Tuesday, June 24

Update Videos

ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ

ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರಿಗೆ ಇಲಾಖೆ ( RTO) ಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮೋಟಾರು ವಾಹನ ನಿರೀಕ್ಷಕರೊಬ್ಬರು ಸರ್ಕಾರಿ ವಾಹನದಲ್ಲಿ ಕುಳಿತು ಹಣ ಪಡೆದಿದ್ದಾರೆ ಎಂದು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ, ಆರೋಪ ಕುರಿತಂತೆ ಸೂಕ್ತ ತನಿಖೆ ನಡೆಸುವಂತೆ ಸಚಿವರು ಆದೇಶಿಸಿದ್ದಾರೆ. ಆ ಸಂಬಂಧ ತನಿಖೆ ಕೈಗೆತ್ತಿಕೊಂಡಿರುವ ಮಂಡ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಯವರು, ಆರೋಪಕ್ಕೆ ಗುರಿಯಾಗಿರುವ ಮೋಟಾರು ವಾಹನ ನಿರೀಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನೌಕರರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಸಾರಿಗೆ ಆಯುಕ್ತರು ಮತ್ತು ಸಕ್ಷಮ ಪ್ರಾಧಿಕಾರಿಯು ಮೋಟಾರು ವಾಹನ ನಿರೀಕ್ಷಕರಾದ ವಾಣಿಶ್ರೀ ಎಂ.ಎನ್ ಅವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ. ಮಂಡ್ಯ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಧಾರವಾಡ (ಪಶ್ಚಿಮ) ಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರು ಯಾರು? ಮಾಹಿತಿ ಬಹಿರಂಗಪಡಿಸಲು ಬಿಜೆಪಿ ಪಟ್ಟು

ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರು ಯಾರು? ಮಾಹಿತಿ ಬಹಿರಂಗಪಡಿಸಲು ಬಿಜೆಪಿ ಪಟ್ಟು

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಹವಾಲಾ ನಂಟು ಬೆಸೆದುಕೊಂಡಿರುವ ಶಂಖೆ ವ್ಯಕ್ತವಾಗಿದ್ದು, ಆರೋಪಿ ರನ್ಯಾ ರಾವ್ ಬಂಧನದ ಸಂದರ್ಭದಲ್ಲಿ ಸಚಿವರೊಬ್ಬರನ್ನು ಸಂಪರ್ಕಿಸಲು ಯತ್ನಿಸಿರುವುದು @INCKarnataka ಸರ್ಕಾರದ ಪ್ರಭಾವಿಗಳ ಕೈವಾಡ ಇರುವ ಬಗ್ಗೆ ಸ್ಪಷ್ಟ ಅನುಮಾನಗಳು ಮೂಡುತ್ತಿವೆ. ರನ್ಯಾ ರಾವ್ ಅವರು ಉನ್ನತ ಪೊಲೀಸ್… pic.twitter.com/4XHhTNT15b — Office of BY Vijayendra (@OfficeofBYV) March 10, 2025 ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ. ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದು...
ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹಸಕ್ಕೆ ಸಿದ್ದರಾಮಯ್ಯರವರು ಕೈ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಮ್ ಮಹಿಳೆಯರಿಗೆ ಸ್ವಯಂರಕ್ಷಣೆಗಾಗಿ ತರಬೇತಿ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಹಿಂದೂ ಮಹಿಳೆಯರಿಗೆ ಯಾಕಿಲ್ಲ? ಮುಸ್ಲಿಂ ಬಡ ಮಹಿಳೆಯರ ಸರಳ ವಿವಾಹಕ್ಕೆ ರೂ. 50,000 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದಾರೆ. ಹಿಂದೂಗಳಲ್ಲಿ ಬಡ ಮಹಿಳೆಯರು ಇಲ್ಲವೇ? ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ ರೂ. 20 ಲಕ್ಷ ಇದ್ದದ್ದನ್ನು ರೂ. 30 ಲಕ್ಷಕ್ಕೆ ಏರಿಸಲಾಗಿದೆ. ಯಾಕೆ ಈ ರೀತಿಯ ಯೋಜನೆಗಳು ಹಿಂದೂ ವಿದ್ಯಾರ್ಥಿಗಳಿಗಿಲ್ಲ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹ...
ಹುಲಿ ಹಾಗೂ ಸಿಂಹದ ಮರಿಗಳಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

ಹುಲಿ ಹಾಗೂ ಸಿಂಹದ ಮರಿಗಳಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ವೈವಿಧ್ಯ
ಅಹಮದಾಬಾದ್: ಗುಜರಾತ್ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾಮ್‌ನಗರದಲ್ಲಿರುವ ವಂತಾರದಲ್ಲಿ ವನ್ಯಜೀವಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು. Inaugurated Vantara, a unique wildlife conservation, rescue and rehabilitation initiative, which provides a safe haven for animals while promoting ecological sustainability and wildlife welfare. I commend Anant Ambani and his entire team for this very compassionate effort. pic.twitter.com/NeNjy5LnkO — Narendra Modi (@narendramodi) March 4, 2025 ಜಗತ್ತಿನ ವಿವಿಧೆಡೆ ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ರಕ್ಷಿಸಿ ಸಲಹುವ ಪ್ರಾಣಿ ಸಂಗ್ರಹಾಲಯ ಇದಾಗಿದೆ. 2,000ಕ್ಕೂ ಹೆಚ್ಚು ಜಾತಿಯ ಪ್ರಾಣಿಗಳು ವಂತಾರದ ವನ್ಯಜೀವಿ ಕೇಂದ್ರದಲ್ಲಿವೆ. ಈ ಪೈಕಿ 1.5 ಲಕ್ಷಕ್ಕೂ ಹೆಚ್ಚು ಪ್ರಾಣಿಗಳು ರಕ್ಷಿಸಲ್ಪಟ್ಟವುಗಳಾಗಿವೆ. ಈ ವನ್ಯಜೀವಿ ಕೇಂದ್ರವನ್ನು ಉದ್ಘಾಟಿಸಿದ ನರೇಂದ್ರ ಮೋದಿ, ಪ್ರಾಣಿಗಳೊಂದಿಗೆ ಸಂತಸದ ಕ್ಷಣಗಳನ್ನು ಕಳೆದರು. ಏಷ್ಯನ್...
ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರದ ಅಚ್ಚರಿಯ ಂದೆ; ಇಬ್ಬರು ಉಸ್ತುವಾರಿ ಸಚಿವರ ನೇಮಕ

ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರದ ಅಚ್ಚರಿಯ ಂದೆ; ಇಬ್ಬರು ಉಸ್ತುವಾರಿ ಸಚಿವರ ನೇಮಕ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮುಂಬೈ: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕರ ಮೇಲಿನ ದಾಳಿಯ ನಂತರ ಮಹಾರಾಷ್ಟ್ರ-ಕರ್ನಾಟಕ ನಡುವೆ ಗಡಿ ವಿವಾದ ಉಲ್ಬಣಗೊಂಡಿದೆ. ಮಹಾರಾಷ್ಟ್ರ ಸರ್ಕಾರವು ಅಚ್ಚರಿಯ ನಿರ್ಧಾರವೊಂದರಲ್ಲಿ ಗಡಿ ವಿವಾದದ ಉಸ್ತುವಾರಿಗಾಗಿ ಇಬ್ಬರು ಸಚಿವರನ್ನು ನೇಮಕ ಮಾಡಿದೆ. ಈ ಕುರಿತ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ಗಡಿ ವಿವಾದ ಪ್ರಕರಣದಲ್ಲಿ ಮಹಾರಾಷ್ಟ್ರದ ಕಾನೂನು ತಂಡದೊಂದಿಗೆ ಸಮನ್ವಯ ಸಾಧಿಸಲು ಉಸ್ತುವಾರಿ ವಹಿಸಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರ ಸರ್ಕಾರದ ಈ ನಡೆ ಅಚ್ಚರಿಗೆ ಕಾರಣವಾಗಿದೆ....
ತೆಲುಗು, ಹಿಂದಿಯಲ್ಲೂ ‘ಕಣ್ಣಪ್ಪ’: ಟೀಸರ್ ಬಗ್ಗೆ ಭಾರೀ ಮೆಚ್ಚುಗೆ

ತೆಲುಗು, ಹಿಂದಿಯಲ್ಲೂ ‘ಕಣ್ಣಪ್ಪ’: ಟೀಸರ್ ಬಗ್ಗೆ ಭಾರೀ ಮೆಚ್ಚುಗೆ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಕನ್ನಡದ ‘ಬೇಡರ ಕಣ್ಣಪ್ಪ’ ಸಿನಿಮಾ ಒಂದು ಇತಿಹಾಸ. ಇದೀಗ ಅದೇ ಕತೆಯನ್ನು ಹೋಲುವಂತೆ ತೆಲುಗಿನಲ್ಲೂ ಸಿನಿಮಾ ಮಾಡಲಾಗುತ್ತಿದೆ. ‘ಕಣ್ಣಪ್ಪ’ ಹೆಸರಿನ ತೆಲುಗು ಸಿನಿಮಾದ ಎರಡನೇ ಟೀಸರ್ ಬಿಡುಗಡೆ ಶನಿವಾರ ಬಿಡುಗಡೆ ಆಗಿದೆ. https://www.youtube.com/watch?v=wKBP9dFxFBc ಹಿಂದಿ ಭಾಷೆಯಲ್ಲೂ ಟೀಸರ್ ಅನಾವರಣ ಮಾಡಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಕತ್ತಾಗಿ ಸದ್ದುಮಾಡುತ್ತಿದೆ. ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ದೇವರಾಜ್  ಅತಿಥಿ ಪಾತ್ರಗಳಲ್ಲಿ ನಟಿಸಿದ್ದಾರೆ. https://www.youtube.com/watch?v=_R66K_KnNeg  ...
‘ಒಡೆಲಾ 2’: ಮಹಾ ಕುಂಭಮೇಳದಲ್ಲಿ ಟೀಸರ್ ಬಿಡುಗಡೆ, ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ

‘ಒಡೆಲಾ 2’: ಮಹಾ ಕುಂಭಮೇಳದಲ್ಲಿ ಟೀಸರ್ ಬಿಡುಗಡೆ, ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರ ಅಭಿನಯದ 'ಒಡೆಲಾ 2' ಸಿನಿಮಾ ಟೀಸರ್' ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದೆಬ್ಬಿಸಿದೆ. ಒಡೆಲಾ ಸಿನಿಮಾದ ಮುಂದುವರೆದ ಭಾಗವಾಗಿರುವ 'ಒಡೆಲಾ 2' ಹಲವಾರು ಕ್ರಿಯಾತ್ಮಕ ಪ್ರಯೋಗಗಳಿಂದ ಗಮನಸೆಳೆದಿದೆ. ಬೋಲ್ಡ್ ಪಾತ್ರಗಳಿಂದ ಗಮನಸೆಳೆಯುತ್ತಿರುವ ನಟಿ ತಮನ್ನಾ ಭಾಟಿಯಾ 'ಒಡೆಲಾ 2'ನಲ್ಲಿ ಸಾದ್ವಿ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. https://www.youtube.com/watch?v=Cb1XauMhTtc ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ 'ಒಡೆಲಾ 2' ಟೀಸರ್ ಬಿಡುಗಡೆಯಾಗಿದೆ. ತಮನ್ನಾ ಅವರು ಸಾದ್ವಿ ಲುಕ್'ನಲ್ಲಿ ಕಾಣಿಸಿಕೊಳ್ಳುವುದಕ್ಕೂ ಇದರ ಟೀಸರ್ ಮಹಾ ಕುಂಭಮೇಳದಲ್ಲಿ ಬಿಡುಗಡೆಯಾಗುವುದಕ್ಕೂ ಏನೂ ಸಂಬಂಧವಿಲ್ಲ. ಆದರೂ ತಮನ್ನಾ ಸಾಧ್ವಿಯಾದರೇ ಎಂಬ ನೆಟ್ಟಿಗರ ಪ್ರತಿಕ್ರಿಯೆಗಳೂ ಗಮನಸೆಳೆದಿವೆ....
ವಿಶ್ವದ ಪ್ರಭಾವಿ ತನಿಖಾ ಸಂಸ್ಥೆ FBIಗ ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ

ವಿಶ್ವದ ಪ್ರಭಾವಿ ತನಿಖಾ ಸಂಸ್ಥೆ FBIಗ ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ವಿಶ್ವದ ಪ್ರಭಾವಿ ತನಿಖಾ ಸಂಸ್ಥೆಯಾಗಿರುವ ಅಮೇರಿಕಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI), ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ ಗೊಂಡಿದ್ದಾರೆ. ಕಶ್ಯಪ್ ಪಟೇಲ್ ಎಂದೂ ಗುರುತಾಗಿರುವ ಕಾಶ್ ಪಟೇಲ್ ಅವರನ್ನು ಸೆನೆಟ್ ಆಯ್ಕೆ ಮಾಡಿದೆ. BREAKING VIDEO: Kash Patel CONFIRMED 51 To 47 As FBI Director! Now The Veteran Intelligence Officer Can Go On The Offensive & Defend Trump From The Deep State's Criminal Agenda» WATCH/SHARE THE LIVE X STREAM HERE:https://t.co/7NYWKPuERO pic.twitter.com/zCeJ2VYT7Q— Alex Jones (@RealAlexJones) February 20, 2025 ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಆರಾಗಿ ಗುರುತಿಸಿಕೊಂಡಿರುವ ಕಾಶ್ ಪಟೇಲ್(ಕಶ್ಯಪ್ ಪಟೇಲ್) ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್​ಬಿಐ) ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಶ್ವೇತ ಭವನ ಮೂಲಗಳು ತಿಳಿಸಿವೆ. ಕಾಶ್ ಪಟೇಲ್ ಅವರ ನೇಮಕವನ್ನು ಅಮೆರಿಕ ಸೆನೆಟ್ 51-49 ಮತಗಳಿಂದ ಅನುಮೋದಿಸಿದೆ....
ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ವೈವಿಧ್ಯ
ಆಪಲ್ ತನ್ನ ವರ್ಷದ ಮೊದಲ ಪ್ರಮುಖ ಉತ್ಪನ್ನ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿ 19 ಬುಧವಾರದಂದು ಬಿಡುಗಡೆಯಾಗಲಿದೆ. ಸಿಇಒ ಟಿಮ್ ಕುಕ್ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡುವ ಮೂಲಕ 'ಐಫೋನ್ ಎಸ್‌ಇ 4' ದಿನಾಂಕವನ್ನು ದೃಢಪಡಿಸಿದ್ದಾರೆ. 'ಕುಟುಂಬದ ಹೊಸ ಸದಸ್ಯರನ್ನು ಭೇಟಿಯಾಗಲು ಸಿದ್ಧರಾಗಿ' ಎಂಬ ಸಂದೇಶದೊಂದಿಗೆ ಅವರು ಮುಂಬರುವ ಸರಣಿ ಬಗ್ಗೆ ಕುತೂಹಲಕಾರಿ ಸಂಗತಿಯನ್ನು ತೆರೆದಿಟ್ಟಿದ್ದಾರೆ. ಜೊತೆಗೆ ಅನಿಮೇಟೆಡ್ ಆಪಲ್ ಲೋಗೋ ಕೂಡ ಇದೆ. ಆಪಲ್ ಅಧಿಕೃತವಾಗಿ ಏನನ್ನು ಸಂಗ್ರಹಿಸಿದೆ ಎಂಬುದನ್ನು ಬಹಿರಂಗಪಡಿಸಿಲ್ಲವಾದರೂ, ಮ್ಯಾಕ್‌ಬುಕ್ ಏರ್, ಐಪ್ಯಾಡ್ ಮತ್ತು ಬಹುಶಃ ವಿಷನ್ ಪ್ರೊ ಹೆಡ್‌ಸೆಟ್‌ಗೆ ನವೀಕರಣಗಳ ಜೊತೆಗೆ ಬಹುನಿರೀಕ್ಷಿತ ಐಫೋನ್ ಎಸ್‌ಇ 4 ಮೇಲೆ ಸ್ಪಾಟ್‌ಲೈಟ್ ಇರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಹೊಸ 'iPhone SE 4' ಹೇಗಿದೆ ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಇದೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಗೆಬಗೆಯ ವೀಡಿಯೊಗಳು ಹರಿದಾಡುತ್ತಿವೆ. ಆದರೆ ಹೊಸ 'iPhone SE 4' ಇದೇ ರೀತಿಯಲ್ಲೇ ಇರಲಿದೆಯೇ ಎಂಬ ಬಗ್ಗೆ ಕಂಪನಿತು ತನ್ನ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ...
ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಏನಿದು ಸಚಿವರೇ? ಸೆನೆಟ್ ಚುನಾವಣಾ ಅಕ್ರಮದ ಕೋಲಾಹಲ; ರಾಜ್ಯಪಾಲರು ಫಲಿತಾಂಶ ತಡೆಹಿಡಿದ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿ ದೂರು.. ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಸೆನೆಟ್ ಚುನಾವಣೆ ಅಕ್ರಮ ಕುರಿತಂತೆ ಕೇಂದ್ರ ತನಿಖಾ ದಳ (CBI) ತನಿಖೆಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಕ್ರಮಗಳ ಬೆನ್ನತ್ತಿರುವ ಸಿಟಿಜನ್ ಸಿಟಿಜನ್ ರೈಟ್ಸ್ ಫೌಂಡೇಷನ್, ಮೆಡಿಕಲ್ ಕಾಲೇಜುಗಳಲ್ಲಿನ ಅಕ್ರಮ ಪ್ರವೇಶ, ನರ್ಸಿಂಗ್ ಕಾಲೇಜುಗಳ ವಿಚಾರದಲ್ಲಿನ ಭ್ರಷ್ಟಾಚಾರಗಳ ವಿರುದ್ದ ಸರಣಿ ದಾವೆಗಳ ಮೂಲಕ ಕಾನೂನು ಸಮರವನ್ನು ಬಿರುಸುಗೊಳಿಸಿದೆ. ಇದೀಗ RGUHS ಸೆನೆಟ್ ಸದಸ್ಯರ ಚುನಾವಣೆ ಅಕ್ರಮ ವಿರುದ್ದ ಕಾನೂನು ಹೋರಾಟಕ್ಕಿಳಿದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಕೆ.ಎ.ಪಾಲ್ ಅವರು ಸಲ್ಲಿಸಿರುವ ದೂರು ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದೆ. ಸೆನೆಟ್ ಚುನಾವಣಾ ಅಕ್ರಮ ಆರೋಪವು ಕೋಲಾಹಲ ಸೃಷ್ಟಿಸಿದ್ದು, ರಾಜ್ಯಪಾಲರು ಫಲಿತಾಂಶವನ್ನು ತ...