Wednesday, June 25

ರಾಜ್ಯ

IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

IPL ಚಾಂಪಿಯನ್ RCBಗಷ್ಟೇ ಅಲ್ಲ, ರನ್ನರ್ ಅಪ್, ಕ್ವಾಲಿಫೈಯರ್ ಆಡಿದ ತಂಡಗಳಿಗೂ ಕೋಟಿ-ಕೋಟಿ ಪುರಸ್ಕಾರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿ ಎತ್ತಿ ಹಿಡಿದಿದ್ದು, 18 ವರ್ಷಗಳ ಕನಸನ್ನು ನನಸಾಗಿಸಿದೆ. Moments he will never forget 🏆Moments they will never forget 🤩🎥 Virat Kohli 🤝 The #RCB faithful ❤#TATAIPL | #RCBvPBKS | #Final | #TheLastMile | @RCBTweets | @imVkohli pic.twitter.com/ObyJxRI0C0— IndianPremierLeague (@IPL) June 3, 2025 ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ RCB ತಮ್ಮ ಎದುರಾಳಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಕಾದಾಟ ನಡೆಸಿ 6 ರನ್​ಗಳ ಜಯ ಸಾಧಿಸಿದೆ. ಈ ಮೂಲಕ ಚೊಚ್ಚಲ ಐಪಿಎಲ್ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಈ ನಡುವೆ, IPL ಗೆದ್ದ ಆರ್‌ಸಿಬಿ ತಂಡ ಬಹುಮಾನದ ಮೊತ್ತವಾಗಿ 20 ಕೋಟಿ ರೂಪಾಯಿ ಪಡೆಯಲಿದೆ. ರನ್ನರ್ ಅಪ್ ಪಂಜಾಬ್ ಕಿಂಗ್ಸ್ ತಂಡಕ್ಕೂ 13 ಕೋಟಿ ರೂ...
ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ರೋಚಕ ಗೆಲುವು; ತಂಡವನ್ನು ಅಭಿನಂದಿಸಿದ ಹೆಚ್ಡಿಕೆ

ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ರೋಚಕ ಗೆಲುವು; ತಂಡವನ್ನು ಅಭಿನಂದಿಸಿದ ಹೆಚ್ಡಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಐಪಿಎಲ್ 2025 ಟೂರ್ನಿಯಲ್ಲಿ ರೋಚಕ ಗೆಲುವು ಸಾಧಿಸಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಸಲ ಕಪ್ ನಮ್ದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ತಂಡ ಸ್ಪೂರ್ತಿಯಿಂದ ಆಡಿದ ಪಟಿದಾರ್ ಪಡೆಯನ್ನು ಹಾಗೂ ವಿಶೇಷವಾಗಿ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಅಭಿನಂದಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಆರ್ ಸಿಬಿ ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ. ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಅಭಿನಂದಿಸುತ್ತೇನೆ ಎಂದು ಸಚಿವರು ಸಂತಸ ವ...
18 ವರ್ಷಗಳ ಕನಸು ನನಸು; ಕೊನೆಗೂ ಕಪ್ ಗೆದ್ದ RCB

18 ವರ್ಷಗಳ ಕನಸು ನನಸು; ಕೊನೆಗೂ ಕಪ್ ಗೆದ್ದ RCB

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿ ಎತ್ತಿ ಹಿಡಿದಿದ್ದು, 18 ವರ್ಷಗಳ ಕನಸನ್ನು ನನಸಾಗಿಸಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ RCB ತಮ್ಮ ಎದುರಾಳಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಕಾದಾಟ ನಡೆಸಿ 6 ರನ್​ಗಳ ಜಯ ಸಾಧಿಸಿದೆ. ಈ ಮೂಲಕ ಚೊಚ್ಚಲ ಐಪಿಎಲ್ ಪ್ರಶಸ್ತಿ ತನ್ನದಾಗಿಸಿಕೊಂಡಿತು. AAAAARRRRR CEEEEEEE BEEEEEE ❤🏆#TATAIPL | #RCBvPBKS | #Final | #TheLastMile | @RCBTweets pic.twitter.com/lp3AwgCVQl— IndianPremierLeague (@IPL) June 3, 2025 ಮೋಡಲ್ ಬ್ಯಾಟ್ ಮಾಡಿದ ಶ್ರೇಯಸ್ ನಾಯಕತ್ವದ RCB) ತಂಡ 190 ರನ್​ ಗಳಿಸಿತು. ಈ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಪಂಜಾಬ್ 20 ಓವರ್ ಗಳಲ್ಲಿ ಕೇವಲ 184 ರನ್​ಗಳನ್ನಷ್ಟೇ ಗಳಿಸಿತು. ಅದಾಗಲೇ, ರಾಯಲ್ ಚಾಲೆಂಜರ್ಸ್ಅಭಿಮಾನಿಗಳು ವಿಜಯೋತ್ಸವ...

ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು: ಸಿ.ವಿ.ದೇವರಾಜ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತಮಿಳಿನಿಂದಲೆ ಕನ್ನಡ ಹುಟ್ಟಿದೆ ಎಂದು ಅಜ್ಞಾನ ಮತ್ತು ಅವೈಜ್ಞಾನಿಕ ಹೇಳಿಕೆ ನೀಡಿದ ಬಹಭಾಷಾ ನಟ ಕಮಲ್ ಹಾಸನ್ ಕ್ಷಮೆ ಕೇಳುವಂತೆ ಪದೇ ಪದೇ ದುಂಬಾಲು ಬೀಳುವುದು ಕನ್ನಡಿಗರ ಸ್ವಾಭಿಮಾನಕ್ಕೆ ಅಪಮಾನ ಮಾಡಿದಂತೆ ಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ.ವಿ. ದೇವರಾಜ್ ಹೇಳಿದ್ದಾರೆ. ನಟ‌ ಕಮಲ್ ಹಾಸನ್ ಕನ್ನಡ ಭಾಷೆಯ ಇತಿಹಾಸ ತಿಳಿಯದೆ ನೀಡಿದ ಹೇಳಿಕೆ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯವ ಅಸಮಧಾನ ವ್ಯಕ್ತಪಡಿಸಿದೆ. ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ.ವಿ. ದೇವರಾಜ್, ಇತ್ತೀಚಿನ ವರ್ಷಗಳಲ್ಲಿ ಹಲವಾರು ಚಿತ್ರ ನಿರ್ಮಿಸಿ ಸೋತು ಸುಣ್ಣವಾಗಿರುವ ನಟ ಕಮಲ್ ಹಾಸನ್ ಬಿಡುಗಡೆಯಾಗಲಿರುವ ತನ್ನ ಹೊಸ ಚಿತ್ರಕ್ಕೆ ಉಚಿತ ಪ್ರಚಾರ ಪಡೆಯುವ ಉದ್ದೇಶದಿಂದ ಕನ್ನಡ ‌ಭಾಷೆಯ ಕುರಿತು ಅಜ್ಞಾನದ ಹೇಳಿಕೆ ನೀಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಆ ಮೂಲಕ ತನ್ನ ಚಿತ್ರಕ್ಕೆ ಉಚಿತ ಪ್ರಚಾರ ಪಡೆಯುವ ಉದ್ದೇಶವನ್ನು ಯಶಸ್ವಿಯಾಗಿ ಇಡೇರಿಸಿಕೊಂಡಿದ್ದಾರೆ ಎಂಡಿದ್ದಾರೆ. ಕನ್ನಡಿಗರು ಮತ್ತು ಕನ್ನಡ ಪರ ಸಂಘಟನೆಗಳು ಕಮಲ್‌ ಹಾಸನ್ ಕ್ಷಮೆ ಕೇಳುವಂ...
ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಕಮಲ್ ಹಾಸನ್ ನಡೆ ಬಗ್ಗೆ ಹೈಕೋರ್ಟ್ ಗರಂ

ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಕಮಲ್ ಹಾಸನ್ ನಡೆ ಬಗ್ಗೆ ಹೈಕೋರ್ಟ್ ಗರಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪಕ್ಕೆ ಗುರಿಯಾಗಿರುವ ತಮಿಳು ನಟ ಕಮಲ್ ಹಾಸನ್ ಬಗ್ಗೆ ಹೈಕೋರ್ಟ್ ಕೂಡಾ ಗರಂ ಆಗಿದೆ. ಕಮಲ್ ಹಾಸನ್ ಕ್ಷಮೆ ಕೇಳುವಂತೆ ಕನ್ನಡಿಗರು ಪಟ್ಟು ಹಿಡಿದಿದ್ದು, ಕನ್ನಡ ಚಿತ್ರೋದ್ಯಮ ಕೂಡಾ ಕಮಲ್ ಹಾಸನ್ ಅವರ ಹೊಸ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದೆ. ಈ ಸಂದಿಗ್ಧ ಪರಿಸ್ಥಿತಿ ನಡುವೆ ಹೈಕೋರ್ಟ್ ಮೆಟ್ಟಿಲೇರಿರುವ ಕಮಲ್ ಹಾಸನ್ ನಡೆ ಬಗ್ಗೆ ನ್ಯಾಯಪೀಠ ಕೂಡಾ ಅಸಮಾಧಾನ ವ್ಯಕ್ತಪಡಿಸಿದೆ. ಕಮಲ್ ಹಾಸನ್ ಅವರ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ನಟ ಕ್ಷಮೆ ಕೇಳಲು ನಿರಾಕರಿಸಿದ್ದರಿಂದ ಜಟಿಲ ಸಮಸ್ಯೆ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು. ಥಗ್ ಲೈಫ್ ಚಿತ್ರತಂಡದ ಪರವಾಗಿ ವಾದ ಮಂಡಿಸಿದ ವಕೀಲರು, ಉಂಟಾಗಿರುವ ವಿವಾದ ಸಂಬಂಧಿಸಿದಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆ ಮಾತುಕತೆ ನಡೆಸಿ ಅನಂತರವೇ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಾಲಯದ ಗಮನಸೆಳೆದರು. ವಾದವನ್ನು ಆಲಿಸಿದ ನ್ಯಾಯಮೂರ್ತಿ ವಿಚಾರಣೆಯನ್ನು ಈ ತಿಂಗಳ 10ಕ್ಕೆ ಮುಂದೂಡಿದರು. ಈ ನ...
ಒತ್ತಡಕ್ಕೆ ಮಣಿದು ಥಗ್ ಲೈಫ್ ಚಿತ್ರ ಬಿಡುಗಡೆ ಮಾಡಿದರೆ ಕರ್ನಾಟಕ ಬಂದ್; ಕನ್ನಡ ಸಂಘಟನೆಗಳ ಎಚ್ಚರಿಕೆ

ಒತ್ತಡಕ್ಕೆ ಮಣಿದು ಥಗ್ ಲೈಫ್ ಚಿತ್ರ ಬಿಡುಗಡೆ ಮಾಡಿದರೆ ಕರ್ನಾಟಕ ಬಂದ್; ಕನ್ನಡ ಸಂಘಟನೆಗಳ ಎಚ್ಚರಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ತಮಿಳು ನಟ ಕಮಲ್ ಹಾಸನ್ ನಟನೆಯ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿರುವ ಕನ್ನಡ ಸಂಘಟನೆಗಳ ನಾಯಕರು, ಒಂದು ವೇಳೆ ಒತ್ತಡಕ್ಕೆ ಮಣಿದು ಚಿತ್ರ ಬಿಡ್ಸುಗಡೆಗೆ ಮುಂದಾದರೆ ಕರ್ನಾಟಕ ಬಂದ್ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪ್ರೆಸ್ ಕ್ಲಬ್ ನಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಮತ್ತು ವಾಟಾಳ್ ಪಕ್ಷದ ನಾಯಕರು ಕನ್ನಡ ಭಾಷೆಯ ಕುರಿತು ನಟ ಕಮಲಹಾಸನ್ ನೀಡಿರುವ ಹೇಳಿಕೆಯನ್ನು ಖಂಡಿಸಿದರು. ವಾಟಾಳ್ ನಾಗರಾಜ್ ಮಾತನಾಡಿ ಕಮಲಹಾಸನ್ ಕನ್ನಡದ ಮುಂದೆ ತೀರ ಸಣ್ಣ ವ್ಯಕ್ತಿ, ತಮಿಳುನಾಡಿನಲ್ಲಿ ಅವರ ಜನಬೆಂಬಲ ಇಲ್ಲ, ಪಾರ್ಟಿ ಕಟ್ಟಿ ಸೋತಿದ್ದಾರೆ ಎಂದು ಕುಟುಕಿದರು. ತಮಿಳಿನಿಂದ ಕನ್ನಡ ಬಂತು ಈ ಮಾತನ್ನ ಆಡಿದ್ದಾರೆ, ಯಾರು ಮಾತನಾಡಿದರು ಎಂಬುದು ಅರ್ಥವಾಗುತ್ತಿಲ್ಲ. ಈ ಪದ ಯಾಕೆ ಉಪಯೋಗಿಸಿದರು ಎಂಬುದು ಅರಿವಾಗುತ್ತಿಲ್ಲ ಎಂದ ಅವರು, ತಮಿಳಿನಿಂದ ಕನ್ನಡ ಹುಟ್ಟಿದ್ದೆ ಎಂದು ಹೇಳಿರುವುದು ಕೆಟ್ಟ ಸಂಸ್ಕೃತಿ, ಅಪರಾಧವಾಗಿದೆ ಎಂದರಲ್ಲದೆ, ಭಾಷೆ ವಿಚಾರದಲ್ಲಿ ರಾಜಿ ಇಲ್ಲ ಎಂದರು. ಈ ಹಿಂದೆ ಸಿ.ರಾಜಗೋಪಾಲಚಾ...
ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆ

ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆಯಾಗಿವೆ. ಸೋಮವಾರದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,000ಕ್ಕೆ ತಲುಪಿದೆ. ಕೇರಳದಲ್ಲಿ 1,435 ಸಕ್ರಿಯ ಪ್ರಕರಣಗಳು, ಮಹಾರಾಷ್ಟ್ರದಲ್ಲಿ 506 ಸಕ್ರಿಯ ಪ್ರಕರಣಗಳು, ದೆಹಲಿಯಲ್ಲಿ 483 ಸಕ್ರಿಯ ಪ್ರಕರಣಗಳು, ಗುಜರಾತ್ ನಲ್ಲಿ 338 ಸಕ್ರಿಯ ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 331 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 253, ತಮಿಳುನಾಡಿನಲ್ಲಿ 189, ಉತ್ತರ ಪ್ರದೇಶದಲ್ಲಿ 157, ರಾಜಸ್ಥಾನದಲ್ಲಿ 69, ಪುದುಚೇರಿಯಲ್ಲಿ 41, ಮಧ್ಯಪ್ರದೇಶದಲ್ಲಿ 23, ಆಂಧ್ರಪ್ರದೇಶದಲ್ಲಿ 17, ಒಡಿಶಾದಲ್ಲಿ 12 ಸಕ್ರಿಯ ಪ್ರಕರಣಗಳು ಇವೆ ಎಂದು ಸರ್ಕಾರೀ ಮೂಲಗಳು ತಿಳಿಸಿವೆ....
ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಮಾತುಗಳನ್ನಾಡಿರುವ ತಮಿಳು ನಟ ಕಮಲ್ ಹಾಸನ್ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ನಟ ಕಮಲ್ ಹಾಸನ್ ಕ್ಷಣೆಯಾಚಿಸದ ಹೊರದು 'ಥಗ್ ಲೈಫ್' ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಹೇಳಿದೆ. ಕನ್ನಡ ಪರ ಸಂಘಟನೆಗಳ ಒತ್ತಾಯಕ್ಕೆ ಮಣಿದಿರುವ KFCC ಈ ಕುರಿತಂತೆ ಸ್ಪಷ್ಟನೆ ನೀಡಿದೆ. ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ಅವರ ನಟನೆಯ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಸ್ಪಷ್ಟಪಡಿಸಿದ್ದಾರೆ....
ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಶನಿವಾರ ರಾಜ್ಯದ ಏಳು ಜಿಲ್ಲೆಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಆಸ್ತಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಉಡುಪಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ದೇವರಾಜ್ ಅರಸು ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಜಿಲ್ಲಾ ವ್ಯವಸ್ಥಾಪಕ; ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ); ಬಳ್ಳಾರಿಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್; ಹಾವೇರಿಯ ಶಿಗ್ಗಾಂವ್ ಬಳಿಯ ಬಡಾ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ); ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಮ್) ನಲ್ಲಿ ಲೆಕ್ಕಪತ್ರ ಅಧಿಕಾರಿ; ಗದಗದ ನಿರ್ಮಿತಿ ಕೇಂದ್ರದಲ್ಲಿ ಯೋಜನಾ ಅಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳ ನಿವಾಸಗಳು, ಕಚೇರಿಗಳು ಮತ್ತು ಆಸ್ತಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ದೃಢಪಡಿಸಿವೆ. ಮತ್ತು ಧಾರವಾಡದ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ)ಗೆ ಲಗತ್ತಿಸಲಾದ ಸೂಪರಿಂಟೆಂಡೆಂಟ್ ಎಂಜಿನಿಯ...
ಪ್ರತೀ 3 ಗ್ರಾಮ ಪಂಚಾಯತ್‌ಗಳಿಗೆ 1 ಶಾಲೆ ನಿರ್ಮಿಸಿ: ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರದ ಕರೆ

ಪ್ರತೀ 3 ಗ್ರಾಮ ಪಂಚಾಯತ್‌ಗಳಿಗೆ 1 ಶಾಲೆ ನಿರ್ಮಿಸಿ: ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರದ ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಪೊರೇಟ್ ಸಂಸ್ಥೆಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ವಂಚನೆಯಲ್ಲಿ ತೊಡಗದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳೊಂದಿಗೆ ರಾಜ್ಯವ್ಯಾಪಿ ಪ್ರಗತಿಯನ್ನು ನಿರ್ಣಯಿಸಲು ನಡೆದ ಪರಿಶೀಲನಾ ಸಭೆಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿರುವ ಅನೇಕ ಕಾರ್ಪೊರೇಟ್ ಸಂಸ್ಥೆಗಳು ಇತರ ರಾಜ್ಯಗಳ ಖಾಸಗಿ ಸೇವಾ ಸಂಸ್ಥೆಗಳಿಗೆ (ಎನ್‌ಜಿಒ) ಸಿಎಸ್‌ಆರ್ ಚೆಕ್‌ಗಳನ್ನು ನೀಡುತ್ತಿವೆ ಮತ್ತು ಸುಮಾರು 50 ಪ್ರತಿಶತದಷ್ಟು ಮೊತ್ತವನ್ನು ನಗದು ರೂಪದಲ್ಲಿ ಹಿಂದಕ್ಕೆ ಪಡೆಯುತ್ತಿವೆ ಎಂದು ಉಪಮುಖ್ಯಮಂತ್ರಿ ಶಿವಕುಮಾರ್ ಗಮನಸೆಳೆದರು. ಈ ಬೆಳವಣಿಗೆ ಸರ್ಕಾರದ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದರು. ಇದು ವಂಚನೆಯ ಅಭ್ಯಾಸ ಎಂದು ಅವರು ಕರೆದರು ಮತ್ತು ಕರ್ನಾಟಕದ ಸಿಎಸ್‌ಆರ್ ನಿಧಿಯ ಪಾಲಿನ ಇಂತಹ ದುರುಪಯೋಗ ಸ್ವೀಕಾರಾರ್ಹವಲ್ಲ ಡಿಕೆಶಿ ಹೇಳಿದರು. "ಈ ಹಣವನ್ನು ನಮ್ಮ ಶಾಲೆಗಳ ಅಭಿವೃದ್ಧಿಗೆ ಬಳಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವುದ...