
ವಿನಯ್ ಆತ್ಮಹತ್ಯೆ ಪ್ರತಿಧ್ವನಿ: ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದ ಅಶೋಕ್
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಪಕ್ಷ ನಾಯಕ್ ಆರ್ ಅಶೋಕ್, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕೊಡಗಿನ ವಿನಯ್ ಅವರಿಗೆ 2-3 ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ತನ್ನಿರಾ ಮೈನಾ ಕಿರುಕುಳ ನೀಡಿದ್ದಾರೆ. ಶಾಸಕರು ಧಮ್ಕಿ ಹಾಕಿದ್ದನ್ನು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು.… pic.twitter.com/6lv8t2Slt8— BJP Karnataka (@BJP4Karnataka) April 4, 2025ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ ಎಂದರು. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್ವೇರ್ ಇಂಜಿನಿಯರ್. 2-3 ತಿಂಗ...









