Tuesday, January 27

ರಾಜ್ಯ

ಕೋಗಿಲು ವಿವಾದ:  ಸರ್ಕಾರ ನಿಜವಾದ ಸಮಸ್ಯೆಯಿಂದ ಗಮನ ಬೇರೆಡೆ ತಿರುಗಿಸುತ್ತಿದೆ: ಬಿಜೆಪಿ ಶಾಸಕ

ಕೋಗಿಲು ವಿವಾದ: ಸರ್ಕಾರ ನಿಜವಾದ ಸಮಸ್ಯೆಯಿಂದ ಗಮನ ಬೇರೆಡೆ ತಿರುಗಿಸುತ್ತಿದೆ: ಬಿಜೆಪಿ ಶಾಸಕ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಅತಿಕ್ರಮಣಗೊಂಡ ಸರ್ಕಾರಿ ಭೂಮಿ ತೆರವು ಹಾಗೂ ಅತಿಕ್ರಮಣದಾರರ ಪುನರ್ವಸತಿ ವಿಚಾರ ರಾಜಕೀಯ ತೀವ್ರತೆ ಪಡೆದುಕೊಂಡಿರುವ ನಡುವೆ, ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥ ನಾರಾಯಣ್ ಅವರು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅತಿಕ್ರಮಣ ಮಾಡಿದವರೆಲ್ಲರೂ ಬಾಂಗ್ಲಾದೇಶೀಯರು. ತಾಂತ್ರಿಕವಾಗಿ ಯಾರೂ ಮನೆ ಹಂಚಿಕೆಗೆ ಅರ್ಹರಲ್ಲ. ಈ ವಿಚಾರದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸಬೇಕು. ಇಲಾಖಾ ವರದಿಗಳಲ್ಲಿಯೇ ಇದಕ್ಕೆ ಸಾಕ್ಷ್ಯವಿದೆ. ರಾಜ್ಯದಲ್ಲಿ ಸುಮಾರು 25 ಲಕ್ಷ ಬಾಂಗ್ಲಾದೇಶೀಯರು ಅಕ್ರಮವಾಗಿ ನೆಲೆಸಿದ್ದಾರೆ” ಎಂದು ಹೇಳಿದರು. ಅಕ್ರಮ ವಲಸೆಯೇ ಮೂಲ ಸಮಸ್ಯೆಯಾಗಿದ್ದು, ಬಡವರಿಗೆ ಮನೆ ನೀಡುವ ನೆಪದಲ್ಲಿ ಸರ್ಕಾರ ಜನರ ಗಮನವನ್ನು ಬೇರೆಡೆಗೆ ತಿರುಗಿಸುತ್ತಿದೆ ಎಂದು ಅವರು ಆರೋಪಿಸಿದರು. “ಚರ್ಚೆ ಅಕ್ರಮ ವಲಸಿಗರ ಕುರಿತು ನಡೆಯಬೇಕಿತ್ತು. ಆದರೆ ಅದನ್ನು ಮರೆಮಾಚಿ ವಸತಿ ವಿಷಯವನ್ನೇ ಮುಂದಿಟ್ಟುಕೊಳ್ಳಲಾಗುತ್ತಿದೆ. ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸ...
ಕಾಂಗ್ರೆಸ್ ಬಿಕ್ಕಟ್ಟು ನಡುವೆ ಗೃಹ ಸಚಿವ ಪರಮೇಶ್ವರ್’ಗೆ ಲಕ್?

ಕಾಂಗ್ರೆಸ್ ಬಿಕ್ಕಟ್ಟು ನಡುವೆ ಗೃಹ ಸಚಿವ ಪರಮೇಶ್ವರ್’ಗೆ ಲಕ್?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಯಕತ್ವದ ಚರ್ಚೆಯ ನಡುವೆಯೇ, ರಾಜ್ಯ ಗೃಹ ಸಚಿವ ಹಾಗೂ ಹಿರಿಯ ದಲಿತ ನಾಯಕ ಜಿ. ಪರಮೇಶ್ವರ ಅವರು ಈ ವರ್ಷ ‘ಬಡ್ತಿ’ ಸಿಗುವ ವಿಶ್ವಾಸದಲ್ಲಿದ್ದಾರೆ. ಆದರೆ ಅಂತಿಮ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೇ ಸೇರಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆಯ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಸಿದ್ದರಾಮಯ್ಯ ಪಾಳಯವು ಪರಮೇಶ್ವರ ಅವರನ್ನು ಸಂಭಾವ್ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮುಂದಿಟ್ಟು ಮಾತನಾಡುತ್ತಿರುವ ಹಿನ್ನೆಲೆಯಲ್ಲಿ ಅವರ ಹೇಳಿಕೆ ರಾಜಕೀಯ ಮಹತ್ವ ಪಡೆದುಕೊಂಡಿದೆ. ತಮ್ಮ ರಾಜಕೀಯ ಜೀವನದಲ್ಲಿ ಮುಂದಿನ ಹಂತದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಹೈಕಮಾಂಡ್ ನಿರ್ಧರಿಸಿದರೆ 2026ರಲ್ಲಿ ಅದು ಸಾಧ್ಯವಾಗಬಹುದು ಎಂದು ಹೇಳಿದರು. “ನಾನು ಸದಾ ಆಶಾವಾದಿಯಾಗಿ ಬದುಕಿದ್ದೇನೆ. ಇದು ಹೊಸ ವಿಚಾರವಲ್ಲ,” ಎಂದರು. ಮಹತ್ವಾಕಾಂಕ್ಷೆ ಕುರಿತು ಮಾತನಾಡಿದ ಅವರು, “ಒಬ್ಬ ಮನುಷ್ಯನಲ್ಲಿ ಮಹತ್ವಾಕಾಂಕ್ಷೆ ಇರಬೇಕು. ರಾಜಕೀಯಕ್ಕೆ ಬಂದಾ...
ಸಿಎಂ ಸಿದ್ದರಾಮಯ್ಯರಿಗೆ ಶೇಮ್; ನಿಮ್ಮ ಕಾನೂನಿಗೆ ಬೆಲೆ ಇಲ್ಲ? ಪೊಳಲಿ ಸೊಸೈಟಿ ಮೆನೇಜರ್ ಮೇಲೆ FIR

ಸಿಎಂ ಸಿದ್ದರಾಮಯ್ಯರಿಗೆ ಶೇಮ್; ನಿಮ್ಮ ಕಾನೂನಿಗೆ ಬೆಲೆ ಇಲ್ಲ? ಪೊಳಲಿ ಸೊಸೈಟಿ ಮೆನೇಜರ್ ಮೇಲೆ FIR

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಹಣಕಾಸು ವಹಿವಾಟು ಹೆಸರಿನಲ್ಲಿ ಅಮಾಯಕರನ್ನು ಪೀಡಿಸದಂತೆ ರಾಜ್ಯ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತಂದಿದ್ದರೂ ಸಹಕಾರಿ ಸಂಘಗಳು ತಮ್ಮ ಚಾಳಿಯನ್ನು ಬಿಟ್ಟಿಲ್ಲ. ಸಾಲ ವಸೂಲಾತಿ ಹೆಸರಲ್ಲಿ ಅಮಾಯಕ (ಸಾಲವನ್ನೇ ಪಡೆಯದ) ವೃದ್ಧೆಯನ್ನು ಪೀಡಿಸಿರುವ ಅಮಾನವೀಯ ಕೃತ್ಯವೊಂದು ಮಂಗಳೂರು ಬಳಿ ನಡೆದಿದೆ. ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರ ಸಚಿವಾಲಯವನ್ನೇ ಮುಜುಗರಕ್ಕೀಡು ಮಾಡಿದೆ. ಪೊಳಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ವಿಜಯ ಫೆರ್ನಾಂಡೀಸ್ ಎಂಬವರು ನಕಲಿ ದಾಖಲೆಗಳನ್ನು ಹಿಡಿದುಕೊಂಡು ವೃದ್ಧೆಯನ್ನು ಪೀಡಿಸಿ ಇದೀಗ ಬಂಧನ ಭೀತಿಗೆ ಸಿಲುಕಿದ್ದಾರೆ. ಬುಧವಾರ (31.12.2025) ಬೆಳಿಗ್ಗೆ ಅಧಿಕಾರಿಗಳ ಸೋಗಿನಲ್ಲಿ ಮನೆ ಆವರಣಕ್ಕೆ ಅತಿಕ್ರಮಣ ಪ್ರವೇಶ, ಮನೆ ಜಪ್ತಿ ಹೆಸರಿನಲ್ಲಿ ಸಾಲ ವಸೂಲಿಗೆ ಯತ್ನಿಸಿರುವ ಹಾಗೂ ವಯೋವೃದ್ಧೆ ಎಂದೂ ಗಮನಿಸದೆ ಬೆದರಿಕೆ ಒಡ್ಡಿರುವ ಬಗ್ಗೆ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪೊಲೀಸ್ ದೂರಿನಲ್ಲಿ ಏನಿದೆ? ದಕ್ಸಿಣಕನ್ನಡ ಜಿಲ್ಲೆ ...
ಎಲ್ಲಾ ಒತ್ತುವರಿಗಳಿಗೂ ‘ಕೋಗಿಲು’ ಮಾನದಂಡ ಅನ್ವಯಿಸುತ್ತದೆಯೇ?

ಎಲ್ಲಾ ಒತ್ತುವರಿಗಳಿಗೂ ‘ಕೋಗಿಲು’ ಮಾನದಂಡ ಅನ್ವಯಿಸುತ್ತದೆಯೇ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೋಗಿಲು ಬಡಾವಣೆಯ ಅಕ್ರಮ ಒತ್ತುವರಿದಾರರಿಗೆ ಪುನರ್ವಸತಿ ನೀಡುವುದೇ ರಾಜ್ಯ ಸರ್ಕಾರದ ನೀತಿಯಾದರೆ, ರಾಜ್ಯದಾದ್ಯಂತ ತೆರವುಗೊಂಡ ಎಲ್ಲಾ ಒತ್ತುವರಿಗಳಿಗೂ ಇದೇ ಮಾನದಂಡ ಅನ್ವಯಿಸುತ್ತದೆಯೇ? ಎಂದು ಪ್ರತಿಪಕ್ಷ ಬಿಜೆಪಿ ಪ್ರಶ್ನಿಸಿದೆ. ರಾಜಕಾಲುವೆ ನುಂಗಿದ ಪ್ರಭಾವಿ ಬಿಲ್ಡರ್‌ಗಳ ಮೇಲೂ ಇದೇ 'ಮಾನವೀಯತೆ' ತೋರುತ್ತೀರಾ? ಮನೆ ಕಳೆದುಕೊಂಡು ಬೀದಿಗೆ ಬಿದ್ದ ಸಾವಿರಾರು ಬಡ ಕನ್ನಡಿಗರಿಗಿಲ್ಲದ ನ್ಯಾಯ, ವಲಸಿಗರಿಗೆ ಮಾತ್ರವೇಕೆ? ಎಂದು ಬಿಜೆಪಿ ಮಾಧ್ಯಮದಲ್ಲಿ ಪ್ರಶ್ನೆಗಳ ಸುರಿಮಳೆಗೈದಿದೆ. ಕನ್ನಡಿಗರ ಹಿತ ಕಾಯಬೇಕಾದ ಸರ್ಕಾರಕ್ಕೆ ನೆರೆಯ ರಾಜ್ಯದವರ ಒತ್ತಡವೇ ದೊಡ್ಡದಾಯಿತೇ? ದಶಕಗಳಿಂದ ಸ್ವಂತ ಸೂರಿಲ್ಲದೆ ಕಾಯುತ್ತಿರುವ ಲಕ್ಷಾಂತರ ಬಡ ಕನ್ನಡಿಗರನ್ನು ಕಡೆಗಣಿಸಿ, ಕಾನೂನುಬಾಹಿರವಾಗಿ ಒತ್ತುವರಿ ಮಾಡಿದವರಿಗೆ 'ವಿಶೇಷ ಆತಿಥ್ಯ' ನೀಡುತ್ತಿರುವುದು ನಾಚಿಕೆಗೇಡು ಎಂದಿರುವ ಬಿಜೆಪಿ, ತಕ್ಷಣವೇ ಈ ವಿಶೇಷ ಪುನರ್ವಸತಿ ತೀರ್ಮಾನವನ್ನು ಹಿಂಪಡೆಯಿರಿ. ಕಾನೂನು ಎಲ್ಲರಿಗೂ ಒಂದೇ ಆಗಿರಲಿ ಮತ್ತು ನಮ್ಮ ನೆಲದ ಬಡವರಿಗೆ ವಸತಿ ಯೋಜನೆಗಳಲ್ಲಿ ಮೊದಲ ಆದ್ಯತೆ ಸಿಗಲಿ ಎಂದು ಸಲಹೆ ಮಾಡಿದೆ....
ಮನರೇಗಾ ಮೂಲ ಆಶಯಕ್ಕೆ ಹೊಸ ಕಾಯ್ದೆ ವಿರುದ್ಧವಾಗಿದೆ ಎಂದ ಸಿಎಂ

ಮನರೇಗಾ ಮೂಲ ಆಶಯಕ್ಕೆ ಹೊಸ ಕಾಯ್ದೆ ವಿರುದ್ಧವಾಗಿದೆ ಎಂದ ಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹೊಸ ಕಾಯ್ದೆಯು ರಾಜ್ಯವು ತನ್ನ ಮಾನದಂಡ ಹಂಚಿಕೆಯನ್ನು ಮೀರಿ ಭರಿಸಬೇಕಾದ ಯಾವುದೇ ವೆಚ್ಚವನ್ನು ಕೇಂದ್ರ ಸರ್ಕಾರವು ನಿರ್ದೇಶಿಸಿದ ಕ್ರಮಗಳ ಪ್ರಕಾರ ರಾಜ್ಯಗಳೇ ಹೊರಬೇಕು ಎಂದು ಹೇಳುತ್ತದೆ. ಇದು ಕೇಂದ್ರವು ನಿಗದಿಪಡಿಸಿದ ಮಿತಿಯನ್ನು ಮೀರಿದ ಬೇಡಿಕೆಗೆ 100% ಜವಾಬ್ದಾರಿಯನ್ನು ರಾಜ್ಯಗಳು ಹೊರುವಂತೆ ಮಾಡಬಹುದು. ರಾಜ್ಯವು ನಿಗದಿತ ಅಥವಾ ಅದನ್ನು ಮೀರಿದ ವೆಚ್ಚವನ್ನು ಭರಿಸಲು ಸಾಧ್ಯವಾಗದಿದ್ದರೆ, ಜನರ ಅರ್ಹ ಕೂಲಿ ಅವಧಿಯ ಹಕ್ಕನ್ನು ಜಾರಿಗೊಳಿಸಲು ಸಾಧ್ಯವಿಲ್ಲ, ಇದು ಬೇಡಿಕೆ ಇರುವ ಕಡೆಗಳಲ್ಲಿ ಅನುದಾನ ನೀಡಲೇಬೇಕು ಎಂಬ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕಾಯ್ದೆಯು ಬಿತ್ತನೆ ಮತ್ತು ಕೊಯ್ಲು ಹೆಚ್ಚಾಗಿ ನಡೆಯುವ ಸಮಯದಲ್ಲಿ ಒಟ್ಟು 60 ದಿನಗಳ ಅವಧಿ ಕಾಮಗಾರಿಗಳನ್ನು ನಡೆಸದಿರುವ ಬಗ್ಗೆ ಮುಂಚಿತವಾಗಿ ಅಧಿಸೂಚಿಸಬೇಕು ಎಂದು ಆದೇಶಿಸುತ್ತದೆ. ಕೃಷಿ ಚಟುವಟಿಕೆಗಳು ಆ ಸಮಯದಲ್ಲಿ ಹೆಚ್ಚಾಗಬಹುದಾದರೂ, ಇ...

‘ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ’; ಬಿ.ಎಲ್.ಸಂತೋಷ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ, ನಾಗರೀಕತೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಹೋರಾಟ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಯ ಕ್ರಮವನ್ನು ಟೀಕಿಸುತ್ತಿರುವ ರಾಜಕೀಯ ಎದುರಾಳಿಗಳನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತವನ್ನು ಉಳಿಸಬೇಕಾದರೆ ನಾವು ಬಂಗಾಳವನ್ನು ಉಳಿಸಬೇಕು. ಎಲ್ಲರ ಆಶೀರ್ವಾದದೊಂದಿಗೆ ಬಂಗಾಳವನ್ನು ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಸಂತೋಷ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ, ನಾಗರೀಕತೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಹೋರಾಟ. ಭಾರತವನ್ನು ಉಳಿಸಬೇಕಾದರೆ ನಾವು ಬಂಗಾಳವನ್ನು ಉಳಿಸಬೇಕು. ಎಲ್ಲರ ಆಶೀರ್ವಾದದೊಂದಿಗೆ ಬಂಗಾಳವನ್ನು ಬಿಜೆಪಿ ಗೆದ್ದೇ ಗೆಲ್ಲುತ್ತದೆ. * ಶ್ರೀ ಬಿ. ಎಲ್.‌ ಸಂತೋಷ್‌, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು pic.twitter.com/ulCkovz7yT— BJP Karnataka (@BJP4Karnataka) December 30, 2025...
ಪ್ರಯಾಣಿಕರೇ ಡಕೋಟಾ ಬಿಎಂಟಿಸಿ ಬಸ್‌ ಹತ್ತುವ ಮುನ್ನ ಎಚ್ಚರ ಎಂದ ಪ್ರತಿಪಕ್ಷ ಬಿಜೆಪಿ

ಪ್ರಯಾಣಿಕರೇ ಡಕೋಟಾ ಬಿಎಂಟಿಸಿ ಬಸ್‌ ಹತ್ತುವ ಮುನ್ನ ಎಚ್ಚರ ಎಂದ ಪ್ರತಿಪಕ್ಷ ಬಿಜೆಪಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡಕೋಟಾ ಬಿಎಂಟಿಸಿ ಬಸ್‌! ಪ್ರಯಾಣಿಕರೇ ಬಸ್‌ ಹತ್ತುವ ಮುನ್ನ ಎಚ್ಚರ ಎಚ್ಚರ ಎಂದು ಪ್ರತಿಪಕ್ಷ ಬಿಜೆಪಿ ಎಚ್ಚರಿಕೆ ನೀಡಿದೆ. ಮಾರ್ಗ ಮಧ್ಯೆ ಕೆಟ್ಟುಹೋಗುವ ಹಾಗೂ ಸಾರಿಗೆ ನಿಗಮದ ಅನೇಕಾನೇಕ ಅವಾಂತರಗಳ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಿಎಂಟಿಸಿ ಬಸ್ಸಿನ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಂಡಿರುವ ಬಿಜೆಪಿ, 'ಭ್ರಷ್ಟ ಕಾಂಗ್ರೆಸ್ ಸರ್ಕಾರ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಸಾರಿಗೆ ಇಲಾಖೆಗೆ ಅನುದಾನ ನೀಡದೆ, ಬಾಕಿ ಉಳಿಸಿಕೊಂಡು ಡಕೋಟಾ ಬಸ್‌ಗಳನ್ನ ರಸ್ತೆಗೆ ಇಳಿಸಿದೆ' ಎಂದು ಟೀಕಿಸಿದೆ. ಒಂದು ಕಡೆ ಬಿಎಂಟಿಸಿ ಬಸ್‌ಗಳು ಸರಿಯಾದ ನಿರ್ವಹಣೆ ಇಲ್ಲದೆ ಅಮಾಯಕರ ಜೀವ ಬಲಿ ಪಡೆದು "ಕಿಲ್ಲರ್‌ ಬಿಎಂಟಿಸಿ" ಎನ್ನುವ ಅಪಖ್ಯಾತಿ ಗಳಿಸಿವೆ. ಇನ್ನೊಂದು ಕಡೆ ಬಸ್‌ಗಳಲ್ಲಿ ಪ್ರಯಾಣಿಸುವುದಕ್ಕೂ ಜನರು ಭಯ ಪಡುವ ಸ್ಥಿತಿ ಎದುರಾಗಿದೆ. ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಸುರಕ್ಷತೆ ಎಂಬುದೇ ಇಲ್ಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ. 'ಇದೇನಾ ನಿಮ್ಮ ಡಕೋಟಾ ಬಸ್‌ ಗ್ಯಾರಂಟಿ? ಎಂದು ಸಾರಿಗ...
ಕೋಗಿಲು ತೆರವು ವಿಷಯ; ಕೇರಳ ಸಿಎಂ ನಡೆಗೆ ಸಿದ್ದರಾಮಯ್ಯ ಆಕ್ಷೇಪ

ಕೋಗಿಲು ತೆರವು ವಿಷಯ; ಕೇರಳ ಸಿಎಂ ನಡೆಗೆ ಸಿದ್ದರಾಮಯ್ಯ ಆಕ್ಷೇಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕಟ್ಟಡ ನೆಲಸಮ ಕಾರ್ಯಾಚರಣೆ ಕುರಿತಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದನ್ನು ಕೇರಳದ ಚುನಾವಣಾ ರಾಜಕೀಯದ ಭಾಗವೆಂದು ವ್ಯಾಖ್ಯಾನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಕಾರಣ, ಅಲ್ಲಿನ ಮುಖ್ಯಮಂತ್ರಿ ಈ ವಿಚಾರವನ್ನು ರಾಜಕೀಯವಾಗಿ ಬಳಸುತ್ತಿದ್ದಾರೆ. ಅದಕ್ಕಾಗಿಯೇ ಅವರು ಕೋಗಿಲು ಪ್ರದೇಶಕ್ಕೆ ಒಬ್ಬ ಶಾಸಕ ಮತ್ತು ರಾಜ್ಯಸಭಾ ಸದಸ್ಯರನ್ನು ಕಳುಹಿಸಿದ್ದಾರೆ” ಎಂದು ಹೇಳಿದರು. ಕೋಗಿಲು ಪ್ರದೇಶದ ನಿವಾಸಿಗಳು ನಿರಾಶ್ರಿತರಾಗಿದ್ದು, ಅವರು ಸರ್ಕಾರಿ ಭೂಮಿಯಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ನಿಗಮದ ವತಿಯಿಂದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. “ಮಾನವೀಯ ದೃಷ್ಟಿಯಿಂದ ನಾವು ಅವರಿಗೆ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. #WATCH | Bengaluru: On Kerala CM Pinarayi ...
KSDL ಮತ್ತು ಕೃಷಿ ಮಾರಾಟ ಇಲಾಖೆ ನೇಮಕಾತಿ ಪರೀಕ್ಷೆ ದಿನಾಂಕ ಬದಲು

KSDL ಮತ್ತು ಕೃಷಿ ಮಾರಾಟ ಇಲಾಖೆ ನೇಮಕಾತಿ ಪರೀಕ್ಷೆ ದಿನಾಂಕ ಬದಲು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: KSDL ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಪರೀಕ್ಷೆ ನಡೆಸಲು KEA ತೀರ್ಮಾನಿಸಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷಾ ದಿನಾಂಕಗಳನ್ನು ಬದಲಾವಣೆ ಮಾಡಲಾಗಿದೆ. ಉಳಿದಂತೆ ಜನವರಿ 19ರ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೆಚ್ಚಿನ ವಿವರಗಳಿಗೆ KEA ವೆಬ್ ಸೈಟ್ ನಲ್ಲಿ ಲಭ್ಯವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. #KEArecruitment-25: ಕೆ ಎಸ್ ಡಿ ಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷಾ ದಿನಾಂಕಗಳನ್ನು ಬದಲಾವಣೆ ಮಾಡಲಾಗಿದೆ. ಉಳಿದಂತೆ ಜನವರಿ 19ರ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.… pic.twitter.com/Rc7q3H3ABY— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) December 26, 2025...
‘ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ವ್ಯತ್ಯಾಸವಿದೆ’: ಸಿದ್ದರಾಮಯ್ಯ

‘ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ವ್ಯತ್ಯಾಸವಿದೆ’: ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಹಲವರು ಅತಿಕ್ರಮವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು, ಅದು ಜನ ವಸತಿಗೆ ಯೋಗ್ಯವಾದ ಸ್ಥಳವಾಗಿರಲಿಲ್ಲ. ಅಲ್ಲಿನ ಕುಟುಂಬಗಳಿಗೆ ಹಲವು ಬಾರಿ ಬೇರೆಡೆಗೆ ಸ್ಥಳಾಂತರ ಆಗುವಂತೆ ನೋಟೀಸ್ ನೀಡಿದ್ದರೂ ಅವರು ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅವರನ್ನು ಆ ಜಾಗದಿಂದ ತೆರವುಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಭಾರತದ ಬುಲ್ಡೋಜರ್ ನ್ಯಾಯ ದಕ್ಷಿಣ ಭಾರತಕ್ಕೂ ಬಂದಿದೆ ಎಂಬ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಟೀಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರ ವ್ಯತ್ಯಾಸವಿದೆ ಎಂದಿದ್ದಾರೆ. ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಳದಲ್ಲಿದ್ದ ಕುಟುಂಬಗಳಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಅವರ ಜೊತೆ ಮಾತನಾಡಿ, ಅವರೆಲ್ಲರಿಗೂ ತಾತ್ಕಾಲಿಕ ಆಶ್ರಯ, ಊಟ ಇನ್ನಿತರೆ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದ್ದೇ...