Wednesday, April 29

ವೀಡಿಯೊ

ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ವಿಧಾನಸಭೆಯಲ್ಲಿನ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ. ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ ? - ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು pic.twitter.com/u78yxmZSuJ— Janata Dal Secular (@JanataDal_S) December 22, 2025...
ಮಾರಕ ದಾಳಿಗೆ ಪ್ರತೀಕಾರ: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

ಮಾರಕ ದಾಳಿಗೆ ಪ್ರತೀಕಾರ: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ವಾಷಿಂಗ್ಟನ್: ಕಳೆದ ವಾರ ಅಮೆರಿಕದ ಸೈನಿಕರ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ, ಅಮೆರಿಕ ಮಧ್ಯ ಸಿರಿಯಾದಾದ್ಯಂತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರ ಸಂಘಟನೆಯ ಡಜನ್ಗಟ್ಟಲೆ ಗುರಿಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ.‘ಆಪರೇಷನ್ ಹಾಕೈ ಸ್ಟ್ರೈಕ್’ ಎಂಬ ಹೆಸರಿನ ಈ ಕಾರ್ಯಾಚರಣೆಯಡಿ ಐಸಿಸ್ ಉಗ್ರರು, ಅವರ ಮೂಲಸೌಕರ್ಯ ಮತ್ತು ಶಸ್ತ್ರಾಸ್ತ್ರ ಸಂಗ್ರಹ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿವೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ದೃಢಪಡಿಸಿದ್ದಾರೆ. ಅಗತ್ಯವಿದ್ದರೆ ಮುಂದುವರಿದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ.ಇದು ಯುದ್ಧದ ಆರಂಭವಲ್ಲ, ಬದಲಾಗಿ ಪ್ರತೀಕಾರದ ಸ್ಪಷ್ಟ ಘೋಷಣೆ ಎಂದು ಹೆಗ್ಸೆತ್ ಹೇಳಿದ್ದಾರೆ. “ಅಮೆರಿಕನ್ನರನ್ನು ಗುರಿಯಾಗಿಸಿಕೊಂಡರೆ, ಅವರು ಜಗತ್ತಿನ ಎಲ್ಲಿಯಾದರೂ ಇರಲಿ, ಅವರನ್ನು ಬೇಟೆಯಾಡಿ ನಾಶಪಡಿಸಲಾಗುತ್ತದೆ” ಎಂಬ ಸಂದೇಶವನ್ನು ಈ ದಾಳಿ ನೀಡುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ಡಿಸೆ...
ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: ಪರಪ್ಪನ ಅಗ್ರಹಾರ ಜೈಲು ಬಳಿ ಜಾಮರ್ ಅಳವಡಿಸಿರುವುದರಿಂದ ಸುತ್ತಮುತ್ತ ವಾಸವಿರುವ ಹತ್ತು ಸಾವಿರಕ್ಕೂಹೆಚ್ಚು ಮಂದಿಗೆ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲಎಂದು ಶಾಸಕ ಎಂ. ಕೃಷ್ಣಪ್ಪ ಅವರು ಸರ್ಕಾರದ ಗಾಮ್,ಅನಸೆಳೆದಿದ್ದಾರೆ.ವಿಧಾನಸಭೆಯಲ್ಲಿ ಈ ಕುರಿತಂತೆ ಪ್ರಸ್ತಾಪಿಸಿರುವ ಶಾಸಕರು, ಪರಪ್ಪನ ಅಗ್ರಹಾರದ ಸುತ್ತಮುತ್ತ ಹತ್ತು ಸಾವಿರಕ್ಕೂ ಅಧಿಕ ಜನರು ವಾಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬಹಳ ಹತ್ತಿರವಿದೆ. ಜಾಮರ್‌ನಿಂದಾಗಿ ಯಾರಿಗೂ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲ. ಅದರೆ ಜೈಲಿನೊಳಗೆ ಖೈದಿಗಳು, ಅಧಿಕಾರಿಗಳು ಮೊಬೈಲ್ ಬಳಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಜೈಲಿನ ಒಳಗಿರುವವರಿಗೆ ಸಿಗುವ ಸಿಗ್ನಲ್ ಹೊರಗಿನವರಿಗೆ ಸಿಗುತ್ತಿಲ್ಲ.‌ ಜೈಲಿನ ಜಾಮರ್‌ಗಳಿಂದಾಗಿ ನಾಗರಿಕರ ದೈನಂದಿನ ಬದುಕು ಅಸ್ತವ್ಯಸ್ತಗೊಂಡಿದೆ. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಪರಪ್ಪನ ಅಗ್ರಹಾರದ ಸುತ್ತಮುತ್ತ ಹತ್ತು ಸಾವಿರಕ್ಕೂ ಅಧಿಕ ಜನರು ವಾಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬಹಳ ಹತ್ತಿರವಿದೆ. ಜಾಮರ್‌ನಿಂದಾಗಿ ಯ...
ಕನ್ನಡ ಮಾತನಾಡುವ ಮಕ್ಕಳ ಬಗ್ಗೆ ತಾರತಮ್ಯ ಎಸಗಿದರೆ ಶಾಲೆಗಳ ವಿರುದ್ಧ ಕ್ರಮ; ಸರ್ಕಾರದ ಎಚ್ಚರಿಕೆ

ಕನ್ನಡ ಮಾತನಾಡುವ ಮಕ್ಕಳ ಬಗ್ಗೆ ತಾರತಮ್ಯ ಎಸಗಿದರೆ ಶಾಲೆಗಳ ವಿರುದ್ಧ ಕ್ರಮ; ಸರ್ಕಾರದ ಎಚ್ಚರಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: "ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, 'ಕನ್ನಡ' ಭಾಷೆಯನ್ನು ಕಡ್ಡಾಯವಾಗಿ ಕಲಿಸಲೇಬೇಕು" ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಶಾಲೆಗಳ ಮಾನ್ಯತೆ ನವೀಕರಣ (Renewal) ಮಾಡುವ ಸಂದರ್ಭದಲ್ಲಿಯೇ, ಕನ್ನಡ ಭಾಷೆಯನ್ನು ಕಲಿಸಲೇಬೇಕು ಎಂದು ನಾವು ಆಡಳಿತ ಮಂಡಳಿಯಿಂದ ಲಿಖಿತ ಮುಚ್ಚಳಿಕೆ (Undertaking) ಬರೆಸಿಕೊಳ್ಳುತ್ತಿದ್ದೇವೆ. ಒಂದು ವೇಳೆ ಮುಚ್ಚಳಿಕೆ ಬರೆದುಕೊಟ್ಟ ನಂತರವೂ ಕನ್ನಡ ಕಲಿಸದೇ ಇರುವುದು ಅಥವಾ ಕನ್ನಡ ಮಾತನಾಡುವ ಮಕ್ಕಳ ಬಗ್ಗೆ ತಾರತಮ್ಯ ಎಸಗುತ್ತಿರುವುದು ನಮ್ಮ ಗಮನಕ್ಕೆ ಬಂದರೆ ಅಂತಹ ಶಾಲೆಗಳ ವಿರುದ್ಧ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದವರು ತಿಳಿಸಿದ್ದಾರೆ.ಶಾಲೆಗಳ ಬಗ್ಗೆ ದೂರುಗಳು ಬಂದಾಗ ತಕ್ಷಣವೇ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ನಡೆಸಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಶಾಲಾ ಹಂತದಲ್ಲಿ ಕನ್ನಡ ಭಾಷೆಯನ್ನು ಕಾಪಾಡುವುದು ಮತ್ತು ಬೆಳೆಸುವುದು ನಮ್ಮ ಸರ್ಕಾರದ ಹಾಗೂ ಶಿಕ್ಷಣ ಇಲಾಖೆಯ ಆದ್ಯ ಕರ್ತವ್ಯ ಇದರಲ್ಲಿ ಯಾವುದೇ ರಾಜಿಯಿಲ್ಲ ಎಂದವರು ಹೇಳಿದ್ದಾರೆ. "ರಾಜ್ಯದ ಯಾವುದ...
LDF ಸೋತರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ; ಮಾತು ಉಳಿಸಿಕೊಂಡ ನಾಯಕ

LDF ಸೋತರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ; ಮಾತು ಉಳಿಸಿಕೊಂಡ ನಾಯಕ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪತ್ತನಂತಿಟ್ಟ: ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಅಖಾಡ ಅನೇಕಾನೇಕ ವಿಶೇಷತೆಗಳಿಗೆ ಸಾಕ್ಷಿಯಾಯಿತು. ಈ ಚುನಾವಣೆಯಲ್ಲಿ ಬಿಜೆಪಿ ಯಶೋಗಾಥೆ ಬರೆದಂತೆ ಬೀಗುತ್ತಿದೆ. ಮತ್ತೊಂದೆಡೆ ಎಡರಂಗಕ್ಕೆ ತಕ್ಕ ಪಾಠ ಕಲಿಸಿರುವುದಾಗಿ ಯುಡಿಎಫ್ ನಾಯಕರು ಹೇಳುತ್ತಿದ್ದಾರೆ.ಇದೇ ವೇಳೆ, ಸೋಲು ಗೆಲುವಿನ ಪಣದಲ್ಲಿ ಸೋತ ಎಲ್‌ಡಿಎಫ್ ನಾಯಕ ಮೀಸೆ ಬೋಳಿಸಿದರೆನ್ನಲಾದ ಸನ್ನಿವೇಶವೂ ಗಮನಸೆಳೆದಿದೆ. ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. LDF party worker Babu Varghese, who had vowed to shave his moustache if the LDF failed to win the Pathanamthitta Municipality, has now gone through with it after the party’s defeat. #Pathanamthitta #LDF #KeralaLocalBodyElection2025 #KeralaLocalBodyElection pic.twitter.com/gxQ9dKFQSt— Harish M (@chnmharish) December 13, 2025ಪತ್ತನಂತಿಟ್ಟ ಪುರಸಭೆಯಲ್ಲಿ ಎಲ್‌ಡಿಎಫ್ ಗೆಲ್ಲಲು ವಿಫಲವಾದರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದ ಎಲ್‌ಡಿಎಫ್ ಪಕ್ಷದ ಕಾರ್ಯ...
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡುತ್ತ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ....
ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಹೆಚ್ಡಿಕೆ ಟೀಕೆ

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಹೆಚ್ಡಿಕೆ ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್‌ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.ರಾಜ್ಯ ಸರ್ಕಾರದ ಧೋರಣೆ ಕುರಿತಂತೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರದ ನಡೆಯಿಂದಾಗಿ ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಟೀಕಿಸಿದ್ದಾರೆ.A teacher from Agra was fined for not wearing helmet inside a carPost that incident, he now wears a helmetMagical Amritkaalpic.twitter.com/wXkHqZ0wTt — 𝕲𝖆𝖓𝖊𝖘𝖍 * (@ggganeshh) December 9, 2025...
ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಒಂದು ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ, ಅವರ ಸಂಪುಟದಲ್ಲಿ ನಾನು ಮಂತ್ರಿಯಾಗುವುದಿಲ್ಲ. ನನಗೆ ಸಚಿವ ಸ್ಥಾನ ಬೇಡ. ಇನ್ನೊಬ್ಬರಿಗೆ ಅವಕಾಶ ಕೊಡಲಿ,” ಎಂದು ಸ್ಪಷ್ಟಪಡಿಸಿದರು.ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ರಾಜಣ್ಣ, ನಾಯಕತ್ವ ಬದಲಾವಣೆ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದರು. “ಡಿಕೆ ಶಿವಕುಮಾರ್ ಸಿಎಂ ಆಗ್ತಾರೆಂದು ನಾನು ಹೇಳಿಲ್ಲ,” ಎಂದೂ ಸ್ಪಷ್ಟನೆ ನೀಡಿದರು.ಇದಲ್ಲದೆ, “ಹಿಂದೆ ಪರಮೇಶ್ವರ್ ಕೂಡ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು,” ಎಂದು ನೀಡಿದ ಹೇಳಿಕೆ ಕೂಡ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. "I won't be oart of the cabinet if DK Shivakumar becomes CM."- Congress MLA KN Rajanna pic.twitter.com/eeXRPWGiHu— News Ar...
ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: ಅನ್ನಭಾಗ್ಯದ ಅಕ್ಕಿಯು ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು ಎಂದು ಶಾಸಕ ಸಿ.ಟಿ.ರವಿ ಒತ್ತಾಯಿಸಿದ್ದಾರೆ.ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಅನ್ನಭಾಗ್ಯದ ಅಕ್ಕಿಯ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಹಾಗೂ ಅಕ್ರಮಗಳ ಬಗ್ಗೆ ಆಕ್ರೋಶ ಹೊರಹಾಕಿದರು.ಅನ್ನಭಾಗ್ಯದ ಅಕ್ಕಿಯು ಹೊರ ರಾಜ್ಯಗಳಿಗೆ, ಹೊರ ದೇಶಗಳಿಗೆ ಅಕ್ರಮವಾಗಿ ಸಾಗಣೆಯಾಗುತ್ತಿದ್ದು, ಇದರಲ್ಲಿ ಅಧಿಕಾರಿಗಳ ಕೈವಾಡವಿರುವುದನ್ನು ಸರ್ಕಾರದ ಖಚಿತಪಡಿಸಿದೆ. ಈ ಅಕ್ರಮ ನಿರಂತರವಾಗಿ ನಡೆದಿದೆ ಎಂದಾದರೆ, ಇದರ ಜಾಲ ರಾಜ್ಯದಾದ್ಯಂತ ವ್ಯಾಪಿಸಿದೆ ಎಂದರ್ಥ ಎಂದು ಪ್ರಶ್ನಿಸಿದರು.ಇದೆಲ್ಲವೂ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದಿಯೇ? ಅಥವಾ ಸರ್ಕಾರವೂ ಇದರಲ್ಲಿ ಭಾಗಿಯಾಗಿದೆಯೇ? ಇದಕ್ಕೆಲ್ಲ ಕಡಿವಾಣ ಯಾವಾಗ? ಇದಕ್ಕಾಗಿ ತಕ್ಷಣವೇ ಎಸ್ಐಟಿ ರಚನೆಯಾಗಿ, ತನಿಖೆಯಾಗಬೇಕು ಎಂದರು. ಅನ್ನಭಾಗ್ಯದ ಅಕ್ಕಿಯು ಹೊರ ರಾಜ್ಯಗಳಿಗೆ, ಹೊರ ದೇಶಗಳಿಗೆ ಅಕ್ರಮವಾಗಿ ಸಾಗಣೆಯಾಗುತ್ತಿದ್ದು, ಇದರಲ್ಲಿ ಅಧಿಕಾರಿಗಳ ಕೈವಾಡವಿರುವುದನ್ನು ಸರ್...
ರಷ್ಯಾ ಅಧ್ಯಕ್ಷ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

ರಷ್ಯಾ ಅಧ್ಯಕ್ಷ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಅಧಿಕೃತ ಭಾರತ ಭೇಟಿಗೆ ಗುರುವಾರ ರಾತ್ರಿ ನವದೆಹಲಿಗೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಸ್ವತಃ ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. In a notable departure from usual practice, Prime Minister Shri @narendramodi personally welcomed Russian President Vladimir Putin upon his arrival at the Delhi airport.President Putin is undertaking a two-day State visit to India, during which he will participate in the 23rd… pic.twitter.com/n89gV1S6XX— BJP (@BJP4India) December 4, 2025ವಿಮಾನದಿಂದ ಇಳಿದ ಬಳಿಕ ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡು ಮಾತನಾಡಿದರು. ಬಳಿಕ ಅಲ್ಪಕಾಲದ ಸಾಂಸ್ಕೃತಿಕ ಸ್ವಾಗತ ಕಾರ್ಯಕ್ರಮವನ್ನು ವೀಕ್ಷಿಸಿದರು. ವಿಮಾನ ನಿಲ್ದಾಣದಿಂದ ಇಬ್ಬರೂ ಒಂದೇ ವಾಹನದಲ್ಲಿ ಹೊರಟು ಗಮನಸೆಳೆದರು. ಪುಟಿನ್ ಭೇಟಿಯ ಸಂದರ್ಭದಲ್ಲಿ ಭಾರತ-ರಷ್ಯಾ ನಡುವೆ ಮಹತ್ವದ ಒಪ್ಪಂದಗಳು ಏರ್ಪಡಲಿವೆ ಎಂದು ...