ಅಯೋಧ್ಯೆ ದೇವಾಲಯದಲ್ಲಿ ವಿಶೇಷ ‘ಧರ್ಮಧ್ವಜ’; ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿರುವ ಸಂಕೇತ
ಅಯೋಧ್ಯೆ/ನವದೆಹಲಿ: ಐತಿಹಾಸಿಕ ಅಯೋಧ್ಯೆ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಈ ಸಂದರ್ಭದಲ್ಲಿ ಪ್ರಧಾನಿ ಜೊತೆಗಿದ್ದರು.
“आज हम सबके लिए सार्थकता का दिन है। इसके लिए जितने लोगों ने प्राण न्योछावर किए, उनकी आत्मा तृप्त हुई होगी। आज मंदिर का ध्वजारोहण हो गया। मंदिर की शास्त्रीय प्रक्रिया पूर्ण हो गई। राम राज्य का ध्वज, जो कभी अयोध्या में फहराता था, जो पूरी दुनिया में अपने आलोक से समृद्धि प्रदान करता… pic.twitter.com/WqLQMJjM43
— RSS (@RSSorg) November 25, 2025
ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನಡೆದ ಈ ಕಾರ್ಯಕ್ರಮವನ್ನು ‘ಧ್ವಜಾರೋಹಣ ಉತ್ಸವ’ ಎಂದು ಗುರುತಿಸಲಾಗಿದೆ. ಸಮಾರಂಭದ ನಂತರ ಬಿಜೆಪಿ ನಾಯಕರು, ರಾಷ್ಟ್ರಕ್ಕೆ ಹೊಸ ನಂಬಿಕೆ ಮತ್ತು ಸಂಸ್ಕೃತಿಯ ಗೌರವವನ್ನು ಸಾರುವ ಕ್ಷಣ ಎಂದು ಅಭಿಪ್ರಾಯ ವ್ಯಕ್ತಪಡ...









