Friday, May 1

ರಾಜ್ಯ

ಉಪಚುನಾವಣೆ: ಸಮರ್ಥ್, ಉಮೇಶ್ ಮೇಟಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಉಪಚುನಾವಣೆ: ಸಮರ್ಥ್, ಉಮೇಶ್ ಮೇಟಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಟಿಕೆಟ್ ಹಂಚಿಕೆ ಕುರಿತಿದ್ದ ಕಗ್ಗಂಟಿಗೆ ಕಾಂಗ್ರೆಸ್ ಕೊನೆಗೂ ತೆರೆ ಎಳೆದಿದೆ. ಏಪ್ರಿಲ್ 9ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಅಭ್ಯರ್ಥಿ ಪಟ್ಟಿಯನ್ನು ಇಂದು ಭಾನುವಾರ ಬಿಡುಗಡೆ ಮಾಡಿದೆ.ದಾವಣಗೆರೆ ದಕ್ಷಿಣದಿಂದ ಸಮರ್ಥ್ ಮಲ್ಲಿಕಾರ್ಜುನ್ ಹಾಗೂ ಬಾಗಲಕೋಟೆಯಿಂದ ಉಮೇಶ್ ಮೇಟಿ ಇವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ದೃಡಪಡಿಸಿವೆ.ಉಪಚುನಾವಣೆಯ ಸನ್ನಾಹದಲ್ಲಿ ಕಾಂಗ್ರೆಸ್ ಈ ಬಾರಿ ಜಾಗರೂಕ ನಡೆ ತೆಗೆದುಕೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಗಟ್ಟಿಯಾದ ಸ್ಪರ್ಧೆಗೆ ತಯಾರಾಗಿದೆ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ....
ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ಪರವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡಿದರೂ ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕು ವೇಣೂರು ಪೊಲೀಸ್ ಠಾಣೆಯಲ್ಲಿ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ ವಿರುದ್ಧ ಪ್ರಕರಣ ದಾಖಲಾಗಿದೆ.ಸಂತ್ರಸ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂದೇಶ್ ಅವರು​​​ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಇನ್ಸ್​ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಆರೋಪ ಎಂದಿದ್ದ ಕಮಿಷನರ್ ಸಂದೇಶ್ ವಿರುದ್ಧ ಕೆಲವು ಮಹಿಳೆಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಈ ಆರೋಪ ಸುಳ್ಳು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದರು. ಮುನ್ನವೇ, ಸಂತ್ರಸ್ತರ ಹೇಳಿಕೆ ದಾಖಲಿಸುವ ಮುನ್ನವೇ, ಪೊಲೀಸ್ ಆಯುಕ್ತರು ಇನ್ಸ್ಪೆಕ್ಟರ್'ಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಸಾರ್ವಜನಿಕವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆ ಬೆನ್ನಲ್ಲೇ ಈ...
ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ? ನಮಗೂ ಅವಕಾಶ ಬೇಕು”

ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ? ನಮಗೂ ಅವಕಾಶ ಬೇಕು”

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಮನಗರ: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ನಡುವೆಯೇ ಕಾಂಗ್ರೆಸ್ ಒಳಗೆ ಸಚಿವ ಸ್ಥಾನಕ್ಕಾಗಿ ಒತ್ತಾಯಗಳು ಜೋರಾಗಿವೆ. “ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ? ನಮಗೂ ಅವಕಾಶ ಬೇಕು” ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸ್ಪಷ್ಟವಾಗಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಹಾಗೂ ಎರಡನೇ ಬಾರಿ ಗೆದ್ದ ಶಾಸಕರಿಗೂ ಈ ಬಾರಿ ಮಂತ್ರಿಗಿರಿ ನೀಡಬೇಕು ಎಂದು ಒತ್ತಾಯಿಸಿದರು. “ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಶಾಸಕರಾಗಿದ್ದಾಗಲೇ ಸಚಿವರಾಗಿದ್ದರು. ಹಾಗಾಗಿ ಈಗಲೂ ಹೊಸದಾಗಿ ಆಯ್ಕೆಯಾದವರಿಗೂ ಅವಕಾಶ ಸಿಗಬೇಕು” ಎಂದು ಹೇಳಿದರು.ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಔತಣಕೂಟದಲ್ಲಿ ಸುಮಾರು 55 ಮಂದಿ ಶಾಸಕರು ಸೇರಿ ಈ ವಿಚಾರವನ್ನು ಚರ್ಚಿಸಿದ್ದೇವೆ. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿ ಬಳಿ ಮಂಡಿಸಿದ್ದೇವೆ. ಮುಖ್ಯಮಂತ್ರಿಗಳು ಸ್ಪಂದಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.ಮೂರು-ನಾಲ್ಕು ಬಾರಿ ಗೆದ್ದ ಹಿರಿಯ ಶಾಸಕರು ಈಗಾಗಲೇ ಸಚಿವ ಸ್ಥಾನಕ್ಕಾಗಿ ಸಭೆ ನಡೆಸಿ ಮನವಿ ಮಾಡಿರುವ ಹಿನ್ನೆಲೆ...
ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

Focus, ಪ್ರಮುಖ ಸುದ್ದಿ, ರಾಜ್ಯ
ತುಮಕೂರು: ಮೇಲಾಧಿಕಾರಿಯಿಂದ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಅವರು ನೇಣಿಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಪಾವಗಡದಲ್ಲಿ ನಡೆದಿದೆ.ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ದಿನ ಸಂಜೆ ಕಚೇರಿಯ ಸಿಬ್ಬಂದಿ ತೆರಳಿದ ಬಳಿಕ, ಒಬ್ಬರೇ ಇದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಸಾವಿಗೆ ಮುನ್ನ ಮಲ್ಲಿಕಾರ್ಜುನ ಅವರು ವಿಡಿಯೋ ಸಂದೇಶ ದಾಖಲಿಸಿದ್ದು, ಅದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. “ನನ್ನ ತಾಯಿ, ಪತ್ನಿ, ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ ಮೇಲಾಧಿಕಾರಿಯ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ” ಎಂದು ಅವರು ಹೇಳಿದ್ದಾರೆ.ಅಲ್ಲದೇ, “ನನಗೆ ನ್ಯಾಯ ಸಿಗಲಿ, ಕೃಷ್ಣಪ್ಪ ಅವರಿಗೆ ದೇವರೂ ಕಾನೂನೂ ಶಿಕ್ಷೆ ನೀಡಲಿ” ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.59 ವರ್ಷ ವಯಸ್ಸಿನ ಮ...
ಮಾ.24ರಿಂದ ಕರಾವಳಿ ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ

ಮಾ.24ರಿಂದ ಕರಾವಳಿ ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದರೂ, ಇನ್ನೊಂದೆಡೆ ಮಳೆ ಚುರುಕುಗೊಂಡಿದ್ದು ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದೆ. ಮುಂದಿನ ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು, ಧಾರವಾಡ, ಗದಗ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಶನಿವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನೂ, ಮಾರ್ಚ್ 24ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಒಟ್ಟಾರೆ, ಬಿಸಿಲಿನ ನಡುವೆ ಮಳೆ ಚಟುವಟಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ....
ರಾಜ್ಯಕ್ಕೆ ಹೆಚ್ಚುವರಿ ಅನಿಲ ಪೂರೈಸಿ; ಕೇಂದ್ರ ಸಚಿವರಿಗೆ  ಸಿದ್ದರಾಮಯ್ಯ ಪತ್ರ

ರಾಜ್ಯಕ್ಕೆ ಹೆಚ್ಚುವರಿ ಅನಿಲ ಪೂರೈಸಿ; ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಪತ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ/ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ತಲೆದೋರಿದ್ದು, ಪರಿಸ್ಥಿತಿ ಗಂಭೀರ ಹಂತ ತಲುಪಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.ರಾಜ್ಯಾದ್ಯಂತ ವಾಣಿಜ್ಯ ಅನಿಲ ಪೂರೈಕೆಯಲ್ಲಿನ ವ್ಯತ್ಯಯದಿಂದ ಹೋಟೆಲ್‌ಗಳು, ಸಣ್ಣ ಉದ್ಯಮಗಳು ಸೇರಿದಂತೆ ಅನೇಕ ವಲಯಗಳ ಬದುಕು ತತ್ತರಿಸಿದೆ ಎಂದು ಸಿಎಂ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕವೂ ಮಾಹಿತಿ ಹಂಚಿಕೊಂಡು, ತಕ್ಷಣದ ಕ್ರಮದ ಅಗತ್ಯತೆಯನ್ನು ಅವರು ಒತ್ತಿಹೇಳಿದ್ದಾರೆ.ಪ್ರಸ್ತುತ ರಾಜ್ಯದಲ್ಲಿ ದಿನಕ್ಕೆ ಸುಮಾರು 50 ಸಾವಿರ ಸಿಲಿಂಡರ್‌ಗಳ ಬೇಡಿಕೆ ಇದ್ದರೂ, ಕೇವಲ 1,000 ಸಿಲಿಂಡರ್‌ಗಳಷ್ಟೇ ಪೂರೈಕೆ ಆಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಇದರ ಪರಿಣಾಮವಾಗಿ ಅನೇಕ ಹೋಟೆಲ್‌ಗಳು ಮುಚ್ಚುವ ಹಂತ ತಲುಪಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.“ಎಲ್‌ಪಿಜಿ ...
ಆದಾಯ ತೆರಿಗೆ 2026: 50% HRA ವಿನಾಯಿತಿ, 150ಕ್ಕೂ ಹೆಚ್ಚು ಫಾರ್ಮ್‌ಗಳು ಪರಿಚಯ

ಆದಾಯ ತೆರಿಗೆ 2026: 50% HRA ವಿನಾಯಿತಿ, 150ಕ್ಕೂ ಹೆಚ್ಚು ಫಾರ್ಮ್‌ಗಳು ಪರಿಚಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ ಶುಕ್ರವಾರ ಆದಾಯ ತೆರಿಗೆ ನಿಯಮಗಳು, 2026 ಅನ್ನು ಅಧಿಸೂಚನೆ ಹೊರಡಿಸಿದ್ದು, ಇದು ಆದಾಯ ತೆರಿಗೆ ಕಾಯ್ದೆ, 2025 ಗೆ ಕಾರ್ಯಾಚರಣಾ ಚೌಕಟ್ಟನ್ನು ಒದಗಿಸಿದೆ. ಈ ಹೊಸ ನಿಯಮಗಳು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿವೆ.ಹೊಸ ತೆರಿಗೆ ವ್ಯವಸ್ಥೆಯ ಉದ್ದೇಶ ಹೊಸ ತೆರಿಗೆ ದರಗಳನ್ನು ಪರಿಚಯಿಸುವುದಲ್ಲ, ಬದಲಾಗಿ ತೆರಿಗೆ ಕಾಯ್ದೆಯನ್ನು ಸರಳಗೊಳಿಸುವುದು, ಅನಗತ್ಯ ನಿಯಮಗಳನ್ನು ತೆಗೆದುಹಾಕುವುದು ಮತ್ತು ಅನುಸರಣೆಯನ್ನು ಸ್ಪಷ್ಟಗೊಳಿಸುವುದಾಗಿದೆ. HRA ಕುರಿತು ಪ್ರಮುಖ ಬದಲಾವಣೆ ಮನೆ ಬಾಡಿಗೆ ಭತ್ಯೆ (HRA) ಪಡೆಯುವ ಸಂಬಳದ ಉದ್ಯೋಗಿಗಳಿಗೆ ಹೊಸ ನಿಯಮಗಳು ಕೆಲವು ಮಹತ್ವದ ಬದಲಾವಣೆಗಳನ್ನು ತಂದಿವೆ:ಮುಂಬೈ, ದೆಹಲಿ, ಕೋಲ್ಕತ್ತಾ, ಚೆನ್ನೈ, ಹೈದರಾಬಾದ್, ಪುಣೆ, ಅಹಮದಾಬಾದ್ ಮತ್ತು ಬೆಂಗಳೂರು ನಗರಗಳಲ್ಲಿ ಸಂಬಳದ 50% ವರೆಗೆ HRA ವಿನಾಯಿತಿ ಲಭ್ಯ ಇತರೆ ನಗರಗಳಲ್ಲಿ 40% ಮಿತಿ ಮುಂದುವರಿಕೆ ಭೂಮಾಲೀಕ-ಬಾಡಿಗೆದಾರ ಸಂಬಂಧ ಘೋಷಣೆ ಕಡ್ಡಾಯ – ಪಾರದರ್ಶಕತೆ ಹೆಚ್ಚಿಸಲು ಹೊಸ ನಿಯಮ ಸರಳೀಕರಣದ ದಿಕ್ಕಿನಲ್ಲಿ ದೊಡ್ಡ ಹೆಜ್ಜೆಹೊಸ ಕಾಯ್...
‘ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ’: ಐಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಡಾ. ಪದ್ಮಿನಿ ಪ್ರಸಾದ್ ಕರೆ

‘ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ’: ಐಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಡಾ. ಪದ್ಮಿನಿ ಪ್ರಸಾದ್ ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರೀ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮಗಳು ರಾಜ್ಯದಾದ್ಯಂತ ಜೋರಾಗಿ ನಡೆಯುತ್ತಿವೆ. ಈ ಹಿನ್ನೆಲೆ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ (Dr. Padmini Prasad) ಅವರ ಆರೋಗ್ಯ ಜಾಗೃತಿ ಅಭಿಯಾನ ವಿಶೇಷ ಗಮನಸೆಳೆದಿದೆ.ವರ್ಷಗಳಿನಿಂದ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಡಾ. ಪದ್ಮಿನಿ ಪ್ರಸಾದ್, ಈ ಬಾರಿ ಗರ್ಭಕಂಠ ಕ್ಯಾನ್ಸರ್ (Cervical Cancer) ಕುರಿತ ಕಾರ್ಯಕ್ರಮಗಳ ಸರಣಿಯನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಐಐಐಟಿ ಬೆಂಗಳೂರು (IIIT Bangalore), ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ಮೂರನೇ ಹಂತದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ದೇಹದ ಬೆಳವಣಿಗೆ, ದೈಹಿಕ-ಮಾನಸಿಕ ಆರೋಗ್ಯ, ಲೈಂಗಿಕ ಬೆಳವಣಿಗೆ, ಲೈಂಗಿಕ ಕಿರುಕುಳ ಮತ್ತು ರಕ್ಷಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.“ಪ್ರಸ್ತುತ ಜೀವನಶೈಲಿ ಹಲವು ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಯುವಕರು ಮುನ್ನೆಚ್ಚರ...
ಹವಾಮಾನ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹವಾಮಾನ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದು (ಬುಧವಾರ) ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (India Meteorological Department) ನೀಡಿದೆ. ಕೆಲವು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ವಿಶೇಷವಾಗಿ ಮೈಸೂರು (Mysuru), ಮಂಡ್ಯ (Mandya), ಚಾಮರಾಜನಗರ (Chamarajanagar), ಹಾಸನ (Hassan), ಕೊಡಗು (Kodagu) ಹಾಗೂ ಚಿಕ್ಕಮಗಳೂರು (Chikkamagaluru) ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಇನ್ನೂ ಹಾವೇರಿ (Haveri), ಚಿತ್ರದುರ್ಗ (Chitradurga) ಹಾಗೂ ಹುಬ್ಬಳ್ಳಿ-ಧಾರವಾಡ (Hubballi-Dharwad) ಪ್ರದೇಶಗಳಲ್ಲಿಯೂ ಮಳೆಯ ಲಕ್ಷಣಗಳು ಗೋಚರಿಸಬಹುದು.ಉತ್ತರ ಒಳನಾಡಿನ ಬೀದರ್ (Bidar), ಕಲಬುರಗಿ (Kalaburagi), ರಾಯಚೂರು (Raichur) ಜಿಲ್ಲೆಗಳಲ್ಲಿ ತೀವ್ರ ಬಿಸಿಲಿನ ನಡುವೆಯೂ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ.ಬಂಗಾಳ ಕೊಲ್ಲಿ (Ba...
ಸ್ಪೀಕರ್ ಸಭಾತ್ಯಾಗ: ಸರ್ಕಾರದ ವೈಫಲ್ಯ ಬಯಲು – ಪ್ರಲ್ಹಾದ್ ಜೋಶಿ

ಸ್ಪೀಕರ್ ಸಭಾತ್ಯಾಗ: ಸರ್ಕಾರದ ವೈಫಲ್ಯ ಬಯಲು – ಪ್ರಲ್ಹಾದ್ ಜೋಶಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯ ಮತ್ತೊಮ್ಮೆ ಬಯಲಾಗಿದ್ದು, ವಿಧಾನಸಭಾ ಸ್ಪೀಕರ್ ಸಭಾತ್ಯಾಗ ಮಾಡಿದ ಘಟನೆ ಅದಕ್ಕೆ ಸಾಕ್ಷಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರ ಪದೇ ಪದೇ ಆಡಳಿತಾತ್ಮಕ ವೈಫಲ್ಯಗಳನ್ನು ತೋರಿಸುತ್ತಿದೆ ಎಂದು ಟೀಕಿಸಿದರು. ಶಾಸಕರ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ನೀಡಲು ವಿಫಲವಾಗಿರುವುದು ಹಾಗೂ ಕೆಲವು ಸಚಿವರು ಸದನಕ್ಕೆ ಗೈರಾಗಿರುವುದು ಗಂಭೀರ ಸಂಗತಿ ಎಂದು ಹೇಳಿದರು. ಸೋಮವಾರ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ (U.T. Khader) ಅಸಮಾಧಾನ ವ್ಯಕ್ತಪಡಿಸಿ, ಉತ್ತರಗಳನ್ನು ಸಮಯಕ್ಕೆ ಸಿದ್ಧಪಡಿಸಲು ಸರ್ಕಾರಕ್ಕೆ ಹಲವು ಬಾರಿ ಸೂಚನೆ ನೀಡಿದ್ದರೂ ಸುಧಾರಣೆ ಕಂಡುಬಂದಿಲ್ಲ ಎಂದು ಹೇಳಿದ್ದಾರೆ. ನಾಲ್ಕು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ಪರಿಸ್ಥಿತಿ ಬದಲಾಗದ ಹಿನ್ನೆಲೆಯಲ್ಲಿ ಸಭಾತ್ಯಾಗ ಮಾಡಿರುವುದು ಸರ್ಕಾರದ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಜೋಶಿ ಅಭಿಪ್ರಾಯಪಟ್ಟರು. ಶಾಸಕರ ಪ್ರಶ್ನೆಗಳಿಗೆ ಉತ್ತರಿಸಲು ಸಚಿವರ...