Wednesday, January 28

ವೀಡಿಯೊ

ಕೋಗಿಲು ತೆರವು ವಿಷಯ; ಕೇರಳ ಸಿಎಂ ನಡೆಗೆ ಸಿದ್ದರಾಮಯ್ಯ ಆಕ್ಷೇಪ

ಕೋಗಿಲು ತೆರವು ವಿಷಯ; ಕೇರಳ ಸಿಎಂ ನಡೆಗೆ ಸಿದ್ದರಾಮಯ್ಯ ಆಕ್ಷೇಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕಟ್ಟಡ ನೆಲಸಮ ಕಾರ್ಯಾಚರಣೆ ಕುರಿತಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದನ್ನು ಕೇರಳದ ಚುನಾವಣಾ ರಾಜಕೀಯದ ಭಾಗವೆಂದು ವ್ಯಾಖ್ಯಾನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಕಾರಣ, ಅಲ್ಲಿನ ಮುಖ್ಯಮಂತ್ರಿ ಈ ವಿಚಾರವನ್ನು ರಾಜಕೀಯವಾಗಿ ಬಳಸುತ್ತಿದ್ದಾರೆ. ಅದಕ್ಕಾಗಿಯೇ ಅವರು ಕೋಗಿಲು ಪ್ರದೇಶಕ್ಕೆ ಒಬ್ಬ ಶಾಸಕ ಮತ್ತು ರಾಜ್ಯಸಭಾ ಸದಸ್ಯರನ್ನು ಕಳುಹಿಸಿದ್ದಾರೆ” ಎಂದು ಹೇಳಿದರು. ಕೋಗಿಲು ಪ್ರದೇಶದ ನಿವಾಸಿಗಳು ನಿರಾಶ್ರಿತರಾಗಿದ್ದು, ಅವರು ಸರ್ಕಾರಿ ಭೂಮಿಯಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ನಿಗಮದ ವತಿಯಿಂದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. “ಮಾನವೀಯ ದೃಷ್ಟಿಯಿಂದ ನಾವು ಅವರಿಗೆ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. #WATCH | Bengaluru: On Kerala CM Pinarayi ...
‘ಸತ್ಯಗಳನ್ನು ತಿಳಿಯದೆ ಹಸ್ತಕ್ಷೇಪ ಮಾಡಬೇಡಿ’: ಪಿಣರಾಯಿಗೆ ಡಿಕೆಶಿ ಎದಿರೇಟು

‘ಸತ್ಯಗಳನ್ನು ತಿಳಿಯದೆ ಹಸ್ತಕ್ಷೇಪ ಮಾಡಬೇಡಿ’: ಪಿಣರಾಯಿಗೆ ಡಿಕೆಶಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕರ್ನಾಟಕದಲ್ಲಿ ನಡೆದ ಭೂಸ್ವಾಧೀನ ಅಭಿಯಾನದ ಕುರಿತ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಟೀಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎದಿರೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು,"ಇದು ತುಂಬಾ ದುರದೃಷ್ಟಕರ. ಪಿಣರಾಯಿ ಅವರಂತಹ ಹಿರಿಯ ನಾಯಕರು ಬೆಂಗಳೂರಿನ ಸಮಸ್ಯೆಗಳನ್ನು ತಿಳಿದುಕೊಳ್ಳಬೇಕು. ಕೆಲವರು ಅಲ್ಲಿ ಅತಿಕ್ರಮಣ ಮಾಡಿದ್ದಾರೆ. ಇದು ತ್ಯಾಜ್ಯ ವಿಲೇವಾರಿ ತಾಣ ಎಂದಿದ್ದಾರೆ.'ನಮ್ಮಲ್ಲಿ ಮಾನವೀಯತೆ ಇದೆ. ನಾವು ಅವರಿಗೆ ಹೊಸ ಸ್ಥಳಗಳಿಗೆ ಹೋಗಲು ಅವಕಾಶ ನೀಡಿದ್ದೇವೆ. ಅವರಲ್ಲಿ ಕೆಲವರು ಮಾತ್ರ ಸ್ಥಳೀಯರು. ಪಿಣರಾಯಿ ಅವರಂತಹ ಹಿರಿಯ ನಾಯಕರು ಅಂತಹ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು' ಎಂದು ಡಿಕೆಶಿ ಹೇಳಿದರು. #WATCH | Bengaluru | On Kerala CM Pinarayi Vijayan's statement on recent devlotion drive in Karanataka, Dy CM DK Shivakumar says, "It is very unfortunate. Senior leaders like Pinarayi should know the issues in Bengaluru. Some people have encroached there. It is a waste…...
ಸಿದ್ದು ಕುರ್ಚಿ ಉಳಿಸಿಕೊಳ್ಳಲು ವಸತಿ ಇಲಾಖೆಯ ಹಣ ವರ್ಗಾವಣೆ? ಏನಿದು ಬಿಜೆಪಿ ಆರೋಪ

ಸಿದ್ದು ಕುರ್ಚಿ ಉಳಿಸಿಕೊಳ್ಳಲು ವಸತಿ ಇಲಾಖೆಯ ಹಣ ವರ್ಗಾವಣೆ? ಏನಿದು ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಮೌಲ್ಯದ ಆಸ್ತಿಪಾಸ್ತಿ ಪತ್ತೆ ಮಾಡಿದ ಬೆಳವಣಿಗೆಯನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿಯು ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸರ್ಫರಾಜ್‌ ನಿವಾಸ ಮತ್ತು ಸಂಬಂಧಿಕರ ಮನೆಗಳೂ ಸೇರಿದಂತೆ 5 ಕಡೆ ಇತ್ತೀಚಿಗೆ ದಾಳಿ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಸುಮಾರು 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. ಬಡವರಿಗೆ ಸೂರು ಕಲ್ಪಿಸಬೇಕಾದ ವಸತಿ ಇಲಾಖೆ ಇಂದು ಭ್ರಷ್ಟಾಚಾರದ ಗೂಡಾಗಿದೆ. ಸಚಿವ @BZZameerAhmedK ಅವರ ಇಲಾಖೆಯಲ್ಲಿ ಲೂಟಿಯಾದ ಕೋಟ್ಯಂತರ ರೂ. ಎಲ್ಲಿಗೆ ಹೋಯಿತು? @siddaramaiah ಅವರು ಆ ಭ್ರಷ್ಟಾಚಾರದ ಹಣವನ್ನು ಕುರ್ಚಿ ಉಳಿಸಿಕೊಳ್ಳಲು ವರ್ಗಾವಣೆ ಮಾಡಿದ್ದು ಯಾರಿಗೆ? #HousingScam #Corruption #CongressFailsKarnataka pic.twitter.com/T8XitgQ981 — BJP Karnataka (@BJP4Karnataka) December 26, 2025 ಈ ಬಗ್ಗೆ ಟೀಕಾಸ್...

ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮೈಸೂರು: ಮೈಸೂರು ಅರಮನೆಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೈಸೂರು ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಸ್ಫೋಟ ಸಂಭವಿಸಿದೆ. ಅರಮನೆ ಮುಂಭಾಗ ಮಕ್ಕಳ ಆಟಿಕೆ ಸಾಮಾನುಗಳ ಮಾರಾಟ ಸ್ಥಳದಲ್ಲಿ, ಜನನಿಬಿಡ ಸ್ಥಳದಲ್ಲಿ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಗಾಯಗೊಂಡಿದ್ದು ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ನಡೆಸಿದ್ದಾರೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. #WATCH | Karnataka | A helium cylinder explosion occurred in front of the Jayamarthanda gate of the Mysore Palace at around 8.30 pm. The balloon seller died on the spot and his identity is yet to be ascertained. Four others wer...
ಹಿರಿಯೂರು ಅಪಘಾತ; ಶಾಲಾ ಬಸ್ ಚಾಲಕನೇ ಇಡೀ ಘಟನೆಗೆ ಪ್ರತ್ಯಕ್ಷದರ್ಶಿ ಸಾಕ್ಷಿ

ಹಿರಿಯೂರು ಅಪಘಾತ; ಶಾಲಾ ಬಸ್ ಚಾಲಕನೇ ಇಡೀ ಘಟನೆಗೆ ಪ್ರತ್ಯಕ್ಷದರ್ಶಿ ಸಾಕ್ಷಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿ, "ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್. ಇಂಧನ ಟ್ಯಾಂಕರ್ ಟ್ರಕ್ ವಿಭಜಕವನ್ನು ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಎಂಟು ಜನರು ಸಾವನ್ನಪ್ಪಿದ್ದಾರೆ, ಕೆಲವರು ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. #WATCH | Chitradurga, Karnataka | IGP Dr BR Ravikante Gowda says, "The accident happened at 2 am... A container crossed the divider and hit a moving bus... Three people are missing... Hopefully, they are alive... One person is at risk and has been taken to the hospital for… https://t.co/aTrDHKnYD9 pic.twitter.com/IkKiOl2dKv— ANI (@ANI) December 25, 2025 ಕಂಟೇನರ್ ಚಾಲಕ ಕೂಡ ಸಾವನ್ನಪ್ಪಿದ್ದಾರೆ. ಒಟ್ಟು, ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಒಬ್ಬ ವ್ಯಕ್ತಿಯ ದೇಹದ 20% ಸುಟ್ಟುಹೋಗಿರುವುದರಿಂದ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ...
ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿನ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ. ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ ? - ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು pic.twitter.com/u78yxmZSuJ— Janata Dal Secular (@JanataDal_S) December 22, 2025...
ಮಾರಕ ದಾಳಿಗೆ ಪ್ರತೀಕಾರ: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

ಮಾರಕ ದಾಳಿಗೆ ಪ್ರತೀಕಾರ: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ವಾಷಿಂಗ್ಟನ್: ಕಳೆದ ವಾರ ಅಮೆರಿಕದ ಸೈನಿಕರ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ, ಅಮೆರಿಕ ಮಧ್ಯ ಸಿರಿಯಾದಾದ್ಯಂತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರ ಸಂಘಟನೆಯ ಡಜನ್ಗಟ್ಟಲೆ ಗುರಿಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ. ‘ಆಪರೇಷನ್ ಹಾಕೈ ಸ್ಟ್ರೈಕ್’ ಎಂಬ ಹೆಸರಿನ ಈ ಕಾರ್ಯಾಚರಣೆಯಡಿ ಐಸಿಸ್ ಉಗ್ರರು, ಅವರ ಮೂಲಸೌಕರ್ಯ ಮತ್ತು ಶಸ್ತ್ರಾಸ್ತ್ರ ಸಂಗ್ರಹ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿವೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ದೃಢಪಡಿಸಿದ್ದಾರೆ. ಅಗತ್ಯವಿದ್ದರೆ ಮುಂದುವರಿದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ. ಇದು ಯುದ್ಧದ ಆರಂಭವಲ್ಲ, ಬದಲಾಗಿ ಪ್ರತೀಕಾರದ ಸ್ಪಷ್ಟ ಘೋಷಣೆ ಎಂದು ಹೆಗ್ಸೆತ್ ಹೇಳಿದ್ದಾರೆ. “ಅಮೆರಿಕನ್ನರನ್ನು ಗುರಿಯಾಗಿಸಿಕೊಂಡರೆ, ಅವರು ಜಗತ್ತಿನ ಎಲ್ಲಿಯಾದರೂ ಇರಲಿ, ಅವರನ್ನು ಬೇಟೆಯಾಡಿ ನಾಶಪಡಿಸಲಾಗುತ್ತದೆ” ಎಂಬ ಸಂದೇಶವನ್ನು ಈ ದಾಳಿ ನೀಡುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ಡಿಸೆ...
ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: ಪರಪ್ಪನ ಅಗ್ರಹಾರ ಜೈಲು ಬಳಿ ಜಾಮರ್ ಅಳವಡಿಸಿರುವುದರಿಂದ ಸುತ್ತಮುತ್ತ ವಾಸವಿರುವ ಹತ್ತು ಸಾವಿರಕ್ಕೂಹೆಚ್ಚು ಮಂದಿಗೆ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲಎಂದು ಶಾಸಕ ಎಂ. ಕೃಷ್ಣಪ್ಪ ಅವರು ಸರ್ಕಾರದ ಗಾಮ್,ಅನಸೆಳೆದಿದ್ದಾರೆ. ವಿಧಾನಸಭೆಯಲ್ಲಿ ಈ ಕುರಿತಂತೆ ಪ್ರಸ್ತಾಪಿಸಿರುವ ಶಾಸಕರು, ಪರಪ್ಪನ ಅಗ್ರಹಾರದ ಸುತ್ತಮುತ್ತ ಹತ್ತು ಸಾವಿರಕ್ಕೂ ಅಧಿಕ ಜನರು ವಾಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬಹಳ ಹತ್ತಿರವಿದೆ. ಜಾಮರ್‌ನಿಂದಾಗಿ ಯಾರಿಗೂ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲ. ಅದರೆ ಜೈಲಿನೊಳಗೆ ಖೈದಿಗಳು, ಅಧಿಕಾರಿಗಳು ಮೊಬೈಲ್ ಬಳಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೈಲಿನ ಒಳಗಿರುವವರಿಗೆ ಸಿಗುವ ಸಿಗ್ನಲ್ ಹೊರಗಿನವರಿಗೆ ಸಿಗುತ್ತಿಲ್ಲ.‌ ಜೈಲಿನ ಜಾಮರ್‌ಗಳಿಂದಾಗಿ ನಾಗರಿಕರ ದೈನಂದಿನ ಬದುಕು ಅಸ್ತವ್ಯಸ್ತಗೊಂಡಿದೆ. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಪರಪ್ಪನ ಅಗ್ರಹಾರದ ಸುತ್ತಮುತ್ತ ಹತ್ತು ಸಾವಿರಕ್ಕೂ ಅಧಿಕ ಜನರು ವಾಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬಹಳ ಹತ್ತಿರವಿದೆ. ಜಾಮರ್‌ನಿಂದಾಗಿ ಯ...
ಕನ್ನಡ ಮಾತನಾಡುವ ಮಕ್ಕಳ ಬಗ್ಗೆ ತಾರತಮ್ಯ ಎಸಗಿದರೆ ಶಾಲೆಗಳ ವಿರುದ್ಧ ಕ್ರಮ; ಸರ್ಕಾರದ ಎಚ್ಚರಿಕೆ

ಕನ್ನಡ ಮಾತನಾಡುವ ಮಕ್ಕಳ ಬಗ್ಗೆ ತಾರತಮ್ಯ ಎಸಗಿದರೆ ಶಾಲೆಗಳ ವಿರುದ್ಧ ಕ್ರಮ; ಸರ್ಕಾರದ ಎಚ್ಚರಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: "ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, 'ಕನ್ನಡ' ಭಾಷೆಯನ್ನು ಕಡ್ಡಾಯವಾಗಿ ಕಲಿಸಲೇಬೇಕು" ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳ ಮಾನ್ಯತೆ ನವೀಕರಣ (Renewal) ಮಾಡುವ ಸಂದರ್ಭದಲ್ಲಿಯೇ, ಕನ್ನಡ ಭಾಷೆಯನ್ನು ಕಲಿಸಲೇಬೇಕು ಎಂದು ನಾವು ಆಡಳಿತ ಮಂಡಳಿಯಿಂದ ಲಿಖಿತ ಮುಚ್ಚಳಿಕೆ (Undertaking) ಬರೆಸಿಕೊಳ್ಳುತ್ತಿದ್ದೇವೆ. ಒಂದು ವೇಳೆ ಮುಚ್ಚಳಿಕೆ ಬರೆದುಕೊಟ್ಟ ನಂತರವೂ ಕನ್ನಡ ಕಲಿಸದೇ ಇರುವುದು ಅಥವಾ ಕನ್ನಡ ಮಾತನಾಡುವ ಮಕ್ಕಳ ಬಗ್ಗೆ ತಾರತಮ್ಯ ಎಸಗುತ್ತಿರುವುದು ನಮ್ಮ ಗಮನಕ್ಕೆ ಬಂದರೆ ಅಂತಹ ಶಾಲೆಗಳ ವಿರುದ್ಧ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದವರು ತಿಳಿಸಿದ್ದಾರೆ. ಶಾಲೆಗಳ ಬಗ್ಗೆ ದೂರುಗಳು ಬಂದಾಗ ತಕ್ಷಣವೇ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ನಡೆಸಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಶಾಲಾ ಹಂತದಲ್ಲಿ ಕನ್ನಡ ಭಾಷೆಯನ್ನು ಕಾಪಾಡುವುದು ಮತ್ತು ಬೆಳೆಸುವುದು ನಮ್ಮ ಸರ್ಕಾರದ ಹಾಗೂ ಶಿಕ್ಷಣ ಇಲಾಖೆಯ ಆದ್ಯ ಕರ್ತವ್ಯ ಇದರಲ್ಲಿ ಯಾವುದೇ ರಾಜಿಯಿಲ್ಲ ಎಂದವರು ಹೇಳಿದ್ದಾರೆ. "ರಾಜ್ಯದ ಯಾವುದ...
LDF ಸೋತರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ; ಮಾತು ಉಳಿಸಿಕೊಂಡ ನಾಯಕ

LDF ಸೋತರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ; ಮಾತು ಉಳಿಸಿಕೊಂಡ ನಾಯಕ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪತ್ತನಂತಿಟ್ಟ: ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಅಖಾಡ ಅನೇಕಾನೇಕ ವಿಶೇಷತೆಗಳಿಗೆ ಸಾಕ್ಷಿಯಾಯಿತು. ಈ ಚುನಾವಣೆಯಲ್ಲಿ ಬಿಜೆಪಿ ಯಶೋಗಾಥೆ ಬರೆದಂತೆ ಬೀಗುತ್ತಿದೆ. ಮತ್ತೊಂದೆಡೆ ಎಡರಂಗಕ್ಕೆ ತಕ್ಕ ಪಾಠ ಕಲಿಸಿರುವುದಾಗಿ ಯುಡಿಎಫ್ ನಾಯಕರು ಹೇಳುತ್ತಿದ್ದಾರೆ. ಇದೇ ವೇಳೆ, ಸೋಲು ಗೆಲುವಿನ ಪಣದಲ್ಲಿ ಸೋತ ಎಲ್‌ಡಿಎಫ್ ನಾಯಕ ಮೀಸೆ ಬೋಳಿಸಿದರೆನ್ನಲಾದ ಸನ್ನಿವೇಶವೂ ಗಮನಸೆಳೆದಿದೆ. ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. LDF party worker Babu Varghese, who had vowed to shave his moustache if the LDF failed to win the Pathanamthitta Municipality, has now gone through with it after the party’s defeat. #Pathanamthitta #LDF #KeralaLocalBodyElection2025 #KeralaLocalBodyElection pic.twitter.com/gxQ9dKFQSt— Harish M (@chnmharish) December 13, 2025 ಪತ್ತನಂತಿಟ್ಟ ಪುರಸಭೆಯಲ್ಲಿ ಎಲ್‌ಡಿಎಫ್ ಗೆಲ್ಲಲು ವಿಫಲವಾದರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದ ಎಲ್‌ಡಿಎಫ್ ಪಕ್ಷದ ಕಾರ್ಯ...