Wednesday, August 5

ವೀಡಿಯೊ

ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ವಿಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಸಭೆಯಲ್ಲಿ ನಮ್ಮ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ, ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ… https://t.co/uWGNuoxoTE— Vijayendra Yediyurappa (@BYVijayendra) March 21, 2025 ಆಡಳಿತ ಪಕ್ಷದ ಜನವಿರೋಧಿ ನಿಲುವುಗಳನ್ನು ವಿರೋಧ ಪಕ್ಷವಾಗಿ ಪ್ರಶ್ನಿಸಿ, ಹೋರಾಡುವುದು ಸದಸ್ಯರ ಹಕ್ಕು, ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತ ಮಾನ್ಯ… ರವರು ಅದನ್ನು ಕಸಿಯುವ ಪಕ್ಷಪಾತಿ ನಿಲುವು ತಳೆದದ್ದು ಕಾಂಗ್ರೆಸ್ನ ತುಘಲಕ್ ಸರ್ಕಾರದ ತಾಳಕ್ಕ...
ಹನಿಟ್ರ್ಯಾಪ್ ಕೋಲಾಹಲ: ‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ತರಾಟೆ

ಹನಿಟ್ರ್ಯಾಪ್ ಕೋಲಾಹಲ: ‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ತರಾಟೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದಿದೆ.ಈ ನಡುವೆ ಹನಿಟ್ರ್ಯಾಪ್ ಕುರಿತಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೇಗ್ವೆದುಕೊಂಡಿರುವ ಬಿಜೆಪಿ ನಾಯಕರು ವಿಧಾನ ಸಭೆ ಹಾಗೂ ವಿಧಾನ ಪರಿಷತ್ತುಗಳಲ್ಲಿ ಗದ್ದಲ ಎಬ್ಬಿಸಿವೆ. ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.ಬಿಜೆಪಿ ಆಡಳಿತಾವಧಿಯಲ್ಲಿ 17 ಶಾಸಕರು ನ್ಯಾಯಾಲಯದಿಂದ ಸ್ಟೇ ತಂದಿದ್ದರು. ಇದರ ಬಗ್ಗೆ ಅಂದು ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ. ಹಾಗಿದ್ದರೆ ಇಂದು ಈ ವಿಷಯದಲ್ಲಿ ಚರ್ಚೆಯ ಅವಶ್ಯಕತೆ ಇದೆಯೇ? ಬಿಜೆಪಿಯವರಿಗೆ ಅಂದು ಇಲ್ಲದ ನೈತಿಕತೆಯ ಪ್ರಶ್ನೆ ಇಂದು ಹೇಗೆ ಹುಟ್ಟಿಕೊಂಡಿತು? - @PriyankKharge pic.twitter.com/H4QfxdojoM — Karnataka Congress (@INCKarnataka) March 21, 2025ಬಿಜೆಪಿಯವರ ನಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ. ಹ...
ಬಿಡದಿ ಬಳಿ ಪಾಕ್ ಪರ ಗೋಡೆಬರಹ; ಇಬ್ಬರ ಬಂಧನ

ಬಿಡದಿ ಬಳಿ ಪಾಕ್ ಪರ ಗೋಡೆಬರಹ; ಇಬ್ಬರ ಬಂಧನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ಪಟ್ಟಣದ ಬಳಿಯ ಟೊಯೋಟಾ ಕಾರ್ಖಾನೆಯ ಸ್ನಾನಗೃಹದ ಗೋಡೆಗಳ ಮೇಲಿನಪಾಕಿಸ್ತಾನ ಪರವಾದ ಬರಹಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಆರೋಪಿಗಳನ್ನು 24 ವರ್ಷದ ಹೈಮದ್ ಹುಸೇನ್ ಮತ್ತು 20 ವರ್ಷದ ಸಾದಿಕ್ ಎಂದು ಗುರುತಿಸಲಾಗಿದೆ, ಇಬ್ಬರೂ ಟೊಯೋಟಾ ಬೊಶೋಕು ಆಟೋಮೋಟಿವ್ ಇಂಡಿಯಾ ಕಂಪನಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಾಗಿದ್ದು ಅವರು ಉತ್ತರ ಕರ್ನಾಟಕ ಮೂಲದವರೆನ್ನಲಾಗಿದೆ.ಹಸಿರು ಬಣ್ಣವನ್ನು ಬಳಸಿ ಕನ್ನಡದಲ್ಲಿ ಬರೆಯಲಾದ ಈ ಬರಹದಲ್ಲಿ 'ಪಾಕಿಸ್ತಾನಕ್ಕೆ ವಿಜಯ' ಮುಂತಾದ ಪಾಕಿಸ್ತಾನ ಪರ ಘೋಷಣೆಗಳು ಮತ್ತು ಕರ್ನಾಟಕದ ಜನರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿವೆ.ಕಾರ್ಖಾನೆಯು ಮೂರು ಪಾಳಿಗಳಲ್ಲಿ ಕೆಲಸ ಮಾಡುವ 2,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದು, ಪ್ರತಿ ಪಾಳಿಯಲ್ಲಿ 600 ಕ್ಕೂ ಹೆಚ್ಚು ಉದ್ಯೋಗಿಗಳು ಇದ್ದಾರೆ. ಮಾರ್ಚ್ 16 ರಂದು ಮೊದಲ ಪಾಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.ಈ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಭಾರೀ ಸಂಖ್ಯೆಯಲ್ಲಿ ಕನ್ನಡ ಕಾರ್ಯಕರ್ತರು ಕಾರ್ಖಾನೆ ಮುಂದೆ ಜಮಾ...
ಮಲ್ಪೆಯಲ್ಲಿ‌ ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ನಾಲ್ವರ ಬಂಧನ

ಮಲ್ಪೆಯಲ್ಲಿ‌ ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ನಾಲ್ವರ ಬಂಧನ

ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಉಡುಪಿ: ಮೀನು ಅಳ್ಳತನ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಆರೋಪದಲ್ಲಿ ಉಡುಪಿ ಜಿಲ್ಲಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ಮಾಡಲಾಗಿತ್ತು. ಮಾರ್ಚ್ 18 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆ ನಡೆಸಿ ಕೃತ್ಯ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.ಇನ್ನೊಂದೆಡೆ, ಹಲ್ಲೆ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು ಎಂದಿರುವ ಸಿಎಂ, ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧ ಎಂದಿದ್ದಾರೆ.ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್...
ಸಿನಿಲೋಕದಲ್ಲಿ ‘ಕಣ್ಣಪ್ಪ’ ಬಗ್ಗೆ ಕುತೂಹಲ ಹೆಚ್ಚಿಸಿದ ‘ಮಹಾದೇವ ಶಾಸ್ತ್ರಿ ಪರಿಚಯ ಗೀತೆ’

ಸಿನಿಲೋಕದಲ್ಲಿ ‘ಕಣ್ಣಪ್ಪ’ ಬಗ್ಗೆ ಕುತೂಹಲ ಹೆಚ್ಚಿಸಿದ ‘ಮಹಾದೇವ ಶಾಸ್ತ್ರಿ ಪರಿಚಯ ಗೀತೆ’

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಚೆನ್ನೈ: ಹಿರಿಯ ನಟ, ನಿರ್ಮಾಪಕ ಎಂ. ಮೋಹನ್ ಬಾಬು ಅವರಿಗೆ ಗೌರವ ಸಲ್ಲಿಸುವ ಸಲುವಾಗಿ, 'ಕಣ್ಣಪ್ಪ' ಚಿತ್ರದ ನಿರ್ಮಾಪಕರು ಬುಧವಾರ 'ಮಹಾದೇವ ಶಾಸ್ತ್ರಿಯವರ ಪರಿಚಯ ಗೀತೆ' ಎಂಬ ಶೀರ್ಷಿಕೆಯ ಗೀತೆಯನ್ನು ಅನಾವರಣಗೊಳಿಸಿದರು.ಬಹು ನಿರೀಕ್ಷಿತ ಮಹಾಕಾವ್ಯದ ಮೂರನೇ ಹಾಡಾದ ಈ ಹಾಡು, ಗುಡುಗಿನ ಲಯಗಳು ಮತ್ತು ಪ್ರಬಲ ಗಾಯನದೊಂದಿಗೆ ದೃಶ್ಯಕ್ಕೆ ಅಪ್ಪಳಿಸುತ್ತದೆ. ಭಾವಪೂರ್ಣ ಜಾವೇದ್ ಅಲಿ ಹಾಡಿದ್ದಾರೆ, ಶೇಖರ್ ಸಾಹಿತ್ಯ ಬರೆದಿದ್ದಾರೆ ಮತ್ತು ಮಾಂತ್ರಿಕ ಸ್ಟೀಫನ್ ದೇವಸ್ಸಿ ಸಂಯೋಜಿಸಿರುವ ಈ ಹಾಡು ಎಂ.ಮೋಹನ್ ಬಾಬು ಪಾತ್ರದ ಮಹಾದೇವ ಶಾಸ್ತ್ರಿಯ ಕಚ್ಚಾ ಶಕ್ತಿ ಮತ್ತು ಭವ್ಯ ಪ್ರಭಾವಲಯವನ್ನು ಸಾಕಾರಗೊಳಿಸುತ್ತದೆ.https://www.youtube.com/watch?v=FfHc-Kh7x2Iತನ್ನ ದೃಢವಾದ ತಾಳವಾದ್ಯ ಮತ್ತು ಹಿಡಿತದ ಗತಿಯೊಂದಿಗೆ, ಈ ಹಾಡು ಮಹಾದೇವ ಶಾಸ್ತ್ರಿಯನ್ನು ವ್ಯಾಖ್ಯಾನಿಸುವ ಅದಮ್ಯ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಪಾತ್ರವನ್ನು ಬೇರೆ ಯಾರೂ ಅಲ್ಲ, ಐಕಾನಿಕ್ ಎಂ. ಮೋಹನ್ ಬಾಬು ಸ್ವತಃ ಜೀವಂತಗೊಳಿಸಿದ್ದಾರೆ.ಚಿತ್ರದ ನಾಯಕ ನಟ ವಿಷ್ಣು ಮಂಚು ತಮ್ಮ ತಂದೆಯ ಹುಟ್ಟುಹಬ್ಬದ ಜೊತೆಜೊತೆಗೇ ಬ...
ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್..

ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್..

ದೇಶ, ಪ್ರಮುಖ ಸುದ್ದಿ, ವೀಡಿಯೊ
ಕೇಪ್ ಕೆನವೆರಲ್: ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಯಶಸ್ವಿಯಾಗಿ ತಲುಪಿದ್ದಾರೆ. ಬಾಹ್ಯಾಕಾಶದಿಂದ ಸುಮಾರು 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಸುರಕ್ಷಿತವಾಗಿ ವಾಪಸ್ಸಾಗಿದ್ದು ಕೋಟ್ಯಂತರ ಭಾರತೀಯರು ಸೇರಿದಂತೆ ಜಗತ್ತಿನಾದ್ಯಂತ ಜನರಿ ನಿಟ್ಟುಸಿರು ಬಿಟ್ಟಿದ್ದಾರೆ.ಕಳೆದ ವರ್ಷ ಜೂನ್‌ನಲ್ಲಿ ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ಅವರಿದ್ದ ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ದೋಷ ಕಂಡುಬಂದಿತ್ತು. ಇದರಿಂದಾಗಿ ಸುನೀತಾ ಮತ್ತವರ ಸಹ ಗಗನಯಾತ್ರಿಗಳು ನೌಕೆಯ ಮೂಲಕ ಹಿಂತಿರುಗುವುದು ಅಪಾಯ ಎಂದು ನಾಸಾ ತಿಳಿಸಿತ್ತು. ತಾಂತ್ರಿಕ ತೊಂದರೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಹಾಗಾಗಿ ಸುಮಾರು 9 ತಿಂಗಳ ಕಾಲ ಈ ಸಾಹಸಿಗಳು ಬಾಹ್ಯಾಕಾಶದಲ್ಲಿ ಉಳಿದುಕೊಂಡಿದ್ದರು.ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿ...
ಅಮೆರಿಕದ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್’ಗೆ ಗಂಗಾ ಜಲ ನೀಡಿ ಗೌರವ

ಅಮೆರಿಕದ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್’ಗೆ ಗಂಗಾ ಜಲ ನೀಡಿ ಗೌರವ

ದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಅಮೆರಿಕದ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಅವರು ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೋದಿಯವರು ತುಳಸಿ ಗಬ್ಬಾರ್ಡ್ ಅವರಿಗೆ ಗಂಗಾ ಜಲ ಮತ್ತು ಉಡುಗೊರೆಗಳನ್ನು ನೀಡಿ ಗೌರವಿಸಿದರು.Hon. PM Shri @narendramodi Ji gifting the holy water from the sacred Mahakumbh to USA’s Director of National Intelligence, @TulsiGabbard, is a symbol of India’s civilizational strength and spiritual diplomacy.It embodies Bharat’s growing global stature and showcases the… pic.twitter.com/McHgquba47 — Yogi Adityanath (@myogiadityanath) March 17, 2025ಪ್ರಧಾನಿ ಮೋದಿ ಅವರು ಮಹಾ ಕುಂಭದಿಂದ ತಂಡ ಗಂಗಾ ಜಲವನ್ನು ನೀಡಿ, ವಿಶ್ವದ ಅತಿದೊಡ್ಡ ಧಾರ್ಮಿಕ ಕೈಂಕರ್ಯದ ಮಹತ್ವದ ಬಗ್ಗೆ ತುಳಸಿ ಗಬ್ಬಾರ್ಡ್ ಅವರಿಗೆ ವಿವರಿಸಿದರು."ಇದು ಮಹಾ ಕುಂಭದಿಂದ ಸಂಗ್ರಹಿಸಲಾದ ನೀರು, ಅಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿಯ ಸಂಗಮವಾದ ತ್ರಿವ...
ಔರಂಗಜೇಬ್ ಸಮಾಧಿ ವಿವಾದ: ನಾಗಪುರದಲ್ಲಿ ಹಿಂಸಾಚಾರ ಭುಗಿಲು

ಔರಂಗಜೇಬ್ ಸಮಾಧಿ ವಿವಾದ: ನಾಗಪುರದಲ್ಲಿ ಹಿಂಸಾಚಾರ ಭುಗಿಲು

ಪ್ರಮುಖ ಸುದ್ದಿ, ವೀಡಿಯೊ
ನಾಗ್ಪುರ: ಮೊಘಲ್‌ ದೊರೆ ಔರಂಗಜೇಬ್ ಸಮಾಧಿ ವಿಚಾರ ಇದೀಗ ಮಹಾರಾಷ್ಟ್ರದ ನಾಗಪುರವನ್ನು ಪ್ರಕ್ಷುಬ್ಧಗೊಳಿಸಿದೆ. ಎರಡು ಗುಂಪುಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು ಘಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಹಿಂಸಾಚಾರದಲ್ಲಿ ಮೂವರು ಪೊಲೀಸರು ಸೇರಿ 9 ಮಂದಿ ಗಾಯಗೊಂಡಿದ್ದಾರೆ.#WATCH | Maharashtra: Efforts underway to douse fire in vehicles that have been torched in Mahal area of ​​Nagpur.Tensions have broken out here following a dispute between two groups. pic.twitter.com/rRheKdpGh4 — ANI (@ANI) March 17, 2025ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬ್‌ ಸಮಾಧಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಸೋಮವಾರ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಸಿತ್ತು. ಅದರ ಬೆನ್ನಲ್ಲೆ ಕುರಾನ್‌ ಪ್ರತಿಯನ್ನು ಸುಡಲಾಗಿದೆ ಎಂಬ ವದಂತಿ ಹಬ್ಬಿದೆ. ಈ ವದಂತಿ ನಂತರ ಹಿಂಸಾಚಾರ ಭುಗಿಲೆದ್ದಿದ್ದು, ಹಲವೆಡೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗಳು ನಡೆದಿವೆ.ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ...
‘ಮತೀಯವಾಗಿ ಮೀಸಲಾತಿಯನ್ನು ಅಂಬೇಡ್ಕರ್ ಅವರೇ ವಿರೋಧಿಸಿದ್ದರು, ಸುಪ್ರೀಂ ಕೋರ್ಟ್ ಕೂಡಾ ಆಕ್ಷೇಪಿಸಿತ್ತು’

‘ಮತೀಯವಾಗಿ ಮೀಸಲಾತಿಯನ್ನು ಅಂಬೇಡ್ಕರ್ ಅವರೇ ವಿರೋಧಿಸಿದ್ದರು, ಸುಪ್ರೀಂ ಕೋರ್ಟ್ ಕೂಡಾ ಆಕ್ಷೇಪಿಸಿತ್ತು’

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದಕ್ಕೆ ಬಿಜೆಪಿಯ ವಿರೋಧವಿದೆ ಎಂದು ವಿಧಾನಪರಿಷತ್ತಿನಲ್ಲಿ ಶಾಸಕ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ. ಧರ್ಮದ ಆಧಾರದಲ್ಲಿ‌ ಮೀಸಲಾತಿ ನೀಡುವುದನ್ನು ಸಾಂವಿಧಾನಿಕವಾಗಿ ತಿರಸ್ಕರಿಸಲಾಗಿದೆ, ದೇಶದ ಸರ್ವೋಚ್ಛ ನ್ಯಾಯಾಲಯ ಕೂಡಾ ಮೀಸಲಾತಿ ನೀಡುವುದನ್ನು ವಿರೋಧಿಸಿದೆ.ಮತೀಯವಾಗಿ ಮೀಸಲಾತಿ ನೀಡುವುದಕ್ಕೆ ನನ್ನ ಸ್ಪಷ್ಟ ವಿರೋಧವಿದೆ ಎಂದು ಸ್ವತಃ ಅಂಬೇಡ್ಕರ್ ಅವರೇ ಪ್ರತಿಪಾದಿಸಿದ್ದರು.‌ ಆದರೆ ಕಾಂಗ್ರೆಸ್ ಸರ್ಕಾರ ಇಂದು ಮುಸ್ಲಿಮರಿಗೆ ಮೀಸಲಾತಿ ನೀಡುವ… pic.twitter.com/kbIxdbPS3C— BJP Karnataka (@BJP4Karnataka) March 17, 2025ಧರ್ಮದ ಆಧಾರದಲ್ಲಿ‌ ಮೀಸಲಾತಿ ನೀಡುವುದನ್ನು ಸಾಂವಿಧಾನಿಕವಾಗಿ ತಿರಸ್ಕರಿಸಲಾಗಿದೆ, ದೇಶದ ಸರ್ವೋಚ್ಛ ನ್ಯಾಯಾಲಯ ಕೂಡಾ ಮೀಸಲಾತಿ ನೀಡುವುದನ್ನು ವಿರೋಧಿಸಿದೆ ಎಂದು ಅವರು ರಾಜ್ಯ ಸರ್ಕಾರದ ಗಮನಸೆಳೆದಿದ್ದಾರೆ.ಮತೀಯವಾಗಿ ಮೀಸಲಾತಿ ನೀಡುವುದಕ್ಕೆ ನನ್ನ ಸ್ಪಷ್ಟ ವಿರೋಧವಿದೆ ಎಂದು ಸ್ವತಃ ಅಂಬೇಡ್ಕರ್ ಅವರೇ ಪ್ರತಿಪಾದಿಸಿದ್ದರು.‌ ಆದರೆ ಕಾಂಗ್ರೆಸ್ ಸರ್ಕಾರ ಇಂದು ಮುಸ್ಲಿಮರಿಗೆ ಮೀಸಲಾತಿ ನೀಡುವ...
‘ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್’: ರಾಜಕೀಯ ಗುರುವಿಗೆ ನಮಿಸಿದ ಡಿಕೆಶಿ

‘ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್’: ರಾಜಕೀಯ ಗುರುವಿಗೆ ನಮಿಸಿದ ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಗದಗ್ ಕೋ-ಆಪರೇಟಿವ್ ಕಾಟನ್ ಸೇಲ್ಸ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ತಮ್ಮ ಆದರ್ಶ ನಾಯಕರಾಗಿದ್ದ ಕೆ.ಹೆಚ್.ಪಾಟೀಲ್ ಅವರನ್ನು ಸ್ಮರಿಸಿದ ಡಿ.ಕೆ.ಶಿವಕುಮಾರ್, ಸಹಕಾರ ರಂಗದ ಭೀಷ್ಮ ಕೆ.ಹೆಚ್.ಪಾಟೀಲ್ ಅವರ ಜನಪರ ಕಾಳಜಿಯ ನಿದರ್ಶನಗಳು ನಮ್ಮ ಮುಂದಿವೆ. ಅವರು ಚುನಾವಣೆಯಲ್ಲಿ ಸೋತಾಗ ಕುಗ್ಗದೆ, ಅಧಿಕಾರ ಸಿಕ್ಕಾಗ ಹಿಗ್ಗದೆ ದಕ್ಷತೆಯಿಂದ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ದೃಢ ನಿರ್ಧಾರಗಳನ್ನು ಕೈಗೊಂಡು, ಸಹಕಾರಿ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದರು.ಕೆ.ಹೆಚ್...