Wednesday, June 25

ವೀಡಿಯೊ

ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಕೊಯಮತ್ತೂರು: ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ಬುಧವಾರ ರಾತ್ರಿ ಶಿವರಾತ್ರಿ ಮಹಾ ವೈಭವ ನಾಡಿನ ಗಮನಸೆಳೆಯಿತು. https://www.youtube.com/watch?v=jwcuwMBBKIw&ab_channel=SoundsofIsha ಶಿವಸ್ಮರಣೆಯ ಮಹಾ ಹಬ್ಬದಲ್ಲಿ ದೇಶದ ವಿವಿಧೆಡೆಯ ಆಸ್ತಿಕರು ಆಗಮಿಸಿದ್ದರು. ಸಾವಿರಾರು ಶಿವಭಕ್ತರ ಸಮ್ಮುಖದಲ್ಲಿ ನಡೆದ ಭಕ್ತಿ ವೈಭವ ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾಯಿತು. https://www.youtube.com/watch?v=N8CcJj5y6kA&ab_channel=SoundsofIsha ಈ ಮಹಾಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು. https://www.youtube.com/watch?v=zA7Fozc0VCw&ab_channel=SoundsofIsha  ...
ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ; ರಾಜ್ಯಕ್ಕೆ ಕೇಂದ್ರದ ಭರವಸೆ

ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ; ರಾಜ್ಯಕ್ಕೆ ಕೇಂದ್ರದ ಭರವಸೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ನೀರಾವರಿ ಯೋಜನೆಗಳ ಕುರಿತ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. - @DKShivakumar pic.twitter.com/yPgqOHXRu0 — Karnataka Congress (@INCKarnataka) February 26, 2025 ಜಲಾಶಕ್ತಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಡಿಕೆಶಿ, ನಮ್ಮ ನೀರಾವರಿ ಯೋಜನೆಗಳ ಕುರಿತ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯದ ನೀರಾವರಿ ಯೋಜನ...
‘ಒಡೆಲಾ 2’: ಮಹಾ ಕುಂಭಮೇಳದಲ್ಲಿ ಟೀಸರ್ ಬಿಡುಗಡೆ, ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ

‘ಒಡೆಲಾ 2’: ಮಹಾ ಕುಂಭಮೇಳದಲ್ಲಿ ಟೀಸರ್ ಬಿಡುಗಡೆ, ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರ ಅಭಿನಯದ 'ಒಡೆಲಾ 2' ಸಿನಿಮಾ ಟೀಸರ್' ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದೆಬ್ಬಿಸಿದೆ. ಒಡೆಲಾ ಸಿನಿಮಾದ ಮುಂದುವರೆದ ಭಾಗವಾಗಿರುವ 'ಒಡೆಲಾ 2' ಹಲವಾರು ಕ್ರಿಯಾತ್ಮಕ ಪ್ರಯೋಗಗಳಿಂದ ಗಮನಸೆಳೆದಿದೆ. ಬೋಲ್ಡ್ ಪಾತ್ರಗಳಿಂದ ಗಮನಸೆಳೆಯುತ್ತಿರುವ ನಟಿ ತಮನ್ನಾ ಭಾಟಿಯಾ 'ಒಡೆಲಾ 2'ನಲ್ಲಿ ಸಾದ್ವಿ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. https://www.youtube.com/watch?v=Cb1XauMhTtc ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ 'ಒಡೆಲಾ 2' ಟೀಸರ್ ಬಿಡುಗಡೆಯಾಗಿದೆ. ತಮನ್ನಾ ಅವರು ಸಾದ್ವಿ ಲುಕ್'ನಲ್ಲಿ ಕಾಣಿಸಿಕೊಳ್ಳುವುದಕ್ಕೂ ಇದರ ಟೀಸರ್ ಮಹಾ ಕುಂಭಮೇಳದಲ್ಲಿ ಬಿಡುಗಡೆಯಾಗುವುದಕ್ಕೂ ಏನೂ ಸಂಬಂಧವಿಲ್ಲ. ಆದರೂ ತಮನ್ನಾ ಸಾಧ್ವಿಯಾದರೇ ಎಂಬ ನೆಟ್ಟಿಗರ ಪ್ರತಿಕ್ರಿಯೆಗಳೂ ಗಮನಸೆಳೆದಿವೆ....
ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: 'ಬಿ ಖಾತಾ' ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ ಎಂದವರು ತಿಳಿಸಿದ್ದಾರೆ. " ಬಿ ಖಾತಾ" ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ. pic.twitter.com/HlsyqED95L— Siddaramaiah (@siddaramaiah) February 18, 2025...
ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ. https://www.youtube.com/watch?v=7ru18HS_934&ab_channel=SaregamaKannada...
ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ವೈವಿಧ್ಯ
ಆಪಲ್ ತನ್ನ ವರ್ಷದ ಮೊದಲ ಪ್ರಮುಖ ಉತ್ಪನ್ನ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿ 19 ಬುಧವಾರದಂದು ಬಿಡುಗಡೆಯಾಗಲಿದೆ. ಸಿಇಒ ಟಿಮ್ ಕುಕ್ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡುವ ಮೂಲಕ 'ಐಫೋನ್ ಎಸ್‌ಇ 4' ದಿನಾಂಕವನ್ನು ದೃಢಪಡಿಸಿದ್ದಾರೆ. 'ಕುಟುಂಬದ ಹೊಸ ಸದಸ್ಯರನ್ನು ಭೇಟಿಯಾಗಲು ಸಿದ್ಧರಾಗಿ' ಎಂಬ ಸಂದೇಶದೊಂದಿಗೆ ಅವರು ಮುಂಬರುವ ಸರಣಿ ಬಗ್ಗೆ ಕುತೂಹಲಕಾರಿ ಸಂಗತಿಯನ್ನು ತೆರೆದಿಟ್ಟಿದ್ದಾರೆ. ಜೊತೆಗೆ ಅನಿಮೇಟೆಡ್ ಆಪಲ್ ಲೋಗೋ ಕೂಡ ಇದೆ. ಆಪಲ್ ಅಧಿಕೃತವಾಗಿ ಏನನ್ನು ಸಂಗ್ರಹಿಸಿದೆ ಎಂಬುದನ್ನು ಬಹಿರಂಗಪಡಿಸಿಲ್ಲವಾದರೂ, ಮ್ಯಾಕ್‌ಬುಕ್ ಏರ್, ಐಪ್ಯಾಡ್ ಮತ್ತು ಬಹುಶಃ ವಿಷನ್ ಪ್ರೊ ಹೆಡ್‌ಸೆಟ್‌ಗೆ ನವೀಕರಣಗಳ ಜೊತೆಗೆ ಬಹುನಿರೀಕ್ಷಿತ ಐಫೋನ್ ಎಸ್‌ಇ 4 ಮೇಲೆ ಸ್ಪಾಟ್‌ಲೈಟ್ ಇರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಹೊಸ 'iPhone SE 4' ಹೇಗಿದೆ ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಇದೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಗೆಬಗೆಯ ವೀಡಿಯೊಗಳು ಹರಿದಾಡುತ್ತಿವೆ. ಆದರೆ ಹೊಸ 'iPhone SE 4' ಇದೇ ರೀತಿಯಲ್ಲೇ ಇರಲಿದೆಯೇ ಎಂಬ ಬಗ್ಗೆ ಕಂಪನಿತು ತನ್ನ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ...
ಒಂದೆಡೆ KWIN City, ಗ್ಲೋಬಲ್ ಹಬ್ ಎಂದು ಬೊಬ್ಬಿಡುತ್ತಿರುವ ಸರ್ಕಾರ; ಮತ್ತೊಂದೆಡೆ ಯಮಕಿಂಕರರ ತಾಣದಂತಿರುವ ಆಸ್ಪತ್ರೆ!

ಒಂದೆಡೆ KWIN City, ಗ್ಲೋಬಲ್ ಹಬ್ ಎಂದು ಬೊಬ್ಬಿಡುತ್ತಿರುವ ಸರ್ಕಾರ; ಮತ್ತೊಂದೆಡೆ ಯಮಕಿಂಕರರ ತಾಣದಂತಿರುವ ಆಸ್ಪತ್ರೆ!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ ಕರ್ನಾಟಕದ ಆಸ್ಪತ್ರೆಗಳ ದುಸ್ಥಿತಿ ಅನಾವರಣವಾಗಿದೆ. KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, #ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ ಕರ್ನಾಟಕದ ಆಸ್ಪತ್ರೆಗಳ ದುಸ್ಥಿತಿ ಇದು! ಈಗಾಗಲೇ ನೂರಾರು ಬಾಣಂತಿಯರು ಇದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೂ, ಇನ್ನೂ ಎಚ್ಚೆತ್ತಿಲ್ಲದಿರವುದು ನಮ್ಮ… pic.twitter.com/e885sKwlNj — Arvind Bellad (@BelladArvind) February 13, 2025   ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಅವರು ಈ ಕುರಿತಂತೆ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಮಾಡಿದ್ದು, ಆಸ್ಪತ್ರೆಗಳ ಅವ್ಯವಸ್ಥೆಗೆ ಹೊಣೆಗಾರರಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈಗಾಗಲೇ ನೂರಾರು ಬಾಣಂತಿಯ...
ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್​ಡಮ್’; ಟೀಸರ್ ಅನಾವರಣ

ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್​ಡಮ್’; ಟೀಸರ್ ಅನಾವರಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ..  Actor Vijay Deverakonda’s next titled Kingdom; Film to hit screens on May 30 ವಿಜಯ್ ದೇವರಕೊಂಡ ನಟನೆಯ 12ನೇ ಸಿನಿಮಾ ಬಗ್ಗೆ ಇದ್ದ ಕುತೂಹಲ ತಣ್ಣಗಾಗಿದೆ. ಈ ವರೆಗೂ ವಿಜಯ್ ದೇವರಕೊಂಡ ಅವರ ಮುಂಬರುವ ಸಿನಿಮಾವನ್ನು ‘VD12’ ಎಂದು ಕರೆಯಲಾಗುತ್ತಿತ್ತು. ಇದೀಗ ಚಿತ್ರದ ಟೈಟಲ್ ಅನಾವರಣ ಆಗಿದೆ. ಟೀಸರ್​ ಕೂಡ ಬಿಡುಗಡೆ ಆಗಿದ್ದು, ನೂತನ ಸಿನಿಮಾಗೆ ‘ಕಿಂಗ್​ಡಮ್’ ಎಂದು ಹೆಸರಿಡಲಾಗಿದೆ. https://youtu.be/McPGQ-Nb9Uk?si=crsksyReJMcXmBEC ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ‘ಕಿಂಗ್​ಡಮ್​’ ಸಿನಿಮಾದ ಟೀಸರ್ ಬಿಡುಗಡೆಯಾಗಿವೆ. ತೆಲುಗಿನಲ್ಲಿ ಜೂನಿಯರ್​ ಎನ್​ಟಿಆರ್​, ಹಿಂದಿಯಲ್ಲಿ ರಣಬೀರ್​ ಕಪೂರ್​ ಹಾಗೂ ತಮಿಳಿನಲ್ಲಿ ಸೂರ್ಯ ಅವರು ‘ಕಿಂಡ್​ಕಮ್’ ಟೀಸರ್​ಗೆ ಧ್ವನಿ ನೀಡಿರುವುದು ವಿಶೇಷ.....
ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..

ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಡಾಲಿ ಧನಂಜಯ್ ಅವರು ಫೆಬ್ರವರಿ 16 ರಂದು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಮದುವೆಗೆ ಅಭಿಮಾನಿ ಬಳಗವನ್ನು ಆಹ್ವಾನಿಸಿರುವ ಅವರು ಸುಂದರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಧನಂಜಯ್-ಧನ್ಯತಾ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆ ಸನ್ನಿವೇಶದ ವಿಡಿಯೋವನ್ನು ದಾಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ತಾಗಿ ವೈರಲ್ ಆಗುತ್ತಿದೆ....