ಬಂದಿಯನ್ನು ಇಳಿಸಿ, ಸುಮಾರು 7 ಕೋಟಿ ರೂ.ಗಳಷ್ಟು ಹಣದೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಕ್ಷಣ ಕ್ರಮ ಕೈಗೊಳ್ಳುವಂತೆ ಡಿಜಿ-ಐಜಿಪಿ ಸಲೀಂ ಅವರಿಗೆ ಸೂಚಿಸಿದ್ದಾರೆ. ಘಟನೆಯ ನಂತರಸರಣಿ ಸಭೆಗಳನ್ನು ನಡೆಸಿ, ಪತ್ತೆ ಕಾರ್ಯಾಚರಣೆಗೆ ವೇಗ ನೀಡಿದ ಬೆಂಗಳೂರು ...
ಬೆದರಿಕೆ ಬ್ಲ್ಯಾಕ್‌ಮೇಲ್ ಆರೋಪ: ಐವರ ವಿರುದ್ಧ ಯಶ್‌ ಅವರ ತಾಯಿ ದೂರು

ಬೆದರಿಕೆ ಬ್ಲ್ಯಾಕ್‌ಮೇಲ್ ಆರೋಪ: ಐವರ ವಿರುದ್ಧ ಯಶ್‌ ಅವರ ತಾಯಿ ದೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಟ ಯಶ್ ಅವರ ತಾಯಿ ಮತ್ತು ಚಲನಚಿತ್ರ ನಿರ್ಮಾಪಕಿ ಪುಷ್ಪಾ ನೀಡಿದ ದೂರಿನ ಆಧಾರದ ಮೇಲೆ, ಮಹಿಳೆ ಸೇರಿ ಐವರು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಪಿಆರ್‌ಒ ಹರೀಶ್ ಅರಸ್, ಮನು, ನಿತಿನ್, ಮಹೇಶ್ ಗುರು ಮತ್ತು ಸ್ವರ್ಣಲತಾ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಪುಷ್ಪಾ ನಿರ್ಮಿಸಿರುವ ‘ಕೊತ್ತಲವಾಡಿ’ ಚಿತ್ರದ ಪ್ರಚಾರಕ್ಕಾಗಿ ಆರೋಪಿಗಳು ಒಟ್ಟು 64 ಲಕ್ಷ ರೂ. ಪಡೆದಿದ್ದರೂ, ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡದೆ, ಬದಲಿಗೆ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್‌ಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪುಷ್ಪಾ, “ಚಿತ್ರದ ಪ್ರಚಾರಕ್ಕಾಗಿ ಆರಂಭದಲ್ಲಿ 23 ಲಕ್ಷ ರೂ.ಗೆ ಒಪ್ಪಿಕೊಂಡಿದ್ದ ಹರೀಶ್ ಅರಸ್, ನಂತರ ಚಿತ್ರ ಚಿತ್ರೀಕರಣದ ಸಂದರ್ಭದಲ್ಲಿ ಹಲವು ಹಂತಗಳಲ್ಲಿ ಹಣ ಪಡೆದಿದ್ದರು. ಚಿತ್ರ ಬಿಡುಗಡೆ ಹಂತಕ್ಕೆ ಬಂದಾಗ, ಲೆಕ್ಕಪತ್ರಗಳನ್ನು ಕೇಳಿದ ನಿರ್ದೇಶಕರಿಗೆ ‘ಪ್ರಚಾರ ನಿಲ್ಲಿಸುತ್ತೇವೆ’ ಎಂದು ಬೆದರಿಕೆ ಹಾಕಿದ್ದರು” ಎಂದು ಆರೋಪಿಸಿದ್ದಾರೆ. “ಚಿತ್ರದ ಕೆಲಸ ಪೂರ್ಣವಾದ ನಂತರ ಲೆಕ್ಕಪತ್ರ...
‘ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ’; ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

‘ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ’; ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮಾತನಾಡಿದರು. “ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದ್ದೇವೆ. ಇಂದು ಬೆಳಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾ ಗಾಂಧಿ ಅವರ ಸಮಾಧಿಗೆ ಹೋಗಿ ಗೌರವ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ನನನ್ನು ಕರೆದು ಅವರ ಸಮಾಧಿ ಸುತ್ತಮುತ್ತಲ ಜಾಗ ಅಭಿವೃದ್ಧಿ ಪಡಿಸಲು ಸೂಚಿಸಿದ್ದರು. ಜೊತೆಗೆ ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸಮಾಧಿಗೆ ಗ್ರಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿದೆ. ನಾನು ಹಾಗೂ ನನ್ನ ಸಹೋದರ ನಮ್ಮದೇ ಕ್ವಾರೆಯಿಂದ ಗ್ರಾನೈಟ್ ಕಲ್ಲನ್ನು ತೆಗೆದುಕೊಂಡು ಹೋಗಿ ಅಲ್ಲಿ ಹಾಕಿ ನಮ್ಮ ಕೈಲಾದ ಸೇವೆ ಮಾಡುವ ಭಾಗ್ಯ ಸಿಕ್ಕಿತು” ಎಂದು ಸ್ಮರಿಸಿದರು. “ನಮ್ಮ ನಾಯಕರು ಮತಕಳ...
ಪ್ರಸಕ್ತ ವರ್ಷ KSRTCಗೆ ಹೊಸದಾಗಿ 2000 ಬಸ್ಸುಗಳನ್ನು ಸೇರ್ಪಡೆ; ರಾಮಲಿಂಗಾ ರೆಡ್ಡಿ

ಪ್ರಸಕ್ತ ವರ್ಷ KSRTCಗೆ ಹೊಸದಾಗಿ 2000 ಬಸ್ಸುಗಳನ್ನು ಸೇರ್ಪಡೆ; ರಾಮಲಿಂಗಾ ರೆಡ್ಡಿ

Focus, ಪ್ರಮುಖ ಸುದ್ದಿ, ರಾಜ್ಯ
ಚಿಕ್ಕಮಗಳೂರಿನಲ್ಲಿ ನೂತನವಾಗಿ ನಿರ್ಮಿಸಲಿರುವ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಶಂಕು ಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಚಿಕ್ಕಮಗಳೂರು ಬಸ್ ನಿಲ್ದಾಣದ ಶಂಕುಸ್ಥಾಪನಾ ಸಿಬ್ಬಂದಿಗಳ ನೂತನ ವಸತಿ ಗೃಹವನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಬಸ್ ನಿಲ್ದಾಣ ಆಗಬೇಕೆನ್ನುವುದು ಬಹಳ ಹಿಂದಿನಿಂದಲೂ ಬೇಡಿಕೆಯಿತ್ತು. 2025ರಲ್ಲಿ ರೂ.19.87 ಕೋಟಿ ವೆಚ್ಚದಲ್ಲಿ ಒಂದು ಎಕರೆ 20 ಗುಂಟೆ ನಿವೇಶನದಲ್ಲಿ ಆಧುನಿಕ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. ಚಿಕ್ಕಮಗಳೂರು ಸಾರಿಗೆ ವಿಭಾಗಕ್ಕೆ ಸೇರಿರುವ ಪ್ರಮುಖ ಸ್ಥಳಗಳಿಗೆ ಸಮಗ್ರ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅರಸೀಕೆರೆಯಲ್ಲಿ 01 ಎಕರೆ 7.5 ಗುಂಟೆ ವಿಸ್ತೀರ್ಣದಲ್ಲಿ 1958 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣದ ನಿರ್ಮಾಣಕ್ಕೆ 26-07-2025 ರಂದು ಮುಖ್ಯ ಮಂತ್ರಿಗಳಿಂದ ಶಂ...
ಮೇಕೆದಾಟು : ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಹೊಸ ಯೋಜನಾ ವರದಿ ಸಲ್ಲಿಕೆಗೆ ನಿರ್ಧಾರ

ಮೇಕೆದಾಟು : ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಹೊಸ ಯೋಜನಾ ವರದಿ ಸಲ್ಲಿಕೆಗೆ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಂಎ) ಹೊಸ ವಿವರವಾದ ಯೋಜನಾ ವರದಿ (ಡಿಪಿಆರ್) ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಂಗಳವಾರ ತಿಳಿಸಿದ್ದಾರೆ. ಪಾಟಿಯಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ಆದೇಶದ ನಂತರ ಯೋಜನೆಯನ್ನು ಮುಂದುವರಿಸುವ ವಿಧಾನವನ್ನು ಇಂದು ಚರ್ಚಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶದ ಸಮಗ್ರ ವಿವರಗಳನ್ನು ಒಳಗೊಂಡ ಹೊಸ ಡಿಪಿಆರ್ ಅನಿವಾರ್ಯವಾಗಿದೆ. ಹಾರೋಬೆಲೆಯಲ್ಲಿ ಯೋಜನಾ ಕಚೇರಿಯನ್ನು ಈಗಾಗಲೇ ಆರಂಭಿಸಿದ್ದೇವೆ. ರಾಮನಗರದಲ್ಲಿ ಮುಖ್ಯ ಎಂಜಿನಿಯರ್ ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗಳನ್ನು ತೆರೆಯಲಾಗುತ್ತಿದ್ದು, ಅಗತ್ಯ ಸಿಬ್ಬಂದಿಯನ್ನೂ ನಿಯೋಜಿಸುತ್ತೇವೆ” ಎಂದರು. ಹಿಂದಿನ ಡಿಪಿಆರ್ ಅನ್ನು ಸಿಡಬ್ಲ್ಯೂಎಂಎ ತಿರಸ್ಕರಿಸಿದ್ದ ಹಿನ್ನೆಲೆಯಲ್ಲಿ ಹೊಸ ವರದಿ ಕಡ್ಡಾಯವಾಗಿದೆ...