Wednesday, January 28

ವೀಡಿಯೊ

ಅಲ್ಬೇನಿಯಾದ AI ಸಚಿವೆ ‘ಡಿಯೆಲ್ಲಾ’ ಈಗ ಗರ್ಭಿಣಿ; 83 ‘AI ಮಕ್ಕಳಿಗೆ’ ಜನ್ಮನೀಡುವ ನಿರೀಕ್ಷೆ

ಅಲ್ಬೇನಿಯಾದ AI ಸಚಿವೆ ‘ಡಿಯೆಲ್ಲಾ’ ಈಗ ಗರ್ಭಿಣಿ; 83 ‘AI ಮಕ್ಕಳಿಗೆ’ ಜನ್ಮನೀಡುವ ನಿರೀಕ್ಷೆ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಟಿರಾನಾ (ಅಲ್ಬೇನಿಯಾ): ಅಲ್ಬೇನಿಯಾದ ಮೊದಲ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಚಿವೆ ಡಿಯೆಲ್ಲಾ ಈಗ “ಗರ್ಭಿಣಿ” ಎಂದು ಅಲ್ಬೇನಿಯಾ ಪ್ರಧಾನಿ ಎಡಿ ರಾಮ ಘೋಷಿಸಿದ್ದಾರೆ. ಅವರು 83 “AI ಮಕ್ಕಳಿಗೆ” ಜನ್ಮ ನೀಡುವ ನಿರೀಕ್ಷೆಯಿದ್ದು, ಪ್ರತಿಯೊಬ್ಬ ಸಮಾಜವಾದಿ ಪಕ್ಷದ ಸಂಸದನಿಗೂ ಒಬ್ಬ ಸಹಾಯಕನಂತೆ ಕಾರ್ಯನಿರ್ವಹಿಸಲಿದ್ದಾರೆ. ಜರ್ಮನಿಯ ಬರ್ಲಿನ್‌ನಲ್ಲಿ ನಡೆದ ಜಾಗತಿಕ ಸಂವಾದ (BGD) ಕಾರ್ಯಕ್ರಮದಲ್ಲಿ ಮಾತನಾಡಿದ ರಾಮ, “ನಾವು ಡಿಯೆಲ್ಲಾ ಮೂಲಕ ಹೊಸ ಪ್ರಯೋಗ ಮಾಡಿದ್ದೇವೆ ಮತ್ತು ಅದರಲ್ಲಿ ಯಶಸ್ವಿಯಾಗಿದ್ದೇವೆ. ಈಗ ಅವರು 83 ‘ಮಕ್ಕಳಿಗೆ’ ಜನ್ಮ ನೀಡಲಿದ್ದಾರೆ,” ಎಂದು ಹಾಸ್ಯಾತ್ಮಕವಾಗಿ ಹೇಳಿದರು. ಈ “ಮಕ್ಕಳು” ಅಥವಾ AI ಸಹಾಯಕರು ಸಂಸತ್ತಿನ ಎಲ್ಲಾ ಕಲಾಪಗಳನ್ನು ದಾಖಲಿಸಿ, ಸಂಸದರು ಹಾಜರಾಗಲು ಸಾಧ್ಯವಾಗದ ಸಭೆಗಳ ವಿವರ ಮತ್ತು ಚರ್ಚೆಗಳ ಮಾಹಿತಿಯನ್ನು ನವೀಕರಿಸುವ ಕಾರ್ಯವನ್ನು ನಿರ್ವಹಿಸಲಿದ್ದಾರೆ. “ಪ್ರತಿಯೊಬ್ಬ ಸಹಾಯಕನು ತನ್ನ ‘ತಾಯಿ’ ಡಿಯೆಲ್ಲಾ ಅವರಿಂದ ತರಬೇತಿ ಪಡೆಯಲಿದ್ದಾರೆ,” ಎಂದು ರಾಮ ವಿವರಿಸಿದರು. ಈ ವ್ಯವಸ್ಥೆ 2026ರ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ...
ವಂಚಕ ಸಂಬಂಧಿ ಪರ ಬ್ಯಾಟಿಂಗ್; ಸಿದ್ದು ಆಪ್ತನನ್ನು ಸೆಟಲ್‌ಮೆಂಟ್‌ ಸಚಿವ ಎಂದ ಜೆಡಿಎಸ್

ವಂಚಕ ಸಂಬಂಧಿ ಪರ ಬ್ಯಾಟಿಂಗ್; ಸಿದ್ದು ಆಪ್ತನನ್ನು ಸೆಟಲ್‌ಮೆಂಟ್‌ ಸಚಿವ ಎಂದ ಜೆಡಿಎಸ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವಂಚಕ ಸಂಬಂಧಿಗೆ ಸಹಾಯ ಮಾಡಲು ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ವಂಚನೆ ಪ್ರಕರಣದಲ್ಲಿ ತಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಅವರು, ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ಜೆಡಿಎಸ್ ಪಕ್ಷ ಆರೋಪಿಸಿದೆ. ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆಯುವ ಸಚಿವ @BZZameerAhmedK ನಿಮಗೆ ನಾಚಿಕೆಯಾಗಬೇಕು !ರಾಜ್ಯದ ರೈತರಿಗೆ ವಂಚಿಸಿರುವ ನಿಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವುದು ಅಕ್ಷಮ್ಯ. ರಾಜ್ಯದ ಜವಾಬ್ದಾರಿಯುತ ಸಚಿವರಾಗಿ ವಂಚಕರ ಪರ ವಹಿಸಿ,… pic.twitter.com/rNrq8xNbTV— Janata Dal Secular (@JanataDal_S) October 25, 2025 ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಫೋನೋ ಆಡಿಯೋವನ್...
‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?

‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ಹಿಟ್ ಅಂಡ್ ರನ್ ಪ್ರಕರಣದ ಪೊಲೀಸ್ ತನಿಖೆಯಲ್ಲಿ ಕನ್ನಡ ನಟಿ ಮತ್ತು ಬಿಗ್ ಬಾಸ್ ಕನ್ನಡ ಸ್ಪರ್ಧಿ ದಿವ್ಯಾ ಸುರೇಶ್ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಮೂವತ್ನಾಲ್ಕು ವರ್ಷದ ಅನಿತಾ ಅವರ ಕಾಲಿನ ಮೂಳೆ ಮುರಿತಕ್ಕೊಳಗಾಗಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ ಇಬ್ಬರು ಸವಾರರು ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. Weeks after a late-night hit-and-run accident in Bengaluru, the city traffic police on Friday identified ex Bigg Boss Kannada contestant Divya Suresh as the alleged driver of the car involved in the accident that left three people injured. The accident took place near Nithya… pic.twitter.com/ucoigQ6FWn— Karnataka Portfolio (@karnatakaportf) October 24, 2025 ದಿವ್ಯಾ ಸುರೇಶ್ ಪ್ರಸ್ತುತ ಒಂದು ಪ್...
ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಅದರಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಅವರು ಅಕ್ರೋಶ ವ್ಯಕ್ತಪಡಿಸಿರುವ ವೈಖರಿ ಗಮನಸೆಳೆದಿದೆ. ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ. ನೂರು ವರ್ಷಗಳಿಂದ ದೇಶಕ್ಕಾಗಿ ಮತ್ತು ಸಮಾಜಕ್ಕಾಗಿ ಕೆಲಸ ಮಾಡಿರುವ… pic.twitter.com/oP5sHqdPU7— BJP Karnataka (@BJP4Karnataka) October 24, 2025 'ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ' ಎಂದು ಛಲವಾದಿ ನಾರಾಯಣ...
ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿಆಚರಿಸಿದ ಟ್ರಂಪ್

ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿಆಚರಿಸಿದ ಟ್ರಂಪ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ವಾಷಿಂಗ್ಟನ್: ಅಮೆರಿಕಾದಲ್ಲೂ ದೀಪಾವಳಿ ಸಡಗರ ಆವರಿಸಿದೆ. ಅಂಮೆರಿಕಾದಲ್ಲಿರುವ ಭಾರತೀಯರು ತಮ್ಮ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಅಮೆರಿಕಾದ ಶಕ್ತಿಕೇಂದ್ರ ಶ್ವೇತಭವನ ಕೂಡಾ ವಿಶೇಷ ಸಂಭ್ರಮಕ್ಕೆ ಸಾಕ್ಷಿಯಾಯಿತು. ಅನಿವಾಸಿ ಭಾರತೀಯರೊಂದಿಗೆ ಶ್ವೇತಭವನದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದೀಪಾವಳಿ ಆಚರಿಸಿ ಗಮನಸೆಳೆದರು. Deeply honoured to join President Donald J. Trump @realDonaldTrump @POTUS at the White House today to celebrate Diwali. Wished him on behalf of Prime Minister @narendramodi a Happy Diwali and thanked him for this beautiful gesture.Warm Diwali greetings to all celebrating,… pic.twitter.com/G3jAvc0hpO— Amb Vinay Mohan Kwatra (@AmbVMKwatra) October 22, 2025 ದೀಪಾವಳಿ ಹಿನ್ನೆಲೆ ಅಮೆರಿಕಾದ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ಯಾಂಡಲ್‌ನಿಂದ ದೀಪ ಹಚ್ಚಿ ದೀಪ ಬೆಳಗಿದರು. ಬಳಿಕ ಸುದ್ದಿಗೋಷ್ಠಿಯಲ್ಲ...
ಬಸ್ ಧಗಧಗಿಸಿ ಹೊತ್ತಿಉರಿದ ಬಸ್; ಸಾವಿನ ಸಂಖ್ಯೆ ಕ್ಕೆ ಏರಿಕೆ

ಬಸ್ ಧಗಧಗಿಸಿ ಹೊತ್ತಿಉರಿದ ಬಸ್; ಸಾವಿನ ಸಂಖ್ಯೆ ಕ್ಕೆ ಏರಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಜೈಸಲ್ಮೇರ್‌: ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಪ್ರಯಾಣಿಕರಿದ್ದ ಬಸ್ ಧಗಧಗಿಸಿ ಹೊತ್ತಿಉರಿದಿದೆ. ಈ ಘಟನೆಯಲ್ಲಿ ಸಾವನ್ನಪಿದವರ ಸಂಖ್ಯೆ 15 ಕ್ಕೇರಿದೆ. #breakingnews‌ राजस्थान के जैसलमेर में चलती एसी स्लीपर बस में आग लग गई। देखते ही देखते आग ने भीषण रूप ले लिया,बचने के लिए लोग चलती बस से कूद गए। बस में 57 लोग सवार थे। हादसे में 10-12 लोगों की जलने से मौत होने की आशंका है।#news #jaisalmer pic.twitter.com/79hsBUVtVz— Nihar Nath (@NiharNath01) October 14, 2025 ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3:30ರ ಸುಮಾರಿಗೆ ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಸ್ವಲ್ಪ ಹೊತ್ತಿನಲ್ಲೇ ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಸುಮಾರು 15 ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ಬಸ್ಸಿನಲ್ಲಿ ಸುಮಾರು 57 ಪ್ರಯಾಣಿಕರು ಬಸ್‌ನ...
ಸಂವಿಧಾನಿಕ ಹುದ್ದೆಯಲ್ಲಿಲ್ಲದ ಮಹದೇವಪ್ಪನ ಮೊಮ್ಮಗನಿಗೆ ಗೌರವ ವಂದನೆ ಸ್ವೀಕರಿಸುವ ವಾಹನದಲ್ಲಿ ಅವಕಾಶ; ವ್ಯಾಪಕ ಆಕ್ರೋಶ

ಸಂವಿಧಾನಿಕ ಹುದ್ದೆಯಲ್ಲಿಲ್ಲದ ಮಹದೇವಪ್ಪನ ಮೊಮ್ಮಗನಿಗೆ ಗೌರವ ವಂದನೆ ಸ್ವೀಕರಿಸುವ ವಾಹನದಲ್ಲಿ ಅವಕಾಶ; ವ್ಯಾಪಕ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಸಂವಿಧಾನದ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವ ಕಾಂಗ್ರೆಸ್ ಅಸಂವಿಧಾನಿಕ ನಡೆಗಳ ಬಗ್ಗೆ ಪ್ರತಿಪಕ್ಷ ಜೆಡಿಎಸ್ ಆಕ್ರೋಶ ಹೊರ ಹಾಕಿದೆ. ಸಂವಿಧಾನದ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವ @INCKarnataka ಅಸಂವಿಧಾನಿಕ ನಡೆಗಳು. ಸಚಿವ @CMahadevappaಮೊಮ್ಮಗನಿಗಾಗಿ ನಾಡಹಬ್ಬ ದಸರಾ ಪರೇಡ್'ನಲ್ಲಿ ಸಾಂವಿಧಾನಿಕ ಹುದ್ದೆ ದುರ್ಬಳಕೆ ಮಾಡಿಕೊಂಡಿರುವುದು ಸಂವಿಧಾನಕ್ಕೆ ಮಾಡಿರುವ ಅಪಚಾರ.‌ ಸಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಮಹದೇವಪ್ಪನ ಮೊಮ್ಮಗನನ್ನು ಗೌರವ ವಂದನೆ ಸ್ವೀಕರಿಸುವ… pic.twitter.com/5bmyvysCjH— Janata Dal Secular (@JanataDal_S) October 4, 2025 ಸಚಿವ ಮಹದೇವಪ್ಪ ಮೊಮ್ಮಗನಿಗಾಗಿ ನಾಡಹಬ್ಬ ದಸರಾ ಪರೇಡ್'ನಲ್ಲಿ ಸಾಂವಿಧಾನಿಕ ಹುದ್ದೆ ದುರ್ಬಳಕೆ ಮಾಡಿಕೊಂಡಿರುವುದು ಸಂವಿಧಾನಕ್ಕೆ ಮಾಡಿರುವ ಅಪಚಾರ.‌ ಸಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಮಹದೇವಪ್ಪನ ಮೊಮ್ಮಗನನ್ನು ಗೌರವ ವಂದನೆ ಸ್ವೀಕರಿಸುವ ವಾಹನದಲ್ಲಿ ಅವಕಾಶ ಮಾಡಿಕೊಟ್ಟಿದ್ದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಜೆಡಿಎಸ್ ಹೇಳಿದೆ. ದಸರಾ ಉತ್ಸವ ಜಂಬೂ ಸವಾರಿ ವೀಕ್ಷಿಸಲು 6,...
ತುಳುನಾಡ ಕುವರಿಗೆ ಮತ್ತೆ ಬಾಗಿಲು ತೆರೆದ  ಬಿಗ್ ಬಾಸ್ ಮನೆ

ತುಳುನಾಡ ಕುವರಿಗೆ ಮತ್ತೆ ಬಾಗಿಲು ತೆರೆದ ಬಿಗ್ ಬಾಸ್ ಮನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಅಚ್ಚರಿಯ ತಿರುವು ಕಂಡಿದೆ. ಶೋ ಆರಂಭವಾದ ಮೊದಲ ದಿನವೇ ಉಡುಪಿಯ ರಕ್ಷಿತಾ ಶೆಟ್ಟಿ ಅವರನ್ನು ಮನೆಯಿಂದ ಹೊರಗೆ ಕಳಿಸಲಾಗಿತ್ತು. ಕನ್ನಡ ಬಿಗ್ಬಾಸ್ ಇತಿಹಾಸದಲ್ಲಿಯೇ ಇಷ್ಟು ಬೇಗ ಎಲಿಮಿನೇಟ್ ಆದ ಸ್ಪರ್ಧಿ ಅವರು. ಆದರೆ ಈಗ, ಪ್ರೇಕ್ಷಕರ ಬೇಡಿಕೆ ಮತ್ತು ಸಾಮಾಜಿಕ ಮಾಧ್ಯಮದ ಚರ್ಚೆಗಳ ಮಧ್ಯೆ, ರಕ್ಷಿತಾ ಶೆಟ್ಟಿ ಮತ್ತೆ ಬಿಗ್ಬಾಸ್ ಮನೆಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಮರಳಿಬಂದಳು ರಕ್ಷಿತಾವಾರದ ಕತೆ ಕಿಚ್ಚನ ಜೊತೆ | ಇಂದು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/X6cFlWGWA2— Colors Kannada (@ColorsKannada) October 4, 2025 ಕಳೆದ ಭಾನುವಾರ ಶೋ ಪ್ರಾರಂಭವಾದಾಗ 19 ಮಂದಿ ಸ್ಪರ್ಧಿಗಳು ಮನೆ ಸೇರಿದ್ದರು. ಆದರೆ ಕೇವಲ 24 ಗಂಟೆಗಳಲ್ಲೇ ರಕ್ಷಿತಾರ ಹೊರಹಾಕುವ ನಿರ್ಧಾರ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾಯಿತು. ಅವರ ಆಟವನ್ನೇ ನೋಡದೆ ತೆಗೆದುಕೊಳ್ಳ...
ಕರ್ನೂಲ್: ಸಾಂಪ್ರದಾಯಿಕ ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಕರ್ನೂಲ್: ಸಾಂಪ್ರದಾಯಿಕ ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

Focus, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಕರ್ನೂಲ್: ವಿಜಯದಶಮಿ ಸಂದರ್ಭದಲ್ಲಿ ಸಾಂಪ್ರದಾಯಿಕ ಬನ್ನಿ ಉತ್ಸವ ವೇಳೆ ಕೋಲುಗಳಿಂದ ನಡೆಯುವ ಕಾಳಗದಲ್ಲಿ ಇಬ್ಬರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. కర్నూలు 'దేవరగట్టు సమరం' 🔥🔥🔥🔥🔥🥵తరతరాలుగా వస్తున్న ఆచారం శ్రీ మాల మల్లేశ్వర స్వామి వార్ల విగ్రహాలని దక్కించుకునేందుకు 11 ఊర్ల గ్రామ ప్రజలు రక్తం చిందించి భక్తితో చేసే సమరం 🙏. #Devara #Kurnool #Devaragattu pic.twitter.com/RylANzHIta— Narasimha NTR 🦚 (@NarasimhaNTR_) October 3, 2025 ಪ್ರತಿ ವರ್ಷದಂತೆ, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಹೊಳಗೊಂಡ 'ಮಂಡಲ' (ಬ್ಲಾಕ್) ನ ದೇವೆರಾಗಟ್ಟು ಗ್ರಾಮದಲ್ಲಿ ಗುರುವಾರ ತಡರಾತ್ರಿ ದಸರಾ ಆಚರಣೆಯ ಭಾಗವಾಗಿ ನಡೆದ ದೇವರಗಟ್ಟು ಬನ್ನಿ ಉತ್ಸವದ ಸಂದರ್ಭದಲ್ಲಿ ಎರಡು ಗುಂಪುಗಳು ಕೋಲುಗಳಿಂದ ಪರಸ್ಪರ ದಾಳಿ ನಡೆಸಿದವು. ಇದು ಸಾಂಪ್ರಾಯಾಯಿಕ ಆಚರಣೆಯಾಗಿದೆ. ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ...
ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬದ ಉತ್ಸವದ ಪರಮೋತ್ಸವಾದ ಜಂಬೂ ಸವಾರಿ ಮೆರವಣಿಗೆ ಗಮನಸೆಳೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಯದುವೀರ್ ಒಡೆಯರ್, ವಿಧಾನದ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸಂಜೆ 4.42ರಿಂದ 5.06ರ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ ಚಿನ್ನದ ಅಂಬಾರಿಯಲ್ಲಿ ಕಂಗೊಳಿಸುತ್ತಿದ್ದ ನಾಡದೇವಿ ಚಾಮುಂಡೇಶ್ವರಿಗೆ ಸಿಎಂ ಪುಷ್ಪಾರ್ಚನೆ ಸಲ್ಲಿಸಿ ಮೆರವಣಿಗೆಯ ಆರಂಭ ಮಾಡಿದರು. ಸುಮಾರು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಲಕ್ಷಾಂತರ ಜನರ ಮುಂದೆ ಗಾಂಭೀರ್ಯದ ಹೆಜ್ಜೆ ಹಾಕುತ್ತ ಸಾಗಿದ ದೃಶ್ಯ ಎಲ್ಲರ ಮನ ಸೆಳೆಯಿತು. ಕುಮ್ಕಿ ಆನೆಗಳು ಕಾವೇರಿ, ರೂಪಾ ಕೂಡಾ ಸಾಥ್ ನೀಡಿದವು. ಅಂಬಾರಿಯ ಮೇಲಿದ್ದ ನಾಡದೇವಿಯನ್ನು ಕಂಡು ಭಕ್ತಜನರು ಪುನೀತರಾದರು. ಅರಮಣಕ್ಕಿಯ ಬಲರಾಮ ದ್ವಾರದಿಂದ ಪ್ರಾರಂಭಗೊಂಡ ಜಂಬೂ ಸವಾರಿ, ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ಆಸ್ಪತ್ರೆ ವೃತ್ತ, ಬಂಬೂ ಬಜಾರ್ ಮಾರ್ಗವಾಗಿ ಬನ್ನಿಮಂಟಪ ತಲುಪುವವರೆ...