Sunday, March 15

ರಾಜ್ಯ

ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ…

ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ…

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ವಿವಿಧ ಬೇಡಿಕೆಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಫೆಬ್ರವರಿ 12ರಂದು ಬ್ಯಾಂಕ್‌ಗಳ ರಾಷ್ಟ್ರವ್ಯಾಪಿ ಮುಷ್ಕರ ನಡೆಯಲಿದೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ, ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟ (ಬಿಇಎಫ್‌ಐ) ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ) ಸೇರಿದಂತೆ ಪ್ರಮುಖ ಸಂಘಟನೆಗಳು ಈ ಕುರಿತು ಮುಷ್ಕರ ನೋಟಿಸ್ ನೀಡಿವೆ.ಭಾರತೀಯ ಬ್ಯಾಂಕುಗಳ ಸಂಘ (ಐಬಿಎ) ಜತೆ ನಡೆದ ಸಮಾಲೋಚನೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ವಾರದಲ್ಲಿ ಐದು ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜನವರಿ 27ರಂದು ಕೂಡ ಬ್ಯಾಂಕ್‌ಗಳು ಒಂದು ದಿನದ ಮುಷ್ಕರ ನಡೆಸಿದ್ದವು.ಕಳೆದ ವರ್ಷ ಸರ್ಕಾರ ಅಧಿಸೂಚನೆ ಹೊರಡಿಸಿದ ನಾಲ್ಕು ಹೊಸ ಕಾರ್ಮಿಕ ಕಾನೂನುಗಳಿಗೆ ವಿರೋಧವಾಗಿ 10 ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆದಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಬ್ಯಾಂಕ್ ನೌಕರರು ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳ ಜೊತೆಗೆ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಅಂಚೆ ಕಚೇರಿಗಳ ಸೇವೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ...
ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ದುಬೈ: ಸದೃಢ ರಾಷ್ಟ್ರ ಹಾಗೂ ನಾಡು ಕಟ್ಟಬೇಕಾದರೆ ಅಲ್ಲಿ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಜಾಗತಿಕ ಆರೋಗ್ಯ ಸಮುದಾಯ ಒಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದರು.ದುಬೈನಲ್ಲಿ ನಡೆದ ಮೂರು ದಿನಗಳ ವಿಶ್ವ ಆರೋಗ್ಯ ಪ್ರದರ್ಶನ (WHX)ದಲ್ಲಿ ಪಾಲ್ಗೊಂಡಿದ್ದ ಸಚಿವರು, ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡುತ್ತಿರುವ ಆದ್ಯತೆಗಳು ಹಾಗೂ ಕರ್ನಾಟಕದ ಗಮನಾರ್ಹ ಪ್ರಗತಿಯನ್ನು ಪ್ರಸ್ತುತಪಡಿಸಿದರು. "ಆರೋಗ್ಯ ಸವಾಲುಗಳನ್ನು ಎದುರಿಸುವಾಗ ಯಾವುದೇ ಅಡೆತಡೆಗಳು ಅಥವಾ ಗಡಿಗಳು ಇರಬಾರದು, ಆರೋಗ್ಯಕರ ಜನಸಂಖ್ಯೆ ಎಂದರೆ ಆರೋಗ್ಯಕರ ರಾಷ್ಟ್ರ ಎಂದರ್ಥ. ಮಾನವೀಯತೆಯಡಿ ನಾವು ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.ದುಬೈನಲ್ಲಿ ನಡೆಯುತ್ತಿರುವ ಮೂರು ದಿನಗಳ WHX 2026 ಪ್ರದರ್ಶನದಲ್ಲಿ 180 ಕ್ಕೂ ಹೆಚ್ಚು ದೇಶಗಳಿಂದ 4,800ಕ್ಕೂ ಹೆಚ್ಚು ಮಂದಿ ಭಾಗವಹಿಸುತ್ತಿದ್ದಾರೆ. ಪ್ರದರ್ಶನವು ಅತ್ಯಾಧುನಿಕ ವೈದ್ಯಕೀಯ ಸಾಧನಗಳು, ಇಮೇಜಿಂಗ್, ಡಯಾಗ್ನೋಸ...
‘ನರೇಗಾ ಬಚವೋ’ ಕರಾವಳಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಕೇಂದ್ರದ ವಿರುದ್ಧ ಆಕ್ರೋಶ

‘ನರೇಗಾ ಬಚವೋ’ ಕರಾವಳಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಕೇಂದ್ರದ ವಿರುದ್ಧ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಗೆ ತಿದ್ದುಪಡಿ ಮಾಡಿ ಹೆಸರು ಹಾಗೂ ಅನುಷ್ಠಾನ ವಿಧಾನದಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ‘ನರೇಗಾ ಬಚವೋ ಸಂಗ್ರಾಮ್ ಪಾದಯಾತ್ರೆ’ ಗಮನಸೆಳೆದಿದೆ.ಸುಳ್ಯದಿಂದ ಮೂಲ್ಕಿವರೆಗೆ ನಾಲ್ಕು ದಿನಗಳ ಪಾದಯಾತ್ರೆಗೆ ಸೋಮವಾರ ಚಾಲನೆ ಸಿಕ್ಕಿತ್ತು. ನೂರಾರು ಕಾರ್ಯಕರ್ತರು ಮೊದಲ ದಿನ ಭಾಗವಹಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ನಾಯಕರು “ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಬಡವರ ಪಾಲಿನ ವರದಾನವಾದ ಉದ್ಯೋಗ ಖಾತರಿ ಯೋಜನೆಯಲ್ಲಿ ತಿದ್ದುಪಡಿ ಮಾಡಿ ಅದರ ಮೂಲ ಉದ್ದೇಶವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು. ಯೋಜನೆಯನ್ನು ಪುನರ್‌ಸ್ಥಾಪಿಸಬೇಕೆಂದು ಒತ್ತಾಯಿಸಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಯುತ್ತಿದೆ ಎಂದರು.“ಕೇಂದ್ರ ಸರ್ಕಾರ ಅನುದಾನವನ್ನು ಕಡಿತ ಮಾಡಿ ರಾಜ್ಯ ಸರ್ಕಾರದ ಮೇಲೆ ಹೊರೆ ಹಾಕುವ ಮೂಲಕ ಯೋಜನೆಯನ್ನು ಕ...
ಯಾವುದೇ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ ನಡೆಯುವಂತಿಲ್ಲ

ಯಾವುದೇ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ ನಡೆಯುವಂತಿಲ್ಲ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡು, ನೂರಾರು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದಾರೆ ತಿಳಿಸಿರುವ ಅವರು, ರಾಜ್ಯದಲ್ಲಿ ಯಾವುದೇ ರೀತಿಯ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ ನಡೆಯುವಂತಿಲ್ಲ ಎಂದಿದ್ದಾರೆ.ಎಲ್ಲ ರೀತಿಯ ಫ್ಯಾಕ್ಟರಿಗಳಿಗೆ ಆಯಾ ವ್ಯಾಪ್ತಿಯ ಸ್ಥಳೀಯ ಪೊಲೀಸರು ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಫ್ಯಾಕ್ಟರಿಯಲ್ಲಿನ ಕಾರ್ಯಚಟುವಟಿಕೆ ಹಾಗೂ ಅಲ್ಲಿ ಬಳಸಲಾಗುವ ಕೆಮಿಕಲ್‌ಗಳು, ಯಂತ್ರಗಳ ಕುರಿತು ಹಿರಿಯ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು ಗೃಹ ಸಚಿವರು ತಿಳಿಸಿದ್ದಾರೆ. ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡು, ನೂರಾರು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದಾರೆ.. ರಾಜ್ಯದಲ್ಲಿ ಯಾವುದೇ ರೀತಿಯ...
ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ “ಡೇ ಕೇರ್‌ ಕಿಮೋಥೆರಫಿ” ಸೆಂಟರ್‌; ಸಚಿವ ದಿನೇಶ್ ಗುಂಡೂರಾವ್

ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ “ಡೇ ಕೇರ್‌ ಕಿಮೋಥೆರಫಿ” ಸೆಂಟರ್‌; ಸಚಿವ ದಿನೇಶ್ ಗುಂಡೂರಾವ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಕ್ಯಾನ್ಸರ್ ಚಿಕಿತ್ಸೆಯನ್ನು ಜನಸಾಮಾನ್ಯರ ಸನಿಹಕ್ಕೆ ಕೊಂಡೊಯ್ಯುವ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಫಲವಾಗಿ, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಕೆ.ಎಂ.ಸಿ ಮಂಗಳೂರು ಸಹಯೋಗದೊಂದಿಗೆ ಆರಂಭಿಸಲಾದ 'ಹಬ್ ಅಂಡ್ ಸ್ಪೋಕ್' ಮಾದರಿಯ ಡೇ-ಕೇರ್ ಕೀಮೋಥೆರಪಿಯು ಇಂದು 100 ಯಶಸ್ವಿ ಚಿಕಿತ್ಸೆಗಳನ್ನು ಪೂರೈಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.​ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿರುವವರು ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಹಣ ಕೊಟ್ಟು ಚಿಕಿತ್ಸೆ ಪಡೆಯುವುದರಿಂದ ಆರ್ಥಿಕ ಮುಗ್ಗಟ್ಟಿಗೆ ಸಿಲುಕಬಾರದೆಂದು ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತವಾಗಿ ಗುಣಮಟ್ಟದ ಕೀಮೋಥೆರಪಿ ಸೇವೆ ಒದಗಿಸುತ್ತಿರುವುದು ನಮ್ಮ ಆರೋಗ್ಯ ವ್ಯವಸ್ಥೆಯ ದೊಡ್ಡ ಗೆಲುವು. ಈ ಯಶಸ್ಸಿಗೆ ಕಾರಣರಾದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗೆಯನ್ನು ಸಚಿವರು ಅಭಿನಂದಿಸಿದ್ದಾರೆ.​ಈಗಾಗಲೇ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ "ಡೇ ಕೇರ್‌ ಕಿಮೋಥೆರಫಿ" ಸೆಂಟರ್‌ಗಳನ್ನು ಸ್ಥಾಪಿಸಿ ಉಚಿತ ಸೇವೆ ಒದಗಿಸುತ್ತಿದ್ದೇವೆ. ಇಲ್ಲಿ ನಾವು ಕೇವಲ ಚಿಕಿತ...
ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಬ್ಯಾನರ್‌ನಲ್ಲೂ ಲೂಟಿ? ಬಿಜೆಪಿ ಆರೋಪ

ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಬ್ಯಾನರ್‌ನಲ್ಲೂ ಲೂಟಿ? ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಬ್ಯಾನರ್‌ನಲ್ಲೂ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.ಗೃಹಲಕ್ಷ್ಮಿಯ ಎರಡು ತಿಂಗಳ ಹಣ ಎಗರಿಸಿ ₹5000 ಕೋಟಿ ಅಕ್ರಮ ಎಸಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಬ್ಯಾನರ್‌ನಲ್ಲೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.ಮಾರುಕಟ್ಟೆ ದರದಲ್ಲಿ ಕೇವಲ ರೂ. 350 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್‌ಗಳನ್ನು ಬರೋಬ್ಬರಿ ರೂ. 998 ನೀಡಿ ಮುದ್ರಿಸಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದಿರುವ ಬಿಜೆಪಿ, ಕನಿಷ್ಠ ಪಕ್ಷ ಒಂದು ಬ್ಯಾನರ್‌ನಲ್ಲಿ ಅದರ ನೈಜ ಮುದ್ರಣ ದರಕ್ಕಿಂತಲೂ ಹೆಚ್ಚಿನ ದರವನ್ನು ಲೂಟಿ ಮಾಡಲಾಗುತ್ತಿದೆ ಎಂದು ದೂರಿದೆ.ಸಚಿವ ಸಂಪುಟದಲ್ಲಿ ಭ್ರಷ್ಟರು ತುಂಬಿ ತುಳುಕಾಡುತ್ತಿದ್ದರೂ ನಿಮ್ಮ ಮೌನದ ಹಿಂದಿನ ಕಾರಣವೇನು? ನಿಮಗೂ ಪಾಲು ಬರುತ್ತಿದೆಯೇ? ಎಂದು ಪ್ರಶ್ನಿಸಿ X ನಲ್ಲಿ ಬಿಜೆಪಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ...
ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್; ರೈಲ್ವೆ ಸಚಿವರ ಜೊತೆ ಎಂ.ಬಿ.ಪಾಟೀಲ್ ಚರ್ಚೆ

ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್; ರೈಲ್ವೆ ಸಚಿವರ ಜೊತೆ ಎಂ.ಬಿ.ಪಾಟೀಲ್ ಚರ್ಚೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕೇಂದ್ರದ ಮುಂದೆ ಬೇಡಿಕೆ ಇಟ್ಟಿದ್ದಾರೆ.ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರೊಂದಿಗೆ ರಾಜ್ಯದ ರೈಲ್ವೆ ಯೋಜನೆಗಳ ಕುರಿತು ಚರ್ಚೆನಡೆಸಿದ ಸಚಿವ ಎಂ.ಬಿ.ಪಾಟೀಲ್, ರಾಜ್ಯ ರಾಜಧಾನಿಯಿಂದ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲು, ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಮತ್ತು ಬೆಂಗಳೂರು-ವಿಜಯಪುರ ನಡುವೆ ದಿನವಹಿ ವಿಶೇಷ ರೈಲುಗಳನ್ನು ಮಂಜೂರು ಮಾಡಬೇಕೆಂದು ಕೋರಿ ಮನವಿ ಸಲ್ಲಿಸಿದರು.ಬಾಗಲೂರಿನ ಹೈಟೆಕ್ ಹಾರ್ಡ್ ವೇರ್ ಪಾರ್ಕ್ ನಲ್ಲಿ ಜೆಟ್ ವೆರ್ಕ್ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಉತ್ಪಾದನೆಗೆ ಚಾಲನೆ ನೀಡಿದ ಬಳಿಕ ಅಲ್ಲೇ ಕೆಲಹೊತ್ತು ವೈಷ್ಣವ್ ಅವರನ್ನು ಭೇಟಿಮಾಡಿ, ಮನವಿ ಪತ್ರಗಳನ್ನು ನೀಡಿದೆ. ಸಕಾರಾತ್ಮಕವಾಗಿ ಪರಿಶೀಲಿಸುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ ಎಂದು ಎಂ.ಬಿ.ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.ಬೆಂಗಳೂರು ದೇಶದ ತಂತ್ರಜ್ಞಾನ ರಾಜಧ...
ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಗದ್ದುಗೆಗಾಗಿ ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರುವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.ಕಾಂಗ್ರೆಸ್ ನಾಯಕರ ನಡುವಿನ ಟೀಕಾಸ್ತ್ರಗಳ ಕುರಿತಂತೆ ಶುಕ್ರವಾರ ಪ್ರತಿಕ್ರಿಯಿಸಿರುವ ಅಶೋಕ್, ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರ ನಡುವಿನ ವಾರ್‌ ಮತ್ತೆ ಆರಂಭವಾಗಿದೆ. ಇನ್ನು ಮುಂದೆಯೂ ಅಭಿವೃದ್ಧಿ ಬದಲು ಕೇವಲ ಕುರ್ಚಿ ಕಾಳಗ ಕಂಡುಬರಲಿದೆ ಎಂದು ವಿಶ್ಲೇಷಿಸಿದ್ದಾರೆ.ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯ ಬದಲು ಯತೀಂದ್ರ ಅವರೇ ನಮ್ಮ ನಾಯಕ ಎಂದು ಕಾಂಗ್ರೆಸ್‌ ನಾಯಕರು ಹೇಳಿಕೊಳ್ಳಬೇಕಿದೆ. ಎಲ್ಲರೂ ಹೈಕಮಾಂಡ್‌ ತೀರ್ಮಾನ ಎಂದರೆ, ಯತೀಂದ್ರ ಮಾತ್ರ ನಮ್ಮಪ್ಪನೇ ಪೂರ್ಣಾವಧಿ ಸಿಎಂ ಎನ್ನುತ್ತಾರೆ. ಆದ್ದರಿಂದ ಇದು ಪವರ್‌ಲೆಸ್‌ ಹೈಕಮಾಂಡ್‌ ಆಗಿದೆ ಎಂದು ಅಶೋಕ್ ಬಣ್ಣಿಸಿದರು.ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಸಭೆ ನಡೆಯಲಿದೆ. ಎಲ್ಲ ಶಾಸಕರು ಹಾಗೂ ಜಿಲ್ಲಾ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಯಲಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಬಿಜೆಪಿ ಬಿಬಿಎಂಪಿಯಲ್ಲಿ ಗೆದ್ದಿತ್ತು. ಈಗ ನಿರಂತರವಾಗಿ ತೆರಿಗೆಗಳನ್...
ಮೈಸೂರಿನಲ್ಲಿ ‘ಪರಿದೃಶ್ಯ 2026’ರ ಕಲರವ; ಜಾಗತಿಕ ಕಿರುಚಿತ್ರ, ಸಾಕ್ಷ್ಯಚಿತ್ರಗಳ ಪ್ರದರ್ಶನಕ್ಕೆ ತಯಾರಿ

ಮೈಸೂರಿನಲ್ಲಿ ‘ಪರಿದೃಶ್ಯ 2026’ರ ಕಲರವ; ಜಾಗತಿಕ ಕಿರುಚಿತ್ರ, ಸಾಕ್ಷ್ಯಚಿತ್ರಗಳ ಪ್ರದರ್ಶನಕ್ಕೆ ತಯಾರಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಮೈಸೂರು: ಜಗತ್ತಿನ ವಿವಿಧ ದೇಶಗಳ ಕಿರುಚಿತ್ರಗಳು ಮತ್ತು ಸಾಕ್ಷ್ಯಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ‘ಪರಿದೃಶ್ಯ–2026’ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ದಸರಾ ನಗರಿ ಮೈಸೂರು ಸಜ್ಜಾಗುತ್ತಿದೆ. ಫೆಬ್ರವರಿ 20ರಿಂದ 22ರವರೆಗೆ ಐತಿಹಾಸಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಉತ್ಸವ ನಡೆಯಲಿದೆ.ಮೈಸೂರು ಸಿನಿಮಾ ಸೊಸೈಟಿ (ಎಂಸಿಎಸ್) ಆಯೋಜಿಸಿರುವ ಈ ನಾಲ್ಕನೇ ಆವೃತ್ತಿಯ ಉತ್ಸವದಲ್ಲಿ ಭಾರತ ಸೇರಿದಂತೆ 114 ದೇಶಗಳಿಂದ ಆಯ್ಕೆಯಾದ ಕಿರುಚಿತ್ರಗಳು ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ ನಡೆಯಲಿದೆ. ಪ್ರೇಕ್ಷಕರ ಹೆಚ್ಚಿನ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಬಾರಿ ವಿಶಾಲ ಸ್ಥಳವನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.‘ಪರಿದೃಶ್ಯ’ ಉತ್ಸವವು ವರ್ಷದಿಂದ ವರ್ಷಕ್ಕೆ ಯಶೋಗಾಥೆ ಬರೆಯುತ್ತಿದೆ. ಮೊದಲ ಆವೃತ್ತಿಯಲ್ಲಿ 10 ದೇಶಗಳಿಂದ 150 ಚಿತ್ರಗಳು ಪ್ರದರ್ಶನಗೊಂಡಿದ್ದರೆ, ಮೂರನೇ ಆವೃತ್ತಿಯಲ್ಲಿ 109 ದೇಶಗಳಿಂದ 3,100ಕ್ಕೂ ಹೆಚ್ಚು ಚಿತ್ರಗಳು ಭಾಗವಹಿಸಿದ್ದವು. 2026ರ ಆವೃತ್ತಿಗೆ 114 ದೇಶಗಳಿಂದ 3,000ಕ್ಕೂ ಅಧಿಕ ಚಿತ್ರಗಳ ಭಾಗವಹಿಸುವಿಕೆಗೆ ಪ್ರ...
ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿ ಭಾವಚಿತ್ರ ದುರುಪಯೋಗ; ಶಾಸಕ ರಮೇಶ್ ಬಾಬು ದೂರು

ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿ ಭಾವಚಿತ್ರ ದುರುಪಯೋಗ; ಶಾಸಕ ರಮೇಶ್ ಬಾಬು ದೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿಂಸೆಯನ್ನು ಉತ್ತೇಜಿಸುವ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡಿರುವ ಬಗ್ಗೆ ದೂರು ದಾಖಲಿಸಿ ತನಿಖೆ ನಡೆಸುವಂತೆ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಗೆ ದೂರು ನೀಡಿದ್ದಾರೆ.ಹಿಂಸೆಯನ್ನು ಉತ್ತೇಜಿಸುವ / ಹಿಂಸೆಗೆ ಪ್ರಚೋದಿಸುವ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನು ಬಳಸಿರುವುದು ಕಾನೂನು ಬಾಹಿರವಾಗಿದ್ದು, BNS ಅಡಿಯಲ್ಲಿ ದಂಡನೀಯ. 06-02-2026 ರಂದು ಹಲವು ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಜಾಹೀರಾತಿನಲ್ಲಿ ಅಹಿಂಸೆಯ ಪ್ರತೀಕವಾಗಿರುವ, ರಾಷ್ಟ್ರಪಿತ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಿಸಲ್ಪಡುವ ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನು ಹಿಂಸಾತ್ಮಕ ಕೃತ್ಯಗಳು / ಹಿಂಸಾತ್ಮಕ ಸಂದೇಶಗಳು / ಹಿಂಸೆಗೆ ಪ್ರಚೋದಿಸುವ ವಿಷಯಗಳೊಂದಿಗೆ ತಪ್ಪಾಗಿ ಮತ್ತು ಅಜಾಗರೂಕತೆಯಿಂದ ಬಳಸಲಾಗಿದೆ ಎಂದು ರಮೇಶ್ ಬಾಬು ಆರೋಪಿಸಿದ್ದಾರೆ.ಈ ರೀತಿಯ ದುರುಪಯೋಗವು ಮಹಾತ್ಮ ಗಾಂಧೀಜಿಯವರ ಪರಂಪರೆಗೆ ದಕ್ಕೆ ಉಂಟುಮಾಡುವುದರ ಜೊತೆಗೆ ಸಾರ್ವಜನಿಕ ಭಾವನೆಗಳಿಗೆ ಆಘಾತ ಉಂಟ...