ನಾಯಕತ್ವ ಗೊಂದಲಕ್ಕೆ ತೆರೆ ಎಳೆಯಲು ಬ್ರೇಕ್ ಫಾಸ್ಟ್? ಹೈಕಮಾಂಡ್ ಸೂತ್ರಕ್ಕೆ ಜೈ ಎಂದ ಸಿಎಂ-ಡಿಸಿಎಂ
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಶಮನ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಬೆಳಿಗ್ಗೆ ಒಟ್ಟಾಗಿ ಉಪಹಾರ ಸೇವಿಸಿ ಗಮನಸೆಳೆದರು. ಉಪಹಾರ ಮೂಲಕ ಪಕ್ಷದಲ್ಲಿ ಒಗ್ಗಟ್ಟಿದೆ ಎಂದು ತೋರಿಸಲು ಹೈಕಮಾಡ್ ನಾಯಕರು ಹೇಳಿಕೊಟ್ಟ ಸೂತ್ರವನ್ನು ಸಿಎಂ ಡಿಸಿಎಂ ಪಾಲಿಸಿದ್ದಾರೆ. ಆದರೆ ಈ ಬೆಳವಣಿಗೆ ನಾಟಕೀಯ ರೀತಿಯಲ್ಲೇ ಇತ್ತೆ ವಿನಃ ಒಗ್ಗಟ್ಟು ಪ್ರದರ್ಶನದಂತೆ ಇರಲಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.
ಉಪಹಾರ ಬಳಿಕ ನಿರೀಕ್ಷೆಯಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಒಂದಷ್ಟು ಮಾಹಿತಿ ಹಂಚಿಕೊಂಡರು. ನಮ್ಮೊಳಗೆ ಭಿನ್ನಾಭಿಪ್ರಾಯವೇ ಇಲ್ಲ, ಒಗ್ಗಾಟಾಗಿವೆ ಇದ್ದೇವೆ. ಸದ್ಯದ ಗೊಂದಲಗಳಿಗೆ ಪ್ರತಿಪಕ್ಷ ಹಾಗೂ ಮಾಧ್ಯಮಗಳು ಕಾರಣ ಎಂದರು.
#WATCH | Karnataka Chief Minister Siddaramaiah and Deputy CM DK Shivakumar hold a joint press conference in Bengaluru after the breakfast meeting pic.t...









