Wednesday, August 5

ವೀಡಿಯೊ

ತುಳುನಾಡ ಕುವರಿಗೆ ಮತ್ತೆ ಬಾಗಿಲು ತೆರೆದ  ಬಿಗ್ ಬಾಸ್ ಮನೆ

ತುಳುನಾಡ ಕುವರಿಗೆ ಮತ್ತೆ ಬಾಗಿಲು ತೆರೆದ ಬಿಗ್ ಬಾಸ್ ಮನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಅಚ್ಚರಿಯ ತಿರುವು ಕಂಡಿದೆ. ಶೋ ಆರಂಭವಾದ ಮೊದಲ ದಿನವೇ ಉಡುಪಿಯ ರಕ್ಷಿತಾ ಶೆಟ್ಟಿ ಅವರನ್ನು ಮನೆಯಿಂದ ಹೊರಗೆ ಕಳಿಸಲಾಗಿತ್ತು. ಕನ್ನಡ ಬಿಗ್ಬಾಸ್ ಇತಿಹಾಸದಲ್ಲಿಯೇ ಇಷ್ಟು ಬೇಗ ಎಲಿಮಿನೇಟ್ ಆದ ಸ್ಪರ್ಧಿ ಅವರು. ಆದರೆ ಈಗ, ಪ್ರೇಕ್ಷಕರ ಬೇಡಿಕೆ ಮತ್ತು ಸಾಮಾಜಿಕ ಮಾಧ್ಯಮದ ಚರ್ಚೆಗಳ ಮಧ್ಯೆ, ರಕ್ಷಿತಾ ಶೆಟ್ಟಿ ಮತ್ತೆ ಬಿಗ್ಬಾಸ್ ಮನೆಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಮರಳಿಬಂದಳು ರಕ್ಷಿತಾವಾರದ ಕತೆ ಕಿಚ್ಚನ ಜೊತೆ | ಇಂದು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/X6cFlWGWA2— Colors Kannada (@ColorsKannada) October 4, 2025ಕಳೆದ ಭಾನುವಾರ ಶೋ ಪ್ರಾರಂಭವಾದಾಗ 19 ಮಂದಿ ಸ್ಪರ್ಧಿಗಳು ಮನೆ ಸೇರಿದ್ದರು. ಆದರೆ ಕೇವಲ 24 ಗಂಟೆಗಳಲ್ಲೇ ರಕ್ಷಿತಾರ ಹೊರಹಾಕುವ ನಿರ್ಧಾರ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾಯಿತು. ಅವರ ಆಟವನ್ನೇ ನೋಡದೆ ತೆಗೆದುಕೊಳ್ಳ...
ಕರ್ನೂಲ್: ಸಾಂಪ್ರದಾಯಿಕ ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಕರ್ನೂಲ್: ಸಾಂಪ್ರದಾಯಿಕ ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ದೇಶ, ಪ್ರಮುಖ ಸುದ್ದಿ, ವಿಶೇಷ, ವೀಡಿಯೊ
ಕರ್ನೂಲ್: ವಿಜಯದಶಮಿ ಸಂದರ್ಭದಲ್ಲಿ ಸಾಂಪ್ರದಾಯಿಕ ಬನ್ನಿ ಉತ್ಸವ ವೇಳೆ ಕೋಲುಗಳಿಂದ ನಡೆಯುವ ಕಾಳಗದಲ್ಲಿ ಇಬ್ಬರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. కర్నూలు 'దేవరగట్టు సమరం' 🔥🔥🔥🔥🔥🥵తరతరాలుగా వస్తున్న ఆచారం శ్రీ మాల మల్లేశ్వర స్వామి వార్ల విగ్రహాలని దక్కించుకునేందుకు 11 ఊర్ల గ్రామ ప్రజలు రక్తం చిందించి భక్తితో చేసే సమరం 🙏. #Devara #Kurnool #Devaragattu pic.twitter.com/RylANzHIta— Narasimha NTR 🦚 (@NarasimhaNTR_) October 3, 2025ಪ್ರತಿ ವರ್ಷದಂತೆ, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಹೊಳಗೊಂಡ 'ಮಂಡಲ' (ಬ್ಲಾಕ್) ನ ದೇವೆರಾಗಟ್ಟು ಗ್ರಾಮದಲ್ಲಿ ಗುರುವಾರ ತಡರಾತ್ರಿ ದಸರಾ ಆಚರಣೆಯ ಭಾಗವಾಗಿ ನಡೆದ ದೇವರಗಟ್ಟು ಬನ್ನಿ ಉತ್ಸವದ ಸಂದರ್ಭದಲ್ಲಿ ಎರಡು ಗುಂಪುಗಳು ಕೋಲುಗಳಿಂದ ಪರಸ್ಪರ ದಾಳಿ ನಡೆಸಿದವು. ಇದು ಸಾಂಪ್ರಾಯಾಯಿಕ ಆಚರಣೆಯಾಗಿದೆ. ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ...
ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿಶೇಷ, ವೀಡಿಯೊ
ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬದ ಉತ್ಸವದ ಪರಮೋತ್ಸವಾದ ಜಂಬೂ ಸವಾರಿ ಮೆರವಣಿಗೆ ಗಮನಸೆಳೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಯದುವೀರ್ ಒಡೆಯರ್, ವಿಧಾನದ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.ಸಂಜೆ 4.42ರಿಂದ 5.06ರ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ ಚಿನ್ನದ ಅಂಬಾರಿಯಲ್ಲಿ ಕಂಗೊಳಿಸುತ್ತಿದ್ದ ನಾಡದೇವಿ ಚಾಮುಂಡೇಶ್ವರಿಗೆ ಸಿಎಂ ಪುಷ್ಪಾರ್ಚನೆ ಸಲ್ಲಿಸಿ ಮೆರವಣಿಗೆಯ ಆರಂಭ ಮಾಡಿದರು. ಸುಮಾರು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಲಕ್ಷಾಂತರ ಜನರ ಮುಂದೆ ಗಾಂಭೀರ್ಯದ ಹೆಜ್ಜೆ ಹಾಕುತ್ತ ಸಾಗಿದ ದೃಶ್ಯ ಎಲ್ಲರ ಮನ ಸೆಳೆಯಿತು. ಕುಮ್ಕಿ ಆನೆಗಳು ಕಾವೇರಿ, ರೂಪಾ ಕೂಡಾ ಸಾಥ್ ನೀಡಿದವು. ಅಂಬಾರಿಯ ಮೇಲಿದ್ದ ನಾಡದೇವಿಯನ್ನು ಕಂಡು ಭಕ್ತಜನರು ಪುನೀತರಾದರು.ಅರಮಣಕ್ಕಿಯ ಬಲರಾಮ ದ್ವಾರದಿಂದ ಪ್ರಾರಂಭಗೊಂಡ ಜಂಬೂ ಸವಾರಿ, ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ಆಸ್ಪತ್ರೆ ವೃತ್ತ, ಬಂಬೂ ಬಜಾರ್ ಮಾರ್ಗವಾಗಿ ಬನ್ನಿಮಂಟಪ ತಲುಪುವವರೆ...
ಬಿಹಾರ: ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಬಿಹಾರ: ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ದೇಶ, ಪ್ರಮುಖ ಸುದ್ದಿ, ವೀಡಿಯೊ
ಪಾಟ್ನಾ: ಬಿಹಾರದಲ್ಲೂ ಅಹಿಂದಾ ನಾಯಕ ಸಿದ್ದರಾಮಯ್ಯ ಹವಾ ಇದೆ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬಿಹಾರದ ಪಟ್ನಾಗೆ ಭೇಟಿನೀಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದ ಸನ್ನಿವೇಶ ಗಮನಸೆಳೆಯಿತು. ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಹರ್ಷೋದ್ಗಾರದಿಂದ ಸ್ವಾಗತಿಸಿದರು. ವಿಮಾನ ನಿಲ್ದಾಣದಲ್ಲೇ ನಾಯಕರು ಶಾಲು ಹೊದಿಸಿ ಸನ್ಮಾನಿಸಿದರು.ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬಿಹಾರದ ಪಟ್ನಾಗೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಹರ್ಷೋದ್ಘಾರ, ಪ್ರೀತಿ ತುಂಬಿದ ಸ್ವಾಗತ ಕಂಡು ಖುಷಿಯಾಯಿತು.ದೇಶದ ಯಾವ ಮೂಲೆಗೆ ಹೋದರೂ ಇದೇ ತೆರನಾದ ಪ್ರೀತಿ, ಅಕ್ಕರೆಯಿಂದ ಜನ ನನ್ನನ್ನು ಎದುರುಗೊಳ್ಳುತ್ತಾರೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ಆ… pic.twitter.com/QpXYOQlXwS — Siddaramaiah (@siddaramaiah) September 23, 2025ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ದೇಶದ ಯಾವ ಮೂಲೆಗೆ ಹೋದರೂ ಇದೇ ತೆರನಾದ ಪ್ರೀತಿ, ಅಕ್ಕರೆಯಿಂದ ಜನ ನನ್ನನ್ನು ಎದುರುಗೊಳ್...
‘ವೃಷಭ’ : ರಾಜನಾಗಿ ಮೋಹನ್ ಲಾಲ್, ಕನ್ನಡಲ್ಲೂ ತಂದೆ-ಮಗನ ಮಹಾಕಾವ್ಯ

‘ವೃಷಭ’ : ರಾಜನಾಗಿ ಮೋಹನ್ ಲಾಲ್, ಕನ್ನಡಲ್ಲೂ ತಂದೆ-ಮಗನ ಮಹಾಕಾವ್ಯ

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ಮೋಹನ್ ಲಾಲ್ ನಟನೆಯ ‘ವೃಷಭ’ ಚಿತ್ರದ ಟೀಸರ್ ಬಿಡುಗಡೆಯಾಗಿ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ನಂದ ಕಿಶೋರ್ ನಿರ್ದೇಶನದ ಈ ದ್ವಿಭಾಷಾ ಮಹಾಕಾವ್ಯವು ತಂದೆ ಮತ್ತು ಮಗನ ನಡುವಿನ ಬಾಂಧವ್ಯದ ಸುತ್ತ ಕಥೆ ಹೆಣೆದುಕೊಂಡಿದೆ.ಗುರುವಾರ ಬಿಡುಗಡೆಯಾದ ಭವ್ಯ ಟೀಸರ್‌ನಲ್ಲಿ ಮೋಹನ್ ಲಾಲ್ ಅವರನ್ನು ಪುರಾತನ ರಾಜನಾಗಿ ಹಾಗೂ ವರ್ತಮಾನದಲ್ಲಿ ತಂದೆಯಾಗಿ ತೋರಿಸಲಾಗಿದೆ. ಇದೇ ಮೊದಲ ಬಾರಿಗೆ ರಾಜನ ಪಾತ್ರದಲ್ಲಿ ಮಿಂಚುತ್ತಿರುವ ಮೋಹನ್ ಲಾಲ್ ಅವರ ಗಂಭೀರ ತೋರ್ಪಡಿಕೆ ಅಭಿಮಾನಿಗಳನ್ನು ಆಕರ್ಷಿಸಿದೆ.ಮೋಹನ್ ಲಾಲ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಟೀಸರ್ ಹಂಚಿಕೊಂಡು, “ಕಾಯುವಿಕೆ ಇಲ್ಲಿಗೆ ಕೊನೆಗೊಳ್ಳುತ್ತಿದೆ. ನನ್ನ ಹೃದಯಕ್ಕೆ ಹತ್ತಿರವಾದ ‘ವೃಷಭ’ ಜಗತ್ತಿಗೆ ಸ್ವಾಗತ. ಈ ದೀಪಾವಳಿಗೆ ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ” ಎಂದು ಬರೆದಿದ್ದಾರೆ.ರಾಗಿಣಿ ದ್ವಿವೇದಿ ಮತ್ತು ಯುವ ನಟ ಸಮರ್ಜಿತ್ ಲಂಕೇಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದಲ್ಲಿ ಛಾಯಾಗ್ರಾಹಕ ಆಂಟನಿ ಸ್ಯಾಮ್ಸನ್ ಅವರ ದೃಶ್ಯಾವಳಿ, ಸಂಪಾದಕ ಕೆ.ಎಂ. ಪ್ರಕಾಶ್ ಅವರ ಸಂಕಲನ ಮತ್ತು ಸಂ...
ಮತದಾರರ ಪಟ್ಟಿಯಿಂದ ಹೆಸರುಗಳನ್ನು ಯಾವ ರೀತಿ ತೆಗೆದುಹಾಕಲಾಗಿದೆ ಎಂಬ ಬಗ್ಗೆ ರಾಹುಲ್ ವಿವರಿಸಿದ್ದು ಹೀಗೆ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಯಾವ ರೀತಿ ತೆಗೆದುಹಾಕಲಾಗಿದೆ ಎಂಬ ಬಗ್ಗೆ ರಾಹುಲ್ ವಿವರಿಸಿದ್ದು ಹೀಗೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಮತಗಳ್ಳತನ ಬಗ್ಗೆ ಸರಣಿ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನೂ ಯಾವ ರೀತಿ ತೆಗೆದುಹಾಕಲಾಗಿದೆ ಎಂಬ ಬಗ್ಗೆ ವಿವರಿಸಿರುವ ವೈಖರಿ ಗಮನಸೆಳೆದಿದೆ. In just 14 minutes, 12 voters were deleted under the name of Suryakant.One of them was Babita Chaudhary, her voice stolen without her knowledge.Suryakant himself didn’t even know his login was being used. Then who was behind it? Who had access? Who is running this organised… pic.twitter.com/XFjrAhsWku— Karnataka Congress (@INCKarnataka) September 18, 2025ಕೇವಲ 14 ನಿಮಿಷಗಳಲ್ಲಿ, ಸೂರ್ಯಕಾಂತ್ ಹೆಸರಿನಲ್ಲಿ 12 ಮತದಾರರನ್ನು ಅಳಿಸಲಾಗಿದೆ ಎಂದು ರಾಹುಲ್ ಗಾಂಧಿ ಬೊಟ್ಟು ಮಾಡಿದ್ದಾರೆ. ಒಬ್ಬರು ಬಬಿತಾ ಚೌಧರಿ, ಅವರ ಅರಿವಿಲ್ಲದೆ ಅವರ ಧ್ವನಿಯನ್ನು ಕದ್ದಿದ್ದಾರೆ. ಸೂರ್ಯಕಾಂತ್ ಅವರಿಗೂ ತಮ್ಮ ಲಾಗಿನ್ ಬಳಸಲಾಗುತ್ತಿದೆ ಎಂದು ತಿಳಿದಿರಲಿಲ್ಲ. ಹಾಗಾದರೆ ಇದರ ಹಿಂದೆ ಯಾರು ಇದ...
ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’; ಕಿಚ್ಚನ ಗರಡಿ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ

ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’; ಕಿಚ್ಚನ ಗರಡಿ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಅಭಿಮಾನಿಗಳಿಗೆ ಖುಷಿಯ ಸುದ್ದಿ. ಈಗಾಗಲೇ 11 ಸೀಸನ್‌ಗಳನ್ನು ಯಶಸ್ವಿಯಾಗಿ ಮುಗಿಸಿರುವ ಈ ಶೋ, ಶೀಘ್ರದಲ್ಲೇ 12ನೇ ಸೀಸನ್ ಪ್ರೇಕ್ಷಕರ ಮುಂದೆ ಬರಲಿದೆ. ಸೆಪ್ಟೆಂಬರ್ 28, ಭಾನುವಾರದಂದು ಗ್ರ್ಯಾಂಡ್ ಓಪನಿಂಗ್ ನಡೆಯಲಿದ್ದು, ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸುವ ಸ್ಪರ್ಧಿಗಳು ಯಾರು ಎಂಬ ಕುತೂಹಲ ಉಂಟಾಗಿದೆ. View this post on Instagram A post shared by Colors Kannada Official (@colorskannadaofficial)ಕಿಚ್ಚ ಸುದೀಪ್ ಅವರು ನಿರೂಪಣೆಗೆ ಸಜ್ಜಾಗಿದ್ದು, ಶೋವನ್ನು ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ. ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರೋಮೋ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.ಪ್ರೋಮೋದಲ್ಲಿ – “ರಿಯಾಲಿಟಿ ಶೋಗಳ ಬಾಸ್, ರಿಯಲ್ ಎಂಟರ್‌ಟೈನ್‌ಮೆಂಟ್‌ಗೆ ಒಂದೇ ಅಡ್ರೆಸ್. ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 28ಕ್ಕೆ” ಎಂದು ಘೋಷಿಸಲಾಗಿದೆ.ಅದರಲ್ಲೇ ಸುದೀಪ್ ಅವರು “ನನ್ನ...
1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ..

1000 ನೃತ್ಯಗಾರರೊಂದಿಗೆ ರಾಮ್ ಚರಣ್ ‘ಪೆಡ್ಡಿ’ ಹಾಡಿನ ಚಿತ್ರೀಕರಣ..

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಹೈದರಾಬಾದ್: ತೆಲುಗು ತಾರೆ ರಾಮ್ ಚರಣ್ ನಾಯಕನಾಗಿ ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಚಿತ್ರದ ತಂಡ ಭವ್ಯ ಹಾಡಿನ ಚಿತ್ರೀಕರಣವನ್ನು ಆರಂಭಿಸಿದೆ.ವಿನಾಯಕ ಚತುರ್ಥಿಯ ಸಂದರ್ಭದಲ್ಲಿ, ಹೆಚ್ಚಿನವರು ರಜೆಯನ್ನು ಆರಿಸಿಕೊಂಡಾಗ, ‘ಪೆಡ್ಡಿ’ ತಂಡವು ಹಬ್ಬದ ಉತ್ಸಾಹದ ನಡುವೆಯೇ ಮೈಸೂರಿನಲ್ಲಿ ಭರ್ಜರಿಯಾಗಿ ಕಾರ್ಯಾರಂಭ ಮಾಡಿದೆ. ಜನಪ್ರಿಯ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಸಂಯೋಜಿಸಿರುವ ಈ ಗೀತೆಯಲ್ಲಿ ಸಾವಿರಕ್ಕೂ ಹೆಚ್ಚು ನೃತ್ಯಗಾರರು ಪಾಲ್ಗೊಂಡಿದ್ದಾರೆ.https://youtu.be/fYSGt_ld00A?si=KljQ1unRZy7smjSuಆಸ್ಕರ್‌ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ರಾಮ್ ಚರಣ್ ಪಾತ್ರದ ಪರಿಚಯಕ್ಕೆ ತಕ್ಕ ಮಾಸ್‌ ಹಾಡನ್ನು ರಚಿಸಿದ್ದು, ಅದ್ಧೂರಿ ಪ್ರಮಾಣದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈ ಹಾಡು ಚಿತ್ರದಲ್ಲಿನ ಪ್ರಮುಖ ಆಕರ್ಷಣೆಯಾಗಲಿದೆ ಎಂದು ತಂಡ ಭರವಸೆ ನೀಡಿದೆ.ಕನ್ನಡದ ಸೂಪರ್‌ಸ್ಟಾರ್ ಶಿವ ರಾಜ್‌ಕುಮಾರ್ “ಗೌರ್ನೈಡು” ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವುದಾಗಿ ನಿರ್ಮಾಪಕರು ಅವರ ಜನ್ಮದಿನದಂದು ಘೋಷಿಸಿದ್ದರು. ಜಾನ್ವಿ ಕಪೂರ್ ನಾಯಕಿಯಾಗಿ, ಜ...

ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿ, “ರಾಜ್ಯದ ಮೂರು ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ಈ ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬಂದುದರಿಂದ ಹಿಂದೂಗಳಿಗೆ ಸೇರಿದ ಆಸ್ತಿ ಅಲ್ಲವೇ? ಮುಜರಾಯಿ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳು ಹಿಂದೂ ಸಮುದಾಯದವಲ್ಲ ಎಂದರೆ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ ನಾಯಕರು ಹಿಂದೂಗಳ ಅಪಮಾನ ಮಾಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಕಿಡಿಕಾರಿದ್ದಾರೆ. ರಾಜ್ಯದ 3 ಸಾವಿರಕ್ಕಿಂತಲೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ವಹಿಸಲಾಗಿದೆ. ಮುಜರಾಯಿ ವ್ಯಾಪ್ತಿಯಲ್ಲಿ ಇದ್ದ ಮಾತ್ರಕ್ಕೆ ಹಿಂದೂ ದೇವಸ್ಥಾನಗಳು ಹಿಂದೂಗಳ ಆಸ್ತಿಯಲ್ಲವೇ? ಈ ಮೂಲಕ ರಾಜ್ಯದ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ಸಿಗರೇ, ಹಿಂದೂಗಳ ಅಪ...
4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿಶೇಷ, ವೀಡಿಯೊ
ಕೊಪ್ಪಳ: ಗಂಗಾವತಿ ತಾಲೂಕಿನ ಶ್ರೀರಾಮನಗರದ ನಮ್ಮ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಗಣೇಶೋತ್ಸವದ ಅಂಗವಾಗಿ “4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ಗಾತ್ರದ ಗಣೇಶನ ಆಕೃತಿಯನ್ನು ರಚಿಸಿ ದೀಪಗಳನ್ನು ಬೆಳಗಿಸಿ ಗಣೇಶನಿಗೆ ವೈಶಿಷ್ಟ್ಯಪೂರ್ಣವಾದ ಅಹ್ವಾನವನ್ನು ನೀಡಲಾಯಿತು.5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ!! ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಮಕ್ಕಳು ವಿನಾಯಕನ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸುವ ಮೂಲಕ ಗಮನ ಸೆಳೆದಿದ್ದಾರೆ.#Ballari #Koppala pic.twitter.com/big3vBbG7l— Ballari Tweetz (@TweetzBallari) August 25, 2025ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಸಂಭ್ರಮ ಸಂತೋಷದಿAದ ಪಾಲ್ಗೊಂಡು ವಿನಾಯಕನಿಗೆ ಜೈಕಾರವನ್ನು ಹಾಕಿ ದೀಪಗಳಿಂದ ಗಣೇಶನ ಆಕೃತಿಯನ್ನು ಮೂಡಿಸಿದರು.ಶಾಲೆಯ ಪೂರ್ವ ಪ್ರಾಥಮಿಕದಿಂದ ಎಂಟನೆಯ ತರಗತಿಯ ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಮಾಡಿಸಲಾಯಿತು. ವಿದ್ಯಾರ್ಥಿಗಳಲ...