Tuesday, January 27

ರಾಜ್ಯ

ಇಡೀ ಕರ್ನಾಟಕವನ್ನೇ ‘ಪೂರ್ವಜರ ಆಸ್ತಿ’ ಎಂದು ಬರೆಸಿಕೊಳ್ಳುವ ಮುನ್ನ ಕಂದಾಯ ಸಚಿವರ ವಿರುದ್ಧ ಕ್ರಮ ಕೈಗೊಳ್ಳಿ; ಬಿಜೆಪಿ ಆಗ್ರಹ

ಇಡೀ ಕರ್ನಾಟಕವನ್ನೇ ‘ಪೂರ್ವಜರ ಆಸ್ತಿ’ ಎಂದು ಬರೆಸಿಕೊಳ್ಳುವ ಮುನ್ನ ಕಂದಾಯ ಸಚಿವರ ವಿರುದ್ಧ ಕ್ರಮ ಕೈಗೊಳ್ಳಿ; ಬಿಜೆಪಿ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಹಾಗೂ ಕೇರಳ ಸರ್ಕಾರಗಳ ನಡುವೆ ಬುಲ್ಡೋಜರ್ ಬಡಿದಾಟ ನಡೆಯುತ್ತಿದೆ. ತನ್ನ ನಡೆ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಸಮರ್ತಿಸಿಕೊಂಡಿದ್ದು, ಕಾನೂನು ರೀತಿಯ ಕ್ರಮವನ್ನೇ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. ಬೆಂಗಳೂರು ಹೊರವಲಯದ ಕೋಗಿಲು ಬಳಿ ಸರ್ಕಾರಿ ಜಮೀನಿನಲ್ಲಿ ಮುಸ್ಲಿಂ ಸಮುದಾಯದವರು ಅಕ್ರಮವಾಗಿ ಕಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಒತ್ತುವರಿ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾಚರಣೆ ನಡೆಸಿದೆ. ಈ ಬುಲ್ಡೋಜರ್ ಕಾರ್ಯಚರಣೆ ಹಾಗೂ ಸಿದ್ದರಾಮಯ್ಯ ಸರ್ಕಾರದ ಸಮರ್ಥನೆಯನ್ನು ತನ್ನದೇ ಶೈಲಿಯಲ್ಲಿ ಟೀಕಿಸಿರುವ ಪ್ರತಿಪಕ್ಷ ಬಿಜೆಪಿ, ಸಿದ್ದು ಸರ್ಕಾರದ ಕಾನೂನುಬದ್ಧ ಕ್ರಮ ಬಡವರ ಮೇಲಷ್ಟೇ ಯಾಕೆ? ಪ್ರಭಾವಿಗಳ ಮೇಲೆ ಕ್ರಮ ಯಾವಾಗ ಎಂದು ಪ್ರಶ್ನಿಸಿದೆ. ಈ ವಿಚಾರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಕಂದಾಯ ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಕೇಳಿಬಂದಿರುವ ಒತ್ತುವರಿ ಆರೋಪವನ್ನು ಪ್ರಸ್ತಾಪಿಸಿದೆ. 'ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಂಚನೆಯ ಮುಖ ಬಯಲಾಗಿದೆ. ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಗರುಡನಪಾಳ್ಯದಲ...
‘ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುತ್ತಿಲ್ಲ’; ಜೆಡಿಎಸ್ ಅನುಮಾನಗಳಿಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಉತ್ತರ

‘ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುತ್ತಿಲ್ಲ’; ಜೆಡಿಎಸ್ ಅನುಮಾನಗಳಿಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಉತ್ತರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ನಾವು ಯಾವುದೇ ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುತ್ತಿಲ್ಲ' ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಎಂಬ ವದಂತಿಗಳ ಬಗ್ಗೆ ಹಾಗೂ ಈ ಕುರಿತ ಮಾಧ್ಯಮ ವರದಿಗಳನ್ನು ಮುಂದಿಟ್ಟು ಪ್ರತಿಪಕ್ಷಗಳು ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್ ನಾಯಕರು ಅಧಿಕಾರಕ್ಕಾಗಿ ಹತಾಶೆಗೊಂಡು ಇಷ್ಟೊಂದು ಕೆಳಮಟ್ಟದ ಸುಳ್ಳು ಸುದ್ದಿಗಳನ್ನು ಹರಡುವುದು ಶೋಭೆ ತರುವಂತದ್ದಲ್ಲ. 'ನಾವು ಯಾವುದೇ ಸರ್ಕಾರಿ ಆಸ್ಪತ್ರೆಯನ್ನು ಮುಚ್ಚುತ್ತಿಲ್ಲ ಎನ್ನುವ ಕನಿಷ್ಠ ಜ್ಞಾನವಿಲ್ಲದೆ ಜನರ ದಾರಿ ತಪ್ಪಿಸುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ' ಎಂದು ಅವರು ಹೇಳಿದ್ದಾರೆ. 'ನಮ್ಮ ಗುರಿ ಬಡವರ ಜೀವ ಉಳಿಸುವುದು, ಸುಳ್ಳು ಹೇಳುವುದಲ್ಲ' ಎಂದು ಸಾಮಾಜಿಕ ಜಾಲತಾಣ X ನಲ್ಲಿ ಬರೆದುಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಎಂದಿಗೂ ಬಡವರ ಪರವಾಗಿದೆ. ನಾವು ಮಾಡುತ್ತಿರುವುದು ವೈದ್ಯರ ಮರುಹೊಂದಾಣಿ...
‘ಸತ್ಯಗಳನ್ನು ತಿಳಿಯದೆ ಹಸ್ತಕ್ಷೇಪ ಮಾಡಬೇಡಿ’: ಪಿಣರಾಯಿಗೆ ಡಿಕೆಶಿ ಎದಿರೇಟು

‘ಸತ್ಯಗಳನ್ನು ತಿಳಿಯದೆ ಹಸ್ತಕ್ಷೇಪ ಮಾಡಬೇಡಿ’: ಪಿಣರಾಯಿಗೆ ಡಿಕೆಶಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕರ್ನಾಟಕದಲ್ಲಿ ನಡೆದ ಭೂಸ್ವಾಧೀನ ಅಭಿಯಾನದ ಕುರಿತ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಟೀಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎದಿರೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು,"ಇದು ತುಂಬಾ ದುರದೃಷ್ಟಕರ. ಪಿಣರಾಯಿ ಅವರಂತಹ ಹಿರಿಯ ನಾಯಕರು ಬೆಂಗಳೂರಿನ ಸಮಸ್ಯೆಗಳನ್ನು ತಿಳಿದುಕೊಳ್ಳಬೇಕು. ಕೆಲವರು ಅಲ್ಲಿ ಅತಿಕ್ರಮಣ ಮಾಡಿದ್ದಾರೆ. ಇದು ತ್ಯಾಜ್ಯ ವಿಲೇವಾರಿ ತಾಣ ಎಂದಿದ್ದಾರೆ.'ನಮ್ಮಲ್ಲಿ ಮಾನವೀಯತೆ ಇದೆ. ನಾವು ಅವರಿಗೆ ಹೊಸ ಸ್ಥಳಗಳಿಗೆ ಹೋಗಲು ಅವಕಾಶ ನೀಡಿದ್ದೇವೆ. ಅವರಲ್ಲಿ ಕೆಲವರು ಮಾತ್ರ ಸ್ಥಳೀಯರು. ಪಿಣರಾಯಿ ಅವರಂತಹ ಹಿರಿಯ ನಾಯಕರು ಅಂತಹ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು' ಎಂದು ಡಿಕೆಶಿ ಹೇಳಿದರು. #WATCH | Bengaluru | On Kerala CM Pinarayi Vijayan's statement on recent devlotion drive in Karanataka, Dy CM DK Shivakumar says, "It is very unfortunate. Senior leaders like Pinarayi should know the issues in Bengaluru. Some people have encroached there. It is a waste…...
ಸಿದ್ದು ಕುರ್ಚಿ ಉಳಿಸಿಕೊಳ್ಳಲು ವಸತಿ ಇಲಾಖೆಯ ಹಣ ವರ್ಗಾವಣೆ? ಏನಿದು ಬಿಜೆಪಿ ಆರೋಪ

ಸಿದ್ದು ಕುರ್ಚಿ ಉಳಿಸಿಕೊಳ್ಳಲು ವಸತಿ ಇಲಾಖೆಯ ಹಣ ವರ್ಗಾವಣೆ? ಏನಿದು ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಮೌಲ್ಯದ ಆಸ್ತಿಪಾಸ್ತಿ ಪತ್ತೆ ಮಾಡಿದ ಬೆಳವಣಿಗೆಯನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿಯು ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸರ್ಫರಾಜ್‌ ನಿವಾಸ ಮತ್ತು ಸಂಬಂಧಿಕರ ಮನೆಗಳೂ ಸೇರಿದಂತೆ 5 ಕಡೆ ಇತ್ತೀಚಿಗೆ ದಾಳಿ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಸುಮಾರು 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. ಬಡವರಿಗೆ ಸೂರು ಕಲ್ಪಿಸಬೇಕಾದ ವಸತಿ ಇಲಾಖೆ ಇಂದು ಭ್ರಷ್ಟಾಚಾರದ ಗೂಡಾಗಿದೆ. ಸಚಿವ @BZZameerAhmedK ಅವರ ಇಲಾಖೆಯಲ್ಲಿ ಲೂಟಿಯಾದ ಕೋಟ್ಯಂತರ ರೂ. ಎಲ್ಲಿಗೆ ಹೋಯಿತು? @siddaramaiah ಅವರು ಆ ಭ್ರಷ್ಟಾಚಾರದ ಹಣವನ್ನು ಕುರ್ಚಿ ಉಳಿಸಿಕೊಳ್ಳಲು ವರ್ಗಾವಣೆ ಮಾಡಿದ್ದು ಯಾರಿಗೆ? #HousingScam #Corruption #CongressFailsKarnataka pic.twitter.com/T8XitgQ981 — BJP Karnataka (@BJP4Karnataka) December 26, 2025 ಈ ಬಗ್ಗೆ ಟೀಕಾಸ್...
ಶಿಕ್ಷಣ ರಾಜಕೀಯ ಮುಕ್ತವಾಗಬೇಕು; ಬಸವರಾಜ್ ಬೊಮ್ಮಾಯಿ

ಶಿಕ್ಷಣ ರಾಜಕೀಯ ಮುಕ್ತವಾಗಬೇಕು; ಬಸವರಾಜ್ ಬೊಮ್ಮಾಯಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು ರಾಜಕೀಯ ಕಾರಣಕ್ಕೆ ಶಿಕ್ಷಣ ವ್ಯವಸ್ಥೆ ಹಾಳು ಮಾಡುವ ಕೆಲಸ ಆಗಬಾರದು. ಶಿಕ್ಷಣ ರಾಜಕೀಯ ಮುಕ್ತವಾಗಬೇಕು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ. ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಸುಶಾಸನ ದಿನಾಚರಣೆ ಅಟಲ್ ಪುರಸ್ಕಾರ 2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಅವರು ಆರು ದಶಕಗಳ ಕಾಲ ಪರಿಶುದ್ಧ ರಾಜಕಾರಣ ಮಾಡಿದ್ದರು. ಅವರ ನಡೆ ನುಡಿಯಲ್ಲಿ ವ್ಯತ್ಯಾಸ ಇರಲಿಲ್ಲ. ಅಧಿಕಾರಕ್ಜೆ ಬರುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಸುಮಾರು ನಲವತ್ತೈದು ವರ್ಷ ಹೋರಾಟ ಮಾಡಿಕೊಂಡು ಬಂದಿದ್ದರು. ಅಂತವರ ಕೈಯಲ್ಲಿ ಅಧಿಕಾರ ಬಂದಾಗ ಯಾವರೀತಿ ನಡೆಸುತ್ತಾರೆ ಎಂದು ನಿರೀಕ್ಷೆ ಇತ್ತು. ಜನನಾಯಕನ ಕೈಯಲ್ಲಿ ಅಧಿಕಾರ ಬಂದಾಗ ಹೇಗೆ ನಡೆಸುತ್ತಾರೆ ಎಂದು ವಾಜಪೇಯಿಯವರ...

ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮೈಸೂರು: ಮೈಸೂರು ಅರಮನೆಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೈಸೂರು ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಸ್ಫೋಟ ಸಂಭವಿಸಿದೆ. ಅರಮನೆ ಮುಂಭಾಗ ಮಕ್ಕಳ ಆಟಿಕೆ ಸಾಮಾನುಗಳ ಮಾರಾಟ ಸ್ಥಳದಲ್ಲಿ, ಜನನಿಬಿಡ ಸ್ಥಳದಲ್ಲಿ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಗಾಯಗೊಂಡಿದ್ದು ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ನಡೆಸಿದ್ದಾರೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. #WATCH | Karnataka | A helium cylinder explosion occurred in front of the Jayamarthanda gate of the Mysore Palace at around 8.30 pm. The balloon seller died on the spot and his identity is yet to be ascertained. Four others wer...
ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

Focus, ಪ್ರಮುಖ ಸುದ್ದಿ, ರಾಜ್ಯ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಬೈಕ್'ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರನ್ನು ಅರುಣ್, ಮನೋಜ್, ನರಸಿಂಹಮೂರ್ತಿ, ನಂದೀಶ್ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆ ವೇಳೆ, ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.....
2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನ

2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ. ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ...
ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದಲ್ಲೇ ಸುಸಜ್ಜಿತ ರೈಲ್ವೆ ಟರ್ಮಿನಲ್

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದಲ್ಲೇ ಸುಸಜ್ಜಿತ ರೈಲ್ವೆ ಟರ್ಮಿನಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ಹಾಗೂ ವಿಶ್ವದರ್ಜೆಯ ರೈಲ್ವೆ ಟರ್ಮಿನಲ್ ಬೆಂಗಳೂರಿಗೆ ಬರಲು ಸಜ್ಜಾಗಿದೆ. ಚೀನಾದ ಐಕಾನಿಕ್ ಹ್ಯಾಂಗ್‌ಝೌ ರೈಲು ನಿಲ್ದಾಣದಿಂದ ಸ್ಫೂರ್ತಿ ಪಡೆದು, ನಗರ ಚಲನಶೀಲತೆಯ ಭವಿಷ್ಯಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾದ ಸಂಪೂರ್ಣವಾಗಿ ಎತ್ತರದ (ಎಲಿವೇಟೆಡ್) ರೈಲ್ವೆ ಟರ್ಮಿನಲ್ ಯಲಹಂಕದಲ್ಲಿ ನಿರ್ಮಾಣವಾಗಲಿದೆ ಎಂದು ಸಂಸದ ಡಾ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಸುಮಾರು ₹6,000 ಕೋಟಿ ಹೂಡಿಕೆಯಲ್ಲಿ ನಿರ್ಮಾಣವಾಗಲಿರುವ ಈ ಮಹತ್ವದ ಯೋಜನೆಯು 20 ಎಕರೆ ವಿಸ್ತೀರ್ಣದಲ್ಲಿ ರೂಪುಗೊಳ್ಳಲಿದ್ದು, 16 ಅತ್ಯಾಧುನಿಕ ವೇದಿಕೆಗಳು, 10 ಸ್ಥಿರ ಮಾರ್ಗಗಳು ಹಾಗೂ 15 ಪಿಟ್ ಮಾರ್ಗಗಳನ್ನು ಒಳಗೊಂಡಿರಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ. ಅಲ್ಲದೆ, ಮೆಟ್ರೋ ಸೇವೆಯೊಂದಿಗೆ ತಡೆರಹಿತ ಏಕೀಕರಣವೂ ಈ ಟರ್ಮಿನಲ್‌ನ ಪ್ರಮುಖ ವೈಶಿಷ್ಟ್ಯವಾಗಿರಲಿದೆ. ಈ ಹೆಗ್ಗುರುತು ಯೋಜನೆಯಿಂದ ಉತ್ತರ ಬೆಂಗಳೂರಿನ ಸಂಚಾರ ದಟ್ಟಣೆ ಗಮನಾರ್ಹವಾಗಿ ಕಡಿಮೆಯಾಗಲಿದ್ದು, ಈಗಿರುವ ರೈಲ್ವೆ ಟರ್ಮಿನಲ್‌ಗಳ ಮೇಲಿನ ಒತ್...
ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯ ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ವಿಶೇಷ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸಿದರು. ದೆಹಲಿ ಮತ್ತು ಉತ್ತರ ಭಾರತದ ಕ್ರೈಸ್ತ ಸಮುದಾಯದ ಭಾರಿ ಪ್ರಾರ್ಥನಾ ಕೂಟದಲ್ಲಿ ಪ್ರಧಾನಮಂತ್ರಿ ಉಪಸ್ಥಿತರಿದ್ದರು. #WATCH | Prime Minister Narendra Modi attended the Christmas morning service at The Cathedral Church of the Redemption in Delhi along with a large congregation of Christians of Delhi and North India on the occassion of #Christmas2025 today. The service included prayers,… pic.twitter.com/wVuQe6GYKQ— ANI (@ANI) December 25, 2025 ಈ ಸಂದರ್ಭದಲ್ಲಿ ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಪ್ರಧಾನಮಂತ್ರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನಾ ಸೇವೆಯಲ್ಲಿ ಕ್ರಿಸ್‌ಮಸ್ ಕ್ಯಾರೋಲ್‌ಗಳು, ಸ್ತುತಿಗೀತೆಗಳು ಹಾಗೂ ಶಾಂತಿ, ಸಹಬಾಳ್ವೆ ಮತ್ತ...